Friday, March 24, 2023

ಮಹಾರಾಷ್ಟ್ರದಲ್ಲಿ ಓಮೈಕ್ರಾನ್ ಉಪತಳಿ ಪತ್ತೆ : ಕರ್ನಾಟಕದಲ್ಲಿ ಹೈ ಅಲರ್ಟ್..!

ಬೆಂಗಳೂರು :  ಮಹಾರಾಷ್ಟ್ರದಲ್ಲಿ ಕೊರೊನಾ ವೈರಾಣುವಿನ ರೂಪಾಂತರಿ ಓಮೈಕ್ರಾನ್‌ನ ಉಪತಳಿಗಳು ಪತ್ತೆಯಾಗಿರುವುದರಿಂದ ರಾಜ್ಯದಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.

ಈ ಬಗ್ಗೆ ಇಲಾಖೆ ಆಯುಕ್ತ ಡಿ. ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ.

‘ಅಮೆರಿಕದಲ್ಲಿ ಬಿಕ್ಯೂ.1, ಮಹಾರಾಷ್ಟ್ರದಲ್ಲಿ ಬಿಎ 2.75 ಹಾಗೂ ಬಿಜೆ.1 ಉಪತಳಿಗಳು ಪತ್ತೆಯಾಗಿವೆ.

ದೀಪಾವಳಿ, ಕನ್ನಡ ರಾಜ್ಯೋತ್ಸವ ಸೇರಿ ವಿವಿಧ ಉತ್ಸವಗಳು ನಡೆಯುವುದರಿಂದ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕೋವಿಡ್ ನಿಯಮಗಳನ್ನು ಈ ಅವಧಿಯಲ್ಲಿ ಪಾಲಿಸಬೇಕು’ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

‘ಜ್ವರ, ಕೆಮ್ಮು, ಶೀತ, ಗಂಟಲು ನೋವು, ಉಸಿರಾಟದ ಸಮಸ್ಯೆ ಕಂಡು ಬಂದಲ್ಲಿ ಕೂಡಲೇ ಆಸ್ಪತ್ರೆಗೆ ತೆರಳಿ, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು.

ರೋಗ ಗುಣಮುಖವಾಗುವವರೆಗೂ ಸ್ವಯಂ ಪ್ರೇರಿತವಾಗಿ ಮನೆಯಲ್ಲಿಯೇ ಇರಬೇಕು. ಹೊರಗಡೆ ಹೋಗುವಾಗ ಮುಖಗವಸು ಧರಿಸಬೇಕು’ ಎಂದು ತಿಳಿಸಲಾಗಿದೆ.

‘ಈಗಾಗಲೇ ಎರಡು ಡೋಸ್ ಲಸಿಕೆ ಪಡೆದವರು ಇನ್ನೊಂದು ಡೋಸ್ ಲಸಿಕೆಯನ್ನು ಪಡೆದುಕೊಳ್ಳಬೇಕು.

60 ವರ್ಷ ಮೇಲ್ಪಟ್ಟವರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ರೋಗ ಲಕ್ಷಣ ಹೊಂದಿರುವವರಿಂದ ಅಂತರ ಕಾಯ್ದುಕೊಳ್ಳಬೇಕು’ ಎಂದು ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here

Hot Topics

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ..!

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆವರು ಜಿನೈಕ್ಯರಾಗಿದ್ದಾರೆ.ಹಾಸನ : ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ...

ಶುಕ್ರವಾರದ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ : 3 ವಾರ ಯಾವುದೇ ಮುಷ್ಕರ ನಡೆಸದಂತೆ ಕಟ್ಟಾಜ್ಞೆ..!

ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈ ಕೋರ್ಟ್ ಬ್ರೇಕ್​​ ಹಾಕಿದ್ದು, 3 ವಾರಗಳ ಕಾಲ ಯಾವುದೇ ಮುಷ್ಕರ ನಡೆಸದಂತೆ ಕಟ್ಟಾಜ್ಞೆ ಹೊರಡಿಸಿದೆ.ಬೆಂಗಳೂರು: ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈ ಕೋರ್ಟ್...

ಕಲಬುರಗಿಯಲ್ಲಿ ಹಾಡು ಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ..!

ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ ಮಾಡಲಾದ ಘಟನೆ ಕಲಬುರಗಿಯ ಹಾಗರಗಾ ಕ್ರಾಸ್ ಬಳಿ ನಡೆದಿದೆ. ಮಜತ್ ಸುಲ್ತಾನ್ (35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಲಬುರಗಿ : ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ...