LATEST NEWS
ನಾರಿಶಕ್ತಿಯ ಮುಂದೆ ಯಾರ ಶಕ್ತಿ ಪ್ರದರ್ಶನವೂ ನಡೆಯದು-ಡಾ. M.N ರಾಜೇಂದ್ರ ಕುಮಾರ್
ಉಡುಪಿ: ‘ನಾರಿ ಶಕ್ತಿಯ ಮುಂದೆ ಯಾರ ಶಕ್ತಿ ಪ್ರದರ್ಶನವೂ ನಡೆಯುವುದಿಲ್ಲ. ಯಾಕೆಂದರೆ ಇಲ್ಲಿ ಸೇರಿರುವ 90%ದಷ್ಟು ಮಹಿಳೆಯರು ನಮ್ಮ ನವೋದಯ ಸ್ವಸಹಾಯ ಸಂಘದ ಸದಸ್ಯರು ಅಂತ ಹೇಳಲು ನನಗೆ ಹೆಮ್ಮೆ ಅನಿಸುತ್ತದೆ. ನಾವು ಶಕ್ತಿ ತೋರಿಸಲು ಇಲ್ಲಿ ಬಂದಿಲ್ಲ ನಮ್ಮ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಇಲ್ಲಿಗೆ ಬಂದಿದ್ದೇವೆ’ ಎಂದು ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.
ಅವರು ಇಂದು ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ., ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ರಿ., ಮಂಗಳೂರು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ, ಮಂಗಳೂರು; ದ.ಕ. ಹಾಗೂ ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ನಿ., ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಲಿ. ಹಾಗೂ ಉಡುಪಿ ಜಿಲ್ಲೆಯ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಗಳು, ಸಹಕಾರ ಇಲಾಖೆ, ಉಡುಪಿ ಜಿಲ್ಲೆ ಮತ್ತು
ಉಡುಪಿ ಜಿಲ್ಲೆಯ ಸಮಸ್ತ ಸಹಕಾರ ಸಂಘಗಳು ಹಾಗೂ ಸೌಹಾರ್ದ ಸಹಕಾರಿಗಳ ನೇತೃತ್ವದಲ್ಲಿ 69ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ಹಾಗೂ ಅವರಿಗೆ ಅಭಿನಂದನಾ ಸಮಾರಂಭವನ್ನು ಉದದ್ಘಾಟಿಸಿ ಮಾತನಾಡಿದ ಅವರು ‘ಎಲ್ಲರೂ ಸಹಕಾರ ಸಂಘಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂಬ ದೃಷ್ಟಿಯಿಂದ ವಾರಗಳ ಕಾಲ ಸಹಕಾರ ಸಪ್ತಾಹವನ್ನು ಆಚರಿಸಲಾಗುತ್ತಿದೆ.
ಏಳು ದಿನಗಳ ಕಾಲ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಪ್ತಾಹ ಕಾರ್ಯಕ್ರಮ ನಡೆಯಲಿದ್ದು ಇದರ ಸದುಪಯೋಗವನ್ನು ಸಹಕಾರಿ ಸಂಘಗಳು ಮತ್ತು ಸದಸ್ಯರು ಪಡೆದುಕೊಳ್ಳಬೇಕು. ಎಲ್ಲರನ್ನೂ ಸಮಾನವಾಗಿ ಕಾಣಬೇಕೆಂಬ ಉದ್ದೇಶದಿಂದ, ಜಾತಿ ಮತ ಧರ್ಮದ ಬೇಧ ಹೊಂದಬಾರದು ಎಂಬ ಕಾರಣಕ್ಕೆ ಸಂಘದ ಮಹಿಳೆಯರಿಗೆ ಒಂದೇ ಬಣ್ಣದ ಸೀರೆಯನ್ನು ನೀಡಲಾಗಿದೆ” ಎಂದು ಆಶಯ ವ್ಯಕ್ತಪಡಿಸಿದರು.
ಗಣನಾಥ ಎಕ್ಕಾರು ಸಹಕಾರಿ ಕ್ಷೇತ್ರ ಮತ್ತು ಸಹಕಾರಿ ತತ್ವದ ಕುರಿತು ದಿಕ್ಸೂಚಿ ಭಾಷಣದಲ್ಲಿ, “ಸಮಾಜದಲ್ಲಿ ಪರಸ್ಪರ ಸಾಮರಸ್ಯ, ನಂಬಿಕೆ ಮತ್ತು ಸ್ವಾವಲಂಬನೆ ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಮಾತ್ರ ಸಹಕಾರಿ ಸಂಘಟನೆಯ ಜೊತೆ ಜೊತೆಗೆ ಅಭಿವೃದ್ಧಿ ಕಾಣಲು ಸಾಧ್ಯವಿದೆ. ಹಿಂದೆ ಶಿಕ್ಷಣ ಇಲ್ಲದವರನ್ನು ಆಶಿಕ್ಷಿತರು ಎಂದು ಕರೆಯಲಾಗುತ್ತಿತ್ತು.
ಆದರೆ ಇಂದು ಆಧುನಿಕ ತಂತ್ರಜ್ಞಾನದ ಜೊತೆಗೆ ಬೆಳೆಯದೆ ಇದ್ದಲ್ಲಿ ಅಂತವರನ್ನು ಆಶಿಕ್ಷಿತರು ಎಂದು ಕರೆಯಬಹುದಾಗಿದೆ. ಯಾವುದೇ ಕೌಶಲ್ಯ ನಮಗೆ ಕರಗತ ಆಗಬೇಕಿದ್ದರೆ ಮೊದಲು ಅದನ್ನು ಒಪ್ಪಿಕೊಳ್ಳಬೇಕು” ಎಂದರು.
ದೇವಿಪ್ರಸಾದ್ ಶೆಟ್ಟಿ ಬೆಳಪು ಅತಿಥಿಗಳನ್ನು ಸ್ವಾಗತಿಸಿದರು.
ಬಳಿಕ ಆಶೀರ್ವಚನ ನೀಡಿದ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು, “ಸಹಕಾರ ಅನ್ನುವುದು ಸಾರ್ವಕಾಲಿಕ ಏಳಿಗೆಯ ಸೂತ್ರ.
ಬ್ಯಾಂಕಿಗ್ ಕ್ಷೇತ್ರ ಮಾತ್ರವಲ್ಲ ಸಮಾಜದಲ್ಲಿ ಜಾತಿ ಮತ ಪಂಥಗಳಲ್ಲಿ ಹರಿದು ಹಂಚಿಹೋಗಿರುವ ನಾವು ಸಹಕಾರಿ ತತ್ವವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅಭಿವೃದ್ಧಿ ಸಾಧ್ಯವಿದೆ. ರಾಜೇಂದ್ರ ಕುಮಾರ್ ಅವರ ಸಾಧನೆಯಿಂದ ಸಹಕಾರಿ ಕ್ಷೇತ್ರ ಇಷ್ಟು ದೊಡ್ಡ ಮಟ್ಟದಲ್ಲಿ ಬೆಳೆದಿದೆ. ಮುಂದೆಯೂ ಅವರ ಮಾರ್ಗದರ್ಶನದಲ್ಲಿ ಸಹಕಾರಿ ರಂಗ ಇನ್ನಷ್ಟು ಬೆಳೆಯಲಿ” ಎಂದು ಶುಭ ಹಾರೈಸಿದರು.
ವೇದಿಕೆಯಲ್ಲಿ ಎಂ.ಎನ್. ರಾಜೇಂದ್ರ ಕುಮಾರ್ ದಂಪತಿಯನ್ನು ಬೆಳ್ಳಿಯ ಶಂಖ ಹಾಗೂ ಅಪರೂಪದ ಭಾವಚಿತ್ರ ಕೊಟ್ಟು ಶಾಲು ಹೊದೆಸಿ ಸನ್ಮಾನಿಸಲಾಯಿತು.
ಬಳಿಕ ಮಾತಾಡಿದ ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಅವರು “ಕಾಂತಾರ ಚಿತ್ರ ಯಾವ ರೀತಿ ದೇಶ ವಿದೇಶಗಳಲ್ಲಿ ತುಳುನಾಡಿನ ದೈವಾರಾಧನೆ ಬಗ್ಗೆ ವೈಬ್ರೇಷನ್ ಸೃಷ್ಟಿ ಮಾಡಿದೆಯೋ ಹಾಗೇ ಸಹಕಾರಿ ಕ್ಷೇತ್ರದಲ್ಲಿ ವೈಬ್ರೇಷನ್ ಸೃಷ್ಟಿಸಿದವರು ಎಂ.ಎನ್. ರಾಜೇಂದ್ರ ಕುಮಾರ್ ಅವರು. ಕರ್ನಾಟಕ ರಾಜ್ಯದಲ್ಲಿ ಅತ್ಯುತ್ತಮ ಸಹಕಾರಿ ಎಂಬ ಬಿರುದಿಗೆ ಪಾತ್ರರಾಗಿರುವ ಜೊತೆಗೆ ತಮ್ಮ ಜೊತೆ ಇರುವವರನ್ನು ಬೆಳೆಸುವ, ಒಗ್ಗೂಡಿಸುವ ಧುರೀಣರಾಗಿದ್ದಾರೆ.
ಅವರು ಚುನಾವಣೆಗೆ ನಿಲ್ಲುವುದಾಗಿ ಹೇಳಿದ ಕೂಡಲೇ ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವೈಬ್ರೇಷನ್ ಪ್ರಾರಂಭ ಆಯ್ತು. ಇಂತಹ ರಾಜೇಂದ್ರ ಕುಮಾರ್ ಅವರು ಹಮ್ಮಿಕೊಂಡಿರುವ ಸಹಕಾರಿ ಸಪ್ತಾಹದ ಆಶಯ ಈಡೇರಲಿ” ಎಂದರು.
ವೇದಿಕೆಯಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಇದರ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಧರ್ಮಪತ್ನಿ ಅರುಣಾ ರಾಜೇಂದ್ರ ಕುಮಾರ್, ಜಿಲ್ಲಾ ಸಹಕಾರಿ ಯೂನಿಯನ್ ನಿ. ಉಡುಪಿ ಇದರ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಕಾಪು ಶಾಸಕ ಲಾಲಾಜಿ ಎಸ್. ಮೆಂಡನ್,
ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಇದರ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು,
ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಎ. ಸುವರ್ಣ, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಇದರ ನಿರ್ದೇಶಕ ಮಂಜುನಾಥ್ ಎಸ್.ಕೆ., ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಕೆ.ಎಂ.ಎಫ್. ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ಸಹಕಾರ ಸಂಘಗಳ ಜಂಟಿ ನಿಬಂಧಕ ಡಾ. ಉಮೇಶ್ ಜಿ., ಲಕ್ಷ್ಮೀನಾರಾಯಣ ಜಿ.ಎನ್., ಗಣೇಶ್ ಮಯ್ಯ, ಎಸ್ ಸಿಡಿಸಿಸಿ ಬ್ಯಾಂಕ್ ಡಿಜಿಎಂ ಗೋಪಿನಾಥ್ ಭಟ್, ಜಗದೀಶ್ ಅಂಚನ್ ಸೂಟರ್ ಪೇಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
DAKSHINA KANNADA
ಮಂಗಳೂರಿನ ಆಟೋಮ್ಯಾಟ್ರಿಕ್ಸ್ ಶೋ ರೂಮ್ ನಲ್ಲಿ ಟಾಟಾ ನೆಕ್ಸಾನ್, ಇ.ವಿ ಬಿಡುಗಡೆ
ಟಾಟಾ ಕಂಪೆನಿಯ ವಾಹನಗಳ ಅಧಿಕೃತ ಡೀಲರ್ ಆಗಿರುವ ಮಂಗಳೂರಿನ ಬಿಜೈನ ಆಟೋಮ್ಯಾಟ್ರಿಕ್ಸ್ ಶೋ ರೂಮ್ ನಲ್ಲಿ ನೂತನ ಟಾಟಾ ನೆಕ್ಸಾನ್ ಮತ್ತು ನೆಕ್ಸಾನ್ ಇ.ವಿ. 3.0 ವಾಹನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಸಮಾರಂಭ ನಡೆಯಿತು.
ಮಂಗಳೂರು: ಟಾಟಾ ಕಂಪೆನಿಯ ವಾಹನಗಳ ಅಧಿಕೃತ ಡೀಲರ್ ಆಗಿರುವ ಮಂಗಳೂರಿನ ಬಿಜೈನ ಆಟೋಮ್ಯಾಟ್ರಿಕ್ಸ್ ಶೋ ರೂಮ್ ನಲ್ಲಿ ನೂತನ ಟಾಟಾ ನೆಕ್ಸಾನ್ ಮತ್ತು ನೆಕ್ಸಾನ್ ಇ.ವಿ. 3.0 ವಾಹನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಸಮಾರಂಭ ನಡೆಯಿತು.
ಟಾಟಾ ವಾಹನಗಳ ಗ್ರಾಹಕ ವರದರಾಜ ಶೆಣೈ, ಶರಣ್ ಚಿಲಿಂಬಿ ಮತ್ತು ಪ್ರಿಯಾ ಮೋನಿಕಾ ಡಿ’ಸೋಜಾ ಆವರು ಈ ನೂತನ ವಾಹನಗಳನ್ನು ಅನಾವರಣಗೊಳಿಸಿದರು.
ಟಾಟಾ ಮೋಟಾರ್ಸ್ ನ ವಿಠಲದಾಸ್ ಅವರು ಹೊಸ ವಾಹನಗಳ ವೈಶಿಷ್ಟ್ಯಗಳನ್ನು ವಿವರಿಸಿ ಅತ್ಯಾಧುನಿಕ ತಾಂತ್ರಿಕತೆ, ವಿನೂತನ ವಿನ್ಯಾಸ, ಇಂಧನ ದಕ್ಷತೆ, ಕಂಫರ್ಟ್ ಇತ್ಯಾದಿ ಎಲ್ಲವೂ ಸೇರಿದಂತೆ ಹೊಸ ಅನುಭವವನ್ನು ಈ ವಾಹನಗಳು ನೀಡುತ್ತವೆ ಎಂದು ಹೇಳಿದರು.
ಗ್ರಾಹಕ ವರದರಾಜ ಶೆಣೈ ಮಾತನಾಡಿ ಟಾಟಾ ವಾಹನಗಳು ಜನಪ್ರಿಯ ಬ್ರಾಂಡ್ ಆಗಿದ್ದು, ನೆಕ್ಸಾನ್ ಕಾರು ಸುರಕ್ಷತೆ ಮತ್ತು ಇಂಧನ ದಕ್ಷತೆಗೆ ಹೆಸರಾಗಿದೆ. ಆಟೋಮ್ಯಾಟ್ರಿಕ್ಸ್ ಉತ್ತಮ ಸರ್ವೀಸ್ ಒದಗಿಸುತ್ತದೆ ಎಂದರು.
ನಾನು ಈ ಹಿಂದೆ ಟಾಟಾ ಪಂಚ್ ಖರೀದಿಸಿದ್ದು, ಈ ವಾಹನದ ಬಗ್ಗೆ ಇದುವರೆಗೆ ಯಾವುದೇ ದೂರು ಇಲ್ಲ.
ಆಟೋಮ್ಯಾಟ್ರಿಕ್ಸ್ ನಿಂದ ಉತ್ತಮ ಸೇವೆ ಲಭಿಸಿದೆ. ಇದೀಗ ಟಾಟಾ ನೆಕ್ಸಾನ್ ಖರೀದಿಸುತ್ತಿದ್ದೇನೆ ಎಂದು ಶರಣ್ ಚಿಲಿಂಬಿ ಹೇಳಿದರು.
2017 ರಲ್ಲಿ ಬಿಡುಗಡೆಯಾಗಿದ್ದ ನೆಕ್ಸಾನ್ ಕಾರು 2020 ರಲ್ಲಿ ಸುಧಾರಣೆ ಕಂಡಿತ್ತು. ದೇಶದಲ್ಲಿ ಅಧಿಕ ಪ್ರಮಾಣದಲ್ಲಿ ಮಾರಾಟವಾಗುವ ಎಸ್.ಯು.ವಿ. ಎನಿಸಿರುವ ನೆಕ್ಸಾನ್ ಇದೀಗ ಆಲ್ ನ್ಯೂ ನೆಕ್ಸಾನ್ ಮತ್ತು ನೆಕ್ಸಾನ್ ಇವಿ 3.0 ಸುಧಾರಿತ ಆವೃತ್ತಿಗಳೊಂದಿಗೆ ಮಾರುಕಟ್ಟೆಗೆ ಬಿಡುಗಡೆಯಾಗಿದೆ.
ಆಟೋಮ್ಯಾಟ್ರಿಕ್ಸ್ ಮಳಿಗೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಕುಮಾರ್, ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಪ್ರದೀಪ್ ಮಯ್ಯ ಮತ್ತು ಇತರರು ಉಪಸ್ಥಿತರಿದ್ದರು.
bengaluru
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಕನ್ನಡ ಖ್ಯಾತ ನಟ ವಿಜಯ ರಾಘವೇಂದ್ರ ಸೆ.24ರಂದು ಭೇಟಿ ನೀಡಿದರು.
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸ್ಯಾಂಡಲ್ ವುಡ್ ನ ಖ್ಯಾತ ನಟ ವಿಜಯ ರಾಘವೇಂದ್ರ ಅವರು ಭೇಟಿ ನೀಡಿದರು.
ಬಳಿಕ ತಾಯಿ ದುರ್ಗಾಪರಮೇಶ್ವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಪ್ರಾರ್ಥಿಸಿದರು.
ಈ ಸಂದರ್ಭ ದೇವಳದ ವತಿಯಿಂದ ವಿಜಯ ರಾಘವೇಂದ್ರ ಅವರನ್ನು ಗೌರವಿಸಲಾಯಿತು.
ಈ ಹಿಂದೆ ಯಾವತ್ತೂ ನಟ ರಾಘು ಕಟೀಲು ಕ್ಷೇತ್ರಕ್ಕೆ ಪತ್ನಿ ಸ್ಪಂದನ ಜೊತೆ ಭೇಟಿ ನೀಡುತ್ತಿದ್ದರು.
ಆದರೆ ಈ ಬಾರಿ ಪತ್ನಿಯ ಅಗಲಿಕೆಯ ಬಳಿಕ ಇದೇ ಮೊದಲ ಬಾರಿಗೆ ಕ್ಷೇತ್ರಕ್ಕೆ ನಟ ಭೇಟಿ ನೀಡಿದ್ದು, ಮುಖದಲ್ಲಿ ಪತ್ನಿಯ ಅಗಲಿಕೆಯ ನೋವು ಕಂಡು ಬರ್ತಾ ಇತ್ತು.
bengaluru
ಬೆಂಗಳೂರಿನಲ್ಲಿ ಅನಾವರಣಗೊಂಡ ತುಳುನಾಡ ಸಂಸ್ಕೃತಿ -ಶಾಸಕ ಪೂಂಜಾ ಮೆಚ್ಚುಗೆ
ಬೆಂಗಳೂರು: ತುಳುನಾಡ ಜವನೆರ್ ಬೆಂಗಳೂರು ರಿಜಿಸ್ಟರ್ ಆಯೋಜಿಸಿರುವ ರಾಜಬೂಡುಡು ಕುಡೊರ ಗರ್ದ್ ಗಮ್ಮತ್ ದ “ಅಸ್ಟೆಮಿದ ಐಸಿರ” ತುಳುವ ತಿರ್ಲ್ ಸಾಸಿರ ಎಂಬ ಕಾರ್ಯಕ್ರಮವು ಸೆ.24ರಂದು ಬೆಂಗಳೂರಿನ ವಿಜಯನಗರದ ಬಂಟರ ಸಂಘದ ಸಭಾಭವನದಲ್ಲಿ ನಡೆಯಿತು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಅತಿಥಿ ಗಣ್ಯರ ಸಮ್ಮುಖದಲ್ಲಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಗುವನ್ನು ತೊಟ್ಟಿಲಿಗೆ ಹಾಕಿ ತೂಗುವ ಮೂಲಕ ಮತ್ತೊಮ್ಮೆ ವಿಶೇಷವಾಗಿ “ಅಸ್ಟೆಮಿದ ಐಸಿರ” ತುಳುವ ತಿರ್ಲ್ ಸಾಸಿರ ಕಾರ್ಯಕ್ರಮಕ್ಕೆ ಅತಿಥಿಗಳು ಚಾಲನೆ ನೀಡಿದರು.
ನಂತರ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜಾ ಅವರು ತುಳುನಾಡಿನ ಸಂಸ್ಕೃತಿಯನ್ನು ಉಳಿಸಿ – ಬೆಳೆಸುವ ಕಾರ್ಯವನ್ನು ತುಳುನಾಡ ಜವನೆರ್ ಬೆಂಗಳೂರು ಇವರ ತಂಡ ಮಾಡ್ತ ಇರುವುದು ಶ್ಲಾಘನೀಯ ಎಂದರು.
ಇದೇ ವೇಳೆ ವೇಳೆ ಕಾರ್ಯಕ್ರದಮಲ್ಲಿ ಹಲವಾರು ಮಂದಿ ಅತಿಥಿ ಗಣ್ಯರು ಬೆಂಗಳೂರಿನಲ್ಲಿ “ಅಸ್ಟೆಮಿದ ಐಸಿರ” ತುಳುವ ತಿರ್ಲ್ ಸಾಸಿರ ಕಾರ್ಯಕ್ರಮವನ್ನು ಆಯೋಜನೆ ಮಾಡಿದ ಸಂಘಟನೆ ಕುರಿತು ಸಂದರ್ಭೋಚಿತವಾಗಿ ಮಾತನಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ಬಳಿಕ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಸಾಧಕರನ್ನು ಈ ಸಂದರ್ಭ ತುಳುನಾಡ ಜವನೆರ್ ಸಂಘಟನೆಯಿಂದ ಸನ್ಮಾನಿಸಿ ಸನ್ಮಾನಿಸ ಗೌರವಿಸಲಾಯಿತು.
ಇದಕ್ಕೂ ಮೊದಲು ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಕುಣಿತ ಭಜನೆ, ಹುಲಿ ವೇಷದ ತಂಡಗಳಿಂದ ಹುಲಿ ವೇಷದ ಕುಣಿತ ಪ್ರದರ್ಶನಗೊಂಡಿತು.
ಬಳಿಕ ಸಂಗೀತಗಾರದ ವಿದ್ಯಾಭೂಷಣ್ ಮತ್ತವರ ತಂಡದಿಂದ “ರಂಗಗ್ ಪದರಂಗ್” ಎನ್ನುವ ಭಕ್ತ ಗಾನೆ ಸುಧೆ ಮೂಡಿ ಬಂತು.
ಜೈ ತುಳುನಾಡು ರಿಜಿಸ್ಟರ್ ಬೆಂಗಳೂರು ಶಾಖೆ ಇವರ ತುಳುಲಿಪಿಯ ಕುರಿತಾದ “ತುಳು ಬರುವುದ ಐಸಿರ” ಎನ್ನುವ ಕೃತಿಯನ್ನು ವಿದ್ಯಾಭೂಷಣ್ ಅವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಮಕ್ಕಳಿಗಾಗಿ ಕೃಷ್ಣ ವೇಷ ಮಕ್ಕಳ ವೇಷ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು.
ಮುದ್ದು ಮಕ್ಕಳು ಈ ಕೃಷ್ಣ ವೇಷ ಸ್ಪರ್ಧೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.
ನಂತರ ವಿಠಲ್ ನಾಯಕ್ ಅವರ ತಂಡದಿಂದ ಗೀತಾ ಸಾಹಿತ್ಯ ಸಂಭ್ರಮ ಸೇರಿದಂತೆ,ಇನ್ನಿತರ ಹಲವಾರು ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿ ಬಂತು.
ಒಟ್ಟಿನಲ್ಲಿ ತುಳುನಾಡಿ ಸಂಪೂರ್ಣ ಸಂಸ್ಕೃತಿ “ಅಸ್ಟೆಮಿದ ಐಸಿರ” ತುಳುವ ತಿರ್ಲ್ ಸಾಸಿರ ಕಾರ್ಯಕ್ರಮದಲ್ಲಿ ಪ್ರದರ್ಶನಗೊಂಡು ನೋಡುಗರ ಮನಸೊರೆಗೊಂಡಿತು.
ಅಧ್ಯಕ್ಷ ಮಹೇಶ್ ಬೈಲೂರು ಅತಿಥಿಗಳನ್ನು ಸ್ವಾಗತಿಸಿದರು.
ಈ ಸಂದರ್ಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಿಪಿಎಂಪಿ ನಿಕಟ ಪೂರ್ವ ಅಧ್ಯಕ್ಷ ಉಮೇಶ್ ಶೆಟ್ಟಿ, ಕಾರ್ಕಳದ ಬಾಲಾಜಿ ಶಿಬಿರದ ಬಾಲಕೃಷ್ಣ ಹೆಗಡೆ, ಬಂಟರ ಸಂಘದ ಗೌರವ ಕಾರ್ಯದರ್ಶಿ ಅನಂದ್ ರಾಮ್ ಶೆಟ್ಟಿ ಸೇರಿದಂತೆ ಹಲವಾರು ಮಂದಿ ಅತಿಥಿ-ಗಣ್ಯರು ಪಾಲ್ಗೊಂಡಿದ್ದರು.
- DAKSHINA KANNADA6 days ago
Suratkal: ಸಮುದ್ರ ವಿಹಾರಕ್ಕೆ ತೆರಳಿದ ಮೂವರಲ್ಲಿ ಓರ್ವ ಸಮುದ್ರ ಪಾಲು..!
- BANTWAL6 days ago
Bantwala: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು..!
- DAKSHINA KANNADA7 days ago
ಮೂಲ್ಕಿ: ಮಟ ಮಟ ಮಧ್ಯಾಹ್ನ ಮನೆಯ ಅಂಗಳಕ್ಕೆ ಬಂದು ಚೂರಿ ತೋರಿಸಿ ಚಿನ್ನದ ಕರಿಮಣಿ ಎಗರಿಸಿ ಪರಾರಿ..!
- LATEST NEWS5 days ago
Udupi: ಪತಿಗೆ ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎರಚಿದ ಪತ್ನಿ..!