Connect with us

    LATEST NEWS

    6 ತಿಂಗಳಿಂದ ನೋ ಸ್ಟಾಕ್‌: ಇಎಸ್‌ಐ ಔಷಧಿ ಸಿಗದೆ ನರಳುತ್ತಿದ್ದಾರೆ ದ.ಕ-ಉಡುಪಿ ಕಾರ್ಮಿಕರು

    Published

    on

    ಮಂಗಳೂರು: ಕಾರ್ಮಿಕರಿಂದ ಕಾರ್ಮಿಕರಿಗಾಗಿಯೇ ಕಾರ್ಮಿಕರಿಗೋಸ್ಕರ ಇರುವ ಇಎಸ್‌ಐ ಆಸ್ಪತ್ರೆಗಳಲ್ಲಿ ಕಳೆದ ಹಲವು ತಿಂಗಳುಗಳಿಂದ ರೋಗಿಗಳಿಗೆ ಕೆಲವು ಔಷಧಿ ಪೂರೈಕೆಯಾಗುತ್ತಿಲ್ಲ ಎಂಬ ಅಂಶ ಬಯಲಾಗಿದೆ.

    ಇದರಿಂದ ಬಡ ರೋಗಿಗಳ ಪಾಡು ಹೇಳತೀರದಾಗಿದೆ. ಹಲವು ರೋಗಿಗಳು ವಿಧಿಯಿಲ್ಲದೆ ಖಾಸಗಿ ಔಷಧ ಕೇಂದ್ರಗಳಿಂದ ಹಣ ಕೊಟ್ಟು ದುಬಾರಿ ಔಷಧಿ ಪಡೆಯುವ ಅನಿವಾರ್ಯ ಸ್ಥಿತಿ ನಿರ್ಮಾಣಗೊಂಡಿದೆ.


    ದ.ಕ ಮತ್ತು ಉಡುಪಿ ಜಿಲ್ಲೆಗೆ ಮಂಗಳೂರಿನಲ್ಲಿ ಒಂದೇ ಇಎಸ್‌ಐ ಆಸ್ಪತ್ರೆ ಕಾರ್ಯ ನಿರ್ವಹಿಸುತ್ತಿದ್ದು ಎರಡು ಜಿಲ್ಲೆಗಳ ಬಡ ಕಾರ್ಮಿಕ ಕಾರ್ಮಿಕ ವರ್ಗಕ್ಕೆ ಈ ಏಕೈಕ ಆಸ್ಪತ್ರೆ ಸಂಜೀವಿನಿಯಾಗಿದೆ. ಉಭಯ ಜಿಲ್ಲೆಗಳಲ್ಲಿ ಇದೇ ಇಎಸ್‌ಐ ಆಸ್ಪತ್ರೆಯಡಿ ಒಟ್ಟು 9 ಡಿಸ್ಪೆನ್ಸರಿಗಳಿವೆ.

    ಅವುಗಳಿಗೆ ಕಳೆದ ಒಂದು ವರ್ಷದಿಂದ ಅಗತ್ಯವಾಗಿರುವ ಕೆಲವು ಔಷಧಿ ಪೂರೈಕೆಯಾಗುತ್ತಿಲ್ಲ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಸರಿಯಾದ ಔಷಧ ಸಿಗದೆ ರೋಗಿಗಳು ಪರದಾಡುತ್ತಿದ್ದಾರೆ.

    ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವರ್ಷದಲ್ಲಿ ಎರಡು ಬಾರಿ ಇಂಡೆಂಟ್ ಕಳುಹಿಸಲು ಇಎಸ್‌ಐ ರಾಜ್ಯ ನಿರ್ದೇಶನಾಲಯದಿಂದ ಇಂಡೆಂಟ್‌ ಅರ್ಜಿ ಕಳುಹಿಸುತ್ತಾರೆ. ಅದರನ್ವಯ ಜಿಲ್ಲಾ ಕೇಂದ್ರಗಳು ಜಿಲ್ಲೆಗೆ ಬೇಕಾಗಿರುವ ಔಷಧ ಪ್ರಮಾಣವನ್ನು ಅದರಲ್ಲಿ ನಮೂದಿಸಿ ಕಳುಹಿಸುತ್ತಾರೆ.

    ಅದರಂತೆ ಇಲಾಖೆಯಿಂದ ವರ್ಷದಲ್ಲಿ ಎರಡು ಬಾರಿ ಇಎಸ್‌ಐ ಆಸ್ಪತ್ರೆ ಮತ್ತು ಡಿಸ್ಪೆನ್ಸರಿಗಳಿಗೆ ಔಷಧಿ ಪೂರೈಕೆಯಾಗುತ್ತದೆ. ದ.ಕ ಜಿಲ್ಲೆಗೆ 2021ರ ಮೇ ತಿಂಗಳಲ್ಲಿ ಔಷಧಿ ಪೂರೈಕೆಯಾಗಿತ್ತು.

    ಸೆಪ್ಟೆಂಬರ್‌ ವೇಳೆಗೆ ರಾಜ್ಯ ನಿರ್ದೇಶನಾಲಯದಿಂದ ಇಂಡೆಂಟ್‌ ಅರ್ಜಿ ಬರಬೇಕಿತ್ತು. ಆದರೆ ಅದು ಬಾರದೇ ಕೆಲವು ಔಷಧಿಗಳು ಖಾಲಿಯಾಗಿ ಕೊರತೆಯುಂಟಾಗಿದೆ.

    ಸದ್ಯ ಕೊರತೆಯುಂಟಾಗಿರುವ ಔಷಧಿಗಳು ರೋಗಿಗಳು ಪ್ರತಿನಿತ್ಯ ತೆಗೆದುಕೊಳ್ಳುವಂತಾದ್ದರಿಂದ ಈಎಸ್‌ಐ ಆಸ್ಪತ್ರೆ ಅಥವಾ ಡಿಸ್ಪೆನ್ಸರಿಯಲ್ಲಿ ಸಿಗದೆ ಹೊರಗಡೆ ಖಾಸಗಿ ಔಷಧಿ ಕೇಂದ್ರದಲ್ಲಿ ದುಬಾರಿ ಹಣತೆತ್ತು ಖರೀದಿಸುವಂತಾಗಿದೆ.

    ಕಾರ್ಮಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿರುವ ಇಲಾಖೆಯಿಂದ ಅನಾರೋಗ್ಯ ಪೀಡಿತ ಬಡ ಕಾರ್ಮಿಕರು ಔಷಧಿ ಸಿಗದೇ ನಿತ್ಯನರಳುವಂತಾಗಿದೆ.

    ಯಾವೆಲ್ಲ ಔಷಧಿಗಳಿಲ್ಲ..
    ರಕ್ತದೊತ್ತಡ(ಬಿ.ಪಿ), ಮಧುಮೇಹ(ಡಯಾಬೆಟಿಕ್‌), ಎಲುಬು ಸಂಬಂಧಿತ ಖಾಯಿಲೆ (ಆರ್ಥೋ) ಉಳಿದಂತೆ ಹಲವು ನೋವು ನಿವಾರಕ ಔಷಧಿಗಳ ಕೊರತೆಯುಂಟಾಗಿದೆ.

    ಈ ಬಗ್ಗೆ ನಮ್ಮ ಕುಡ್ಲ ವಾಹಿನಿ ಇಎಸ್‌ಐ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ಕೆಲ ತಿಂಗಳಿಂದ ಔಷಧಿಗಳ ಕೊರತೆಯಾಗಿದ್ದು ಹೌದು. ಎರಡು ವಾರಗಳ ಹಿಂದೆ ಈ ಬಗ್ಗೆ ಬೆಂಗಳೂರಿನಲ್ಲಿ ಸಭೆಯಾಗಿದ್ದು, ಔಷಧಕ್ಕೆ ಆರ್ಡರ್‌ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ಕಾರ್ಮಿಕ ಮುಖಂಡರಿಗೆ ಗೊತ್ತೇ ಇಲ್ಲ ವಿಷ್ಯ..!
    ಈ ಬಗ್ಗೆ ಜಿಲ್ಲೆಯ ಕಾರ್ಮಿಕ ಸಂಘಟನೆಗಳ ಪ್ರಮುಖರನ್ನು ಸಂಪರ್ಕಿಸಿ ಔಷಧ ಕೊರತೆಯ ಬಗ್ಗೆ ಮಾಹಿತಿ ಕೇಳಿದಾಗ ಹೌದೇ ನಮಗೆ ಗೊತ್ತೇ ಇಲ್ಲಾ ಎಂದು ನಮ್ಮನ್ನೇ ಮರು ಪ್ರಶ್ನಿಸಿದ್ದಾರೆ.

    ಎರಡು ತಿಂಗಳ ಹಿಂದೆ ರಾಜ್ಯ ಕಾರ್ಮಿಕ ಸಚಿವರು ಜಿಲ್ಲೆಗೊಂದು ಇಎಸ್‌ಐ ಆಸ್ಪತ್ರೆ ತೆರೆಯುತ್ತೇವೆ ಮತ್ತು ಎಲ್ಲಾ ವರ್ಗದ ಬಡ ಕಾರ್ಮಿಕದ ಆರೋಗ್ಯದ ಬಗ್ಗೆ ವಿಶೇಷ ಕಾಳಾಜಿ ವಹಿಸುತ್ತೇವೆ ಎನ್ನುವ ವಾಗ್ದಾನ ಮಾಡಿದ್ದರು. ಆದ್ರೆ ಆಸ್ಪತ್ರೆ ಬಿಡಿ ಮೊದಲು ಜೀವ ಉಳಿಸಲು ಅಗತ್ಯ ಇರುವ ಔಷಧ ಪೂರೈಸಿ ಎಂದಿದ್ದಾರೆ.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending