Connect with us

    DAKSHINA KANNADA

    ನೀಟ್‌ ಪರೀಕ್ಷೆಯಲ್ಲಿ ಎಕ್ಸ್‌ ಪರ್ಟ್ ಕಾಲೇಜಿನ ಅರ್ಜುನ್ ಕಿಶೋರ್ ದೇಶಕ್ಕೆ ಪ್ರಥಮ

    Published

    on

    ಮಂಗಳೂರು: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಈ ಬಾರಿ ನಡೆದ ಅಖಿಲ ಭಾರತ ಮಟ್ಟದ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅರ್ಜುನ್ ಕಿಶೋರ್ ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಪಡೆಯುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.

    ಒಟ್ಟು 720 ಅಂಕಗಳಲ್ಲಿ 720 ಅಂಕ ಪಡೆದು ಜನರಲ್ ಮೆರಿಟ್ ವಿಭಾಗದಲ್ಲಿ ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಅಖಿಲ ಭಾರತ ಮಟ್ಟದ ಪರೀಕ್ಷೆಯಲ್ಲಿ ಕರ್ನಾಟಕದ ವಿದ್ಯಾಥಿಯೊಬ್ಬನಿಗೆ ಪ್ರಥಮ ರ‍್ಯಾಂಕ್ ದೊರೆತಿರುವುದು ಇದೇ ಮೊದಲು.

    720ರಲ್ಲಿ 715 ಅಂಕವನ್ನು ಪಡೆದ ಎಕ್ಸ್‌ಪರ್ಟ್ ಕಾಲೇಜಿನ ವಿದ್ಯಾರ್ಥಿ ಸಂಜನಾ ಸಂತೋಷ್ ಕಟ್ಟಿ ಜನರಲ್ ಮೆರಿಟ್ ವಿಭಾಗದಲ್ಲಿ ಅಖಿಲ ಭಾರತ ಮಟ್ಟದಲ್ಲಿ 255ನೇ ರ‍್ಯಾಂಕ್, 710 ಅಂಕ ಪಡೆದ ಉತ್ಸವ್ ಆರ್ 533ನೇ ರ‍್ಯಾಂಕ್, 710 ಅಂಕ ಪಡೆದ ಅಮನ್ ಅಬ್ದುಲ್ ಹಕೀಂ 592ನೇ ರ‍್ಯಾಂಕ್, 705 ಅಂಕ ಪಡೆದ ವಿಘ್ನೇಶ್ ಎಂ.ಆರ್. 1114ನೇ ರ‍್ಯಾಂಕ್, 705 ಅಂಕ ಪಡೆದ ಮಿಹಿರ್ ಗಿರೀಶ್ ಕಾಮತ್ 1164ನೇ ರ‍್ಯಾಂಕ್ ಪಡೆದರೆ, 705 ಅಂಕ ಪಡೆದ ಸಾಯಿ ಭೇಶಜ್ ಜಿ. 1223ನೇ ರ‍್ಯಾಂಕ್, 700 ಅಂಕ ಪಡೆದ ಲಿಂಗರಾಜ್ ಹೀರೆಮಠ್ 1708ನೇ ರ‍್ಯಾಂಕ್, 700 ಅಂಕ ಪಡೆದ ಪ್ರಣವ್ ಟಾಟಾ ಆರ್. 1737ನೇ ರ‍್ಯಾಂಕ್, 700 ಅಂಕ ಪಡೆದ ಪ್ರತೀಕ್ ಪಿ. ಗೌಡ 1931ನೇ ರ‍್ಯಾಂಕ್, 700 ಅಂಕ ಪಡೆದ ಆಕಾಶ್ ಎಸ್. ಕನಕವಾಡಿ 2013ನೇ ರ‍್ಯಾಂಕ್, 700 ಅಂಕ ಪಡೆದ ಸಂಜನ್ ಡಿ. 2110ನೇ ರ‍್ಯಾಂಕ್, 700 ಅಂಕ ಪಡೆದ ಸ್ವಸ್ತಿಕ್ ಅಖಿಲ್ ಶರ್ಮಾ 2197ನೇ ರ‍್ಯಾಂಕ್, 700 ಅಂಕ ಪಡೆದ ಲೋಚನ್ ಬಿ.ಎಚ್. 2198ನೇ ರ‍್ಯಾಂಕ್ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಾಗಿದ್ದಾರೆ. ಜನರಲ್ ಮೆರಿಟ್‌ನಲ್ಲಿ ಅಖಿಲ ಭಾರತ ಮಟ್ಟದ ಮೊದಲ ಒಂದು ಸಾವಿರ ರ‍್ಯಾಂಕ್‌ಗಳಲ್ಲಿ 4 ರ‍್ಯಾಂಕ್ ಕಾಲೇಜಿನ ವಿದ್ಯಾರ್ಥಿಗಳಿಗೆ ದೊರೆತಿದೆ.

    ಈ ನಡುವೆ ಪ್ರಥಮ ರ‍್ಯಾಂಕ್ ಪಡೆದ ಅರ್ಜುನ್ ಕಿಶೋರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಈ ಬಾರಿಯ ಸಿಇಟಿ ಗೊಂದಲ ನೋಡುತ್ತಿದ್ದಂತೆ ಇದು ನನಗೆ ಸಂಬಂಧಿಸಿದ ಪರೀಕ್ಷೆಯಲ್ಲ. ಈ ಕುರಿತು ಸಿರೀಯಸ್‌ನೆಸ್ ಬಿಟ್ಟು ನೀಟ್ ಕಡೆಗೆ ಫೋಕಸ್ ಮಾಡಿದೆ. ನೀಟ್‌ನಲ್ಲಿ ರ‍್ಯಾಂಕ್ ಬರುವ ನಿರೀಕ್ಷೆ ಇತ್ತು. ಆದರೆ ಮೊದಲ ರ‍್ಯಾಂಕ್ ಬರುತ್ತದೆ ಎಂದುಕೊಂಡಿರಲಿಲ್ಲ. ಮೊದಲ ರ‍್ಯಾಂಕ್ ಬಹಳ ಖುಷಿಕೊಟ್ಟಿದೆ. ದಿಲ್ಲಿಯ ಏಮ್ಸ್‌ ಸೇರುವ ಬಯಕೆಯಿದೆ ಎಂದು ತಿಳಿಸಿದ್ದಾರೆ. ವಿಶೇಷವಾಗಿ ಎಕ್ಸ್ಪರ್ಟ್ ಕಾಲೇಜಿನ ನೀಟ್ ಮೊಡ್ಯುಲ್‌ಗಳು, ಉಪನ್ಯಾಸಕರು ನೀಡಿದ ಟಿಪ್ಸ್, ನೋಟ್ಸ್‌ ಜತೆಗೆ ಎನ್‌ಸಿಆರ್‌ಟಿ ಪಠ್ಯಪುಸ್ತಕ ಹಾಗೂ ನನ್ನ ಶ್ರಮ ಸೇರಿದರಿಂದ ರ‍್ಯಾಂಕ್‌ ಗಳಿಸಲು ಸಾಧ್ಯವಾಯಿತು ಎನ್ನುವುದು ಅರ್ಜುನ್ ಕಿಶೋರ್ ಅವರ ರ‍್ಯಾಂಕ್ ಸಿಕ್ರೇಟ್. ಅರ್ಜುನ್‌ ಅವರು ಮೈಸೂರು ಗೋಕುಲಂ ನಿವಾಸಿ, ಮೈಸೂರು ಮೆಡಿಕಲ್ ಕಾಲೇಜಿನ ಫಾರ್ಮಾಕಾಲಜಿ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಕಿಶೋರ್ ಮತ್ತು ಮೈಸೂರಿನ ಕ್ಯಾಗ್ರೋಕೇರ್ ಆಸ್ಪತ್ರೆಯ ಗೈನೋಕೋಲಾಜಿಸ್ಟ್ ಡಾ. ರಶ್ಮಿ ಅವರ ಪುತ್ರರಾಗಿದ್ದಾರೆ.

    ಸಿಇಟಿ ರ‍್ಯಾಂಕ್ ಜತೆ ಇದೀಗ ನೀಟ್‌ನಲ್ಲೂ ರ‍್ಯಾಂಕ್ ಸಿಕ್ಕಿರುವುದು ಬಹಳ ಖುಷಿ ಕೊಟ್ಟಿದೆ. ಆದರೆ ನೀಟ್‌ನಲ್ಲಿ ಇನ್ನೂ ಹೆಚ್ಚು ರ‍್ಯಾಂಕ್ ಪಡೆಯುವ ನಿರೀಕ್ಷೆಯಿತ್ತು ಎಂದು ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ಸಂಜನಾ ಸಂತೋಷ್ ಕಟ್ಟಿ ಹೇಳುತ್ತಾರೆ. ನೀಟ್‌ನಲ್ಲಿ ಇನ್ನು ಹೆಚ್ಚಿನ ರ‍್ಯಾಂಕ್ ಬಂದಿದ್ದರೆ ಹೊಸದಿಲ್ಲಿಯ ಏಮ್ಸ್‌ ನಲ್ಲಿ ಕಲಿಯುವ ಆಸಕ್ತಿಯಿತ್ತು. ನಿರೀಕ್ಷೆಯಿಂದ ಕಡಿಮೆ ರ‍್ಯಾಂಕ್ ಹಿನ್ನೆಲೆ ಬಂದಿರುವ ಕಾರಣದಿಂದ ಮುಂದೆ ಯೋಚನೆ ಮಾಡ ಬೇಕಾಗಿದೆ ಎನ್ನುತ್ತಾರೆ ಅವರು. ನೀಟ್‌ನಲ್ಲಿ 720ರಲ್ಲಿ 715 ಅಂಕಗಳಿಸಿಕೊಂಡು ರಾಷ್ಟಮಟ್ಟದಲ್ಲಿ 255 ರ‍್ಯಾಂಕ್‌ ಗಳಿಸಿದ್ದಾರೆ. ಇವರು ಮೂಲತಃ ಬಿಜಾಪುರದ ಸಿಂದಗಿ ತಾಲೂಕಿನವರಾಗಿದ್ದು ತಂದೆ ಸಂತೋಷ್ ಕಟ್ಟಿ ಸಾಫ್ಟ್‌ ವೇರ್ ಎಂಜಿನಿಯರ್, ತಾಯಿ ಸ್ನೇಹಾ ಕಟ್ಟಿ ಗೃಹಿಣಿಯಾಗಿದ್ದಾರೆ.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending