ಮಂಗಳೂರು: ನಗರದ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ ಫೀಡರ್ನಲ್ಲಿ ಹಾಗೂ ಅತ್ತಾವರ ಮುನೀಶ್ವರ ಫೀಡರ್ನಲ್ಲಿ, ಯೆಯ್ಯಾಡಿ, ವಾಮಂಜೂರು, ಹರಿಪದವು, ಬೈಕಂಪಾಡಿ ಮುಂತಾದ ಕಡೆಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.
ಇದರ ಪ್ರಯುಕ್ತ ಇಂದು ಸಂಜೆ 5 ಗಂಟೆಯವರೆಗೆ ಬಂದರ್ ಪೊಲೀಸ್ ಸ್ಟೇಷನ್, ಬಾಂಬೆ ಲಕ್ಕಿ ಹೊಟೇಲ್, ಅಜೀಜುದ್ದೀನ್ ರಸ್ತೆ, ಭಟ್ಕಲ್ ಬಜಾರ್, ಅನ್ಸಾರಿ ರಸ್ತೆ, ಕಂಡತ್ ಪಳ್ಳಿ, ಛೇಂಬರ್ ರೋಡ್, ಪೊಲೀಸ್ ಲೇನ್, ಪಿ.ಡಬ್ಲ್ಯು.ಡಿ, ಕಮರ್ಷಿಯಲ್ ಟ್ಯಾಕ್ಸ್ ಕಚೇರಿ, ಕೇರಳ ಸಮಾಜ, ಎಮ್.ವಿ. ಶೆಟ್ಟಿ, ಓಲ್ಡ್ಕೆಂಟ್ ರಸ್ತೆ, ಧೂಮಪ್ಪ ಕಂಪೌಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
ಮೇರಿಹಿಲ್, ಯೆಯ್ಯಾಡಿ, ಹರಿಪದವು, ಕುಂಟಲ್ಪಾಡಿ, ಕೆ.ಪಿ.ಟಿ, ಉದಯನಗರ, ಲ್ಯಾಂಡ್ ಲಿಂಕ್ಸ್, ಪೆರ್ಲಗುರಿ, ಪದವಿನಂಗಡಿ, ಪಚ್ಚನಾಡಿ, ಕಾರ್ಮಿಕನಗರ, ಮಂಗಳಜ್ಯೋತಿ, ವಾಮಂಜೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೂಡ ವಿದ್ಯುತ್ ವ್ಯತ್ಯಯವಾಗಲಿದೆ.
ನಗರದ ಬೈಕಂಪಾಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 33 ಕೆವಿ ಸುರತ್ಕಲ್ ಇಂಡಸ್ಟ್ರಿಯಲ್ ಫೀಡರ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ ಆದ್ದರಿಂದ ಇಂದು ಸಂಜೆ 5 ಗಂಟೆಯವರೆಗೆ ಸುರತ್ಕಲ್, ಕಾನ, ಕಟ್ಲ, ತಡಂಬೈಲ್, ಮುಂಚೂರು, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, 4ನೇ ಬ್ಲಾಕ್, 5ನೇ ಬ್ಲಾಕ್, 6ನೇ ಬ್ಲಾಕ್, 7ನೇ ಬ್ಲಾಕ್, 8ನೇ ಬ್ಲಾಕ್, 9ನೇ ಬ್ಲಾಕ್, ಕಾಟಿಪಳ್ಳ, ಕುತ್ತೆತ್ತೂರು, ಚೇಳಾರು,
ಮಧ್ಯ, ಮುಕ್ಕ, ಸಸಿಹಿತ್ಲು, ಚೊಕ್ಕಬೆಟ್ಟು, ಕೋಟೆ, ಆದರ್ಶನಗರ, ರಾಜೀವನಗರ, ಸೂರಿಂಜೆ, ಶಿಬರೂರು, ಬಾಳ, ಮಂಗಳಪೇಟೆ, ಬಿ.ಎ.ಎಸ್.ಎಫ್, ಎಚ್.ಪಿ.ಸಿ.ಎಲ್, ಸ್ಟೀಲ್ ಬ್ಯಾರೆಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.