Connect with us

    DAKSHINA KANNADA

    ಮಂಗಳೂರಿನಲ್ಲಿ ಇಂದು ಹಲವೆಡೆ ವಿದ್ಯುತ್ ವ್ಯತ್ಯಯ

    Published

    on

    ಮಂಗಳೂರು: ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆ.ವಿ ಜೆಪ್ಪಿನ ಮೊಗರು ಫೀಡರ್‌ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾದ ಕಾರಣ ಇಂದು ಬೆಳಿಗ್ಗೆ 10 ರಿಂದ 2ರವರೆಗೆ ಬಜಾಲ್, ಪಡೀಲ್, ವೀರನಗರ, ಫೈಸಲ್ನಗರ, ಕಲ್ಲಕಟ್ಟೆ, ತುಂಗನಗರ,

    ಹೇಮಾವತಿನಗರ, ಪಲ್ಲಕೆರೆ, ಕರ್ಮಾರ್, ಜೆ.ಎಂ.ರೋಡ್, ಪಕ್ಕಲಡ್ಕ, ಕುಡ್ತಡ್ಕ, ಸಾಲಿಯನ್ ರೈಸ್ ಮಿಲ್, ತೋಫಿಲ, ಜಲ್ಲಿಗುಡ್ಡೆ, ಜಯನಗರ, ವಿಜಯನಗರ, ಕಟ್ಟಪುಣಿ, ದರ್ಬಾರ್ ಗುಡ್ಡೆ, ಭಟ್ರಬೆಟ್ಟು, ಪ್ರಗತಿನಗರ, ಕೆ.ಎಚ್.ಬಿ ಕಾಲೋನಿ, ಎಕ್ಕೂರು, ಬಜಾಲ್ ಬೊಲ್ಲ, ಬಜಾಲ್ ಚರ್ಚ್, ಆದರ್ಶ ನಗರ, ಆದರ್ಶ ಶಾಲೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.


    ಕುದ್ರೋಳಿ: ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆ.ವಿ ಕಾಸ್ಟ್ರ್ರೀಟ್ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.
    ಆದ ಕಾರಣ ಜೂ.08 ರ ಬೆಳಿಗ್ಗೆ 10 ರಿಂದ 5ರವರೆಗೆ ನ್ಯೂಫೀಲ್ಡ್ ಸ್ಟ್ರೀಟ್, ಕಾಸ್ಟ್ರ್ರೀಟ್, ದಯಾನಂದ ಪೈ ಕಾಲೇಜ್, ಮಹಾಮಾಯಿ ಟೆಂಪಲ್ ರಸ್ತೆ, ಕಾರ್ಪೊರೇಶನ್ ಬ್ಯಾಂಕ್ , ಗೋಪಾಲ ಕೃಷ್ಣ ಟೆಂಪಲ್ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

    ದೇರೆಬೈಲ್, ಮುಲ್ಲಕಾಡು: ಎಸ್.ಆರ್.ಎಸ್ ಕಾವೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ದೇರೆಬೈಲ್, ಮುಲ್ಲಕಾಡು ಮತ್ತು ಮಾಲೆಮಾರ್ ಫೀಡರ್‍ಗಳಲ್ಲಿ ತುರ್ತು ನಿರ್ವಹಣಾ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.

    ಆ ಪ್ರಯುಕ್ತ ಜೂ.08 ರ ಬೆಳಿಗ್ಗೆ 10 ರಿಂದ 5ರವರೆಗೆ ದೇರೆಬೈಲ್ ಕೊಂಚಾಡಿ, ಕುಂಟಿಕಾನ, ಪ್ರಶಾಂತನಗರ, ಎ.ಜೆ ಹಾಸ್ಪಿಟಲ್, ಮುಲ್ಲಕಾಡು, ಮಾಲೆಮಾರ್, ಲೋಹಿತ್ ನಗರ, ಮಾಲಾಡಿ, ಜಲ್ಲಿಗುಡ್ಡೆ, ಕಾವೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು.

    ಈಶ್ವರಕಟ್ಟೆ, ಪೆರಾರ: ಎಂ.ಎಸ್.ಇ.ಝೆಡ್ ಉಪಕೇಂದ್ರದಿಂದ ಹೊರಡುವ 11 ಕೆವಿ ಈಶ್ವರಕಟ್ಟೆ, ಪೆರಾರ, ಸುಂಕದಕಟ್ಟೆ, ಬಜಪೆ ಟೌನ್, ಪೆರ್ಮುದೆ, ಮಳವೂರು ವಾಟರ್ ಸಪ್ಲೈ, ಕಟೀಲ್ ಟೆಂಪಲ್ ಫೀಡರ್ ಗಳಲ್ಲಿ ತುರ್ತು ನಿರ್ವಹಣಾ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.

    ಈ ನಿಟ್ಟಿನಲ್ಲಿ ಇಂದು ಬೆಳಿಗ್ಗೆ 10 ರಿಂದ 4.30ರವರೆಗೆ ಈಶ್ವರ ಕಟ್ಟೆ, ಮುರ, ಶಾಸ್ತಾವು, ಕಿನ್ನಿಕಂಬ್ಳ, ಮೂಡುಪೆರಾರ, ಕೊಳಪಿಲ, ಅರಿಕೆಪದವು, ಶಾಲೆಪದವು, ಕೊಂಪದವು, ಕರಿಕುಮೇರು, ಕಾಪಿಕಾಡು, ನೆಲ್ಲಿಗುಡ್ಡೆ, ಕತ್ತಲ್ ಸಾರ್, ಸೌಹಾರ್ದ ನಗರ, ಸಿದ್ದಾರ್ಥ ನಗರ, ಜರಿನಗರ, ಅಂಬಿಕಾನಗರ, ಸುಂಕದಕಟ್ಟೆ, ಬಜಪೆ, ಪೆರ್ಮುದೆ, ಭಟ್ರಕೆರೆ, ಮಳವೂರು, ಎಕ್ಕಾರು, ಕಟೀಲು ದೇವಸ್ಥಾನ, ನೀರುಡೆ, ನೆಲ್ಲಿತೀರ್ಥ, ಅನಂತಗುರಿ, ಮೆಣಸುಕಾನ, ಬರಂಕಿಲ, ಮುಡಿಗಾಡು, ಆಮ್ಲಟ ಪದವು, ಕಾಂತಾರಬೈಲು, ಮುಚ್ಚೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು.

    ಮೂಡಬಿದ್ರೆ: ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬೆಳುವಾಯಿ ಫೀಡರ್‍ನಲ್ಲಿ ತುರ್ತು ನಿರ್ವಹಣಾ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.

    ಆದ್ದರಿಂದ ಇಂದು ಬೆಳಿಗ್ಗೆ 10 ರಿಂದ 5ರವರೆಗೆ ಕಾನ, ಕಲ್ಲೋಳಿ, ನಡಿಗುಡ್ಡೆ, ಕಾಂತಾವರ ಕ್ರಾಸ್, ಬೆಳುವಾಯಿ, ಬನ್ನಡ್ಕ, ಕಾಯರ್ ಕಟ್ಟೆ, ಆಜಾದ್ ನಗರ, ಕರಿಯನಂಗಡಿ, ಮಲೆಬೆಟ್ಟು, ಮಂಜನಕಟ್ಟೆ, ಕಾಯಿದೆ, ಕೆಸರ್ ಗದ್ದೆ, ಪೆಲಕುಂಜ, ಮೂಡಾಯಿಕಾಡು, ಬೆಳುವಾಯಿ ಚರ್ಚ್, ಇರ್ವತ್ತೂರು ಕ್ರಾಸ್, ಗುಂಡುಕಲ್ಲು, ಮೂಡುಮಾರ್ನಾಡು, ಕೆಲ್ಲಪುತ್ತಿಗೆ, ದರೆಗುಡ್ಡೆ, ಅರಸುಕಟ್ಟೆ, ಪಣಪಿಲ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಬಂಟ್ವಾಳ :ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾ*ತ; ಪತ್ನಿ ಸಾ*ವು; ಪತಿ ಗಂಭೀ*ರ

    Published

    on

    ಬಂಟ್ವಾಳ : ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿ ಪತ್ನಿ ಸಾ*ವನ್ನಪ್ಪಿದ್ದು, ಪತಿ ಗಂ*ಭೀರವಾಗಿ ಗಾ*ಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾ*ವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಅನಿಶ್ ಕೃಷ್ಣ ಗಂಭೀ*ರವಾಗಿ ಗಾ*ಯಗೊಂಡಿದ್ದಾರೆ.

    ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವದಂಪತಿಯ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿದೆ. ಬಳಿಕ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿ*ಕ್ಕಿ ಹೊಡೆದಿದೆ.

    ಡಿ*ಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.

    ಎರಡು ದಿನದ ಹಿಂದಷ್ಟೇ ಮದುವೆ : 

    ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮಾನಸ ಹಾಗೂ ಅನಿಶ್ ಕೃಷ್ಣ  ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ಈ ‌ಘ‌ಟನೆ ನಡೆದಿದೆ ಎನ್ನಲಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು,  ಪ್ರಕರಣ ದಾಖಲಿಸಿಕೊಂಡಿದ್ದಾರೆ

    Continue Reading

    DAKSHINA KANNADA

    ಯಕ್ಷಗಾನ ಕಲಾವಿದ ಕುಪ್ಪೆಪದವು ಉಮೇಶ್ ಸಾಲ್ಯಾನ್ ರಿಗೆ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ

    Published

    on

    ಮಂಗಳೂರು : ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಹಿರಿಯ ಅರ್ಚಕ ದಿ.ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಪ್ರಯುಕ್ತ ಕಟೀಲು ಮೇಳದ ಹಿರಿಯ ಯಕ್ಷಗಾನ ವೇಷಧಾರಿ ಕುಪ್ಪೆಪದವು ಉಮೇಶ್ ಸಾಲ್ಯಾನ್ ಅವರಿಗೆ ಈ ವರ್ಷದ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ ನೀಡಲಾಗುವುದು.

    ಆಸ್ರಣ್ಣ ಅಭಿಮಾನಿ ಬಳಗ ಕದ್ರಿ ಈ ಪ್ರಶಸ್ತಿಯನ್ನು ನೀಡುತ್ತಿದ್ದು, ಚಿನ್ನದ ಪದಕದೊಂದಿಗೆ ಕುಪ್ಪೆಪದವು ಉಮೇಶ್ ಸಾಲ್ಯಾನ್ ರವರನ್ನು ಗೌರವಿಸಲಾಗುವುದು.

    ಇದನ್ನೂ ಓದಿ : ಮಂಗಳೂರು: ‘ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಗಿ ಹಿಂಪಡೆಯುವುದಿಲ್ಲ’ – ಡಿಸಿ ಮುಗಿಲನ್

    ಕಟೀಲು ಲಕ್ಷ್ಮಿ ನಾರಾಯಣ ಆಸ್ರಣ್ಣ ಮತ್ತು ಬಂಧುಗಳು ಸೆಪ್ಟೆಂಬರ್ 14 ರ ಶನಿವಾರ ಸಂಜೆ ಶ್ರೀ ಗೋಪಾಲಕೃಷ್ಣ ಆಸ್ರ ಣ್ಣ ಸಭಾಭವನದಲ್ಲಿ ಹಮ್ಮಿಕೊಡಿರುವ ಸಂಸ್ಮರಣಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಆಸ್ರಣ್ಣ ಅಭಿಮಾನಿ ಬಳಗದ, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಹಾಗೂ ನವನೀತ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Continue Reading

    DAKSHINA KANNADA

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಸೆ. 12 ರವರೆಗೆ ಕರಾವಳಿಯಲ್ಲಿ ಭಾರೀ ಮಳೆ

    Published

    on

    ಮಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಸೆಪ್ಟೆಂಬರ್ 12 ರವರೆಗೆ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

    ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಇಂದು ಮೋಡಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

    Continue Reading

    LATEST NEWS

    Trending