DAKSHINA KANNADA
ಹರುಷದ ಹೊನಲಿಗೆ ಯುಗಾದಿಯ ಬೇವು-ಬೆಲ್ಲ…
ಪ್ರಕೃತಿಯ ಸಿರಿಮುಡಿಗೆ ಕಳೆ ಕಟ್ಟಿದೆ. ಹಸುರಿತ್ತಲ್, ಹಸುರತ್ತಲ್ ಎಂಬ ಭಾವ ಮೈ ಮನಗಳಲ್ಲಿ ಹಚ್ಚಹಸಿರಾಗಿದೆ. ನವೋಲ್ಲಾಸ, ನವ ಚೈತನ್ಯ ತುಂಬಿಕೊಂಡಿದೆ.ಇದಕ್ಕೆಲ್ಲಾ ಕಾರಣ ಹಬ್ಬಗಳ ರಾಜ ಯುಗಾದಿಯ ಆಗಮನ.
ಎತ್ತನೋಡಿದರತ್ತ ಮಾವು ಬೇವುಗಳು ಹಚ್ಚ ಹಸಿರನ್ನು ಹೊತ್ತು ಸ್ವಾಗತ ಕೂರುತಿವೆ. ನವ ವಸಂತನ ಆಗಮನಕ್ಕೆ ದುಂಬಿಯು ಝೇಂಕಾರಗೈಯುತಿದೆ. ಪ್ರಕೃತಿಯೇ ತೋರಣ ಕಟ್ಟಿ ಸಜ್ಜಾಗಿ ನಿಂತಿದೆ… ಇದುವೇ ವಸಂತ ಋತುವಿನಲ್ಲಿ ಹೊಸತನ್ನು ತರುವ ಸಂಭ್ರಮದ ಹಬ್ಬ.. ಹೊಸ ವರುಷ.. ಅದುವೇ “ಸಂಭ್ರಮದ ಯುಗಾದಿ” ಹೊಸ ಯುಗದ ಆರಂಭವಾಗುವುದೇ ಯುಗಾದಿ ಹಬ್ಬದಿಂದ.. ಇದು ಚೈತ್ರ ಮಾಸದಲ್ಲಿ ಬರುವ ಮೊದಲ ಹಬ್ಬ.. ಪ್ರಕೃತಿಯ ಮಡಿಲಲ್ಲಿ ಮೂಡುವ ಹೊಸ ಚಿಗುರು ಮನುಷ್ಯರಲ್ಲಿ ಹೊಸ ಹುರುಪನ್ನು ತರಿಸುತ್ತದೆ. ಮನೆಯಲ್ಲಿ ಎಲ್ಲರೂ ಒಟ್ಟಾಗಿ ಹರಿ ಧ್ಯಾನವನ್ನು ಮಾಡಿ, ಬೇವು-ಬೆಲ್ಲ ತಿಂದು ಯುಗಾದಿ ಹಬ್ಬವನ್ನು ಆರಂಭಿಸುತ್ತಾರೆ.
ಸಿಹಿ-ಕಹಿಯ ಸಮ್ಮಿಲನದ ಹಬ್ಬ:
ಯುಗ-ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ, ಹೊಸವರುಷಕೆ-ಹೊಸಹರುಷವ ಹೊಸತು ಹೊಸತು ತರುತಿದೆ’ ಅನ್ನೋ ದ.ರಾ.ಬೇಂದ್ರೆಯವರ ಹಾಡಿನ ಸಾಲಿನಂತೆ ಪ್ರತೀ ವರ್ಷದಂತೆ ಮತ್ತೆ ಸಿಹಿ-ಕಹಿ ಸಮ್ಮಿಲನದ ಯುಗಾದಿ ಹಬ್ಬ ಮತ್ತೆ ಬಂದಿದೆ. ವಸಂತ ಋತುವಿನ ಚೆಲುವು, ಮೋಹಕತೆಗೆ ಜನತೆ ಪುಳಕಿತರಾಗಿದ್ದಾರೆ. ಇದರ ನಡುವೆ ಬಿಸಿಲ ಬೇಗೆಯ ನಿವಾರಣೆಗೆ ಮದ್ದೆಂಬಂತೆ ಹೊಂಗೆಯ ನೆರಳು, ತುಂಗೆಯ ಕಂಪು, ಬೇವು-ಮಾವುಗಳ ಗೊಂಚಲು- ಗೊಂಚಲುಗಳ ತೊನೆದಾಟ ಬಸವಳಿದ ಮನಕ್ಕೆ ಉಲ್ಲಾಸ ನೀಡುವಂತಿದೆ..ಯುಗಗಳಲ್ಲಿ ಮೊದಲ ಯುಗ ಸತ್ಯಯುಗ. ಇಂತಹ ಮೊದಲ ಯುಗದ ಆರಂಭದ ದಿನವೇ ಯುಗಾದಿ. ಚೈತ್ರ ಮಾಸದ ಮೊದಲ ದಿನದಂದು ಯುಗಾದಿಯನ್ನು ಆಚರಿಸ್ತಾರೆ. ಈ ಹಬ್ಬದ ಸಮಯದಲ್ಲಿ ವಸಂತ ಋತುವು ಆರಂಭವಾಗೋದ್ರಿಂದ ತಂಪಾದ ವಾತಾವರಣದ ಜೊತೆಗೆ ಎಲೆ ಹಸಿರು ಮೂಡುವ ಕ್ಷಣ. ಚಿಗುರಿದ ಎಲೆಗಳು ಹಚ್ಚ ಹಸಿರು ಸೀರೆಯುಟ್ಟು ಮದುವಣಗಿತ್ತಿಯಂತೆ ಕಂಗೊಳಿಸುವ ಪ್ರಕೃತಿ.., ತೂಗಾಡುವ ಬಣ್ಣ ಬಣ್ಣದ ಹೂಗಳಿಂದ ತುಂಬಿ ತುಳುಕುವ ಉದ್ಯಾನ, ತೋಟಗಳು, ಸುಗಂಧಭರಿತ ಆಹ್ಲಾದಕರ ಗಾಳಿ, ಕಂಪು ಬೀರುವ ಹೂವಿನ ಮಕರಂದಕ್ಕೆ ಮುತ್ತಿಡೋ ದುಂಬಿಗಳು, ಚಿಟ್ಟೆಗಳ ನರ್ತನ, ಹೂದೋಟದ ತುಂಬ ಕಲರವದಲ್ಲಿ ತಲ್ಲೀನವಾಗಿರುವ ಅದೆಲ್ಲಿಂದಲೋ ವಲಸೆ ಬಂದ ಬಣ್ಣ ಬಣ್ಣದ ಹಕ್ಕಿಗಳು… ಇವೆಲ್ಲವುಗಳ ಜೊತೆ ಮೈಮನದಲ್ಲಿ ನವೋಲ್ಲಾಸ, ನವ ಚೈತನ್ಯದ ಸಂಚಲನ ಮೂಡಿಸಿ ಕಚಗುಳಿಯ ಅನುಭವವಾಗುತ್ತಿದ್ದರೆ ಅದುವೇ ನೂತನ ವರ್ಷಾದ ಆರಂಭ …
ಅದೃಷ್ಟ ಹೊತ್ತು ತರುವ ನವ ಯುಗಾದಿ
ಯುಗದ ಆದಿ ಎಂದು ಕರೆಯುವ ಈ ಹಬ್ಬವನ್ನು ದಕ್ಷಿಣ ಭಾರತದಲ್ಲಿ ಅದರಲ್ಲೂ ಕರ್ನಾಟಕ ಮತ್ತು ಆಂಧ್ರ ಪ್ರದೇಶದಲ್ಲಿ ಅದ್ದೂರಿಯಾಗಿ ಆಚರಣೆ ಮಾಡ್ತಾರೆ. ಯುಗ ಎಂದರೆ ಹೊಸ, ಆದಿ ಎಂದರೆ ಆರಂಭ. ಒಂದು ಹೊಸ ಪರ್ವದ ಆರಂಭ ಅಂತಾನೂ ಈ ಹಬ್ಬವನ್ನು ಕರೀತಾರೆ. ಧಾರ್ಮಿಕ ಆಚರಣೆಯ ಪ್ರಕಾರ ಸೌರಮಾನ ಯುಗಾದಿ ಆಚರಣೆ ಹಿಂದೂಗಳ ಪವಿತ್ರ ಆಚರಣೆಯಲ್ಲಿ ಒಂದು.. ಕೆಲವೆಡೆ ಚಾಂದ್ರಮಾನ ಯುಗಾದಿಯನ್ನು ಆಚರಿಸಿದ್ರೆ ಕೆಲವೆಡೆ ಸೌರಮಾನ ಯುಗಾದಿಯನ್ನು ಆಚರಿಸ್ತಾರೆ. ಯುಗಾದಿ ಹಬ್ಬ ನಮ್ಮೆಲ್ಲರಿಗೂ ಅದೃಷ್ಟದ ಹಬ್ಬ.. ಸಂಪತ್ತು ಮತ್ತು ಸಮೃದ್ಧಿಯನ್ನು ಹೊತ್ತು ತರುತ್ತದೆ ಎನ್ನುವ ನಂಬಿಕೆಯಿದೆ. ಯುಗಾದಿ ಹಬ್ಬವನ್ನು ಮಂಗಳಕರವೆಂದೂ ಹೇಳ್ತಾರೆ. ಹೀಗಾಗಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಯುಗಾದಿಯ ದಿನದಂದು ನೂತನ ಅಂಗಡಿಗಳ ಶುಭಾರಂಭ, ಕಟ್ಟಡ ನಿರ್ಮಾಣದ ಕೆಲಸ ಕಾರ್ಯಗಳನ್ನು ಆರಂಭ ಮಾಡ್ತಾರೆ.
ಐತಿಹಾಸಿಕ ಪುರಾಣವೇನು..?
ಹಿಂದೂ ಪುರಾಣಗಳ ಪ್ರಕಾರ, ಇಂದು ಬ್ರಹ್ಮ ದೇವ ಬ್ರಹ್ಮಾಂಡವನ್ನು ಸೃಷ್ಠಿಸಿರುವುದರಿಂದ ಈ ದಿನವನ್ನು ಹೊಸತನದ ಯುಗಾದಿ ಹಬ್ಬ ಎಂದು ಆಚರಣೆ ಮಾಡಲಾಗ್ತಿದೆ ಅಂತೆ.. ವೇದಗಳ, ಧರ್ಮಗ್ರಂಥಗಳ ಪ್ರಕಾರ ಯುಗಾದಿ ಹಬ್ಬ ಹಲವು ಮಹತ್ತರಗಳಿಗೆ ಸಾಕ್ಷಿ ಕೂಡ ಹೌದು.
ಯುಗಾದಿ ಹಬ್ಬ ನಮ್ಮೆಲ್ಲರಿಗೂ ಹೊಸ ವರ್ಷದ ಆರಂಭ. ಇದಕ್ಕೆ ತನ್ನದೇ ಆದ ಐತಿಹಾಸಿಕ, ಪೌರಾಣಿಕ ಹಿನ್ನೆಲೆಯನ್ನು ಹೊಂದಿದೆ… ಸಂಸ್ಕೃತದ ‘ಯುಗ’ ಮತ್ತು ‘ಆದಿ’ ಶಬ್ದಗಳಿಂದ ಯುಗಾದಿ ಎಂಬುದು ಆರಂಭಗೊಂಡಿದೆ. ಚೈತ್ರಶುದ್ಧ ಪಾಡ್ಯದ ಸೂರ್ಯೋದಯ ಸಮಯಕ್ಕೆ ಬ್ರಹ್ಮ ವಿಶ್ವವನ್ನು ಸೃಷ್ಟಿ ಮಾಡ್ತಾನೆ, ಅಂದೇ ಸತ್ಯ ಯುಗವೂ ಆರಂಭವಾಯಿತು. ರಾವಣನನ್ನು ಸಂಹರಿಸಿ ವಿಜಯಿಯಾಗಿ ಹಿಂದಿರುಗಿದ ಶ್ರೀರಾಮನ ಪಟ್ಟಾಭಿಷೇಕದ ದಿನವೆಂದೂ ಪುರಾಣವಿದೆ. ರವಿಯ ಮೊದಲ ಕಿರಣ ಭುವಿಯನ್ನು ಸ್ಪರ್ಶಿಸಿದ ದಿನವೆಂತಲೂ ಪ್ರತೀತಿ ಇದೆ. ಹಾಗೆನೆ ರಾಮನು ವಾಲಿಯನ್ನು ವಧಿಸಿದ ದಿನವೆಂದೂ, ಮಹಾ ವಿಷ್ಣು ಮತ್ಸ್ಯಾವತಾರ ತಾಳಿದ ದಿನವೆಂದೂ ಹೇಳುತ್ತದೆ ಪುರಾಣ. ಅಂದೇ ಶಾಲಿವಾಹನ ಶಕೆ ಆರಂಭಗೊಂಡಿತೆಂಬ ಒಂದು ಕತೆಯೂ ಇದೆ. ಇಂತಹ ಹಲವು ಶುಭ ಘಟನೆಗಳು ಸಂಭವಿಸಿದ ದಿನದಂದು ಚಂದ್ರಮಾನ ‘ಯುಗಾದಿ’ ಆಚರಣೆಗೆ ಬಂದಿದೆ.
ಹಿಂದೂಗಳಿಗೆ ವರ್ಷದಲ್ಲಿ ಬರುವ ಮೂರುವರೆ ದಿನಗಳು ಬಹಳ ಮುಖ್ಯವಾದ ದಿನವಿದೆ. ಅದು ಯುಗಾದಿ, ದೀಪಾವಳಿ, ವಿಜಯದಶಮಿ, ಮತ್ತು ಅಕ್ಷಯ ತದಿಗೆಯ ಅರ್ಧ ದಿನ ಈ ಮೂರುವರೆ ದಿನಗಳು ಮೂರುವರೆ ವಜ್ರದಷ್ಟೇ ಪವಿತ್ರವಾದ ದಿನವಂತೆ. ದಕ್ಷಿಣ ಭಾರತದಲ್ಲಿ ಚಂದ್ರನ ಚಲನೆಯನ್ನು ಗುರುತಿಸಿ ಚಾಂದ್ರಮಾನ ಯುಗಾದಿಯನ್ನು ಆಚರಿಸುತ್ತಾರೆ. ಹಾಗೆನೆ ಸೂರ್ಯ ದೇವ ಮೇಷ ರಾಶಿಗೆ ಬಂದಾಗ ಸೌರಮಾನ ಯುಗಾದಿ ಆಚರಿಸುತ್ತಾರೆ. ಇನ್ನೂ ಉಡುಪಿ, ಮಂಗಳೂರು ಕಡೆ, ಉತ್ತರ ಭಾರತದ ಹಲವು ಕಡೆಗಳಲ್ಲಿ ಸೌರಮಾನ ಯುಗಾದಿ ಅಂದ್ರೆ ‘ಬಿಸು’ ಹಬ್ಬವನ್ನು ಆಚರಿಸುತ್ತಾರೆ. ಮಹಾರಾಷ್ಟ್ರದಲ್ಲಿ ಗುಡಿ ಪಾಡ್ವಾ ಎಂದು, ಪಂಜಾಬ್ನಲ್ಲಿ ಬೈಸಾಖಿ ಎಂದು, ಸಿಂಧಿಗಳಲ್ಲಿ ಚೈತಿ ಚಂದ್ ಎಂದು, ತಮಿಳುನಾಡಿನಲ್ಲಿ ಪುತಾಂಡು ಮತ್ತು ರಾಜಸ್ಥಾನದಲ್ಲಿ ಥಾಪನಾ ಎಂಬ ಹೆಸರಿನಿಂದ ಯುಗಾದಿ ಹಬ್ಬವನ್ನು ಆಚರಿಸ್ತಾರೆ.
ರೈತರಿಗೆ ಎಷ್ಟು ವಿಶೇಷ ಈ ಹಬ್ಬ..!
“ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ” ಈ ಹಾಡನ್ನು ಕೇಳಿದ್ದೀರಿ ಅಲ್ವಾ..ಯುಗಾದಿ ಬಂತು ಅಂದ್ರೆನೇ ನಮ್ಮೆಲ್ಲರ ತುಟಿಯಂಚಿನಲ್ಲಿ ಈ ಹಾಡನ್ನು ಗುಣುಗುಟ್ತೇವೆ… ಹಬ್ಬ ಅಂದ್ರೇನೆ ಖುಷಿ ಅದರಲ್ಲೂ ಹೊಸ ವರುಷವನ್ನು ಹೊತ್ತು ತರುವ ಯುಗಾದಿ ಯಂದಂತೂ ಎಲ್ಲಿಲ್ಲದ ಸಂಭ್ರಮ ಸಡಗರ. ಈ ಹಬ್ಬ ರೈತರ ಪಾಲಿಗೂ ವಿಶೇಷ ದಿನ. ಹೊಸ ಬೆಳೆಯ ಖುಷಿಯಲ್ಲಿಯೂ ಈ ಹಬ್ಬದ ಸಂಭ್ರಮ ರೈತಾಪಿ ವರ್ಗದಲ್ಲಿ ಇಮ್ಮಡಿಯಾಗಿರುತ್ತದೆ. ರೈತರು ತಾವು ಬೆಳೆದಿರುವ ಮೊದಲ ಬೆಳೆಯ ಕಟಾವು ಮಾಡಿ ಯುಗಾದಿ ಹಬ್ಬಂದು ವಿಶೇಷ ಪೂಜೆಯನ್ನು ಮಾಡ್ತಾರೆ.
ಯುಗಾದಿ ಬಂತೆಂದರೆ ಪ್ರಕೃತಿಯಲ್ಲಿ ನವೋಲ್ಲಾಸದ ಸಡಗರ. ಹಾಗೆನೇ ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆಯೂ ಹೌದು,, ಯುಗಾದಿಯಂದು ಭೂಮಿಯನ್ನು ಉಳುವುದು ಹಿಂದಿನಿಂದಲೂ ಬಂದ ಸಂಪ್ರದಾಯ. ಇನ್ನೂ ನಾಗರಿಕತೆ ಬೆಳೆದಂತೆ ಗ್ರಾಮೀಣ ಪ್ರದೇಶಗಳಲ್ಲಿನ ಅದೆಷ್ಟೋ ಸಂಪ್ರದಾಯಗಳು ಕಣ್ಮರೆಯಾಗಿದೆ. ಅದರಲ್ಲೂ ದೇಶಕ್ಕೆ ಅನ್ನ ನೀಡುವ ರೈತರು ಯುಗಾದಿ ಹಬ್ಬದ ದಿನ ನಡೆಸುವ ರಾಶಿಪೂಜೆ, ಭೂಮಿ ಪೂಜೆ, ಕಾಣಲು ಸಿಗುವುದು ಇತ್ತೀಚೆಗೆ ಬಲು ಅಪರೂಪ… ಹಳ್ಳಿಗಳಲ್ಲಿ ಯುಗಾದಿ ಹಬ್ಬವನ್ನ ಹೊಸ ವರ್ಷದ ಜೊತೆಗೆ ಕೃಷಿ ಚಟುವಟಿಕೆಗೆ ಮುನ್ನುಡಿ ಬರೆಯುವ ದಿನ ಅಂತಾನೂ ಹೇಳ್ತಾ ಇದ್ರು..
ಸೂರ್ಯೋದಯಕ್ಕೂ ಮುನ್ನವೇ ರೈತರು ಹೊನ್ನೇರನ್ನು ಕಟ್ಟಿ ಹೊಸ ಬಟ್ಟೆಗಳನ್ನು ಧರಿಸಿಕೊಂಡು ಜಮೀನುಗಳಿಗೆ ಹೊರಡ್ತಾರೆ. ಬ್ರಾಹ್ಮಿ ಮುಹೂರ್ತದಲ್ಲಿ ಎತ್ತುಗಳನ್ನು ತೊಳೆದು ಕೊಂಬುಗಳಿಗೆ ಹೊಂಬಾಳೆ, ಕೊರಳಿಗೆ ಬಿಳಿಕಣಗಿಲೆ ಹೂವು, ಮಂಡೆ ಹುರಿ ಕಟ್ಟುತ್ತಾರೆ. ಜೊತೆಗೆ ಎತ್ತಿನಗಾಡಿಯನ್ನು ಬಾಳೆಕಂದು, ಮಾವಿನ ಸೊಪ್ಪಿನಿಂದ ಅಲಂಕರಿಸುತ್ತಾರೆ. ಗದ್ದೆಗೆ ಗೊಬ್ಬರ ಸಿಂಪಡಿಸಿ, ಹೊಸ ವರ್ಷದ ಮೊದಲ ದಿನ ಕೃಷಿಯನ್ನು ಆರಂಭಿಸಿ ಕಾಲ ಕಾಲಕ್ಕೆ ಮಳೆ ಬೆಲೆ ಚೆನ್ನಾಗಿ ಬರಲಿ.. ರೋಗ-ರುಜಿನ ಮಾಯವಾಗಿ ನೆಮ್ಮದಿಯ ಜೀವನ ಸಿಗಲೆಂದು ಬೇಡಿಕೊಳ್ತಾರೆ. ಯುಗಾದಿ ಆರಂಭವಾಗುತ್ತಿದ್ದಂತೆ ಮಳೆಯ ಸಿಂಚನ ಭುವಿಯನ್ನು ತಂಪೆರೆಯಲು ಆರಂಭವಾಗುತ್ತೆ.. ಇದು ತಲೆತಲಾಂತರದಿಂದ ನಡೆದುಕೊಂಡು ಬಂದಿದ್ದು ಗ್ರಾಮೀಣ ಭಾಗದಲ್ಲಿ ಈ ವಿಶೇಷ ಆಚರಣೆ ಇಂದಿಗೂ ಕೆಲವೆಡೆ ಜೀವಂತವಾಗಿದೆ.
ಹೊಸ ಉಡುಪು.. ಘಮ-ಘಮಿಸುವ ಖಾದ್ಯ..!!
ಉಳಿದೆಲ್ಲ ಹಬ್ಬಗಳಿಗಿಂತ ಯುಗಾದಿ ಆಚರಣೆ ಕೊಂಚ ಬೇರೆ. ಹೊಸ ವರ್ಷದ ಹಬ್ಬವೆಂದರೆ ಹೊಸತನ ಇರಲೇಬೇಕಲ್ವಾ… ಈ ದಿನ ಮನೆಯವರೆಲ್ಲರಿಗೂ ಧರಿಸಲು ಹೊಸ ಉಡುಪುಗಳು.. ಅಡುಗೆ ಕೋಣೆಯಲ್ಲಿ ಘಮ ಘಮಿಸುವ ತರತರದ ಯುಗಾದಿ ಸ್ಪೆಷಲ್ ಖಾದ್ಯಗಳು.. ಅಬ್ಬಾ ಯಾರಿಗೆ ಇಷ್ಟ ಇಲ್ಲಾ ಹೇಳಿ ಈ ಹಬ್ಬ.. ಹಬ್ಬ ಹರಿದನಗಳಲ್ಲಿ ತಯಾರಿಸುವ ತಿಂಡಿ ತಿನಿಸುಗಳ ಬಗ್ಗೆ ಮಾತೇ ಇಲ್ಲ.., ಹಬ್ಬ ಅಂದ್ರೇನೆ ಬಗೆಬಗೆಯ ತಿಂಡಿ ತಿನಿಸುಗಳು ತಯಾರಾಗುತ್ತೆ. ಯುಗಾದಿಗೆ ಕರ್ನಾಟಕದಲ್ಲಿ ಹೋಳಿಗೆ ಅಂದಿನ ವಿಶೇಷ ಖಾದ್ಯ.. ಬೆಲ್ಲದ ಪಾನಕ, ಶಾವಿಗೆ ಕೂಡ ಅಂದಿನ ಸ್ಪೆಷಲ್.. ಮಹಾರಾಷ್ಟ್ರದಲ್ಲಿ ಹೋಳಿಗೆಯನ್ನೇ ಹೋಲುವ ಪೂರಣ್ ಪೋಳಿ ತಯಾರಿಸುತ್ತಾರೆ. ಆಂಧ್ರ, ತೆಲಂಗಾಣದಲ್ಲಿ ಬೇವು- ಬೆಲ್ಲ, ಮಾವಿನ ಕಾಯಿ, ಉಪ್ಪು, ಮೆಣಸು, ಹುಣಸೆ ಹಣ್ಣುಗಳ ಮಿಶ್ರಣ ಮಾಡಿ ‘ಪಚ್ಚಡಿ’ಯನ್ನ ತಯಾರಿಸುತ್ತಾರೆ. ಈ ಆರೂ ಪದಾರ್ಥಗಳು ಆರು ಗುಣಗಳನ್ನು ಸಾರುತ್ತವೆ ಎಂಬುದು ಅಲ್ಲಿಯವರ ನಂಬಿಕೆ. ಬೆಲ್ಲ ಸುಖ-ಸಂತೋಷಕ್ಕೆ, ಬೇವು ದುಃಖ ಮತ್ತು ನೋವನ್ನು ಸಹಜತೆಯಿಂದ ಸ್ವೀಕರಿಸಲು, ಮಾವು -ಉತ್ಸಾಹಕ್ಕೆ, ಕಾಳುಮೆಣಸು ಕೋಪ ನಿಗ್ರಹಕ್ಕೆ, ಉಪ್ಪು- ನಮ್ರತಾ ಭಾವಕ್ಕೆ, ಹುಣಸೆ – ಸ್ವೀಕರಣಾ ಭಾವದ ಸಂಕೇತವಾಗಿದೆ. ಹಲವು ಪ್ರಾಂತ್ಯಗಳಲ್ಲಿ, ಹೊಸ ಮಾವಿನ ಮಿಡಿಯ ಉಪ್ಪಿನ ಕಾಯಿ ತಯರಿಸುವುದೂ ಇದೆ.
ಯುಗಾದಿಯನ್ನು ಹೇಗೆ ಆಚರಣೆ ಮಾಡ್ತಾರೆ?
ಈ ಹೊಸ ವರ್ಷವನ್ನು ಹೊಸತಾಗಿ ಆರಂಭಿಸಲು ನಾನಾ ಯೋಜನೆಗಳನ್ನು ಹಾಕುತ್ತಾರೆ. ಇನ್ನೂ ಕೆಲವರು ದೇವಾಲಯಗಳಿಗೆ ಭೇಟಿ ನೀಡಿ ಭಗವಂತನ ಆಶೀರ್ವಾದವನ್ನು ಪಡಿತಾರೆ. ಈ ದಿನ ಬಡವರಿಗೆ ದಾನ ಧರ್ಮವನ್ನು ಮಾಡಿದರೆ ಲಕ್ಷ್ಮೀ ದೇವಿ ಒಲಿಯುತ್ತಾಳೆ ಎಂಬ ನಂಬಿಕೆಯೂ ಇದೆ. ಈ ವರ್ಷವನ್ನು ಸ್ವಾಗತಿಸಲು ಮನೆಯನ್ನು ಸ್ವಚ್ಛವಾಗಿಟ್ಟು, ಮನೆಯ ಮುಂದೆ ಬಣ್ಣ-ಬಣ್ಣದ ಕಣ್ಮನ ಸೆಳೆಯುವ ರಂಗೋಲಿಯನ್ನು ಹಾಕ್ತಾರೆ. ಯುಗಾದಿಯ ದಿನ ಬೆಳ್ಳಂಬೆಳಿಗ್ಗೆ, ಮನೆಯವರೆಲ್ಲಾ ಅಭ್ಯಂಜನ ಸ್ನಾನ ಮಾಡಿ, ನವ ವಸ್ತ್ರ ಧರಿಸಿ ಹೊಸ ವರ್ಷ ಸ್ವಾಗತಿಸುವ ಸಂಭ್ರಮ. ಮಾವಿನ ಎಲೆಗಳನ್ನು ದೇವರ ಮನೆಯ ಕಲಶದಲ್ಲಿ ಅದ್ದಿ, ಮನೆಯ ಮೂಲೆ ಮೂಲೆಗೂ ನೀರನ್ನು ಸಿಂಪಡಿಸಿ, ಮನೆಯ ಶುಚೀಕರಣ ಮಾಡಿ ,ಮನೆ ದೇವರ ಪೂಜೆಯನ್ನು ಮಾಡಲಾಗುತ್ತದೆ. ಬೇಯಿಸಿದ ಕಡಲೆ ಕಾಳುಗಳ ಪ್ರಸಾದ ತಯಾರಾಗುತ್ತದೆ. ಹಿರಿಯರನ್ನು ನಮಸ್ಕರಿಸಿ, ಆಶೀರ್ವಾದ ಪಡೆಯುವಾಗ ಕಿರಿಯರಲ್ಲಿ ಧನ್ಯತಾಭಾವ. ವರ್ಷವಿಡೀ ನೋವು, ನಲಿವನ್ನು ಸಮನಾಗಿ ಸ್ವೀಕರಿಸೋಣ ಎನ್ನುತ್ತಾ ಬೇವು ಬೆಲ್ಲ ಹಂಚಿ ನಲಿಯುವುದು ಯುಗಾದಿ ಆಚರಣೆಯ ಇನ್ನೊಂದು ವಿಶೇಷನೇ ಸರಿ…
ಯುಗಾದಿ ಹಬ್ಬ ಸಮೀಪಿಸುತ್ತಿರುವಾಗಲೇ ಪ್ರಕೃತಿಯ ಮಡಿಲಲ್ಲಿ ಗಿಡ-ಮರಗಳು ಹಣ್ಣೆಲೆಯನ್ನು ಕಳಚಿಕೊಂಡು, ಹೊಸ ಚಿಗುರುಗಳಿಂದ ಕಂಗೊಳಿಸುತ್ತವೆ. ಹಾಗೆನೇ ನಮ್ಮ ಜೀವನದಲ್ಲೂ ಹೊಸತನವನ್ನು ಆರಂಭಿಸಲು ಹೊಸ ವರುಷವನ್ನು ಸ್ವಾಗತಿಸಲಾಗುವುದು. ಯುಗಾದಿ ಹಬ್ಬದಂದು ವಿಶೇಷವಾಗಿ ಸೇವಿಸುವ ಬೇವು – ಬೆಲ್ಲ ನಮ್ಮ ಜೀವನದ ಸುಖ- ದುಃಖ ಹಾಗೂ ನೋವು-ನಲಿವಿನ ಸಮತೋಲನವನ್ನು ಸೂಚಿಸುತ್ತದೆ. ಯುಗಾದಿ ದಿನ ನಾವು ಬೇವು ಬೆಲ್ಲವನ್ನು ಸೇವಿಸುವುದರಿಂದ ನಮ್ಮ ಜೀವನದ ಸುಖ – ದುಃಖ ಸಮಾನಾಗಿ ಹಂಚಿಹೋಗಬೇಕು. ವೈಜ್ಞಾನಿಕವಾಗಿ ಹೇಳ್ಬೇಕಂದ್ರೆ ಬೇವು ತಿನ್ನುವುದರಿಂದ ಮನುಷ್ಯನ ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ವ್ಯಕ್ತಿಯ ದೇಹವನ್ನು ಬಲಪಡಿಸುತ್ತದೆ ಎನ್ನುವ ನಂಬಿಕೆಯಿದೆ. ಬೆಲ್ಲವನ್ನು ಸೇವಿಸುವುದರಿಂದ ಚಯಾಪಚಯ ಕ್ರಿಯೆಯು ಸಮತೋಲನವಾಗುತ್ತದೆ ಮತ್ತು ದೇಹದಲ್ಲಿರುವ ಕೆಟ್ಟ ಕೊಬ್ಬನ್ನು ಕೂಡ ಕರಗಿಸುತ್ತದೆ ಎಂದು ಹೇಳಲಾಗುತ್ತೆ. ವರ್ಷದ ಮೊದಲ ದಿನದಂದು ನಾವು ಜೀವನದ ಕಹಿಯನ್ನು ಸ್ವೀಕರಿಸಬೇಕು ಅಂತ ಹೇಳ್ತಾರೆ. ಯಾಕಂದ್ರೆ ವರ್ಷದ ಆರಂಭದಲ್ಲಿ ಕೇವಲ ಸಿಹಿಯಿದ್ದರೆ ಮುಂದೆ ಕಹಿಯನ್ನು ಎದುರಿಸುವ ಶಕ್ತಿ ಸಿಗುವುದಿಲ್ಲ. ಸಿಹಿ-ಕಹಿ ಅಂದರೆ.. ಬೇವು-ಬೆಲ್ಲ ಎರಡೂ ಸಮಾನವಾದರೆ ಜೀವನದಲ್ಲಿ ಎಷ್ಟೇ ತೊಂದರೆಗಳು, ಕಷ್ಟಗಳು ಇದ್ದರೂ ನಾವು ಅದನ್ನು ಗಾಢವಾಗಿ ತೆಗೆದುಕೊಳ್ಳದೆ ಸಮಸ್ಯೆಗಳನ್ನು ಎದುರಿಸುವ ಶಕ್ತಿ ನಮ್ಮದಾಗುತ್ತೆ.
DAKSHINA KANNADA
ತಮಿಳು ಚಿತ್ರರಂಗಕ್ಕೆ ಎಂಟ್ರಿಕೊಟ್ಟ ‘ಬಿಗ್ ಬಾಸ್’ ರೂಪೇಶ್ ಶೆಟ್ಟಿ
ಮಂಗಳೂರು : ಬಿಗ್ಬಾಸ್ ಮುಖೇನ ರಾಜ್ಯದಲ್ಲಿ ಹೆಸರು ಪಡೆದಿರುವ ಕರಾವಳಿಯಲ್ಲಿ ಸ್ಟಾರ್ ರೂಪೇಶ್ ಶೆಟ್ಟಿ. ತುಳುನಾಡಿನ ಹುಲಿವೇಷ ಕುಣಿತವನ್ನು ಬಿಗ್ಬಾಸ್ ನಲ್ಲಿ ಪರಿಚಯಿಸಿದ್ದು ಅಲ್ಲದೆ ವೇಷದಾರಿಗಳ ಜೊತೆ ಹೆಜ್ಜೆ ಕೂಡಾ ಹಾಕಿದ್ದಾರೆ. ಅಲ್ಲದೇ ರೂಪೇಶ್ ಶೆಟ್ಟಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ವಿನ್ನರ್ ಕೂಡ ಹೌದು. ತುಳು ಸಿನಿಮಾದಲ್ಲಿ ಮಿಂಚಿದ್ದ ರೂಪೇಶ್ ಶೆಟ್ಟಿಗೆ ಬಿಗ್ ಬಾಸ್ ಬಳಿಕ ಕನ್ನಡ ಚಿತ್ರರಂಗದಲ್ಲೂ ಅವಕಾಶ ಸಿಕ್ಕಿತ್ತು. ಇದೀಗ ತಮಿಳು ಚಿತ್ರರಂಗಕ್ಕೂ ರೂಪೇಶ್ ಶೆಟ್ಟಿ ಎಂಟ್ರಿ ಕೊಟ್ಟಿದ್ದಾರೆ.
ಅಮೃತ ಸಾರಥಿ ಎಂಬುವವರು ನಿರ್ದೇಶನ ಮಾಡುತ್ತಿರುವ ತಮಿಳು ಚಿತ್ರದಲ್ಲಿ ರೂಪೇಶ್ ಶೆಟ್ಟಿ ನಟಿಸುತ್ತಿದ್ದಾರೆ. ಯೋಗಿ ಬಾಬು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಪ್ರಮೋದ್ ಶೆಟ್ಟಿ ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ ಅನ್ನೋದು ವಿಶೇಷ. ‘ಸನ್ನಿಧಾನಂ PO’ ಎಂದು ಚಿತ್ರಕ್ಕೆ ಟೈಟಲ್ ಇಡಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ರೂಪೇಶ್ ಶೆಟ್ಟಿ, “ನನ್ನ ಮೊದಲ ತಮಿಳು ಚಿತ್ರ ಸನ್ನಿಧಾನಮ್ PO ಇದರ ಶೂಟಿಂಗ್ ನಿಮ್ಮೆಲ್ಲರ ಆಶೀರ್ವಾದದಿಂದ ಭರದಿಂದ ಸಾಗುತ್ತಿದೆ. ಯೋಗಿ ಬಾಬು ಅವರ ಜತೆ ನಟಿಸುವುದೇ ನನ್ನ ಪಾಲಿನ ಅದೃಷ್ಟ. ನನ್ನ ಸಿನಿ ಪಯಣ ಈ ರೀತಿಯಾಗಿ ಸಾಗಲು ನೀವೇ ಮೊದಲ ಕಾರಣ. ನಿಮ್ಮ ಪ್ರೀತಿ ಪ್ರೋತ್ಸಾಹ ಎಂದೂ ಹೀಗೆ ಇರಲಿ. ದೇವರಿಗೆ ಧನ್ಯವಾದಗಳು” ಎಂದು ಅವರು ಬರೆದುಕೊಂಡಿದ್ದಾರೆ.
2023ರ ನವೆಂಬರ್ ತಿಂಗಳಲ್ಲಿ ಸಿನಿಮಾ ಘೋಷಿಸಲಾಗಿದೆ. ಈ ಚಿತ್ರದ ಮೂರನೇ ಹಂತದ ಶೂಟಿಂಗ್ ಈಗ ನಡೆಯುತ್ತಿದೆ. ಈ ಸಿನಿಮಾ ರಿಲೀಸ್ ದಿನಾಂಕವನ್ನು ರೂಪೇಶ್ ಶೆಟ್ಟಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ರೂಪೇಶ್ ಶೆಟ್ಟಿ ಅವರು ತುಳು ಸಿನಿಮಾಗಳಿಂದ ಬಣ್ಣದ ಬದುಕು ಆರಂಭಿಸಿದರು. 2015ರಲ್ಲಿ ರಿಲೀಸ್ ಆದ ‘ಐಸ್ ಕ್ರೀಮ್’ ಹೆಸರಿನ ತುಳು ಚಿತ್ರದ ಮೂಲಕ ಅವರು ಹೀರೋ ಆದರು. 2023ರಲ್ಲಿ ಅವರ ನಟನೆಯ ‘ಮಂಕು ಭಾಯ್ ಫಾಕ್ಸಿ ರಾಣಿ’ ಸಿನಿಮಾ ರಿಲೀಸ್ ಆಯಿತು. ಅವರು ಸಿನಿಮಾ ನಿರ್ಮಾಣ ಕೂಡ ಮಾಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ ವಿನ್ನರ್ ಆಗಿದ್ದಾರೆ.
DAKSHINA KANNADA
ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನಿಯಮಿತ ಇದರ 31ನೇ ನೂತನ ಎಲ್ಯಾರ್ ಪದವು ಶಾಖೆ ಶುಭಾರಂಭ
ಮಂಗಳೂರು : ಸಹಕಾರಿ ಕ್ಷೇತ್ರದ ಅಗ್ರಗಣ್ಯ ಸಹಕಾರಿ ಸಂಘ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ಮತ್ತು ರಾಷ್ಟ್ರೀಯ ಪುರಸ್ಕಾರ ಪಡೆದಿರುವ ಮಂಗಳೂರು ಪಡೀಲ್ನ ಆತ್ಮಶಕ್ತಿ ಸೌಧದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನಿಯಮಿತ ಇದರ 31ನೇ ನೂತನ ಎಲ್ಯಾರ್ ಪದವು ಶಾಖೆ ಹೋಲಿಕ್ರಾಸ್ ಚರ್ಚ್ ನ ಬಳಿಯಿರುವ ಶರೂನ್ ಸ್ಟ್ರಕ್ಟರ್ ನ ಮೊದಲನೇ ಮಹಡಿಯಲ್ಲಿ ಬುಧವಾರ ಶುಭಾರಂಭಗೊಂಡಿತು.
ಸಾಮಾಜಿಕ ಕಳಕಳಿ ಶ್ಲಾಘನೀಯ : ಯು.ಟಿ.ಖಾದರ್
ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ, ಶ್ರೀಮಂತ ವರ್ಗದವರಿಗೆ ನಗರಪ್ರದೇಶದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು ಸಾಲ ನೀಡುತ್ತದೆ. ಆದರೆ, ಗ್ರಾಮೀಣ ಪ್ರದೇಶದ ಜನರ ಆರ್ಥಿಕ ಮಟ್ಟವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಸಹಕಾರಿ ಸಂಘಗಳ ಸ್ಥಾಪನೆಗೆ ಆದ್ಯತೆ ನೀಡಿದ್ದು, ಇದೀಗ ಎಲ್ಯಾರ್ ಪದವಿನಂತಹ ಹಿಂದುಳಿದ ಪ್ರದೇಶದಲ್ಲಿ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನೂತನ ಶಾಖೆಯನ್ನು ಆರಂಭಿಸುವ ಮೂಲಕ ಸಹಕಾರಿ ಕ್ಷೇತ್ರದ ನಿಜವಾದ ಧ್ಯೇಯ ಉದ್ಧೇಶವನ್ನು ಈ ಸಂಘ ಮಾಡಿ ತೋರಿಸಿದೆ. ಮೂರು ಗ್ರಾಮಗಳ ಸಮ್ಮಿಲನದ ಈ ಪ್ರದೇಶ ವಾಣಿಜ್ಯವಾಗಿ ಅಭಿವೃದ್ಧಿ ಹೊಂದಿಲ್ಲ. ಇಂತಹ ಪ್ರದೇಶದಲ್ಲಿ ಜನರಿಗೆ ಸಹಕಾರಿ ಸೇವೆಯನ್ನು ನೀಡುವ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದ್ದು, ಈ ಪ್ರದೇಶದ ಜನರ ಆರ್ಥಿಕ ಕಾರ್ಯಕ್ಕೆ ಬೆಂಬಲ ನೀಡುವ ಮೂಲಕ ಉತ್ತಮ ಗ್ರಾಹಕ ಸೇವೆಯೊಂದಿಗೆ ಪ್ರದೇಶದ ಅಭಿವೃದ್ಧಿಗೂ ಕೊಡುಗೆ ನೀಡಲಿ ಎಂದರು.’
ಲಾಭದಾಯಕವಾಗಿ ನಡೆಯುತ್ತಿರುವ ಸಂಸ್ಥೆ : ಚಿತ್ತರಂಜನ್ ಬೋಳಾರ್
ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ ಮಾತನಾಡಿ, ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ ಎರಡನೇ ಶಾಖೆ ಆರಂಭಗೊಂಡಿದ್ದು, ಉಳ್ಳಾಲದ ಮಾಡೂರಿನಲ್ಲಿ ಅಂದಿನಿಂದ ಇಂದಿನವರೆಗೆ ಯು.ಟಿ.ಖಾದರ್ ಅವರು ಸಂಘದ ಶಾಖೆಯನ್ನು ಉದ್ಘಾಟಿಸಿದ್ದು ಲಾಭದಾಯಕವಾಗಿ ನಡೆಯುತ್ತಿದೆ. ಸಂಘ ಯಶಸ್ವಿಯಾಗಿ ಇಷ್ಟು ಶಾಖೆಗಳು ಆರಂಭಗೊಳ್ಳಲು ಮತ್ತು ಹತ್ತನೇ ವರ್ಷದಲ್ಲಿ ಸ್ವಂತ ಪ್ರಧಾನ ಕಚೇರಿ ನಿರ್ಮಾಣಕ್ಕೆ ಮುಖ್ಯ ಕಾರಣ ಸಂಘದ ಗ್ರಾಹಕರು, ಸದಸ್ಯರು ಮತ್ತು ಸಂಘದ ಆಡಳಿತ ಮಂಡಳಿಯೊಂದಿಗೆ ಸಿಬಂದಿ ವರ್ಗ ಕಾರಣವಾಗಿದ್ದಾರೆ ಎಂದರು.
ಭದ್ರತಾಕೋಶ ಉದ್ಘಾಟನೆ :
ಎಲ್ಯಾರ್ ಪದವು ಹೊಲಿ ಕ್ರಾಸ್ ಚರ್ಚ್ನ ಧರ್ಮಗುರು ಎಫ್.ಆರ್.ಜಾನ್ ಡಿ’ಸೋಜ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕುತ್ತಾರು ಶ್ರೀ ಪಂಜದಾಯ ಬಂಟ ದೈವಗಳ ಆದಿ ಕೊರಗತನಿಯ ಸೇವಾ ಟ್ರಸ್ಟ್ನ ಉಪಾಧ್ಯಕ್ಷ ದೆಬ್ಬೇಲಿ ಮಹಾಬಲ ಹೆಗ್ಡೆ ಮಾಗಣ್ತಡಿ ಭದ್ರತಾಕೋಶ ಉದ್ಘಾಟಿಸಿದರು.
ಕೊಣಾಜೆ ಬೆಳ್ಮ ಸಿಎಸ್ಐ ಬೆತಾನೀಯ ಚರ್ಚ್ನ ಧರ್ಮಗುರು ರೆ| ವಿನಯಲಾಲ್ ಬಂಗೇರ ನಿರಖು ಠೇವಣಿ ಪತ್ರ ಬಿಡುಗಡೆಗೊಳಿಸಿದರು. ಕೊಣಾಜೆ ಗ್ರಾ. ಪಂ. ಅಧ್ಯಕ್ಷೆ ಗೀತಾ ದಾಮೋದರ ಗಣಕೀಕೃತ ಬ್ಯಾಂಕಿಂಗ್ಗೆ ಚಾಲನೆ ನೀಡಿದರು. ಅಂಬ್ಲಮೊಗರು ಗ್ರಾ. ಪಂ. ಎಸ್.ಮಹಮ್ಮದ್ ಇಕ್ಬಾಲ್ ಇ ಮುದ್ರಾಂಕ ಸೇವೆಗೆ ಚಾಲನೆ ನೀಡಿದರು.
ಗ್ರಾಮಚಾವಡಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ರವೀಂದ್ರ ಬಂಗೇರ ಆವರ್ತನ ಠೇವಣಿಗೆ ಚಾಲನೆ ನೀಡಿದರು. ಶ್ರೀ ಆದಿಮಾಯೆ ರಾಮ ದತ್ತಾಂಜನೇಯ ಭಜನಾ ಮಂದಿರದ ಅಧ್ಯಕ್ಷ ಚಂದ್ರಹಾಸ್ ನಾಯ್ಕ ಉಳಿತಾಯ ಖಾತೆಗೆ ಚಾಲನೆ ನೀಡಿದರು.
ಇದನ್ನೂ ಓದಿ : ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು
ನಿವೃತ್ತ ಮುಖ್ಯ ಶಿಕ್ಷಕ ರವೀಂದ್ರ ರೈ ಕಲ್ಲಿಮಾರು, ಎಲ್ಯಾರ್ ಪದವು ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ಎಡ್ಲೈನ್ ಐಮನ್, ಕಟ್ಟಡದ ಮಾಲಕ ರೆನೋಲ್ಡ್ ಜಿ ಅಮ್ಮಣ್ಣ .ಪಜೀರ್ ಗೋಶಾಲೆಯ ಟ್ರಸ್ಟಿ ಶಿವಪ್ರಸಾದ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಿರ್ದೇಶಕರಾದ ಪಿ. ಪರಮೇಶ್ವರ ಪೂಜಾರಿ, ಆನಂದ ಎಸ್. ಕೊಂಡಾಣ, ಚಂದ್ರಹಾಸ ಮರೋಳಿ, ಗೋಪಾಲ್ ಎಂ. ಸಲಹೆಗಾರರಾದ ಅಶೋಕ್ ಕುಮಾರ್ ಉಪಸ್ಥಿತರಿದ್ದರು.
ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯವಿಜಯ್ ಸ್ವಾಗತಿಸಿದರು. ಉಪಾಧ್ಯಕ್ಷ ನೇಮಿರಾಜ್ ಪಿ. ವಂದಿಸಿದರು. ಸಿಬ್ಬಂದಿ ಹರ್ಷಿತಾ ಕಾರ್ಯಕ್ರಮ ನಿರ್ವಹಿಸಿದರು.
”ಕೊರೊನಾ ಸಂದರ್ಭದಲ್ಲಿ 10 ಕೋಟಿ ಇದ್ದ ಚಿನ್ನಾಭರಣ ಸಾಲ ಒಮ್ಮೆಲೇ 90 ಕೋಟಿ ರೂ.ವರೆಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿತ್ತು. ಸಂಘ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಕ್ಷೇತ್ರದಲ್ಲಿಯೂ ಸಾಧನೆ ಮಾಡಿದೆ. ನೂತನ ಶಾಖೆಯಿಂದ ಬೇರೆ ಬ್ಯಾಂಕ್ಗಳಿಗೆ ಡಿಪಾಸಿಟ್ ಮಾಡಲು ಆರ್ ಟಇ ಜಿ ಎಸ್ ಸೌಲಭ್ಯ, ಇ ಮುದ್ರಾಂಕ, ಆರೋಗ್ಯ ವಿಮೆ, ಸಾಲ ವಿಮಾ ಭದ್ರತೆ ಸೇರಿದಂತೆ ವಿವಿಧ ಬ್ಯಾಂಕಿಂಗ್ ಸವಲತ್ತುಗಳನ್ನು ಗ್ರಾಹಕರು ಪಡೆದುಕೊಳ್ಳಬಹುದು.”
ಸಹಕಾರ ರತ್ನ ಚಿತ್ತರಂಜನ್ ಬೋಳಾರ, ಅಧ್ಯಕ್ಷರು, ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನಿಯಮಿತ ಮಂಗಳೂರು
BELTHANGADY
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.
ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ
ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.
ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.
- FILM7 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA7 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- DAKSHINA KANNADA6 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ
- FILM6 days ago
ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ