DAKSHINA KANNADA
ಮೂಡುಬಿದಿರೆ ಸೇರಿದಂತೆ ಮಂಗಳೂರಿನ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ
ಮಂಗಳೂರು: ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆ.ವಿ ಕುಡುಪು ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.
ಆದ ಕಾರಣ ಇಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಕುಲಶೇಖರ ಡೈರಿ, ಸರಿಪಲ್ಲ, ಕನ್ನಗುಡ್ಡೆ, ಕುಲಶೇಖರ-ಚೌಕಿ, ಕುಲಶೇಖರ, ಕುಡುಪು ದೇವಸ್ಥಾನ, ಪಿಲಿಕುಮೇರಿ, ಉಮಿಕಾನ, ಎಸ್.ಎಚ್.ನಗರ, ದಯಾಂಬು, ಕೆಲರಾಯಿ, ಪಾಲ್ದನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
ಈಶ್ವರಕಟ್ಟೆ, ಪೆರಾರ, ಸುಂಕದಕಟ್ಟೆ:
220 ಕೆ.ವಿ ಎಂ.ಎಸ್.ಇ.ಝೆಡ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಈಶ್ವರಕಟ್ಟೆ, ಪೆರಾರ, ಸುಂಕದಕಟ್ಟೆ ಫೀಡರ್ ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ.
ಆದ ಕಾರಣ ಇಂದು ಬೆಳಿಗ್ಗೆ 10 ರಿಂದ ಸಂಜೆ 4.30ರವರೆಗೆ ಈಶ್ವರ ಕಟ್ಟೆ, ವಿ.ಓ.ಆರ್ ರೋಡ್, ಮುರ, ಶಾಸ್ತಾವು, ಕೊಳಂಬೆ, ಹೊಯಿಗೆಪದವು, ಕಂದಾವರ, ಮೂಡುಪೆರಾರ, ಕೊಳಪಿಲ, ಅರಿಕೆಪದವು, ಕೊಂಪದವು, ಮಂಜನಕಟ್ಟೆ, ಕಲ್ಪನೆ, ಕತ್ತಲ್ ಸಾರ್, ಸೌಹಾರ್ದನಗರ, ಸಿದ್ದಾರ್ಥ ನಗರ, ಜರಿನಗರ, ಅಂಬಿಕಾನಗರ, ಸುಂಕದಕಟ್ಟೆ, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
ಕೊಣಾಜೆ:
ಕೊಣಾಜೆ ಉಪಕೇಂದ್ರದಿಂದ ಹೊರಡುವ 11ಕೆ.ವಿ ಕೊಣಾಜೆ, 11ಕೆ.ವಿ ಮಂಜನಾಡಿ, 11ಕೆ.ವಿ ಕಿನ್ಯಾ, 11ಕೆ.ವಿ ಉಳ್ಳಾಲ ಎಕ್ಸ್ಪ್ರೆಸ್ ಮತ್ತು 11ಕೆ.ವಿ ಕುತ್ತಾರ್ ಫೀಡರ್ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.
ಆದ್ದರಿಂದ ಇಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಕೊಣಾಜೆ, ಅಸೈಗೋಳಿ, ತಿಬ್ಲೆಪದವು, ನಾಟೆಕಲ್, ಮಂಜನಾಡಿ, ಮಂಗಳಾಂತಿ, ಕುಚ್ಚಿಗುಡ್ಡೆ, ಮೊಂಟೆಪದವು, ಕಿನ್ಯಾ, ಸಾಂತ್ಯ, ಬೆಳರಿಂಗೆ, ರೆಂಜಾಡಿ, ಬದ್ಯಾರ್, ಬರಿಕೆ, ಕಲ್ಪಾದೆ, ನಿಟ್ಟೆ ಆಸ್ಪತ್ರೆ ಹತ್ತಿರ,
ಬಗಂಬಿಲ, ಯೆನೆಪೋಯ ಆಸ್ಪತ್ರೆ ಹತ್ತಿರ, ಕುತ್ತಾರ್, ದೆಕ್ಕಾಡ್, ಮದಿನಿನಗರ, ಸಂತೋಷ್ ನಗರ, ಪಂಡಿತ್ ಹೌಸ್, ರಾಣಿಪುರ, ಉಳಿಯ, ಗಟ್ಟಿಕುದ್ರು, ಭಾರದಡ್ಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ.
ಆದ್ದರಿಂದ ಇಂದು 10 ರಿಂದ ಸಂಜೆ 5ರವರೆಗೆ ಕಾನ, ಕಲ್ಲೋಳಿ, ನಡಿಗುಡ್ಡೆ, ಕಾಂತಾವರ ಕ್ರಾಸ್, ಬೆಳುವಾಯಿ, ಬನ್ನಡ್ಕ, ಕಾಯರ್ ಕಟ್ಟೆ, ಆಜಾದ್ ನಗರ, ಕರಿಯನಂಗಡಿ, ಮಲೆಬೆಟ್ಟು, ಮಂಜನಕಟ್ಟೆ, ಕಾಯಿದೆ, ಕೆಸರಗದ್ದೆ, ಪೆಲಕುಂಜ, ಶಾಂತಿನಗರ, ಮೂಡಾಯಿಕಾಡು,
ಇರ್ವತ್ತೂರು ಕ್ರಾಸ್, ಗುಂಡುಕಲ್ಲು, ಮೂಡುಮಾರ್ನಾಡು, ಕೆಲ್ಲಪುತ್ತಿಗೆ, ದರೆಗುಡ್ಡೆ, ಅರಸುಕಟ್ಟೆ, ಪಣಪಿಲ, ಬಸವನಕಜೆ, ಅಮನೊಟ್ಟು, ಆನೆಗುಡ್ಡೆ, ಜೋಗೊಟ್ಟು, ವಾಲ್ಪಾಡಿ, ಶಿರ್ತಾಡಿ, ಮಕ್ಕಿ, ಶಿಮುಂಜೆ, ಅಳಿಯೂರು, ಬೋರುಗುಡ್ಡೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
ಕುದ್ರೋಳಿ: 33/11ಕೆ.ವಿ ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆ.ವಿ. ಕಾರ್ಸ್ಟ್ರೀಟ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.
ಆದ ಕಾರಣ ಜು.27 ರಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ನ್ಯೂಫೀಲ್ಡ್ ಸ್ಟ್ರೀಟ್, ಕಾರ್ಸ್ಟ್ರೀಟ್, ದಯಾನಂದ ಪೈ ಕಾಲೇಜ್, ಮಹಾಮಾಯಿ ಟೆಂಪಲ್ ರಸ್ತೆ, ಕಾರ್ಪೊರೇಶನ್ ಬ್ಯಾಂಕ್, ಗೋಪಾಲಕೃಷ್ಣ ಟೆಂಪಲ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
ಮುಲ್ಕಿ: ಕೆ.ಪಿ.ಟಿ.ಸಿ.ಎಲ್ ವತಿಯಿಂದ 110/11 ಕೆ.ವಿ ಮುಲ್ಕಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತುನ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ.
ಆದ ಕಾರಣ ಜು.28 ರಂದು ಬೆಳಿಗ್ಗೆ 10 ರಿಂದ ಸಂಜೆ 4ರವರೆಗೆ ಮುಲ್ಕಿ ನಗರ, ಕೆ.ಎಸ್. ರಾವ್ ನಗರ, ಕೊಲ್ನಾಡು ಇಂಡಸ್ಟ್ರಿಯಲ್ ಏರಿಯಾ, ಚಿತ್ರಾಪು, ಬಪ್ಪನಾಡು, ಕುಬೆವೂರು, ಶಿಮಂತೂರು, ಲಿಂಗಪ್ಪಯ್ಯ ಕಾಡು, ಕೊಳಕ್ಕಾಡಿ, ಅತಿಕಾರಿಬೆಟ್ಟು, ಕಿನ್ನಿಗೋಳಿ,
ಮೂರುಕಾವೇರಿ, ಪುನರೂರು, ಐಕಳ, ಉಲ್ಲಂಜೆ, ಕವತ್ತಾರು, ಪಂಜಿನಡ್ಕ, ದಾಮಸ್ ಕಟ್ಟೆ, ಎಸ್ಕೋಡಿ, ಪಕ್ಷಿಕೆರೆ, ಹಳೆಯಂಗಡಿ, ಇಂದಿರಾನಗರ, 10ನೇ ತೋಕೂರು, ಪಾವಂಜೆ, ಚೇಳಾರು, ಬಳ್ಕುಂಜೆ ವಾಟರ್ ಸಪ್ಲೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
ಕುಲಶೇಖರ: ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆ.ವಿ ಅಡ್ಯಾರ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.
ಆದ ಕಾರಣ ಜು.28 ರಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಅಡ್ಯಾರ್, ಅಡ್ಯಾರ್ ಪದವು, ವಳಚ್ಚಿಲ್, ವಳಚ್ಚಿಲ್ ಪದವು, ಅರ್ಕುಳ, ಮೇರ್ಲಪದವು, ಮೇರೆಮಜಲು, ತುಪ್ಪೆಕಲ್, ಅಡ್ಯಾರ್ ಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
ಕುದ್ರೋಳಿ: ಡೊಂಗರಕೇರಿ ಫೀಡರ್ನಲ್ಲಿ ಹಾಗೂ 33/11ಕೆ.ವಿ. ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ಪಾಂಡೇಶ್ವರ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್. ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.
ಆದ ಕಾರಣ ನಾಳೆ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಸಿಟಿ ಸೆಂಟರ್, ಕೊಡಿಯಾಲ್ ಬೈಲ್, ಡಿಸ್ಟ್ರಿಕ್ಟ್ ಕೋರ್ಟ್, ಕರ್ನಾಟಕ ಬ್ಯಾಂಕ್, ಅಲೋಶಿಯಸ್ ಕಾಲೇಜ್, ಜಯಶ್ರೀ ಹಾಸ್ಪಿಟಲ್, ಮನೋರಮ ಹೋಟೆಲ್, ಪಂಚವಟಿ ಲೇನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
DAKSHINA KANNADA
ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ
ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ಮತದಾನ ಮಾಡುವಾಗ ಫೋನ್ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.