DAKSHINA KANNADA
ಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಧಾರಕಾರ ಮಳೆ ಸಾಧ್ಯತೆ..!
ಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ನಾಳೆ ಎ.7ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು : ಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ನಾಳೆ ಎ.7ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಿನ್ನೆ ಸುಳ್ಯ ಹಾಗೂ ಕಡಬ ತಾಲೂಕಿನ ವಿವಿಧ ಕಡೆಗಳಲ್ಲಿ ಸಂಜೆ ವೇಳೆ ಧಾರಕಾರ ಮಳೆಯಾಗಿದೆ.
ಕುಕ್ಕೆ ಸುಬ್ರಹ್ಮಣ್ಯ, ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಐನೆಕಿದು, ಕಲ್ಮಕಾರು, ಯೇನೆಕಲ್ಲು, ಸಂಪಾಜೆ ಸೇರಿದಂತೆ ಸುಳ್ಯ ಹಾಗೂ ಕಡಬ ತಾಲೂಕಿನ ವಿವಿಧ ಕಡೆಗಳಲ್ಲಿ ಸಾಧಾರಣದಿಂದ ಧಾರಕಾರ ಮಳೆಯಾಯಿತು. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಸಂಜೆ ವೇಳೆ ಹಲವೆಡೆ ಗುಡುಗು ಆರಂಭಗೊಂಡು ಬಳಿಕ ಮಳೆಯಾಗಿದೆ.
ಶನಿವಾರ (ಏಪ್ರಿಲ್ 8) ಮಳೆ ಸುರಿಸುವ ಮಾರುತಗಳು ಹೆಚ್ಚು ಚುರುಕಾಗಿರಲಿವೆ.
ಹೀಗಾಗಿ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ, ಉತ್ತರ ಒಳನಾಡಿನ ಜಿಲ್ಲೆಗಳಾದ ವಿಜಯಪುರ, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಕೋಲಾರ, ಮೈಸೂರು, ರಾಮನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಅಧಿಕ ಮಳೆ ಆಗಲಿದೆ.
ನಂತರದ ಎರಡು ದಿನ ಏಪ್ರಿಲ್ 10ರವರೆಗೆ ಮಳೆ ತುಸು ಕ್ಷೀಣಿಸಲಿದೆ.
ಕರಾವಳಿ ಸೇರಿದಂತೆ ಮೂರು ಭಾಗದ ಒಂದೆರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ತುಂತುರು ಇಲ್ಲವೇ ಹಗುರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
DAKSHINA KANNADA
ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು..!
ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳದ ನಾವೂರು ಎಂಬಲ್ಲಿ ಭಾನುವಾರ(ಎ.5) ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ (14 )ಮೃತಪಟ್ಟ ಬಾಲಕಿಯರು.
ಮುಂದೆ ಓದಿ..; ಬರ್ಬರ ಹತ್ಯೆಯಾದ ಬ್ಯೂಟಿ ಕ್ವೀನ್.!! ಮುಳುವಾಯಿತಾ ಇನ್ಸ್ಟಾಗ್ರಾಮ್ ಪೋಸ್ಟ್..! ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ
ಮೂಲತಃ ನಾವೂರ ನಿವಾಸಿಯಾದ ಇಲಿಯಾಸ್ ಅವರು ಇತ್ತೀಚಿಗೆ ಉಳ್ಳಾಲದಲ್ಲಿ ಮನೆ ಕಟ್ಟಿಸಿದ್ದರು. ನಿನ್ನೆ ನಾವೂರು ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಸಂಜೆ ವೇಳೆ ಮನೆಯವರ ಜತೆಗೆ ನಾವೂರಿನ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿದ್ದರು. ಈ ವೇಳೆ ಮನೆ ಮಂದಿ ಇರುವಾಗಲೇ ಮಕ್ಕಳು ನೀರಿನಲ್ಲಿ ಆಟ ಆಡುತ್ತಾ ಇದ್ದರು. ಈ ಸಂದರ್ಭದಲ್ಲಿ ಇಬ್ಬರು ಮಕ್ಕಳು ಏಕಾ ಏಕಿ ನೀರಿನಲ್ಲಿ ಮುಳುಗಿದ್ದಾರೆ. ನೀರಿನಲ್ಲಿ ಮುಳುಗುವುದನ್ನು ಕಣ್ಣಾರೆ ಕಂಡರೂ ಈಜು ಬಾರದ ಕಾರಣ ಮಕ್ಕಳನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
DAKSHINA KANNADA
‘ಅಡ್ಡಣ ಪೆಟ್ಟು’ ದೈವಾರಾಧನೆಯ ವಿಶೇಷ ಆಚರಣೆ…! ಇದು ಸೌಹಾರ್ದತೆ ಬಯಸೋ ದೈವ..!
ಮಂಗಳೂರು : ತುಳುನಾಡಿನ ದೈವಾರಾಧನೆಯಲ್ಲಿ ಒಂದಕ್ಕಿಂತ ಒಂದು ವಿಶೇಷವಾದ ಆಚರಣೆ ಹಾಗೂ ನಂಬಿಕೆಗಳು ಇದೆ. ಅದು ಪ್ರದೇಶದಿಂದ ಪ್ರದೇಶಕ್ಕೆ ಒಂದಷ್ಟು ಬದಲಾವಣೆಯೊಂದಿಗೆ ನಡೆಯುತ್ತದೆ ಕೂಡಾ. ಕೇರಳದ ಗಡಿಗೆ ಹೊಂದಿಕೊಂಡಿರುವ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿ ನಡೆಯೋ ದೈವಾರಾಧನೆ ಕೂಡಾ ಅದೇ ರೀತಿಯಾದ ವಿಶೇಷ ಆಚರಣೆಯೊಂದಕ್ಕೆ ಹೆಸರಾಗಿದೆ. ಇಲ್ಲಿನ ಶ್ರೀ ಮಹಾವಿಷ್ಣುಮೂರ್ತಿ ದೇವರ ಜಾತ್ರೆಯ ಬಳಿಕ ನಡೆಯುವ ದೈವದ ನೇಮದಲ್ಲಿ ‘ಅಡ್ಡಣ ಪೆಟ್ಟು’ ಅನ್ನೋ ಸಂಪ್ರದಾಯವಿದೆ. ಗ್ರಾಮದ ಜಾತ್ರೆಯ ಪ್ರಮುಖ ಆಕರ್ಷಣೆ ಕೂಡಾ ಇದೇ ಆಗಿದ್ದು, ಇದನ್ನು ನೋಡಲೆಂದೆ ಸಾವಿರಾರು ಜನ ಬರ್ತಾರೆ.
ನಾಲ್ಕು ಮನೆತನಗಳ ನಡುವೆ ಹೊಡೆದಾಟ…!
‘ಅಡ್ಡಣ ಪೆಟ್ಟು’ ಇದು ಮಂಡೆಕೋಲು ಗ್ರಾಮದ ಜಾತ್ರೆ ಮುಗಿದ ಬಳಿಕ ನಡೆಯುವ ಉಳ್ಳಾಕುಲು ಹಾಗೂ ಪರಿವಾರ ದೈವದ ನೇಮದಲ್ಲಿ ಕಾಣುವ ದೃಶ್ಯ. ನಾಲ್ಕು ಗೌಡ ಮನೆತನದವರು ಬೆತ್ತದ ಗುರಾಣಿ ಹಿಡಿದು ಕೋಲಿನಿಂದ ಹೊಡೆದಾಡುವುದೇ ಈ ‘ಅಡ್ಡಣ ಪೆಟ್ಟು’ ಅನ್ನೋ ವಿಶಿಷ್ಠ ಆಚರಣೆ. ದೇವಸ್ಥಾನಕ್ಕೆ ಸಂಬಂಧಪಟ್ಟ ಕೇನಾಜೆ- ಮಾವಜಿ, ಮುರೂರು- ಬೊಳುಗಲ್ಲು ಎಂಬ ನಾಲ್ಕು ಗೌಡ ಮನೆತನಗಳು ಈ ರೀತಿ ಹೊಡೆದಾಟ ನಡೆಸ್ತಾರೆ. ಈ ವೇಳೆ ಉಳ್ಳಾಕುಲು ದೈವ ಮದ್ಯಪ್ರವೇಶ ಮಾಡಿ ಜಗಳ ಬಿಡಿಸುತ್ತದೆ. ಇದು ನೋಡಲು ಕೂಡಾ ಸಾಕಷ್ಟು ಕುತೂಹಲವಾಗಿದ್ದು, ಇದರ ಜೊತೆ ದೈವದ ಸಂದೇಶ ಕೂಡಾ ಇದೆ.
‘ಅಡ್ಡಣ ಪೆಟ್ಟು’ವಿನ ಹಿಂದೆ ಇದೆ ದೈವದ ಸಂದೇಶ..!
ಮಂಡೆಕೋಲು ನೇಮದಲ್ಲಿ ಅಡ್ಡಣ ಪೆಟ್ಟು ಸಂಪ್ರದಾಯಕ್ಕೆ ಬೇರೆ ಬೇರೆ ಐಹಿತ್ಯವಿದೆ. ಅಡ್ಡಣಪೆಟ್ಟು ನಡೆದರೆ ಊರಲ್ಲಿ ಮುಂದೆ ಗಲಾಟೆ, ಹೊಡೆದಾಟಗಳು ಸಂಭವಿಸುವುದಿಲ್ಲ ಎಂಬ ನಂಬಿಕೆಯೂ ಊರಿನ ಭಕ್ತ ಜನರಲ್ಲಿದೆ. ನಾಲ್ಕೂರಿನ ಜಗಳವನ್ನು ದೈವ ಬಿಡಿಸುವುದು, ಗಲಾಟೆ ಮಾಡದೆ ಸೌಹಾರ್ದದಿಂದ ಬಾಳಿ ಎನ್ನುವ ಸಂದೇಶವೂ ಈ ಆಚರಣೆಯಲ್ಲಿದೆ. ಪುರಾತನ ಕಾಲದಲ್ಲಿ ಯಾವುದೋ ಗಲಾಟೆ ನಡೆದ ಸಂದರ್ಭ ಉಳ್ಳಾಕುಲು ದೈವ ಬಂದು ಗಲಾಟೆ ಬಿಡಿಸಿ ಪರಸ್ಪರ ಸಂದಾನ ನಡೆಸಿತ್ತು ಎಂಬ ಪ್ರತೀತಿಯೂ ಇದೆ. ಇದೇ ಕಾರಣದಿಂದ ಪ್ರತಿ ವರ್ಷ ಉಳ್ಳಾಕುಲು ನೇಮದ ಸಂದರ್ಭ “ಅಡ್ಡಣ ಪೆಟ್ಟು” ಒಂದು ಸಂಪ್ರದಾಯವಾಗಿ ನಡೆದು ಬರುತ್ತಿದೆ.
‘ಅಡ್ಡಣ ಪೆಟ್ಟು’ವಿನ ಆಚರಣೆ ಹೇಗೆ ?
ನೇಮೋತ್ಸವ ದಿನದಂದು ಉಳ್ಳಾಕುಲು ದೈವದ ಭಂಡಾರ ತೆಗೆದ ಬಳಿಕ ದೈವ ಸಹಿತ ನಾಲ್ಕೂರಿನ ಪ್ರತಿನಿಧಿಗಳು, ದೈವರ ಪರಿಚಾರಕರು ದೇವಸ್ಥಾನದ ಸಮೀಪದ ಗದ್ದೆಯಲ್ಲಿರುವ ಕಟ್ಟೆಗೆ ತೆರಳುತ್ತಾರೆ. ಕೇನಾಜೆ- ಮಾವಜಿ, ಮುರೂರು-ಬೊಳುಗಲ್ಲು ಮನೆತನಕ್ಕೆ ಸೇರಿದ ನಾಲ್ವರು ಪ್ರತಿನಿಧಿಗಳು ಸಮವಸ್ತ್ರ ಧರಿಸಿ ದಂಡ ಮತ್ತು ಗುರಾಣಿ (ಅಡ್ಡಣ) ಹಿಡಿದು ದೈವದ ಜತೆಯಲ್ಲಿ ತೆರಳುತ್ತಾರೆ. ಕಟ್ಟೆಯ ಬಳಿ ತೆರಳಿದ ಬಳಿಕ ಕೆಲವೊಂದು ಸಂಪ್ರದಾಯ ಆಚರಣೆಗಳು ನಡೆದು ಅಡ್ಡಣ ಹಿಡಿದ ಯುವಕರು ಅಡ್ಡಣವನ್ನು ನೆಲದಲ್ಲಿ ಎದುರು ಬದುರಾಗಿ ಇಡುತ್ತಾರೆ. ಲಾಠಿ ಮಾದರಿಯ ಹೊಡೆಯುವ ದಂಡವನ್ನು ಕೈಯಲ್ಲಿ ಹಿಡಿದಿರುತ್ತಾರೆ. ಇತ್ತ ಅಡ್ಡಣ ಹೊಡೆತದಲ್ಲಿ ಭಾಗವಹಿಸುವ ನಾಲ್ವರು ಯುವಕರಿಗೆ ಬೆನ್ನು ಹಾಕಿ ನಿಂತಿರುವ ಉಳ್ಳಾಕುಲು ದೈವಕ್ಕೆ ಅಣಿಯನ್ನು ಕೂರಿಸಲಾಗುತ್ತದೆ. ಅಣಿ ಇಟ್ಟ ಬಳಿಕ ತುಳು ನುಡಿಗಟ್ಟೊಂದನ್ನು ಹೇಳಲಾಗುತ್ತದೆ. ಈ ನುಡಿಗಟ್ಟು ಮುಗಿಯುತ್ತಿದ್ದಂತೆ ದೈವದ ಪರಿಚಾರಕರೊಬ್ಬರು ಅಡ್ಡಣ ಹೊಡೆತಕ್ಕೆ ಅಣಿಯಾಗಿ ನಿಂತಿರುವ ಯುವಕರತ್ತ ಕಲಶದ ನೀರಿನಿಂದ ಪ್ರೋಕ್ಷಣೆ ಮಾಡುತ್ತಾರೆ. ಕಲಶ ಪ್ರೋಕ್ಷಣೆ ಆಗುತ್ತಿದ್ದಂತೆ ಎದುರು ಬದುರಾಗಿ ನಿಂತಿರುವ ಯುವಕರು ನೆಲದಲ್ಲಿಟ್ಟ ಅಡ್ಡಣವನ್ನು ಕೈಗೆ ಎತ್ತಿಕೊಂಡು ಅದನ್ನು ಗುರಾಣಿಯಂತೆ ಹಿಡಿದು ಎದುರುಬದುರಾಗಿ ಹೊಡೆದಾಟ ಆರಂಭಿಸುತ್ತಾರೆ. ಪ್ರತಿಯೊಬ್ಬರೂ ಎದುರು ಪ್ರತಿನಿಧಿಯ ಕೈಯಲ್ಲಿ ಹಿಡಿದಿರುವ ಅಡ್ಡಣಕ್ಕೆ ಹೊಡೆಯಬೇಕೆಂಬ ನಿಯಮವೂ ಇದೆ. ಹೊಡೆದಾಟ ಜೋರಾಗುತ್ತಿದ್ದಂತೆ ಬೆನ್ನು ಹಾಕಿ ನಿಂತಿರುವ ಉಳ್ಳಾಕುಲು ದೈವ ಬಂದು ಹೊಡೆದಾಟವನ್ನು ಬಿಡಿಸುತ್ತದೆ.
DAKSHINA KANNADA
ನಾಲ್ಕು ತಿಂಗಳ ಮಗುವಿಗೆ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿದ ಅಜ್ಜಿ..! ಅಜ್ಜಿ ಮಾಡಿದ ಎಡವಟ್ಟಿಗೆ ಕೋಮಾಗೆ ಜಾರಿದ ಮಗು !!
ಮಂಗಳೂರು/ಇಟಲಿ: ಇಟಲಿಯಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಅಜ್ಜಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಕುಡಿಯುವ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿರುವ ಘಟನೆ ನಡೆದಿದೆ.
ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಲ್ ಬೆರೆಸಿದ್ದಾರೆ. ಮಗು ಅರ್ಧ ಹಾಲು ಕುಡಿದ ಬಳಿಕ ಮಗು ಅಳಲು ಆರಂಭಿಸಿದೆ. ಅಜ್ಜಿಗೆ ಅನುಮಾನ ಬಂದು ತಾನು ಕುಡಿಸಿದ ಹಾಲಿನ ವಾಸನೆಯನ್ನು ತೆಗೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಆಲ್ಕೋಹಾಲ್ ಮಿಶ್ರಣ ಹಾಕಿರುವುದು ಬೆಳಕಿಗೆ ಬಂದಿದೆ. ಇದರಿಂದ ಆಘಾತಕ್ಕೊಳಗಾದ ವೃದ್ಧೆ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಮುಂದೆ ಓದಿ..; ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!
ಕೋಮಾಗೆ ಜಾರಿದ ಮಗು:
ಅದಾಗಲೇ ಮಗುವಿನ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕೋಮ ಸ್ಥಿತಿಗೆ ಜಾರಿತ್ತು. ಬಳಿಕ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಮಗುವಿನ ಆರೋಗ್ಯವನ್ನು ಸಂಪೂರ್ಣ ಪರಿಶೀಲಿಸಿದ ಬಳಿಕ ಅಜ್ಜಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
- DAKSHINA KANNADA3 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- FILM5 days ago
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
- dehali4 days ago
ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
- BELTHANGADY4 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು