HomeLATEST NEWSಮಂಗಳೂರಿನಲ್ಲಿ ಶೀಘ್ರದಲ್ಲೇ NIA ಕೇಂದ್ರ ಸ್ಥಾಪನೆ

ಮಂಗಳೂರಿನಲ್ಲಿ ಶೀಘ್ರದಲ್ಲೇ NIA ಕೇಂದ್ರ ಸ್ಥಾಪನೆ

ಮಂಗಳೂರು: ಪ್ರವೀಣ್ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗೆ ಒಪ್ಪಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಇದೇ ವೇಳೆ ರಾಜ್ಯಕ್ಕೆ ಎನ್‌ಐಎ ಕೇಂದ್ರ ಮಂಜೂರು ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿದೆ.


ಕೇಂದ್ರ ಸರ್ಕಾರ ಈ ಬೇಡಿಕೆಗೆ ಸಮ್ಮತಿಸಿದಲ್ಲಿ ರಾಜ್ಯದ ಮೊದಲ ಎನ್‌ಐಎ ಕೇಂದ್ರ ಕರಾವಳಿ ನಗರ ಮಂಗಳೂರಿನಲ್ಲಿಯೇ ಸ್ಥಾಪನೆಯಾಗಲಿದೆ. ಕರ್ನಾಟಕಕ್ಕೆ ರಾಷ್ಟ್ರೀಯ ತನಿಖಾ ದಳದ ಕೇಂದ್ರ ಅಗತ್ಯವಿದೆ.

ಅದರಲ್ಲೂ ಮಂಗಳೂರಿಗೆ ಇದರ ಅನಿವಾರ್ಯತೆ ಹೆಚ್ಚೇ ಇದೆ ಎಂದು ಜುಲೈ 28ರಂದು ಪ್ರವೀಣ್ ಮನೆಗೆ ಭೇಟಿ ನೀಡಿದ ಸಂದರ್ಭ ರಾಜ್ಯದ ಸಿಎಂ ಬೊಮ್ಮಾಯಿ ಹೇಳಿದ್ದರು.

ಜುಲೈ 29ರಂದು ಪ್ರವೀಣ್ ಹತ್ಯೆಯನ್ನು ಎನ್‌ಐಗೆ ಹಸ್ತಾಂತರಿಸಲು ನಿರ್ಧರಿಸುವುದನ್ನು ಅವರು ಬೆಂಗಳೂರಿನಲ್ಲಿ ಪ್ರಕಟಿಸಿದ್ದರು. ನಿನ್ನೆ ಈ ಬಗ್ಗೆ ಮಾಹಿತಿ ನೀಡಿದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಡಿ.ವಿ ಸದಾನಂದ ಗೌಡ ರಾಜ್ಯಕ್ಕೆ ಎನ್‌ಐಎ ಕೇಂದ್ರವನ್ನು ಕೇಂದ್ರ ಸರ್ಕಾರ ಮಂಜೂರು ಮಾಡುವ ಭರವಸೆ ಇದೆ. ಮಂಜೂರಾದಲ್ಲಿ ಅದು ಮಂಗಳೂರಿನಲ್ಲಿಯೇ ಸ್ಥಾಪನೆಯಾಗಲಿದೆ.

ಈಗಾಗಲೇ ಮಂಗಳೂರಿನಲ್ಲಿ ಜಮೀನು ವೀಕ್ಷಣೆ ಕೂಡಾ ಮಾಡಲಾಗಿದೆ ಎಂದು ಹೇಳಿದರು.
ಸೋಮವಾರ ಮತ್ತು ಮಂಗಳವಾರ ಕರ್ನಾಟಕ ಬಿಜೆಪಿ ಸಂಸದರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಈ ಕುರಿತು ರಾಜ್ಯದ ಬೇಡಿಕೆಯನ್ನು ಪುನರುಚ್ಛರಿಸಲಿದ್ದೇವೆ. ನಮ್ಮ ಬೇಡಿಕೆ ಈಡೇರುವ ನಿರೀಕ್ಷೆ ಇದೆ ಎಂದರು.

ರಾಜ್ಯದ ಪಶ್ಚಿಮ ಕರಾವಳಿ ಸುಮಾರು 300 ಕಿ.ಮೀ ಉದ್ದವಿದ್ದು, ದೇಶದ ಪಾಲಿಗೆ ಅತ್ಯಂತ ಪ್ರಮುಖ ಪ್ರದೇಶ ಇದಾಗಿದೆ. ಕಾರವಾರ ಬಂದರು, ಮಂಗಳೂರು ಬಂದರು, ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಧಾನ ಬಿಂದುಗಳಾಗಿವೆ.

ಮುಂಬಯಿ ಮತ್ತು ಮಂಗಳೂರಿಗೆ ಇರುವ ಸಂಪರ್ಕ, ಕೇರಳದೊಂದಿಗೆ ಬೆಸೆದುಕೊಂಡಿರುವ ಗಡಿ, ಕೊಲ್ಲಿ ರಾಷ್ಟ್ರಗಳೊಂದಿಗಿರುವ ನೇರ ಸಂಬಂಧ ಮತ್ತು ಈ ಎಲ್ಲ ಕಾರಣಗಳಿಂದಾಗಿಯೇ ಸಮಾಜ ಘಾತುಕ ಶಕ್ತಿಗಳು ಮಂಗಳೂರು ಸಹಿತ ಕರಾವಳಿಯನ್ನು ಯಥೇಚ್ಚವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಏಜೆನ್ಸಿಯನ್ನು ಮಂಗಳೂರು ಕೇಂದ್ರಿತವಾಗಿ ಸ್ಥಾಪಿಸಬೇಕೆಂಬ ಬೇಡಿಕೆ ಕಳೆದ ಹತ್ತು ವರ್ಷಗಳಿಂದ ಇದೆ.

Latest articles

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...

ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!

ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...