Connect with us

BELTHANGADY

ತುಂಬು ಕುಟುಂಬದ ಆಧಾರಸ್ತಂಭ ಕುಸಿಯುವ ಹಂತದಲ್ಲಿ, ಬಡ ಕುಟುಂಬಕ್ಕೆ ಬೇಕಿದೆ ನೆರವಿನ ಆಸರೆ…..

Published

on

ತುಂಬು ಕುಟುಂಬದ ಆಧಾರಸ್ತಂಭ ಕುಸಿಯುವ ಹಂತದಲ್ಲಿ, ಬಡ ಕುಟುಂಬಕ್ಕೆ ಬೇಕಿದೆ ನೆರವಿನ ಆಸರೆ….

ಬೆಳ್ತಂಗಡಿ : ಕಷ್ಟವಿಲ್ಲದ ಜನ, ಮನೆ ಇರೋದು ಕಡಿಮೆಯೇ. ಆದರೆ ದಕ್ಷಿಣಕನ್ನಡ ಜಿಲ್ಲೆಯ ಬಡ ಕುಟುಂಬಕ್ಕೆ ಕಷ್ಟಗಳ ಸರಮಾಲೆಯೇ ಸುತ್ತಿಕೊಂಡಿದೆ. ತುಂಬು ಕುಟುಂಬಕ್ಕೆ ಆಧಾರ ಸ್ತಂಬವಾಗಿರುವ ಮನೆಯ ಯಜಮಾನನೇ ಇದೀಗ ಕುಸಿದು ಬೀಳುವ ಹಂತದಲ್ಲಿದ್ದಾನೆ.


ಕಷ್ಟ ಅನ್ನೋದು ಎಲ್ಲಾ ಜನರಲ್ಲೂ, ಮನೆಗಳಲ್ಲೂ ಕಂಡು, ಕೇಳಿ ಬರುವ ಸಾಮಾನ್ಯ ವಿಷಯವೇ. ಕಷ್ಟವಿಲ್ಲದ ಜನ, ಮನೆ ಇರೋದು ಸಾಧ್ಯವೇ ಇಲ್ಲ. ಆದರೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಳಂತಿಲ ಸಮೀಪದ ಅಂಡೆತ್ತಡ್ಕ ಎಂಬ ಕುಗ್ರಾಮದ ಬಡ ಕುಟುಂಬಕ್ಕೆ ಮಾತ್ರ ಕಷ್ಟ ಅನ್ನೋದು ಬರ ಸಿಡಿಲಿನಂತೆ ಬಡಿದಿದೆ. ಎಂಟು ಜನರಿರುವ ಈ ಕುಟುಂಬದ ಆಧಾರಸ್ತಂಭವೀಗ ಕುಸಿದು ಬೀಳುವ ಹಂತಕ್ಕೆ ತಲುಪಿದ್ದಾರೆ. ಹೌದು ಮನೆಯ ಯಜಮಾನ ಸೇಸಪ್ಪ ಗೌಡ ಅಡಿಕೆ ಮರದಿಂದ ಅಡಿಕೆ ಮರಕ್ಕೆ ಜಿಗಿದು, ಅಡಿಕೆ ಕೀಳುವ, ಮದ್ದು ಬಿಡುವ ಕಾಯಕವನ್ನು ಮಾಡಿಕೊಂಡಿದ್ದವರು. ಆದರೆ ಈ ಸೇಸಪ್ಪ ಗೌಡರಿಗೆ ಇದೀಗ ಒಂದು ಹೆಜ್ಜೆಯೂ ನಡೆಯಲಾಗುತ್ತಿಲ್ಲ. ಎರಡು ವರ್ಷಗಳ ಹಿಂದೆ ತನ್ನ ತೊಡೆ ಭಾಗದಲ್ಲಿ ಗಡ್ಡೆಯೊಂದು ಮೂಡಿರುವುದು ಸೇಸಪ್ಪ ಗೌಡರ ಗಮನಕ್ಕೆ ಬಂದಿತ್ತು.

ಸಾಮಾನ್ಯವಾಗಿ ತೊಡೆಯಲ್ಲಿ ಮೂಡುವ ಗಡ್ಡೆಯಾಗಿರಬಹುದು ಎಂದು ಊರಿನ ವೈದ್ಯರಲ್ಲಿ ಮದ್ದು ಪಡೆದು ಮತ್ತೆ ಅಡಿಕೆ ಮರ ಹತ್ತಿದ್ದರು. ಆದರೆ ಈ ಗಡ್ಡೆ ದಿನ ಕಳೆದಂತೆ ಬೃಹದಾಕಾರದಲ್ಲಿ ಬೆಳೆಯುತ್ತಿರುವುದು ಸೇಸಪ್ಪ ಗೌಡರ ಕುಟುಂಬಕ್ಕೆ ತಲೆ ನೋವಾಗಿ ಪರಿಣಮಿಸಿತ್ತು. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಟ್ಟಾಗ ಗಡ್ಡೆ ತೊಡೆ ಕ್ಯಾನ್ಸರ್ ಎಂದು ತಿಳಿದು ಬಂದಿತ್ತು. ಚಿಕಿತ್ಸೆಯಿಂದ ಗಡ್ಡೆಯನ್ನು ತೆಗೆಯಲು ಸಾಧ್ಯ ಎಂದ ವೈದ್ಯರ ಸಲಹೆಯಂತೆ ಕಿಮೋಥೆರಪಿ ಸೇರಿದಂತೆ ವಿವಿಧ ಚಿಕಿತ್ಸೆಗಳನ್ನು ಪಡೆಯಲಾಗಿತ್ತು. ಆದರೆ ಕೊಂಚ ದಿನದಲ್ಲೇ ಮತ್ತೆ ಗಡ್ಡೆ ಬೆಳೆಯಲಾರಂಭಿಸಿದ್ದು, ಇದೀಗ ಶಸ್ತ್ರ ಚಿಕಿತ್ಸೆಗೆ ಹಣವಿಲ್ಲದ ಕಾರಣ ತನ್ನ ತುಂಬು ಕುಟುಂಬಕ್ಕೆ ಏನನ್ನೂ ಮಾಡಲಾರದ ಅಸಹಾಯಕ ಸ್ಥಿತಿಯಲ್ಲಿದ್ದಾರೆ ಸೇಸಪ್ಪ ಗೌಡ.


ತನ್ನ ಮುದಿ ವಯಸ್ಸಿನ ತಾಯಿ ಹಾಗೂ ಸಹೋದರರ ಜೊತೆಗೆ ತನ್ನ ಪತ್ನಿ ಹಾಗೂ ನಾಲ್ಕು ಮಕ್ಕಳ ತುಂಬು ಸಂಸಾರ ನಿರ್ವಹಣೆ ಹೊತ್ತಿರುವ ಸೇಸಪ್ಪ ಗೌಡರು ಇದೀಗ ಹಾಸಿಗೆ ಹಿಡಿಯುವ ಹಂತಕ್ಕೆ ಬಂದಿದ್ದಾರೆ. ತೊಡೆಯ ಗಡ್ಡೆ ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಕಾರಣ ನಡೆದಾಡಲೂ ಆಗದಂತಹ ಪರಿಸ್ಥಿತಿಯಲ್ಲಿದ್ದಾರೆ. ಶಸ್ತ್ರಚಿಕಿತ್ಸೆ ನಡೆಸಿ ಗಡ್ಡೆಯನ್ನು ಸಂಪೂರ್ಣವಾಗಿ ತೆಗೆಯಲು ಸಾಧ್ಯವಿದ್ದು, ಈ ಚಿಕಿತ್ಸೆಗೆ 8 ಲಕ್ಷ ರೂಪಾಯಿಗಳ ವೆಚ್ಚ ತಗುಲಲಿದೆ. ಆದರೆ ಇಷ್ಟೊಂದು ಹಣವನ್ನು ಸರಿದೂಗಿಸಲಾರದೆ ಈ ಕುಟುಂಬ ಇದೀಗ ಸಮಾಜದ ಸಹಾಯದ ನಿರೀಕ್ಷೆಯಲ್ಲಿದೆ.

ಸೇಸಪ್ಪ ಗೌಡರ ಮನೆಯ ಪರಿಸ್ಥಿತಿಯನ್ನು ಕಂಡು ಮರುಗಿದ ಗ್ರಾಮಸ್ಥರು ಕುಟುಂಬಕ್ಕೆ ತನ್ನ ಕೈಯಲ್ಲಾದ ಸಹಾಯವನ್ನು ಮಾಡುವ ಮೂಲಕ ಸೇಸಪ್ಪ ಗೌಡರಿಗೆ ಸ್ಪಂದಿಸಿದ್ದಾರೆ. ಆದರೆ ಶಸ್ತ್ರಚಿಕಿತ್ಸೆಗೆ ಬೇಕಾದಷ್ಟು ಹಣ ಈ ಸಹಾಯದಿಂದ ಒಟ್ಟುಗೂಡಿಸಲು ಸಾಧ್ಯವಾಗದೆ ಈ ಕುಟುಂಬ ಇದೀಗ ಮರುಗುತ್ತಿದೆ. ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಗ ಒದಗಿಸುವುದು ಹೇಗೆನ್ನುವ ತಳಮಳದಲ್ಲಿದೆ. ಅಲ್ಲದೆ ಇಂದೋ, ನಾಳೆಯೋ ಬೀಳುವ ಸ್ಥಿತಿಯಲ್ಲಿರುವ ಮನೆಯನ್ನು ಉಳಿಸುವುದು ಹೇಗೆ ಎನ್ನುವ ತೊಳಲಾಟದಲ್ಲಿದೆ.


ಕೇವಲ 46 ವರ್ಷದ ಆಸುಪಾಸಿನಲ್ಲಿರುವ ಸೇಸಪ್ಪ ಗೌಡರಿಗೆ ಬದುಕಿ ದುಡಿಯುವ ಛಲವಿದೆ. ಆದರೆ ನಿರಂತರವಾಗಿ ಕಾಡುತ್ತಿರುವ ಮಾರಿಯಿಂದ ಬಿಡಿಸಿಕೊಳ್ಳಲಾಗದ ಸ್ಥಿತಿಯಲ್ಲಿದ್ದಾರೆ. ಮಾನವೀಯತೆಯ ಸಮಾಜ ಈ ಬಡ ಕುಟುಂಬಕ್ಕೆ ಆಸರೆಯಾಗಿ ನಿಲ್ಲಬೇಕಿದೆ.
ಈ ಬಡ ಕುಟುಂಬಕ್ಕೆ ಸಹಾಯ ಮಾಡಲಿಚ್ಚಿಸುವ ದಾನಿಗಳು ಈ ಅಕೌಂಟಿಗೆ ನೇರವಾಗಿ ಹಣ ಪಾವತಿಸಬಹುದು.

Sesappa Gawda

Canara Bank

A/C No. 3633108000383
Illanthila Branch
Belthangady
IFSC code.CNRB0003633

Click to comment

Leave a Reply

Your email address will not be published. Required fields are marked *

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

BELTHANGADY

ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ

Published

on

ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮ‌ಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.

bison

ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!

ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.

Continue Reading

LATEST NEWS

Trending