LATEST NEWS
ಕುವೈಟ್: ‘ಬದ್ರ್ ಅಲ್ ಸಮಾ’ ದ ನೂತನ ವೈದ್ಯಕೀಯ ಒಪಿಡಿ ಬ್ಲಾಕ್ ಉದ್ಘಾಟನೆ
ಕುವೈಟ್: ಕುವೈಟ್ನಲ್ಲಿ ಜನರ ನಂಬಿಕೆ ಮತ್ತು ವಿಶ್ವಾಸಕ್ಕೆ ಪಾತ್ರವಾಗಿರುವ ಕನ್ನಡಿಗರೇ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಫರ್ವಾನಿಯಾದ ಬದ್ರ್ ಅಲ್ ಸಮಾ ಮೆಡಿಕಲ್ ಸೆಂಟರ್ ನಲ್ಲಿ ಹೊಸ ವೈದ್ಯಕೀಯ ಒಪಿಡಿ ಬ್ಲಾಕ್ ಮತ್ತು KOC, KNPC, KIPIC ಮತ್ತು ವೀಸಾ ಮೆಡಿಕಲ್ ವಿಭಾಗ ಇತ್ತೀಚೆಗೆ ಉದ್ಘಾಟನೆಗೊಂಡಿತು.
ನೂತನ ವಿಭಾಗವನ್ನು ಆಡಳಿತ ಮಂಡಳಿಯ ನಿರ್ದೇಶಕ ಡಾ. ಮೊಹಮ್ಮದ್ ಪಿಎ, ಅಬ್ದುಲ್ ಲತೀಫ್ ಉದ್ಘಾಟಿಸಿದರು. ಸಿಇಒ ಡಾ ಶರತ್ ಚಂದ್ರ ಮತ್ತು ಶಾಖೆ ವ್ಯವಸ್ಥಾಪಕರಾದ ಅಬ್ದುಲ್ ರಜಾಕ್ ಅಧ್ಯಕ್ಷತೆ ವಹಿಸಿದ್ದರು.
ಇದೇ ಸಂದರ್ಭ ಆಡಳಿತ ನಿರ್ದೇಶಕರು ಇನ್ನೂ ಹೊಸ ಎರಡು ಕೇಂದ್ರಗಳನ್ನು ತೆರೆಯುವುದಾಗಿ ಘೋಷಿಸಿದ್ದು, ಕುವೈತ್ನಲ್ಲಿರುವ ಎಲ್ಲಾ ಸಹೃದಯಿ ರಕ್ತದಾನಿಗಳಿಗೆ ಒಂದು ವರ್ಷದ ಅವಧಿವರೆಗೆ ಎಲ್ಲಾ ವಿಬಾಗಗಳಲ್ಲಿ ಉಚಿತ ವೈದ್ಯರ ಸಮಾಲೋಚನೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಆಡಳಿತ ಮಂಡಳಿ ನಿರ್ದೇಶಕರು, ಕುವೈಟ್ ಆರೋಗ್ಯ ಸಚಿವಾಲಯದ ಪ್ರೋಟೋಕಾಲ್ ಮತ್ತು ಆರೋಗ್ಯ ರಕ್ಷಣೆ ನೀತಿಗಳನ್ನು ಅನುಸರಿಸುವ ಮೂಲಕ ಕುವೈಟ್ನ ಜನರ ನಿರೀಕ್ಷೆಗೆ ತಕ್ಕಂತೆ ಬದುಕಲು ಸಾಧ್ಯವಾಯಿತು ಎಂದರು. ಹಣ ನಮಗೆ ಆಹಾರ ನೀಡಿದರೆ ರಕ್ತ ನಮಗೆ ಜೀವ ನೀಡುತ್ತದೆ.
ರಕ್ತದಾನ ಮಾಡುವುದರಿಂದ ಜೀವ ಉಳಿಸುವ ಪುಣ್ಯದ ಕೆಲಸ ಮಾಡಿದಂತಾಗುತ್ತದೆ ಎಂದು ರಕ್ತದಾನದ ಮಹತ್ವವನ್ನು ತಿಳಿಸಿದರು.
ಬದ್ರ್ ಅಲ್ ಸಮಾ ಗ್ರೂಪ್ ಆಫ್ ಹಾಸ್ಪಿಟಲ್ಸ್ & ಮೆಡಿಕಲ್ ಸೆಂಟರ್, ಆಡಳಿತ ನಿರ್ದೇಶಕರಾದ ಡಾ ಮೊಹಮ್ಮದ್ ಪಿಎ, ಅಬ್ದುಲ್ ಲತೀಫ್ ಮತ್ತು ಸಿಇಒ ಡಾ ಶರತ್ ಚಂದ್ರ, ಬ್ರಾಂಚ್ ಮಾನೇಜರ್ ಅಬ್ದುಲ್ ರಜಾಕ್ ಅವರ ಅಧ್ಯಕ್ಷತೆಯಲ್ಲಿ ಕಳೆದ 6 ವರ್ಷಗಳಿಂದ ಸಂಸ್ಥೆಯ ಬೆಳವಣಿಗೆಯಲ್ಲಿ ನಿರಂತರ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳನ್ನು ಶ್ಲಾಘಿಸಲಾಯಿತು.
ಮಾರ್ಚ್ 2017 ರಲ್ಲಿ ಕುವೈಟ್ನಲ್ಲಿ ಪ್ರಾರಂಭವಾದ ಬದ್ರ್ ಅಲ್ ಸಮಾ ‘ಆರೋಗ್ಯ ಕಾಳಜಿಗಿಂತ ಹೆಚ್ಚು….ಮಾನವ ಆರೈಕೆ’ಗೆ ಬದ್ಧವಾಗಿದ್ದು,
ಈ ಕೇಂದ್ರ ಯೂರೋಲಜಿ, ಮೂಳೆಚಿಕಿತ್ಸೆ, ಜನರಲ್ ಸರ್ಜರಿ, ಪೀಡಿಯಾಟ್ರಿಕ್ಸ್, ಇಎನ್ಟಿ, ಡೆಂಟಿಸ್ಟ್ರಿ, ಪ್ರಸೂತಿ ಮತ್ತು ಸ್ತ್ರೀರೋಗ, ಕಣ್ಣಿನ ಚಿಕಿತ್ಸೆ, ಡೆರ್ಮಾಟಾಲಜಿ, ಸೌಂದರ್ಯವರ್ಧಕ ಚಿಕಿತ್ಸೆ, ರೇಡಿಯಾಲಜಿ, ಪ್ರಯೋಗಾಲಯ, ಫಾರ್ಮಸಿ ಮತ್ತು ಕಾಲ್ ಸೆಂಟರ್ ಹೀಗೆ ವ್ಯಾಪಕ ಶ್ರೇಣಿಯ ವಿಶೇಷ ವೈದ್ಯಕೀಯ ಸೇವೆಗಳನ್ನು ನೀಡುತ್ತಾ ಬಂದಿದೆ.
ಇನ್ನು ಬ್ರಾಂಡಿಂಗ್, ಮೀಡಿಯಾ ಮಾರ್ಕೆಟಿಂಗ್ ಸನಾ, ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ರಹಜನ್, ಟೆಲಿಮಾರ್ಕೆಟಿಂಗ್,
ಸಾಮಾಜಿಕ ಮಾಧ್ಯಮ ಶೆರಿನ್, ಮಾರ್ಕೆಟಿಂಗ್ ಸಂಯೋಜಕಿ ಪ್ರೀಮಾ, ಫೀಲ್ಡ್ ಮಾರ್ಕೆಟಿಂಗ್ ಕದಿರ್, ಇನ್ಸುರೆನ್ಸ್ ಕಾರ್ಡಿನೇಟರ್ ತಾಸಿರ್ ಸಂಯೋಜಿಸಿದರು. ಅಕೌಂಟ್ಸ್ ಮಾನೇಜರ್ ಜಿಜುಮೋನ್ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಇದ್ದರು.
ಬದ್ರ್ ಅಲ್ ಸಮಾ ಕುವೈತ್ ಜನತೆಗೆ ಧನ್ಯವಾದ ಸಲ್ಲಿಸಿದ್ದು, ನಂಬಿಕೆ ಮತ್ತು ವಿಶ್ವಾಸದ ಜೊತೆಗೆ ಕುವೈತ್ ನೆಲದಲ್ಲಿ ಜನರ ಪ್ರೀತಿ, ಭರವಸೆ ಅಪಾರ ಬೆಂಬಲಕ್ಕಾಗಿ ಆಡಳಿತ ಮಂಡಳಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.
LATEST NEWS
ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ!
ಕೈಗಳಿಲ್ಲದಿದ್ದರೂ, ಕಾಲಿನ ಸಹಾಯದಿಂದ ಕಾರು ಚಲಾಯಿಸಿ ಸರ್ಕಾರದಿಂದ ಡ್ರೈವಿಂಗ್ ಲೈಸೆನ್ಸ್ ಪಡೆದಿದ್ದಾಳೆ. ಕೇರಳದ ಜಿಲುಮೋಲ್ ಮರಿಯೆಟ್ ಥಾಮಸ್. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿದ್ದ ಮರಿಯೆಟ್ ಥಾಮಸ್ ಚಿಕ್ಕ ವಯಸ್ಸಿನಲ್ಲೇ ಕಾಲಿನ ಮೂಲಕವೇ ದೈನಂದಿನ ಚಟುವಟಿಕೆಗಳನ್ನು ಅಭ್ಯಾಸ ಮಾಡಿಕೊಂಡಿದ್ದಳು. ಇದೀಗ ಕೈಗಳಿಲ್ಲದಿದ್ದರೂ, ಕಾಲಿನ ಮೂಲಕವೇ ಕಾರು ಚಲಾಯಿಸಿ ದೇಶದ ಗಮನ ಸೆಳೆದಿದ್ದಾಳೆ.
ಇದಲ್ಲದೇ ಎರಡು ಕೈಗಳಿಲ್ಲದೇ ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾಳೆ.
ಕೈಗಳಿಲ್ಲದಿದ್ದರೂ, ಕಾಲಿನ ಸಹಾಯದಿಂದ ಕಾರು ಚಲಾಯಿಸುವುದರ ಜೊತೆಗೆ ಚಿತ್ರಕಲೆಯಲ್ಲೂ ಸೈ ಎನಿಸಿಕೊಂಡಿರುವ ಈಕೆ ಸಾಕಷ್ಟು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾಳೆ. ಇದೀಗ ದೇಶದಾದ್ಯಂತ ಖ್ಯಾತಿಯನ್ನು ಪಡೆದಿರುವ ಈಕೆಯನ್ನು ಅನೇಕ ಸೆಲೆಬ್ರಿಟಿಗಳು ಕೂಡ ಭೇಟಿಯಾಗುತ್ತಿದ್ದಾರೆ.
DAKSHINA KANNADA
ವೋಟ್ ಮಾಡಿ, ಊಟ ಮಾಡಿ: ಹೋಟೆಲ್ಗಳಲ್ಲಿ ಸಿಗಲಿದೆ ಫ್ರೀ ದೋಸೆ, ಸಿಹಿ ತಿಂಡಿ!
ಬೆಂಗಳೂರು: ಮತದಾನದ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ಮತ್ತು ಮತದಾನ ಪ್ರಮಾಣ ಹೆಚ್ಚಿಸುವ ಸಲುವಾಗಿ ಬೆಂಗಳೂರಿನ ಕೆಲವು ಹೋಟೆಲ್ಗಳು ವಿಶಿಷ್ಟ ಜಾಗೃತಿ ಕಾರ್ಯಕ್ರಮ ಆಯೋಜಿಸುತ್ತಿವೆ. ಕಳೆದ ವರ್ಷ ವಿಧಾನ ಚುನಾವಣೆಯಲ್ಲಿ ಮಾಡಿದಂತೆಯೇ ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿ ಬಂದವರಿಗೆ ಉಚಿತ ಆಹಾರ, ರಿಯಾಯಿತಿ ದರದಲ್ಲಿ ತಿಂಡಿ ನೀಡುವ ಬಗ್ಗೆ ಘೋಷಣೆ ಮಾಡಿವೆ.
ವೋಟ್ ಮಾಡಿ, ಊಟ ಮಾಡಿ:
ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಗ್ರ್ಯಾಂಡ್ ಹೋಟೆಲ್ ವೋಟ್ ಮಾಡಿ, ಊಟ ಮಾಡಿ’ ಅಭಿಯಾನದಡಿ ಮತದಾನದ ದಿನದಂದು ಮತದಾನ ಮಾಡಿದ ಗುರುತು ತೋರಿಸಿದವರಿಗೆ ಬೆಣ್ಣೆ ದೋಸೆ, ಲಡ್ಡು ಮತ್ತು ಜ್ಯೂಸ್ ನೀಡುವುದಾಗಿ ಘೋಷಿಸಿದೆ. 2018 ರ ವಿಧಾನಸಭಾ ಚುನಾವಣೆ ವೇಳೆಯೂ ಹೋಟೆಲ್ ಇಂತಹ ಕೊಡುಗೆ ನೀಡಿತ್ತು.
ಪ್ರಜಾಪ್ರಭುತ್ವದಲ್ಲಿ ಮತದಾನ ಮಾಡುವುದು ನಮ್ಮ ಹಕ್ಕು. ಈ ಕುರಿತು ಜಾಗೃತಿ ಮೂಡಿಸುವ ನಮ್ಮ ನಿರಂತರ ಪ್ರಯತ್ನದ ಭಾಗವಾಗಿ ಕೆಲವು ಹೋಟೆಲ್ಗಳು ಕೆಲವು ತಿನಿಸುಗಳನ್ನು ರಿಯಾಯಿತಿ ದರದಲ್ಲಿ ಅಥವಾ ಉಚಿತವಾಗಿ ಮತದಾನದ ದಿನದಂದು ನೀಡುತ್ತವೆ. ಸಿಹಿತಿಂಡಿಗಳು ಮತ್ತು ಕೇಕ್ಗಳಂತಹ ಕೆಲವು ಆಹಾರ ಪದಾರ್ಥಗಳನ್ನು ಉಚಿತವಾಗಿ ನೀಡುತ್ತಿವೆ.
SawaariZimmedariKi ಅಭಿಯಾನದಡಿ ಶುಕ್ರವಾರ ಹಿರಿಯ ನಾಗರಿಕರು ಮತ್ತು ವಿಕಲಚೇತನ ಮತದಾರರಿಗೆ ಉಚಿತ ಆಟೋರಿಕ್ಷಾ ಮತ್ತು ಕ್ಯಾಬ್ ಸೇವೆ ದೊರೆಯಲಿದೆ.
ಈ ವಿಶೇಷ ಸೇವೆಯನ್ನು ಪಡೆಯಲು ಮತದಾರರು ‘VOTENOW’ ಕೋಡ್ ಅನ್ನು ಬಳಸಬಹುದು ಎಂದು Rapido ತಿಳಿಸಿದೆ.
ಬಿಡದಿ ಬಳಿಯ ಜನಪ್ರಿಯ ಅಮ್ಯೂಸ್ಮೆಂಟ್ ಪಾರ್ಕ್ ವಂಡರ್ಲಾ, ಮತದಾನದ ಗುರುತು ಪ್ರದರ್ಶಿಸುವವರಿಗೆ ಏಪ್ರಿಲ್ 26, 27 ಮತ್ತು 28 ರಂದು ಟಿಕೆಟ್ ಮೇಲೆ ಶೇಕಡಾ 15 ರಷ್ಟು ರಿಯಾಯಿತಿಯನ್ನು ಘೋಷಿಸಿದೆ.
LATEST NEWS
ಇಂದಿನಿಂದ 5 ದಿನ ರಾಜ್ಯದಲ್ಲಿ ಬಿಸಿಗಾಳಿ; ಕರ್ನಾಟಕಕ್ಕೆ ಆರೆಂಜ್ ಅಲರ್ಟ್
ಬೆಂಗಳೂರು: ಅಬ್ಬಾ.. ಸಾಕಪ್ಪಾ ಸಾಕು ಅನ್ನೋ ಬೇಸಿಗೆಯ ಬಿಸಿ ಮತ್ತೆ ಏರಿಕೆಯಾಗುತ್ತಿದೆ. ಗರಿಷ್ಠ ತಾಪಮಾನ ಸಹಿಸಿಕೊಳ್ಳಲಾಗದೇ ಪರದಾಡುತ್ತಿರುವ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಬಂದಿದೆ. ಇಂದಿನಿಂದ ಅಂದ್ರೆ ಏಪ್ರಿಲ್ 25ರಿಂದ ಮುಂದಿನ 5 ದಿನಗಳವರೆಗೆ ಬಿಸಿಗಾಳಿ ಮತ್ತು ತಾಪಮಾನ ಹೆಚ್ಚಾಗುವ ಸಾಧ್ಯತೆಯಿದೆ.
ನಾಳೆ ದೇಶದ 13 ರಾಜ್ಯಗಳ 89 ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ. ನಾಳೆ ಮತದಾನ ನಡೆಯುವ ಕ್ಷೇತ್ರಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಬಿಸಿಗಾಳಿಯ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಪಶ್ಚಿಮ ಬಂಗಾಳ ರಾಜ್ಯಕ್ಕೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕ ರಾಜ್ಯಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.
ನಾಳೆ ಕೇರಳ, ಕರ್ನಾಟಕದಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಿನ ಉಷ್ಣಾಂಶ ಇರುವ ಮುನ್ಸೂಚನೆ ನೀಡಲಾಗಿದೆ. ಕೇರಳ ರಾಜ್ಯದಲ್ಲಿ 36-40 ಡಿಗ್ರಿ ಉಷ್ಣಾಂಶ ದಾಖಲಾಗುವ ಮುನ್ಸೂಚನೆ ಇದೆ. ಚುನಾವಣಾ ಆಯೋಗವು ಬಿಸಿ ಗಾಳಿ ಸಮಸ್ಯೆ ಎದುರಿಸಲು ಟಾಸ್ಕ್ ಪೋರ್ಸ್ ರಚಿಸಿದೆ. ಪೋಲಿಂಗ್ ಬೂತ್ಗಳಲ್ಲಿ ಕುಡಿಯುವ ನೀರು, ಫ್ಯಾನ್ಗಳ ವ್ಯವಸ್ಥೆಯನ್ನು ಚುನಾವಣಾ ಆಯೋಗ ಮಾಡಿದೆ.
ಏಪ್ರಿಲ್ 25ರಿಂದ ಏಪ್ರಿಲ್ 29ರವರೆಗೆ ಬಿಸಿಗಾಳಿ, ತೀವ್ರ ಬಿಸಿಗಾಳಿ ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಾಗಿರುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದಲ್ಲಿ ಬಿಸಿ ಮತ್ತು ಶುಷ್ಕ ವಾತಾವರಣವು ಹೆಚ್ಚಾಗಿರುವ ಸಾಧ್ಯತೆಯಿದೆ ಎಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
- DAKSHINA KANNADA7 days ago
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!
- FILM3 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- LATEST NEWS6 days ago
ಆಲದ ಮರದ ಪೊಟರೆಯಲ್ಲಿ ಪತ್ತೆಯಾಯ್ತು 64 ಲಕ್ಷ ರೂ.!
- FILM3 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು