LATEST NEWS
ಉಡುಪಿಯ ಭಕ್ತರಿಂದ ಕೇರಳ ಸರ್ಕಾರದ ವಿರುದ್ಧ “ಭವನಂ ಸನ್ನಿಧಾನಂ” ಹೊಸ ಅಭಿಯಾನ
ಉಡುಪಿಯ ಭಕ್ತರಿಂದ ಕೇರಳ ಸರ್ಕಾರದ ವಿರುದ್ಧ “ಭವನಂ ಸನ್ನಿಧಾನಂ” ಹೊಸ ಅಭಿಯಾನ..!
ಉಡುಪಿ:ಪ್ರತಿ ವರ್ಷ ಡಿಸೆಂಬರ್, ಜನವರಿ ತಿಂಗಳು ಬಂತಂದ್ರೆ ಸಾಕು, ಕರಾವಳಿಯುದ್ದಕ್ಕೂ ಅಯ್ಯಪ್ಪ ಮಾಲಾದಾರಿಗಳು ಕಂಡು ಬರುತ್ತಿದ್ದರು, ಆದ್ರೆ ಈ ವರ್ಷ ಕೋವಿಡ್ ಕಾರಣಕ್ಕಾಗಿ ಕೇರಳ ಸರ್ಕಾರ ಕಠಿಣ ನಿಯಮಗಳನ್ನು ಕಡ್ಡಾಯ ಮಾಡಿ, ಆದೇಶ ಹೊರಡಿಸಿದೆ..ಹೀಗಾಗಿ ಕೇರಳ ಸರಕಾರದ ವಿರುದ್ಧ ಉಡುಪಿಯ ಅಯ್ಯಪ್ಪ ಭಕ್ತರು, ಶಬರಿಮಲೆಗೆ ತೆರಳದೆ “ಭವನಂ ಸನ್ನಿಧಾನಂ” ಎಂಬ ಹೊಸ ಅಭಿಯಾನ ಶುರು ಮಾಡಲು ನಿರ್ಧರಿಸಿದ್ದಾರೆ.
ಕೃಷ್ಣನೂರು ಉಡುಪಿ ಜಿಲ್ಲೆಯಿಂದ ಪ್ರತಿವರ್ಷ 70 ಸಾವಿರಕ್ಕಿಂತಲೂ ಹೆಚ್ಚು ಮಂದಿ ಕೇರಳದ ಶಬರಿಮಲೆಗೆ ಧಾರ್ಮಿಕ ಯಾತ್ರೆ ಮಾಡುತ್ತಾರೆ.
ಜನವರಿ ತಿಂಗಳಲ್ಲಿ ಮಕರ ಸಂಕ್ರಾಂತಿಯ ಜ್ಯೋತಿ ದರ್ಶನಕ್ಕೆ 40 ಸಾವಿರಕ್ಕಿಂತಲೂ ಹೆಚ್ಚು ಭಕ್ತರು ತೆರಳುತ್ತಾರೆ. ವಿಶ್ವದಾದ್ಯಂತ ವ್ಯಾಪಿಸಿರುವ ಕೊರೋನಾ ಮಹಾಮಾರಿ ರೋಗದಿಂದ ಈ ಬಾರಿ ಶಬರಿಮಲೆ ಪ್ರವೇಶ ಕಷ್ಟಕರವಾಗಿದೆ.
ಕೇರಳ ಸರ್ಕಾರ ಲೆಕ್ಕಕ್ಕಿಂತ ಹೆಚ್ಚು ನಿಯಮಾವಳಿಗಳನ್ನು ವಿಧಿಸಿದೆ. ಕರ್ನಾಟಕದಿಂದ ತೆರಳುವ ಭಕ್ತರು ಕೋವಿಡ್ ಟೆಸ್ಟ್ ಮಾಡಿರಬೇಕು.ನೀಲಕಲ್ ಎಂಬಲ್ಲಿ ಇನ್ನೊಂದು ಕೋವಿಡ್ ಟೆಸ್ಟ್ ಮಾಡಿಸಬೇಕು. ಪಂಪಾ ನದಿ ತೀರದಲ್ಲಿ ಮತ್ತೊಂದು ಬಾರಿ ಟೆಸ್ಟ್ ಮಾಡಿಸಬೇಕು ಎಂದಿದೆ.
ಈ ದುಬಾರಿ ನಿಯಮ ಉಡುಪಿಯ ಅಯ್ಯಪ್ಪ ಭಕ್ತರನ್ನ ಕೆರಳಿಸಿದೆ. ಇಷ್ಟೆಲ್ಲಾ ನಿಯಮಾವಳಿಯ ಸಹವಾಸವೇ ಬೇಡ ಎಂದು ಪಂದಳ ಕಂದನ ಸನ್ನಿಧಾನಕ್ಕೆ ತೆರಳದೆ ‘ಭವನಂ ಸನ್ನಿಧಾನಂ’ ಎಂಬ ಅಭಿಯಾನವನ್ನು ಉಡುಪಿಯಲ್ಲಿ ಶುರುಮಾಡಿದ್ದಾರೆ.
ಎರಡೆರಡು ಕೋವಿಡ್ ಟೆಸ್ಟ್ ಮಾಡಲಿರುವ, ಇರುಮುಡಿ ವಾಪಾಸ್ ಕೊಡದ, ಭಕ್ತರ ತುಪ್ಪ ಸ್ವೀಕರಿಸದ, ಊಟದ ವ್ಯವಸ್ಥೆ ಮಾಡದ ದೇಗಲ ಆಡಳಿತ ಮಂಡಳಿ, ಕೇರಳ ಸರಕಾರದ ವಿರುದ್ಧ ಅಸಮಾಧಾನಗೊಂಡಿದ್ದಾರೆ.
ಕೇರಳದ ಬಳಿ ಕಾಸಿಲ್ಲದಿದ್ದರೆ ಅಕೌಂಟ್ ನಂಬರ್ ಕಳುಹಿಸಿ. ಭಕ್ತರ ಭಾವನೆ ಜೊತೆ ವ್ಯವಹಾರ ಮಾಡಬೇಡಿ ಎಂದು ತಿರುಗೇಟು ನೀಡಿದ್ದಾರೆ..
ಈ ಅಭಿಯಾನದ ಪ್ರಕಾರ ಮನೆಯಲ್ಲೇ ಇದ್ದು ಕುಟುಂಬ ಸಮೇತ ಅಯ್ಯಪ್ಪಾರಾಧನೆ ಮಾಡಲು ನಿರ್ಧರಿಸಿದ್ದಾರೆ
ಉಡುಪಿ ಜಿಲ್ಲೆಯ ಅಯ್ಯಪ್ಪ ಮಾಲಾಧಾರಿಗಳು. ದಕ್ಷಿಣ ಕನ್ನಡ ಜಿಲ್ಲೆ ಉತ್ತರ ಕನ್ನಡ ಜಿಲ್ಲೆಯ ಲಕ್ಷಾಂತರ ಅಯ್ಯಪ್ಪ ಭಕ್ತರು ನಮ್ಮ ಅಭಿಯಾನದ ಜೊತೆ ಕೈಜೋಡಿಸಿದ್ದಾರೆ.
ಅಯ್ಯಪ್ಪ ಮಂದಿರಗಳಲ್ಲಿ ವಿಶೇಷ ಪೂಜೆಗಳನ್ನು ಆಯೋಜಿಸುವುದು ಅನ್ನಸಂತರ್ಪಣೆ ಕಾರ್ಯಕ್ರಮಗಳನ್ನು ನಡೆಸುತ್ತೇವೆ. ಯಾವುದೇ ಶಿಬಿರಗಳನ್ನು ಮಾಡದೆ ಮನೆಗಳಲ್ಲೇ ಅಯ್ಯಪ್ಪ ದೇವರನ್ನ ಕುಟುಂಬ ಸಮೇತವಾಗಿ ನಿಯಮ ನಿಷ್ಠೆಯಿಂದ ಆರಾಧಿಸಲು ತೀರ್ಮಾನಿಸಿರುವುದಾಗಿ ಅಯ್ಯಪ್ಪ ಭಕ್ತರು ಹೇಳಿದ್ದಾರೆ.
ಒಟ್ಟಿನಲ್ಲಿ ಪ್ರತಿವರ್ಷ ಯಾವುದೇ ಕಷ್ಟ ಬಂದ್ರೂ ಶಬರಿಮಲೆಗೆ ತೆರಳುತ್ತಿದ್ದ ಭಕ್ತರಿಗೆ ನಿರಾಸೆ ಆಗಿದೆ..
ಹೀಗಾಗಿ ಸ್ವಲ್ಪಮಟ್ಟಿಗಾದ್ರೂ ನಿಯಮ ಸಡಿಲಿಕೆ ಮಾಡಬಹುದಿತ್ತು ಎನ್ನುವ ಮಾತುಗಳೂ ಕೂಡ ಕೇಳಿ ಬರುತ್ತಿದೆ
kerala
5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.
ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.
ಆನ್ ಲೈನ್ ಗೇಮಿಂಗ್ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?
ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್ಲೈನ್ ಗೇಮಿಂಗ್ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
LATEST NEWS
WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.
ಸೀಟ್ ಗಾಗಿ ಎಡವಟ್ಟು :
ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.
ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್ಗೆ 60 ರೂ., ಹಾಲ್ಫ್ಗೆ 40 ರೂ.
ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.
ರೋಹಿತ್ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.
ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ