DAKSHINA KANNADA
ನೀಟ್ ಪರೀಕ್ಷೆಯಲ್ಲಿ ಎಕ್ಸ್ ಪರ್ಟ್ ಕಾಲೇಜಿನ ಅರ್ಜುನ್ ಕಿಶೋರ್ ದೇಶಕ್ಕೆ ಪ್ರಥಮ
ಮಂಗಳೂರು: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಈ ಬಾರಿ ನಡೆದ ಅಖಿಲ ಭಾರತ ಮಟ್ಟದ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅರ್ಜುನ್ ಕಿಶೋರ್ ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆಯುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಒಟ್ಟು 720 ಅಂಕಗಳಲ್ಲಿ 720 ಅಂಕ ಪಡೆದು ಜನರಲ್ ಮೆರಿಟ್ ವಿಭಾಗದಲ್ಲಿ ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಅಖಿಲ ಭಾರತ ಮಟ್ಟದ ಪರೀಕ್ಷೆಯಲ್ಲಿ ಕರ್ನಾಟಕದ ವಿದ್ಯಾಥಿಯೊಬ್ಬನಿಗೆ ಪ್ರಥಮ ರ್ಯಾಂಕ್ ದೊರೆತಿರುವುದು ಇದೇ ಮೊದಲು.
720ರಲ್ಲಿ 715 ಅಂಕವನ್ನು ಪಡೆದ ಎಕ್ಸ್ಪರ್ಟ್ ಕಾಲೇಜಿನ ವಿದ್ಯಾರ್ಥಿ ಸಂಜನಾ ಸಂತೋಷ್ ಕಟ್ಟಿ ಜನರಲ್ ಮೆರಿಟ್ ವಿಭಾಗದಲ್ಲಿ ಅಖಿಲ ಭಾರತ ಮಟ್ಟದಲ್ಲಿ 255ನೇ ರ್ಯಾಂಕ್, 710 ಅಂಕ ಪಡೆದ ಉತ್ಸವ್ ಆರ್ 533ನೇ ರ್ಯಾಂಕ್, 710 ಅಂಕ ಪಡೆದ ಅಮನ್ ಅಬ್ದುಲ್ ಹಕೀಂ 592ನೇ ರ್ಯಾಂಕ್, 705 ಅಂಕ ಪಡೆದ ವಿಘ್ನೇಶ್ ಎಂ.ಆರ್. 1114ನೇ ರ್ಯಾಂಕ್, 705 ಅಂಕ ಪಡೆದ ಮಿಹಿರ್ ಗಿರೀಶ್ ಕಾಮತ್ 1164ನೇ ರ್ಯಾಂಕ್ ಪಡೆದರೆ, 705 ಅಂಕ ಪಡೆದ ಸಾಯಿ ಭೇಶಜ್ ಜಿ. 1223ನೇ ರ್ಯಾಂಕ್, 700 ಅಂಕ ಪಡೆದ ಲಿಂಗರಾಜ್ ಹೀರೆಮಠ್ 1708ನೇ ರ್ಯಾಂಕ್, 700 ಅಂಕ ಪಡೆದ ಪ್ರಣವ್ ಟಾಟಾ ಆರ್. 1737ನೇ ರ್ಯಾಂಕ್, 700 ಅಂಕ ಪಡೆದ ಪ್ರತೀಕ್ ಪಿ. ಗೌಡ 1931ನೇ ರ್ಯಾಂಕ್, 700 ಅಂಕ ಪಡೆದ ಆಕಾಶ್ ಎಸ್. ಕನಕವಾಡಿ 2013ನೇ ರ್ಯಾಂಕ್, 700 ಅಂಕ ಪಡೆದ ಸಂಜನ್ ಡಿ. 2110ನೇ ರ್ಯಾಂಕ್, 700 ಅಂಕ ಪಡೆದ ಸ್ವಸ್ತಿಕ್ ಅಖಿಲ್ ಶರ್ಮಾ 2197ನೇ ರ್ಯಾಂಕ್, 700 ಅಂಕ ಪಡೆದ ಲೋಚನ್ ಬಿ.ಎಚ್. 2198ನೇ ರ್ಯಾಂಕ್ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಾಗಿದ್ದಾರೆ. ಜನರಲ್ ಮೆರಿಟ್ನಲ್ಲಿ ಅಖಿಲ ಭಾರತ ಮಟ್ಟದ ಮೊದಲ ಒಂದು ಸಾವಿರ ರ್ಯಾಂಕ್ಗಳಲ್ಲಿ 4 ರ್ಯಾಂಕ್ ಕಾಲೇಜಿನ ವಿದ್ಯಾರ್ಥಿಗಳಿಗೆ ದೊರೆತಿದೆ.
ಈ ನಡುವೆ ಪ್ರಥಮ ರ್ಯಾಂಕ್ ಪಡೆದ ಅರ್ಜುನ್ ಕಿಶೋರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಈ ಬಾರಿಯ ಸಿಇಟಿ ಗೊಂದಲ ನೋಡುತ್ತಿದ್ದಂತೆ ಇದು ನನಗೆ ಸಂಬಂಧಿಸಿದ ಪರೀಕ್ಷೆಯಲ್ಲ. ಈ ಕುರಿತು ಸಿರೀಯಸ್ನೆಸ್ ಬಿಟ್ಟು ನೀಟ್ ಕಡೆಗೆ ಫೋಕಸ್ ಮಾಡಿದೆ. ನೀಟ್ನಲ್ಲಿ ರ್ಯಾಂಕ್ ಬರುವ ನಿರೀಕ್ಷೆ ಇತ್ತು. ಆದರೆ ಮೊದಲ ರ್ಯಾಂಕ್ ಬರುತ್ತದೆ ಎಂದುಕೊಂಡಿರಲಿಲ್ಲ. ಮೊದಲ ರ್ಯಾಂಕ್ ಬಹಳ ಖುಷಿಕೊಟ್ಟಿದೆ. ದಿಲ್ಲಿಯ ಏಮ್ಸ್ ಸೇರುವ ಬಯಕೆಯಿದೆ ಎಂದು ತಿಳಿಸಿದ್ದಾರೆ. ವಿಶೇಷವಾಗಿ ಎಕ್ಸ್ಪರ್ಟ್ ಕಾಲೇಜಿನ ನೀಟ್ ಮೊಡ್ಯುಲ್ಗಳು, ಉಪನ್ಯಾಸಕರು ನೀಡಿದ ಟಿಪ್ಸ್, ನೋಟ್ಸ್ ಜತೆಗೆ ಎನ್ಸಿಆರ್ಟಿ ಪಠ್ಯಪುಸ್ತಕ ಹಾಗೂ ನನ್ನ ಶ್ರಮ ಸೇರಿದರಿಂದ ರ್ಯಾಂಕ್ ಗಳಿಸಲು ಸಾಧ್ಯವಾಯಿತು ಎನ್ನುವುದು ಅರ್ಜುನ್ ಕಿಶೋರ್ ಅವರ ರ್ಯಾಂಕ್ ಸಿಕ್ರೇಟ್. ಅರ್ಜುನ್ ಅವರು ಮೈಸೂರು ಗೋಕುಲಂ ನಿವಾಸಿ, ಮೈಸೂರು ಮೆಡಿಕಲ್ ಕಾಲೇಜಿನ ಫಾರ್ಮಾಕಾಲಜಿ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಕಿಶೋರ್ ಮತ್ತು ಮೈಸೂರಿನ ಕ್ಯಾಗ್ರೋಕೇರ್ ಆಸ್ಪತ್ರೆಯ ಗೈನೋಕೋಲಾಜಿಸ್ಟ್ ಡಾ. ರಶ್ಮಿ ಅವರ ಪುತ್ರರಾಗಿದ್ದಾರೆ.
ಸಿಇಟಿ ರ್ಯಾಂಕ್ ಜತೆ ಇದೀಗ ನೀಟ್ನಲ್ಲೂ ರ್ಯಾಂಕ್ ಸಿಕ್ಕಿರುವುದು ಬಹಳ ಖುಷಿ ಕೊಟ್ಟಿದೆ. ಆದರೆ ನೀಟ್ನಲ್ಲಿ ಇನ್ನೂ ಹೆಚ್ಚು ರ್ಯಾಂಕ್ ಪಡೆಯುವ ನಿರೀಕ್ಷೆಯಿತ್ತು ಎಂದು ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ಸಂಜನಾ ಸಂತೋಷ್ ಕಟ್ಟಿ ಹೇಳುತ್ತಾರೆ. ನೀಟ್ನಲ್ಲಿ ಇನ್ನು ಹೆಚ್ಚಿನ ರ್ಯಾಂಕ್ ಬಂದಿದ್ದರೆ ಹೊಸದಿಲ್ಲಿಯ ಏಮ್ಸ್ ನಲ್ಲಿ ಕಲಿಯುವ ಆಸಕ್ತಿಯಿತ್ತು. ನಿರೀಕ್ಷೆಯಿಂದ ಕಡಿಮೆ ರ್ಯಾಂಕ್ ಹಿನ್ನೆಲೆ ಬಂದಿರುವ ಕಾರಣದಿಂದ ಮುಂದೆ ಯೋಚನೆ ಮಾಡ ಬೇಕಾಗಿದೆ ಎನ್ನುತ್ತಾರೆ ಅವರು. ನೀಟ್ನಲ್ಲಿ 720ರಲ್ಲಿ 715 ಅಂಕಗಳಿಸಿಕೊಂಡು ರಾಷ್ಟಮಟ್ಟದಲ್ಲಿ 255 ರ್ಯಾಂಕ್ ಗಳಿಸಿದ್ದಾರೆ. ಇವರು ಮೂಲತಃ ಬಿಜಾಪುರದ ಸಿಂದಗಿ ತಾಲೂಕಿನವರಾಗಿದ್ದು ತಂದೆ ಸಂತೋಷ್ ಕಟ್ಟಿ ಸಾಫ್ಟ್ ವೇರ್ ಎಂಜಿನಿಯರ್, ತಾಯಿ ಸ್ನೇಹಾ ಕಟ್ಟಿ ಗೃಹಿಣಿಯಾಗಿದ್ದಾರೆ.
DAKSHINA KANNADA
ಮೈಸೂರು ದಸರಾದಲ್ಲಿ ತುತ್ತೂರಿ ಬ್ಯಾನ್
ಮಂಗಳೂರು/ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದೆ. ಜಂಬೂ ಸವಾರಿ ನೋಡಲು ಜನರು ಕಾಯುತ್ತಿದ್ದಾರೆ. ಈ ಹಿಂದೆ ದಸರಾ ಆನೆಗಳೊಂದಿಗೆ ಫೋಟೋ, ರೀಲ್ಸ್ ಗೆ ಸರ್ಕಾರ ಬ್ರೇಕ್ ಹಾಕಿತ್ತು. ಈಗ ತತ್ತೂರಿ ಬ್ಯಾನ್ ಮಾಡಲಾಗಿದೆ.
ತುತ್ತೂರಿ ಬ್ಯಾನ್ ಮಾಡುವಂತೆ ಸೂಚಿಸಿ ಮೈಸೂರು ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ತುತ್ತೂರಿ ಕಿರಿಕಿರಿ ಉಂಟುಮಾಡುವ ಹಿನ್ನೆಲೆ ಈ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಪೊಲೀಸ್ ಕಾಯ್ದೆ 1963, ಕಲಂ 35, 36 ಮತ್ತು 92 (Q) ಅಡಿ ವುವುಜೆಲಾ (ತುತ್ತೂರಿ) ಮಾರಾಟ ಮಾಡುವುದು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆ 1963 ಸೆಕ್ಷನ್ 92 (Q) ಪ್ರಕಾರ ಹಾಗೂ ಭಾರತೀಯ ನ್ಯಾಯ ಸಂಹಿತೆ-2023 ಸೆಕ್ಷನ್ 270ರಲ್ಲಿ ಸಾರ್ವಜನಿಕ ಉಪದ್ರವವನ್ನು ಅಪರಾಧವೆಂದು ಪರಿಗಣಿಸಿದ್ದು, ಸಾರ್ವಜನಿಕ ಆರೋಗ್ಯ, ಸುರಕ್ಷತೆ, ನೈತಿಕತೆಗೆ ಕಿರಿಕಿರಿ ಉಂಟುಮಾಡುತ್ತದೆ ಎಂದು ಪರಿಗಣಿಸಲಾಗಿದೆ.
ಇದನ್ನೂ ಓದಿ : ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂ*ಬ್ ಬೆದರಿಕೆ ಇ-ಮೇಲ್
ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನಿನನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಈ ಘಟಕದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
DAKSHINA KANNADA
ಮಂಗಳೂರು : ಅರ್ಚನಾ ಕಾಮತ್ ತ್ಯಾಗ ಸಂಸ್ಮರಣಾ ರಕ್ತದಾನ ಶಿಬಿರ
ಮಂಗಳೂರು : ಬದುಕಿರುವಾಗಲೇ ದೇಹದ ಅಂಗವೊಂದನ್ನು ಆಪ್ತ ಸಂಬಂಧಿಗೆ ದಾನ ಮಾಡಿ ವಿಧಿಲೀಲೆಗೆ ಬಲಿಯಾದ ಉಪನ್ಯಾಸಕಿ ಅರ್ಚನಾ ಕಾಮತ್ ಅವರ ದಿವ್ಯಾತ್ಮಕ್ಕೆ ನುಡಿ ನಮನ ಕಾರ್ಯಕ್ರಮ ಮತ್ತು ರಕ್ತದಾ ನ ಶಿಬಿರ ಮಂಗಳೂರಿನ ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ನಡೆಯಿತು.
ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಆಯೋಜಿಸಿದ ಈ ಕಾರ್ಯಕ್ರಮವನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಶಾಸಕ ಕಾಮತ್ ಬಾಲ್ಯದಿಂದಲೇ ಪರಿಚಯರಾಗಿದ್ದ ಅರ್ಚನಾ ಕಾಮತ್ ಅವರು ಶಿಕ್ಷಕಿಯಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನವರಾಗಿದ್ದರು. ಅವರ ಬದುಕು ನಮಗೆ ಆದರ್ಶವಾಗಿದೆ. ಅವರ ಇಡೀ ಕುಟುಂಬ ನಮಗೆ ಆತ್ಮೀಯವಾಗಿದೆ. ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ರಕ್ತದಾನ ಶಿಬಿರ ಆಯೋಜಿಸಿ ಅರ್ಚನಾ ಅವರ ಆತ್ಮೀಯರನ್ನು ಒಂದುಗೂಡಿಸಿ ಮಾದರಿ ಕಾರ್ಯ ಮಾಡಿದೆ. ಇಷ್ಟು ಚಿಕ್ಕ ವಯಸ್ಸಿನಲ್ಲಿ ನಮ್ಮನ್ನು ಅಗಲಿದ ಅರ್ಚನಾ ಕಾಮತ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರ ಬಗ್ಗೆ ಮಾತನಾಡುವುದು ತುಂಬಾ ನೋವಿನ ಸಂಗತಿ ಎಂದು ಭಾವುಕರಾದರು.
ಈ ಸಂದರ್ಭ ರಥಬೀದಿ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಸಿಎ ಜಗನ್ನಾಥ್ ಕಾಮತ್, ಬೆಸೆಂಟ್ ಶಿಕ್ಷಣ ಸಂಸ್ಥೆಯ ಪ್ರಮುಖರಾದ ಮಣೇಲ್ ಅಣ್ಣಪ್ಪ ನಾಯಕ್ ಮೊದಲಾದವರು ಉಪಸ್ಥಿತರಿದ್ದರು. ಬಿಎನ್ ಐ, ಸಹ್ಯಾದ್ರಿ ಶಿಕ್ಷಣ ಸಂಸ್ಥೆ, ಕೆನರಾ ಹೈಸ್ಕೂಲ್ ಅಸೋಸಿಯೇಷನ್, ಕೆಎಂಸಿ ಆಸ್ಪತ್ರೆ, ಬೆಸೆಂಟ್ ಶಿಕ್ಷಣ ಸಂಸ್ಥೆ, ಯೂತ್ ಆಫ್ ಜಿಎಸ್ ಬಿ, ಸಿಎ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ರಕ್ತದಾನ ಶಿಬಿರದಲ್ಲಿ 98ಕ್ಕೂ ಅಧಿಕ ನಾಗರಿಕರು ರಕ್ತದಾನ ಮಾಡಿದರು.
ಇದನ್ನೂ ಓದಿ : ಮುದ್ದಾದ ಮಗಳ ಮುಖ ರಿವೀಲ್ ಮಾಡಿದ ಮಿಲನಾ ದಂಪತಿ
ಅರ್ಚನಾ ಕಾಮತ್ ಅವರ ಪತಿ, ಸಹೋದರಿ ಹಾಗೂ ಸಂಬಂಧಿಕರು ರಕ್ತದಾನ ಮಾಡಿ ನೋವಿನಲ್ಲಿಯೂ ಹೃದಯ ವೈಶಾಲ್ಯತೆ ಮೆರೆದು ಮಾದರಿಯಾದರು.
DAKSHINA KANNADA
ಮಂಗಳೂರು : ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು
ಮಂಗಳೂರು : ಮಂಗಳೂರಿನ ಹೊರವಲಯದ ಅಡ್ಯಾರ್ ಗಾರ್ಡನ್ ಬಳಿ ಚಲಿಸುತ್ತಿದ್ದ ಕಾರೊಂದು ಹೊತ್ತಿ ಉರಿದಿದೆ. ಕಾರಿನಲ್ಲಿ ಬೆಂ*ಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಕೆಲ ಹೊತ್ತು ಸ್ಥಗಿತಗೊಂಡಿತ್ತು.
ಏಕಾಏಕಿ ಕಾರಿಗೆ ಬೆಂ*ಕಿ ಹೊತ್ತಿಕೊಂಡಿದ್ದು ಸ್ಥಳೀಯರು ಬೆಂ*ಕಿಯನ್ನು ನಂದಿಸಲು ಯತ್ನಿಸುವ ಮೊದಲೇ ಕಾರು ಸುಟ್ಟು ಸಂಪೂರ್ಣ ಕರಕಲಾಗಿತ್ತು. ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದರು ಅಗ್ನಿಶಾಮಕ ದಳ ತಲುಪುವಷ್ಟರಲ್ಲಿ ಕಾರು ಸಂಪೂರ್ಣ ಭಸ್ಮವಾಗಿದೆ.
ಈ ಕಾರು ಮಾಲಕ ಬಿಸಿ ರೋಡಿನ ಗುರುದೀಪ್ ಎಂದು ತಿಳಿದು ಬಂದಿದ್ದು, ಕಾರು ಬಿ ಎಂ ಡಬ್ಲ್ಯೂ ಕಂಪೆನಿಗೆ ಸೇರಿದ 2011-12 ಮಾಡೆಲ್ನದ್ದಾಗಿದೆ.
- LATEST NEWS6 days ago
ವೃಶ್ಚಿಕದಲ್ಲಿ ಬುಧ-ಶುಕ್ರ ಯುತಿ; ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ
- LATEST NEWS4 days ago
ಸೆಪ್ಟಂಬರ್ 29 ರಿಂದ ಆಕಾಶದಲ್ಲಿ ಎರಡು ಚಂದ್ರ ಗೋಚರ..! ಏನಿದು ವಿಸ್ಮಯ..?
- LATEST NEWS4 days ago
ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃ*ತ್ಯು
- LATEST NEWS3 days ago
ಲಕ್ಷ್ಮೀ ಹೆಬ್ಬಾಳ್ಕರ್ಗೆ 1 ಕೆಜಿ ಬಂಗಾರದ ಆಫರ್ ನೀಡಿದ ಮಾಜಿ ಸಚಿವ
Pingback: ನೀಟಾಗಿ ನಡೆಯದ "ನೀಟ್ ಪರೀಕ್ಷೆ..."! ರಿಸಲ್ಟ್ ಬಳಿಕ ತನಿಖೆಗೆ ಒತ್ತಾಯ..! - NAMMAKUDLA NEWS - ನಮ್ಮಕುಡ್ಲ ನ್ಯೂಸ್