Connect with us

LATEST NEWS

New Delhi: ಹಿಮಾಚಲ ಪ್ರದೇಶದಲ್ಲಿ ಭೂಕುಸಿತ – 60ಕ್ಕೂ ಅಧಿಕ ಜನ ಸಾವು..!

Published

on

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಮತ್ತು ಪ್ರವಾಹವಾಗಿ 60ಕ್ಕೂ ಅಧಿಕ ಜನ ಸಾವನ್ನಪ್ಪಿದ್ದು, ಮನೆಗಳ ಅವಶೇಷಗಳ ಅಡಿಯಲ್ಲಿ ಹಲವು ಮೃತ ದೇಹಗಳು ಸಿಲುಕಿಕೊಂಡಿವೆ ಎಂದು ವರದಿಯಾಗಿದೆ.

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಮತ್ತು ಪ್ರವಾಹವಾಗಿ 60ಕ್ಕೂ ಅಧಿಕ ಜನ ಸಾವನ್ನಪ್ಪಿದ್ದು, ಮನೆಗಳ ಅವಶೇಷಗಳ ಅಡಿಯಲ್ಲಿ ಹಲವು ಮೃತ ದೇಹಗಳು ಸಿಲುಕಿಕೊಂಡಿವೆ ಎಂದು ವರದಿಯಾಗಿದೆ.

ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಕಳೆದ ವಾರದಿಂದ ನಿರಂತರ ಮಳೆಯಾಗಿದ್ದು, ಇನ್ನೂ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಶಿಮ್ಲಾದ ಸಮ್ಮರ್ ಹಿಲ್, ಕೃಷ್ಣ ನಗರ ಮತ್ತು ಫಾಗ್ಲಿಯಲ್ಲಿ ಭಾನುವಾರದಿಂದ ಹತ್ತಾರು ಮಂದಿ ಭೂಕುಸಿತದಲ್ಲಿ ಸಾವನ್ನಪ್ಪಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಮೃತರ ಸಂಖ್ಯೆ 71ಕ್ಕೆ ಏರಿಕೆಯಾಗಿದ್ದು, ಬಹುತೇಕ ಮೃತದೇಹಗಳು ಪತ್ತೆಯಾಗಿವೆ.

ಕಳೆದ 3 ದಿನಗಳಲ್ಲಿ ಕನಿಷ್ಠ 71 ಜನರು ಸಾವನ್ನಪ್ಪಿದ್ದು, 13 ಮಂದಿ ನಾಪತ್ತೆಯಾಗಿದ್ದಾರೆ.

ಭಾನುವಾರ ರಾತ್ರಿಯಿಂದ ಒಟ್ಟು 57 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಓಂಕಾರ್ ಚಂದ್ ಶರ್ಮಾ ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ಮತ್ತೆ ಸಮ್ಮರ್ ಹಿಲ್‌ನಲ್ಲಿ ಮತ್ತೊಂದು ಭೂ ಕುಸಿತ ವರದಿಯಾಗಿದೆ.

ಸಮ್ಮರ್ ಹಿಲ್‌ನಲ್ಲಿನ ಅವಶೇಷಗಳಿಂದ 13, ಫಾಗ್ಲಿಯಿಂದ ಐದು ಮತ್ತು ಕೃಷ್ಣ ನಗರದಲ್ಲಿ ಎರಡು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಮವಾರ ಕುಸಿದ ದೇವಾಲಯದ ಅವಶೇಷಗಳಲ್ಲಿ ಇನ್ನೂ ಹಲವರು ಮಂದಿ ಸಮಾಧಿಯಾಗಿರುವ ಶಂಕೆ ಇದೆ.

ನಿನ್ನೆ ಸಂಜೆ ಶಿಮ್ಲಾದ ಹೃದಯ ಭಾಗದಲ್ಲಿರುವ ಕೃಷ್ಣ ನಗರದಲ್ಲಿ ಎಂಟು ಮನೆಗಳ ಸುತ್ತ ಭೂಕುಸಿತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.

ರಾಜ್ಯ ಸರ್ಕಾರವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

DAKSHINA KANNADA

ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

Published

on

ನ್ಯೂಯಾರ್ಕ್‌ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್‌ಗಳನ್ನು ದಾಟಿ, ಹಂಪ್‌ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್‌ನ ಆನಂದ್ ಜಿಲ್ಲೆಯ ರೇಖಾಬೆನ್‌ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್‌ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.

 

ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.


ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್‌ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

Continue Reading

FILM

PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!

Published

on

ಬೆಂಗಳೂರು : ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ಧಾರಾವಾಹಿ ‘ಗೀತಾ’. ಈ ಧಾರಾವಾಹಿಯ ನಾಯಕ ‘ವಿಜಯ್’ ಅಂದ್ರೆ ಧನುಷ್ ಗೌಡ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. ಅವರ ವಿವಾಹ ಶುಕ್ರವಾರ ಅದ್ದೂರಿಯಾಗಿ ನೆರವೇರಿತು.


ಧನುಷ್ ಗೌಡ ಅವರು ಸಂಜನಾ ಎಂಬವರ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ಸಂಜನಾ ಧನುಷ್ ಅತ್ತೆಯ ಮಗಳಾಗಿದ್ದು, ಇದು ಅರೆಂಜ್ಡ್ ಮ್ಯಾರೇಜ್ ಆಗಿದೆ.


ಇನ್ನು ಮದುವೆಯಲ್ಲಿ ಕುಟುಂಬದವರು, ಆಪ್ತರು, ಸ್ನೇಹಿತರು ಉಪಸ್ಥಿತರಿದ್ದರು.

ಧನುಷ್ ಅವರು ಆರತಕ್ಷತೆ ಕಾರ್ಯಕ್ರಮವೂ ಅದ್ದೂರಿಯಾಗಿ ನಡೆದಿದೆ.

ಧನುಷ್ ಅವರ ಮದುವೆ, ಆರತಕ್ಷತೆ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಪಾಲ್ಗೊಂಡಿದ್ದರು. 

ಇದನ್ನೂ ಓದಿ : ಮೇಕಪ್ ರೂಂನಲ್ಲಿ ಕೂಡಿ ಹಾಕಿದ್ರು…ಆಮೇಲೆ…ನಿರ್ಮಾಪಕನಿಂದಾದ ಕರಾಳ ಅನುಭವ ಬಿಚ್ಚಿಟ್ಟ ಖ್ಯಾತ ಕಿರುತೆರೆ ನಟಿ!

ಭವ್ಯಾ ಗೌಡ, ಮೌನ ಗುಡ್ಡೇಮನೆ, ರಿತ್ವಿಕ್ ಕೃಪಾಕರ್, ಸೇರಿ ಅನೇಕ ಕಿರುತೆರೆ ಹಿರಿತೆರೆ ತಾರೆಯರು ಆಗಮಿಸಿದ್ದರು.

 

ಮದುವೆ ಸಂಭ್ರಮದ ನಡುವೆಯೂ ಧನುಷ್ ವೋಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಮಾದರಿಯಾಗಿದ್ದಾರೆ. ಧನುಷ್ ನಡೆಗೆ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

 

 

Continue Reading

LATEST NEWS

Trending