Connect with us

BANTWAL

ಕಲ್ಲಡ್ಕ: ಹೆದ್ದಾರಿ ಕಾಮಗಾರಿ ವೇಳೆ ಡಾ. ಪ್ರಭಾಕರ್ ಭಟ್ ಮನೆಯ ಕಾಂಪೌಂಡ್ ಕುಸಿತ: ವಾಹನ ಜಖಂ

Published

on

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವಾಂತರದಿಂದಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ನಾಯಕ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರ ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಘಟನೆ ಗುರುವಾರ ರಾತ್ರಿ ವೇಳೆ ನಡೆದಿದೆ. ಗೋಡೆ ಬಿದ್ದ ವೇಳೆ ಸ್ಥಳದಲ್ಲಿದ್ದ ದ್ವಿಚಕ್ರ ವಾಹನವೊಂದು ಜಖಂ ಆಗಿದೆ.


ಎರಡು ಬಾರಿ ಕಂಪೌಂಡ್ ನಿರ್ಮಾಣ
ರಾಷ್ಟ್ರೀಯ ಹೆದ್ದಾರಿಯ ಚತುಷ್ಪತ ರಸ್ತೆ ಅಗಲೀಕರಣ ಕಾಮಗಾರಿಗಾಗಿ ಕಲ್ಲಡ್ಕ ಪೇಟೆಯಲ್ಲಿ ಎಷ್ಡು ಮೀಟರ್ ರಸ್ತೆ ಅಗಲೀಕರಣಗೊಳ್ಳುತ್ತದೆ ಎಂಬುದರ ಸ್ಪಷ್ಟವಾದ ಲೆಕ್ಕ ನೀಡದೆ ಜನ ಗೊಂದಲದಲ್ಲಿದ್ದಾರೆ.

ಕಲ್ಲಡ್ಕ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣದ ಪ್ಲಾನ್ ತಯಾರಿಸಿದ ಬಳಿಕ ರಸ್ತೆಯ ಇಕ್ಕೆಲಗಳು ಬಾಕಿ ಉಳಿದ ಕಡೆಗಳಿಗಿಂತ ಕಡಿಮೆ ಜಾಗ ಎಕ್ವೇರ್ ಮಾಡುತ್ತಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ಲೈ ಓವರ್ ನ ಎರಡು ಬದಿಗಳಲ್ಲಿ ಸರ್ವೀಸ್ ರಸ್ತೆ ನಿರ್ಮಾಣ ಗೊಳ್ಳುತ್ತದೆ ಈಗಾಗಿ ರಸ್ತೆ ಅಗಲೀಕರಣ ದ ಸರಿಯಾದ ಸರ್ವೆ ಕಾರ್ಯ ಮುಗಿದಿಲ್ಲ ಎಂಬುದು ಸ್ಥಳೀಯರ ಮಾತು. ಹಾಗಾಗಿ ಡಾ. ಪ್ರಭಾಕರ್ ಭಟ್ ಅವರ ಮನೆಯ ಕಾಂಪೌಂಡ್ ಎರಡು ಬಾರಿ ನಿರ್ಮಾಣ ಮಾಡಲಾಗಿತ್ತು.

ಒಂದು ಬಾರಿ ರಸ್ತೆ ಅಗಲೀಕರಣ ಕ್ಕಾಗಿ ಕೆಂಪು ಕಲ್ಲು ಬಳಸಿ ಕಟ್ಟಲಾಗಿತ್ತು. ಅ ಬಳಿಕ ಮತ್ತೆ ಕಾಂಕ್ರೀಟ್ ಸಿಮೆಂಟ್ ಮೂಲಕ ತಡೆಗೋಡೆ ರೀತಿಯಲ್ಲಿ ಕಾಂಪೌಂಡ್ ಗೋಡೆ ನಿರ್ಮಾಸಿಲಾಗಿತ್ತಾದರೂ ಯಾವುದೇ ಪ್ರಯೋಜನ ಕ್ಕೆ ಬಾರದೆ ನೆಲಸಮವಾಗಿದೆ.


ಸಡಿಲ ಮಣ್ಣು , ಮುರಿದು ಬಿದ್ದ ಕಾಂಪೌಂಡ್
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ರಸ್ತೆ ಅಗಲೀಕರಣ ದ ಜೊತೆ ಸರಾಗವಾಗಿ ಮಳೆ ನೀರು ಹರಿದು ಹೋಗುವ ಉದ್ದೇಶದಿಂದ ಅಲ್ಲಲ್ಲಿ ಸಿಮೆಂಟ್ ಪೈಪ್ ಲೈನ್ ಅಳವಡಿಕೆ ಕಾರ್ಯ ನಡೆಯುತ್ತಿದೆ.

ಕಲ್ಲಡ್ಕ ಮುಖ್ಯಪೇಟೆಯಲ್ಲಿರುವ ಡಾ. ಪ್ರಭಾಕರ್ ಭಟ್ ಅವರ ಮನೆಯ ಮುಂಭಾಗದಲ್ಲಿ ಕೂಡ ಸಿಮೆಂಟ್ ಪೈಪ್ ಅಳವಡಿಕೆಗಾಗಿ ಕಾಂಪೌಂಡ್ ನ ಸುತ್ತ ಅಗೆಯಲಾಗಿತ್ತು.


ಕಾಂಪೌಂಡ್‌ನ ಬದಿಯಲ್ಲಿ ಮತ್ತು ಅಡಿಪಾಯದ ವರಗೆ ಅಗೆದ ಪರಿಣಾಮ ಜೊತೆಗೆ ಸಡಿಲ ಮಣ್ಣಿನ ಕಾರಣದಿಂದ ಕಾಂಪೌಂಡ್ ಗೋಡೆ ಜರಿದು ಬಿದ್ದಿದೆ.

ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್ ಕಂಪೆನಿ ಸ್ಥಳೀಯರಿಗೆ ತೊಂದರೆಯಾಗದಂತೆ ಕಾಮಗಾರಿ ನಡೆಸುವಂತೆ ಮತ್ತು ರಸ್ತೆ ಅಗಲೀಕರಣ ದ ಸರಿಯಾದ ಸರ್ವೇ ಕಾರ್ಯದ ಮಾಹಿತಿ ನೀಡುವಂತೆ ಅಗ್ರಹಿಸಿದ್ದಾರೆ.

BANTWAL

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ

Published

on

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.

ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.

ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.

ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್‌ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

BANTWAL

ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು

Published

on

ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್‌ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.


ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು

ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.

Continue Reading

LATEST NEWS

Trending