DAKSHINA KANNADA
3,163 ಕೋ. ವೆಚ್ಚದ ವಿವಿಧ ಹೆದ್ದಾರಿ ಕಾಮಗಾರಿಗಳಿಗೆ ಚಾಲನೆ : ಸಂಸದರ ಸುರತ್ಕಲ್ ಟೋಲ್ ಮುಕ್ತಿ ಮನವಿಗೆ ಸ್ಪಂದಿಸಿದ ನಿತಿನ್ ಗಡ್ಕರಿ
ಮಂಗಳೂರು : ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂದು ಮಂಗಳೂರಿಗೆ ಆಗಮಿಸಿ ಹೆದ್ದಾರಿಗೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಚಾಲನೆ ಮತ್ತು ಶಂಕು ಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ನಗರದ ಕುಲಶೇಖರ ಕೋರ್ಡೆಲ್ ಚರ್ಚ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಒಳಗೊಂಡಂತೆ 7 ಜಿಲ್ಲೆಗಳ ವ್ಯಾಪ್ತಿಗೆ ಬರುವ 3,163 ಕೋಟಿ ರೂಪಾಯಿಗಳ ವೆಚ್ಚದ 164 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿಯ 15 ಯೋಜನೆಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.
ಬಳಿಕ ಸಮಾರಂಭದಲ್ಲಿ ಮಾತನಾಡಿದ ಅವರು ಕಾರ್ಯಕ್ರಮ ತಡವಾಗಿದ್ದಕ್ಕೆ ಕ್ಷಮೆ ಕೇಳುತ್ತೇನೆ. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಜಿಲ್ಲೆ ಅಭಿವೃದ್ದಿಯ ಬಗ್ಗೆ ಆನೇಕ ಪ್ರಸ್ತಾಪಗಳನ್ನು ಮಾಡಿದ್ದಾರೆ, ಅದಕ್ಕೆ ಕೇಂದ್ರ ಸರ್ಕಾರ ಬದ್ದವಾಗಿದೆ.
ಮಂಗಳೂರಿಗೆ ರಿಂಗ್ ರೋಡ್ ಮಾಡಲು ಡಿಪಿಆರ್ ಗೆ ಈಗಾಗಾಗಲೇ ಸೂಚನೆ ನೀಡಿದ್ದೇನೆ, ಮುಂಬೈಯಿಂದ ಕನ್ಯಕುಮಾರಿಗೆ ಮಂಗಳೂರಾಗಿ ಎಕ್ಸ್ ಪ್ರೆಸ್ ಹೈವೇ ನಿರ್ಮಾಣವಾಗಲಿದೆ, ಈ ಮೂಲಕ ಸಮಗ್ರ ಕರ್ನಾಟಕವನ್ನು ಅಭಿವೃದ್ದಿ ಮಾಡಲು ಸಂಕಲ್ಪಮಾಡಿದ್ದೇವೆ.
ಶಿರಾಡಿ ಘಾಟ್ ಕಾಮಗಾರಿ ಮಾಡಲು ಮೊದಲ ಆದ್ಯತೆ ನೀಡಲಾಗಿದೆ. 4 ಲೈನ್ ರಸ್ತೆ ನಿರ್ಮಾಣ ಮಾಡಲು ಕಾರ್ಯಯೋಜನೆ ಜಾರಿಗೊಳಿಸಲಾಗಿದೆ.
ಇದರ ಜೊತೆಗೆ ಶೀಘ್ರದಲ್ಲೇ 14 ಸಾವಿರ ಕೋಟಿ ವೆಚ್ಚದಲ್ಲಿ ಜೊತೆಗೆ 26 ಕಿ. ಮೀ ಸುರಂಗ ರಸ್ತೆ ನಿರ್ಮಾಣ ಮಾಡಲು ಡಿಪಿಆರ್ ಮಾಡಿ ಸೂಚನೆ ನೀಡಲಾಗುವುದು ಎಂದ ಅವರು ಹಣಕಾಸಿನ ಯಾವುದೇ ಅಡಚಣೆ ಸರ್ಕಾರಕ್ಕೆ ಇಲ್ಲ.
ಮುಂದಿನ 5 ವರ್ಷಗಳ ರಸ್ತೆಗಳ ವಿಷಯದಲ್ಲಿ ಭಾರತವನ್ನು ವಿಶ್ವಕ್ಕೆ ಮಾದರಿ ಮಾಡಲಾಗುವುದು ಎಂದರು.
ಮಂಗಳೂರು ನಗರದ ನಂತೂರು ಫ್ಲೈ ಓವರ್ಗೆ ಸಭೆಯಲ್ಲೇ ತಾತ್ವಿಕ ಒಪ್ಪಿಗೆ ನೀಡಿದ ಸಚಿವರು ಸಂಸದ ನಳಿನ್ ಕುಮಾರ್ ಕಟೀಲ್ ಪ್ರಸ್ತಾಪಿಸಿದ ಸುರತ್ಕಲ್ ಟೋಲ್ ವಿಲೀನ ಮಾಡುವ ಬಗ್ಗೆ ಶೀಘ್ರದಲ್ಲೇ ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ಕರೆಸಿ ಅದಕ್ಕೆ ಶಾಶ್ವತ ಪರಿಹಾರ ನೀಡಲಾಗುವುದು ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಅಭಿವೃದ್ದಿಯ ಹೊಸ ದಿಕ್ಕಿನಲ್ಲಿ ಸಾಗುತ್ತಿದೆ.
ರಸ್ತೆಗಳು ಆರ್ಥಿಕ , ಸಾಮಾಜಿಕ ಮತ್ತು ಶೈಕ್ಷಣಿಕ ಪ್ರಗತಿಯನ್ನು ತರುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯೋಜನೆಗಳನ್ನು ಜಾರಿಗೆ ತರುತ್ತಿದೆ.
ನೀರು ಹರಿದು ಹೋಗುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚೆಕ್ ಡ್ಯಾಮ್ ಗಳ ನಿರ್ಮಾಣ ಮಾಡಿ ನೀರನ್ನು ಹಿಡಿದಿಟ್ಟು ಅಂತರ್ಜಲ ಏರಿಕೆ ಮಾಡುವ ಮೂಲಕ ರೈತರಿಗೆ ಅನುಕೂಲ ಮಾಡಿ ಕೊಡುವ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ.
ಮಂಗಳೂರು ನಗರ ಸೇರಿದಂತೆ ಪ್ರಮುಖ ನಗರಗಳ ಬೈ ಪಾಸ್ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದರು. ಕರಾವಳಿಯ ಜನರ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಬದ್ದವಾಗಿದೆ ಎಂದರು.
ಸಮಾರಂಭದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಆನೇಕ ಯೋಜನೆಗಳನ್ನು ಘೋಷಣೆ ಮಾಡಿ ಅದನ್ನು ಕಾರ್ಯ ರೂಪಕ್ಕೆ ತಂದ ಸಚಿವ ನಿತ್ ಗಡ್ಕರಿ ಅವರಿಗೆ ಅಭಿನಂದಿಸಿದ ಕಟೀಲ್ ನಂತೂರು ಫ್ಲೈ ಓವರ್, ವೇಗವಾಗಿ ಬೆಳೆಯುತ್ತಿರುವ ಮಂಗಳೂರಿಗೆ ರಿಂಗ್ ರೋಡ್, ಮತ್ತು ಭಾರಿ ಹೋರಾಟ ವಿವಾದಗಳನ್ನು ಸೃಷ್ಟಿಸಿದ ಸುರತ್ಕಲ್ ಟೋಲ್ ಗೇಟನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ವಿಲೀನ ಮಾಡಿ ಮಂಗಳೂರಿನ ಜನರಿಗೆ ಮುಕ್ತಿ ಕೊಡಿ ಎಂದು ಸಚಿವರಲ್ಲಿ ಮನವಿ ಮಾಡಿದರು.
ಸಮಾರಂಭದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ. ಪಾಟೀಲ್, ಸಚಿವರಾದ ಸುನಿಲ್ ಕುಮಾರ್, ಎಸ್. ಅಂಗಾರ ಶಾಸಕರಾದ ವೇದವ್ಯಾಸ ಕಾಮತ್, ಉಮನಾಥ್ ಕೋಟ್ಯಾನ್, ರಾಜೇಶ್ ನಾಯಕ್, ಹರೀಶ್ ಪೂಂಜಾ, ಡಾ. ಭರತ್ ಶೆಟ್ಟಿ, ಮಂಗಳೂರು ಮೇಯರ್ ಪ್ರೇಮಾಂದ ಶೆಟ್ಟಿ, ಉಪಮೇಯರ್ ಸುಮಂಗಲ. ಪಾಲಿಕೆ ಸದಸ್ಯರಾದ ಭಾಸ್ಕರ್ ಮೊಯಿಲಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಯಾವುದೆಲ್ಲ ಯೋಜನೆಗಳು…?
ರಾಷ್ಟ್ರೀಯ ಹೆದ್ದಾರಿ 66ರ ಎನ್ಎಂಪಿಟಿ ಸಂಪರ್ಕಿಸುವ ಕೆಪಿಟಿ ಜಂಕ್ಷನ್ನಲ್ಲಿ 34.61 ಕೋ.ರೂ. ವೆಚ್ಚದಲ್ಲಿ ವಿಯುಪಿ ನಿರ್ಮಾಣ, ರಾ.ಹೆ. 75ರ ಬೆಂಗಳೂರು -ಮಂಗಳೂರು ವಿಭಾಗದಲ್ಲಿ ಗುಂಡ್ಯ ಅಡ್ಡ ಹೊಳೆಯಿಂದ ಪೆರಿಯಶಾಂತಿ ವರೆಗೆ 442.87 ಕೋ.ರೂ. ವೆಚ್ಚದ 15.13 ಕಿ.ಮೀ. ದೂರದ ನಾಲ್ಕು ಪಥ ರಸ್ತೆ ನಿರ್ಮಾಣ, ಗುಂಡ್ಯ ಅಡ್ಡಹೊಳೆಯಿಂದ ಪೆರಿಯಶಾಂತಿ -ಬಂಟ್ವಾಳಕ್ಕೆ 48.48 ಕಿ.ಮೀ. ದೂರಕ್ಕೆ 1,480.85 ಕೋ. ರೂ. ವೆಚ್ಚದ ಚತುಷ್ಪಥ ನಿರ್ಮಾಣ ಮತ್ತು ಕಲ್ಲಡ್ಕ ಪೇಟೆಯಲ್ಲಿ 6 ಪಥದ ಮೇಲ್ಸೇತುವೆ ಕಾಮಗಾರಿ, ರಾ.ಹೆ. 169ರ ಬಿಕರ್ನಕಟ್ಟೆ-ಸಾಣೂರು ನಡುವೆ 45.01 ಕಿ.ಮೀ. ದೂರದ 1,137 ಕೋ.ರೂ. ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ, ರಾ.ಹೆ.73ರ ಮಂಗಳೂರು ತುಮಕೂರು ಭಾಗದ ಪುಂಜಾಲ ಕಟ್ಟೆಯಿಂದ ಚಾರ್ಮಾಡಿ ವರೆಗೆ ಪೇವ್ ಶೋಲ್ಡರ್ ನೊಂದಿಗೆ ದ್ವಿಪಥವಾಗಿ ರಸ್ತೆಯನ್ನು 696.26 ಕೋರೂ.ಗಳಲ್ಲಿ 35 ಕಿ.ಮೀ. ವರೆಗೆ ಅಭಿವೃದ್ಧಿ,. ರಾ.ಹೆ. 275ರ 16.35 ಕಿ.ಮೀ, 17.80 ಕಿ.ಮೀ., 20.60 ಕಿ.ಮೀ., 23 ಕಿ.ಮೀ., 24.90 ಕಿ.ಮೀ., 27.36 ಕಿ.ಮೀ, 46.27 ಕಿ.ಮೀ ಮತ್ತು 66.64 ಕಿ.ಮೀ.ಗಳಲ್ಲಿ ಒಟ್ಟು 48.96 ಕೋ.ರೂ.ಗಳಲ್ಲಿ 8 ಕಿರು ಸೇತುವೆಗಳ ನಿರ್ಮಾಣ. ರಾ.ಹೆ. 234ರ ಬಿ.ಸಿ.ರೋಡ್- ಪುಂಜಾಲಕಟ್ಟೆ ಭಾಗದ 20.15 ಕಿ.ಮೀ.ನಿಂದ 40 ಕಿ.ಮೀ. ವರೆಗೆ 19.85 ಕಿ.ಮೀ. ದೂರದ ದ್ವಿಪಥ ರಸ್ತೆ 159.70 ಕೋ.ರೂ. ವೆಚ್ಚದಲ್ಲಿ ನಿರ್ಮಾಣ
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
DAKSHINA KANNADA
ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು
ಮಂಗಳೂರು: ಗುಜರಾತ್ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.
ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್ ಗಾರ್ಡ್ ತಂಡ ಹೆಲಿಕಾಪ್ಟರ್ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್ ಗಾರ್ಡ್ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್ ಗಾರ್ಡ್ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!
ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.
ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.
ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.
ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.
ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.
- LATEST NEWS4 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS4 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ