LATEST NEWS
ಮಂಗಳೂರಿಗರೇ ಗಮನಿಸಿ: ಎರಡು ಡೋಸ್ ಲಸಿಕೆ ಸಿಗದೆ ಮನಪಾ ಪಾಲಿಕೆ ಆವರಣಕ್ಕೆ ಪ್ರವೇಶವಿಲ್ಲ: ಮಾಲ್ಗಳಿಗೂ ನೋ ಎಂಟ್ರಿ
ಮಂಗಳೂರು: ಮಹಾನಗರ ಪಾಲಿಕೆ ಕಚೇರಿ ಒಳಗೆ ಪ್ರವೇಶಿಸಲು ಎರಡು ಡೋಸ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದಿರಬೇಕು ಎಂಬ ಪಾಲಿಕೆಯ ದಿಢೀರ್ ಆದೇಶದಿಂದ ಸಾರ್ವಜನಿಕರು ಗೊಂದಲಕ್ಕೀಡಾಗಿದ್ದಾರೆ.
ಕೋವಿಡ್ 19ರ ನಿಯಂತ್ರಣಕ್ಕೆ ಎಲ್ಲೆಡೆ ವ್ಯಾಕ್ಸಿನೇಶನ್ ಮೇಳ ನಡೆಯುತ್ತಿದೆ. ಅದರಂತೆ ನಿನ್ನೆ ಪಾಲಿಕೆ ಪ್ರವೇಶ ದ್ವಾರದಲ್ಲೂ ಆರೋಗ್ಯ ಇಲಾಖೆಯಿಂದ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಗಿತ್ತು.
ಎರಡು ಡೋಸ್ ಲಸಿಕೆ ಪಡೆಯದೇ ಇದ್ದವರನ್ನು ಹುಡುಕಿ ಲಸಿಕೆ ಪಡೆಯದವರನ್ನು ಪಾಲಿಕೆ ಕಚೇರಿ ಒಳಗಡೆ ಬಿಡಬಾರದೆಂದು ಎಂದು ಪಾಲಿಕೆ ಅಧಿಕಾರಿಗಳು ನೀಡಿದ ಸೂಚನೆ ಸಾರ್ವಜನಿಕರನ್ನು ಗೊಂದಲಕ್ಕೆ ಎಡೆ ಮಾಡಿತ್ತು.
ಪಾಲಿಕೆಯ ಈ ಕ್ರಮದಿಂದಾಗಿ ಕಚೇರಿ ಕೆಲಸಕ್ಕೆ ಬೆಳಗ್ಗೆ ಆಗಮಿಸಿದ ನೂರಾರು ಮಂದಿ ಪ್ರವೇಶ ಸಿಗದ ದ್ವಾರದಲ್ಲಿ ನಿಂತು ಆಕ್ರೋಶ ವ್ಯಕ್ತಪಡಿಸಿದರು.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮನಪಾ ಕಮೀಷನರ್ ಅಕ್ಷಯ್ ಶ್ರೀಧರ್, ಪಾಲಿಕೆ ಆವರಣದ ಒಳಗಡೆ ಪ್ರವೇಶಿಸುವ ಸಂದರ್ಭ
ಎರಡು ಡೋಸ್ ಲಸಿಕೆ ಆಗಿದೆಯೇ ಎಂಬುವುದನ್ನು ಪರಿಶೀಲಿಸಲು ಸೂಚಿಸಲಾಗಿತ್ತು. ಆದರೆ ಒಳಗೆ ಬಿಡಲೇಬಾರದು ಎಂದು ಆದೇಶ ನೀಡಿಲ್ಲ. ಎಲ್ಲರಿಗೂ ಲಸಿಕೆ ಕೊಡಿಸುವುದು ನಮ್ಮ ಉದ್ದೇಶ ಎಂದಿದ್ದಾರೆ.
ಮಾಲ್ನಲ್ಲೂ ಪ್ರವೇಶವಿಲ್ಲ
ಕೋಡ್ 19 ಲಾಕ್ಡೌನ್ ನಿಯಮ ಸಡಿಲಿಕೆ ಕಡ್ಡಾಯ ಮಾಡಿ ಮಾರೀಗಳ ಆವಕಾಶ ನೀಡಿದ ಸಂದರ್ಭ ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಇರುವವರನ್ನು ಮಾತ್ರ ಒಳಗೆ ಬಿಡಬೇಕು ಎಂದು ಸರಕಾರ ಆದೇಶ ನೀಡಿತ್ತು.
ಆದರೆ ಈ ಆದೇಶ ಪಾಲನೆ ಆಗುತ್ತಿರಲಿಲ್ಲ. ಇದೀಗ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರು ಸರಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಎಲ್ಲಾ ಮಾಲ್ ಹಾಗೂ ಇತರ ವ್ಯಾಪಾರ ಮಳಿಗೆಗಳಿಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಶುಕ್ರವಾರ ನಗರದ ಮಾಲ್ಗಳಲ್ಲಿ ಕೂಡಾ ಎರಡು ಡೋಸ್ ಲಸಿಕೆ ಹಾಕಿಸಿದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿತ್ತು.
ದಾಖಲೆ ಇಲ್ಲದ ಮತ್ತು ಎರಡು ಡೋಸ್ ಲಸಿಕೆ ಹಾಕದೇ ಇರುವ ಅನೇಕ ಗ್ರಾಹಕರು ಮಾಲ್ ಪ್ರವೇಶಕ್ಕೆ ಅವಕಾಶ ಸಿಗದ ಮರಳಿ ಹೋದರು.
DAKSHINA KANNADA
ಅತಿಯಾದ ಇಂಟರ್ನೆಟ್ ಬಳಕೆಯಿಂದ ಮಕ್ಕಳ ಮೇಲೆ ಆಗುವ ಪರಿಣಾಮಗಳು
ಮಂಗಳೂರು: ಇಂದು ಮೊಬೈಲ್ ಇಲ್ಲದೇ ದಿನವಿಲ್ಲ. ಮೊಬೈಲ್ ಇದ್ದರೂ ಅದರಲ್ಲಿ ಇಂಟರ್ನೆಟ್ ಇಲ್ಲದೇ ಇದ್ದರೆ ಚಡಪಡಿಕೆ. ಅದರಲ್ಲೂ ಮಕ್ಕಳು ಅತಿಯಾದ ಇಂಟರ್ನೆಟ್ ಬಳಕೆಯ ಪರಿಣಾಮಗಳ ಬಗ್ಗೆ ಎಲ್ಲೆಡೆಯೂ ಮಾತುಗಳಾಗುತ್ತಿದೆ. ಕೊರೋನಾ ನಂತರ ಮೊಬೈಲ್ ಬಳಕೆ ಅನಿವಾರ್ಯವಾಯಿತು. ಈಗ ಸಾಮಾನ್ಯ ಜನರೂ ಸ್ಮಾರ್ಟ್ ಫೋನ್ ಬೇಕು ಎನ್ನುವಷ್ಟರ ಮಟ್ಟಿಗೆ ಪರಿಸ್ಥಿತಿ ತಲುಪಿಸಿತು.
ಮೊಬೈಲ್ ಸಿಕ್ಕ ತಕ್ಷಣ ಇಂಟರ್ನೆಟ್ ಅಥವಾ ಡಾಟಾಗಳೂ ಅಗತ್ಯವಾಗಿದೆ. ಈಗ ಆ ಡಾಟಾ ಬಳಕೆಯೇ ಮಕ್ಕಳ ಮೇಲೆ ಅಪಾಯಕಾರಿ ಪರಿಣಾಮ ಬೀರುತ್ತದೆ ಎಂದು ಅಧ್ಯಯನಗಳು ಹೇಳುತ್ತವೆ. ಮೊಬೈಲ್ ಇದ್ದರೆ ಮಕ್ಕಳು ಎಲ್ಲವನ್ನೂ ವೀಕ್ಷಣೆ ಮಾಡುತ್ತಾರೆ. ಇದರ ಪರಿಣಾಮ ಮಕ್ಕಳು ತಮ್ಮ ಪ್ರಾಯಕ್ಕಿಂತ ಹೆಚ್ಚಿನ ತಿಳುವಳಿಕೆಯನ್ನು ಪಡೆಯುತ್ತಾರೆ. ಇದು ಶಿಕ್ಷಣದ ಮೇಲಿನ ನಿರಾಸಕ್ತಿಗೆ ಕಾರಣವಾಗಬಹುದು.
ಮಿತಿಮೀರಿದ ಇಂಟರ್ನೆಟ್ ಬಳಕೆಯ ಪರಿಣಾಮ:
ಮಾನಸಿಕ ಆತಂಕ ಹೆಚ್ಚಾಗುತ್ತಿದೆ:
ಈಗಿನ ಬಹುತೇಕ ಮಕ್ಕಳು ಸಾಮಾಜಿಕ ಜಾಲತಾಣದಲ್ಲಿ ತಮ್ಮದೇ ಆದ ಸ್ನೇಹಿತರ ಗುಂಪನ್ನು ಕಟ್ಟಿಕೊಂಡು ಅದರಲ್ಲಿ ಬ್ಯುಸಿಯಾಗಿರುತ್ತಾರೆ. ತಾವು ಪೋಸ್ಟ್ ಮಾಡುವಾಗ ಅತ್ಯುತ್ತಮ ಗುಣಮಟ್ಟದ ಪಿಚ್ಚರ್ ಅಪ್ಲೋಡ್ ಮಾಡಬೇಕಾಗುತ್ತದೆ. ಈ ಸಂದರ್ಭದಲ್ಲಿ ಹಲವರು ಒಳ್ಳೆಯ ಕಾಮೆಂಟ್ ಗಳನ್ನು ಹಾಕಿದರೆ ಇನ್ನು ಕೆಲವರು ಕಾಲೆಳೆಯುವ ಮೆಸೇಜ್ ಕಳುಹಿಸುತ್ತಾರೆ. ಈ ಸಮಯದಲ್ಲಿ ಸಹಜವಾಗಿ ಮಾನಸಿಕ ಖಿನ್ನತೆ ಎದುರಾಗುವುದು ಖಂಡಿತ.
ನಿದ್ರಾಹೀನತೆ ಸಮಸ್ಯೆ:
ಇಂದು ಸಾಮಾಜಿಕ ಜಾಲತಾಣಗಳು ಯುವಕರ-ಯುವತಿಯರ ಮೇಲೆ ಪ್ರಭಾವ ಬೀರಿವೆ. ಅರ್ಧ ರಾತ್ರಿಯಲ್ಲಿ ನಿದ್ರೆಯಿಂದ ಎದ್ದು ಫೋನ್ ನೋಡುತ್ತಾರೆ. ತಾವು ಹಾಕಿದ ಪೋಸ್ಟ್ನ ಕಾಮೆಂಟ್ಸ್, ಲೈಕ್ಸ್ ಗಳನ್ನು ನೋಡಿ ಅವುಗಳಿಗೆ ಪ್ರತಿಕ್ರಿಯೆ ನೀಡುತ್ತಾರೆ. ಇದರಿಂದ ಅವರ ರಾತ್ರಿಯ ನಿದ್ರೆ ಹಾಳಾಗುತ್ತದೆ. ಹೀಗೆ ನಿದ್ರೆಯ ಗುಣಮಟ್ಟ ಕಡಿಮೆ ಆಗುವುದರ ಜೊತೆಗೆ ಮಾನಸಿಕವಾಗಿ ಸಾಕಷ್ಟು ಬದಲಾವಣೆಗಳು ಉಂಟಾಗುತ್ತದೆ.
ಸಂವಹನ ಸಂಪೂರ್ಣ ಕಡಿಮೆಯಾಗುತ್ತದೆ:
ಸ್ಮಾರ್ಟ್ ಫೋನ್ ಯುಗ ಆರಂಭವಾದ ನಂತರ ಮಕ್ಕಳು ಒಬ್ಬರನ್ನೊಬ್ಬರು ನೇರವಾಗಿ ನೋಡದೆ ಇದ್ದರೂ ಕೇವಲ ಫೋನ್ ಸಂಭಾಷಣೆಯ ಮೂಲಕ ಗಂಟೆಗಟ್ಟಲೆ ಕಾಲ ಕಳೆಯುತ್ತಾರೆ. ಇದರಿಂದ ತಮ್ಮ ಮನೆಯಲ್ಲಿರುವ ಪೋಷಕರ ಜೊತೆ, ಅಕ್ಕ – ಪಕ್ಕದಲ್ಲಿರುವ ಗೆಳೆಯರ ಜೊತೆ, ಮನೆಗೆ ಬಂದು ಹೋಗುವ ಬಂಧು ಮಿತ್ರರ ಜೊತೆ ಹೆಚ್ಚು ಬೆರೆಯಲು ಕಷ್ಟ ಆಗುತ್ತದೆ. ಹೀಗಾಗಿ ನಿಜ ಜೀವನವನ್ನು ಇಂದಿನ ಯುವ ಜನತೆ ಸಂಪೂರ್ಣವಾಗಿ ಬೆರೆತುಕೊಳ್ಳುವುದನ್ನು ಮರೆಯುತ್ತಿದ್ದಾರೆ.
ಆರೋಗ್ಯ ಸಮಸ್ಯೆಗಳು:
ಹೆಚ್ಚಿನ ಸ್ಮಾರ್ಟ್ಫೋನ್ ಬಳಕೆಯು ವಿದ್ಯಾರ್ಥಿಗಳಲ್ಲಿ ಕಣ್ಣಿನ ಆಯಾಸ, ಕುತ್ತಿಗೆ ಮತ್ತು ಬೆನ್ನು ನೋವುಗಳನ್ನು ನಿರ್ಮಾಣ ಮಾಡುತ್ತದೆ. ಇಷ್ಟು ಮಾತ್ರವಲ್ಲದೆ ಇದರೊಂದಿಗೆ ವಿವಿಧ ಆರೋಗ್ಯ ಸಮಸ್ಯೆ ಸಹ ಕಾಣಿಸಿಕೊಳ್ಳುತ್ತವೆ. ಅದೆಲ್ಲಕ್ಕೂ ಪ್ರಮುಖವಾಗಿ ಜಡ ಜೀವನಶೈಲಿಗೆ ಇದು ಕಾರಣವಾಗಬಹುದು. ದೈಹಿಕ ಚಟುವಟಿಕೆಯ ಮಟ್ಟವನ್ನು ಕಡಿಮೆ ಮಾಡುತ್ತದೆ.
ಹಾಗಾಗಿ ಶಿಕ್ಷಣತಜ್ಞರು ಮತ್ತು ಪೋಷಕರು ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್ಗಳನ್ನು ಜವಾಬ್ದಾರಿಯುತವಾಗಿ ಬಳಸಲು ಮಾರ್ಗದರ್ಶನ ನೀಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಬೇಕಿದೆ. ಶೈಕ್ಷಣಿಕ ಉದ್ದೇಶಗಳಿಗಾಗಿ ತಂತ್ರಜ್ಞಾನವನ್ನು ಬಳಸಿಕೊಳ್ಳುವಂತೆ ಪ್ರೋತ್ಸಾಹಿಸುವುದರ ಜೊತೆಗೆ ಆಫ್ಲೈನ್ ಚಟುವಟಿಕೆಗಳು ಮತ್ತು ಮುಖಾಮುಖಿ ಸಂವಹನಗಳನ್ನು ನಡೆಸುವುದು ಅತ್ಯಗತ್ಯವಾದ ಕೆಲಸವಾಗಿದೆ.
BELTHANGADY
ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಬಂಧನ..! ಶಾಸಕ ಪೂಂಜಾ ಪ್ರತಿಭಟನೆ
ಬೆಳ್ತಂಗಡಿ : ಅಕ್ರಮ ಕಲ್ಲಿನ ಗಣಿಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ರಾತೋರಾತ್ರಿ ಬಂಧಿಸಿದ್ದಾರೆ. ಆದ್ರೆ, ಈ ಬಂಧನವನ್ನು ವಿರೋಧಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಡೀ ರಾತ್ರಿ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಬೆಳ್ತಂಗಡಿಯ ಮೆಲಂತಬೆಟ್ಟು ಗ್ರಾಮದ ಮೂಡಲ ನಿವಾಸಿ ಸೂರಪ್ಪ ಪೂಜಾರಿ ಎಂಬವರ ಜಾಗಕ್ಕೆ ಮೇ 18 ರ ಸಂಜೆ ತಹಶೀಲ್ದಾರ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಅಕ್ರಮ ಗಣಿಗಾರಿಕೆಯ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಪೊಲೀಸರ ಜೊತೆಯಲ್ಲಿ ದಾಳಿಯನ್ನು ನಡೆಸಲಾಗಿತ್ತು. ಈ ವೇಳೆ ಸ್ಥಳದಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ವಿಚಾರ ಪತ್ತೆಯಾಗಿದ್ದು, ಸ್ಥಳದಿಂದ ಒಂದು ಹಿಟಾಚಿ, ಕಂಪ್ರೆಸರ್, ಕಾರು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿತ್ತು. ವಿಚಾರಣೆಯ ವೇಳೆ ಈ ಅಕ್ರಮ ಗಣಿಗಾರಿಕೆ ಬಿಜೆಪಿ ಮುಖಂಡ ಪ್ರಮೋದ್ ದಿಡುಪೆ ಹಾಗೂ ಯುವ ಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರದ್ದು ಎಂದು ಗೊತ್ತಾಗಿತ್ತು.
ಅಕ್ರಮ ಗಣಿಗಾರಿಕೆ ಸಾಬೀತಾದ ಹಿನ್ನೆಲೆಯಲ್ಲಿ ರಾತೋ ರಾತ್ರಿ ಶಶಿರಾಜ್ ಶೆಟ್ಟಿ ಅವರ ಮನೆಗೆ ನುಗ್ಗಿ ಅವರನ್ನು ಬಂಧಿಸಿದ್ದರು. ಈ ವಿಚಾರ ತಿಳಿದು ಠಾಣೆಗೆ ಆಗಮಿಸಿದ ಶಾಸಕ ಹರೀಶ್ ಪೂಂಜಾ, ಶಶಿರಾಜ್ ಶೆಟ್ಟಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ರು. ಆದ್ರೆ, ಶಾಸಕರ ಮಾತಿಗೆ ಒಪ್ಪದ ಪೊಲೀಸರು ಆರೋಪಿಯ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ. ಇದರಿಂದ ಆಕ್ರೋಶಿತರಾದ ಶಾಸಕ ಪೂಂಜಾ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿ : KARKALA: ಕಲ್ಲು ಸಾಗಾಟದ ಲಾರಿ ಪಲ್ಟಿ; ಇಬ್ಬರು ಕಾರ್ಮಿಕರು ಸಾ*ವು
ಪೊಲೀಸರ ಮೇಲೆ ಕಾಂಗ್ರೆಸ್ ಏಜೆಂಟರ ಆರೋಪ :
ರಾತೋರಾತ್ರಿ ಮನೆಗೆ ನುಗ್ಗಿದ ಪೊಲೀಸರು ಅಕ್ರಮದಲ್ಲಿ ಭಾಗಿಯಾಗದ ಬಿಜೆಪಿ ನಾಯಕರನ್ನು ಟಾರ್ಗೆಟ್ ಮಾಡಿದ್ದಾರೆ ಅಂತ ಶಾಸಕ ಪೂಂಜಾ ಆರೋಪಿಸಿದ್ದಾರೆ. ಪೊಲೀಸರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ನಮ್ಮ ಸರ್ಕಾರ ಬಂದಾಗ ನೋಡಿಕೊಳ್ಳುವುದಾಗಿ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮಗಳ ಮುಂದೆ ತಮ್ಮ ಆಕ್ರೋಶ ವ್ಯಕ್ತಪಡಿಸಿ ಪೊಲೀಸರ ಕ್ರಮವನ್ನು ಖಂಡಿಸಿದ್ದಾರೆ.
LATEST NEWS
ಹುಬ್ಬಳ್ಳಿ: ಅಂಜಲಿ ಅಂಬಿಗೇರ ಸಹೋದರಿ ಆತ್ಮಹ*ತ್ಯೆಗೆ ಯತ್ನ
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹ*ತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಆಕೆಯ ತಂಗಿ ಯಶೋಧಾ ಆತ್ಮಹ*ತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಮನೆಯಲ್ಲಿ ಫಿನಾಯಲ್ ಸೇವಿಸಿ ಜೀವಾಂತ್ಯಗೊಳಿಸಲು ಯತ್ನಿಸಿದ ಆಕೆಯನ್ನು ತಕ್ಷಣ ಕಿಮ್ಸ್ ಆಸ್ಪತ್ರೆಗೆ ದಾಖಲಾಯಿತು. ಸದ್ಯ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಅಂಜಲಿ ಅಂಬಿಗೇರ ಹ*ತ್ಯೆ ಖಂಡಿಸಿ ಶನಿವಾರ (ಮೇ 18) ರಂದು ಅಂಬಿಗರ ಚೌಡಯ್ಯ ಪೀಠದ ಶ್ರೀ ಶಾಂತಭೀಷ್ಮ ಸ್ವಾಮೀಜಿ, ದಿಂಗಾಲೇಶ್ವರ ಶ್ರೀ, ಮನಸೂರಿನ ಬಸವರಾಜ ದೇವರು ಶ್ರೀ ಸೇರಿದಂತೆ ವಿವಿಧ ಮಠಾಧೀಶರು ಮತ್ತು ಸಾರ್ವಜನಿಕರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯಲ್ಲಿ ಯಶೋಧಾ ಕೂಡ ಭಾಗಿಯಾಗಿದ್ದಳು.
ಪ್ರತಿಭಟನೆ ವೇಳೆ ಯಶೋಧಾ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಕೂಡಲೇ ಆಕೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿತ್ತು. ರಾತ್ರಿ ಪಿನಾಯಲ್ ಸೇವಿಸಿ ಜೀವಾಂತ್ಯಗೊಳಿಸಲು ಯತ್ನಿಸಿದ್ದಾಳೆ. ಅಕ್ಕನ ಸಾ*ವಿನಿಂದ ಮನನೊಂದಿದ್ದ ಯಶೋಧಾ ಆತ್ಮಹ*ತ್ಯೆಗೆ ಯತ್ನಿಸಿದ್ದಾಳೆ.
ಇದನ್ನೂ ಓದಿ : KARKALA: ಕಲ್ಲು ಸಾಗಾಟದ ಲಾರಿ ಪಲ್ಟಿ; ಇಬ್ಬರು ಕಾರ್ಮಿಕರು ಸಾ*ವು
ಏನಿದು ಪ್ರಕರಣ ?
ಮೇ 15 ರಂದು ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಬೆಳ್ಳಂಬೆಳಗ್ಗೆ ಯುವತಿಯ ಭೀಕರ ಹ*ತ್ಯೆ ನಡೆದಿತ್ತು. ಅಂಜಲಿ ಅಂಬಿಗೇರ (21) ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಆರೋಪಿ ಗಿರೀಶ್ ಅಲಿಯಾಸ್ ವಿಶ್ವ ಏಕಾಏಕಿ ಮನೆಗೆ ನುಗ್ಗಿದ್ದ. ಬಳಿಕ ಆಕೆಯ ಮನೆಯವರ ಎದುರೇ ಅಂಜಲಿಯನ್ನ ಭೀಕರವಾಗಿ ಹ*ತ್ಯೆಗೈದಿದ್ದ. ಪರಾರಿಯಾಗಿದ್ದ ಆರೋಪಿಯನ್ನು ಈಗಾಗಲೇ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.