DAKSHINA KANNADA
ಅನಿವಾಸಿ ಕನ್ನಡಿಗರ ಒಕ್ಕೂಟ ಯುಎಇ ಸದಸ್ಯರಿಂದ ಪ್ರಶಂಸನಾರ್ಹ ಕಾರ್ಯ..!
ಮಂಗಳೂರು: ಏಜೆಂಟರ ಮೋಸದ ಬಲೆಗೆ ಬಿದ್ದು ಅದೆಷ್ಟೋ ಮಂದಿ ಕಷ್ಟಪಟ್ಟು ದುಡಿದ ಹಣವನ್ನು ಅವರಿಗೆ ನೀಡಿ ಮೋಸಕ್ಕೆ ಬಲಿಯಾಗಿರುವ ನಿದರ್ಶನಗಳು ಹಲವಿವೆ.
ತಾಯ್ನಾಡಿನಿಂದ ನೂರಾರು ಕನಸುಗಳನ್ನು ಹೊತ್ತು ಬರುವ ಪ್ರವಾಸಿಗಳು ಇಂದು ಬಹುತೇಕ ಮಂದಿ.ಆದರೆ ಏಜೆಂಟರ ಮೋಸದ ಬಲೆಗೆ ಬಿದ್ದು ಅವರ ಕನಸಿನ ಗೋಪುರವೇ ನುಚ್ಚು ನೂರಾಗಿ ಹೋಗುತ್ತವೆ.
ಮೊಹಮ್ಮದ್ ಹುಸೈದ್ ಎಂಬವರು ಏಜೆಂಟ್ ಮುಖಾಂತರ ಕಂಪನಿಯಲ್ಲಿ ಉದ್ಯೋಗ ಆಹಾರ, ವಸತಿಯಂತಹ ಸೌಲಭ್ಯವಿರುವಂತಹ ವೀಸಾ, ಪಡೆದು ಏಜೆಂಟ್ ಮಾಹಿತಿಯಂತೆ ಯು.ಏ.ಇಗೆ ಬಂದಿದ್ದರು.
ಅಲ್ಲಿಗೆ ಹೋದ ನಂತರ ಇವರಿಗೆ ಮೋಸ ಹೋಗಿರುವ ವಿಷಯ ಅರಿವಾಗಿದೆ. ವಸತಿ ಸೌಲಭ್ಯವಿಲ್ಲದೆ ಪರದಾಡುವುದು ಒಂದೆಡೆಯಾದರೆ ಇತ್ತ ತುತ್ತು ಅನ್ನಕ್ಕೂ ಸಮಸ್ಯೆಯಾಗಿತ್ತು.
ಈ ಕುರಿತು ಸುದ್ಧಿ ತಿಳಿದ ತಕ್ಷಣ ಅನಿವಾಸಿ ಕನ್ನಡಿಗರ ಒಕ್ಕೂಟದ ಸದಸ್ಯರಾದ ಶಫಿ ಹಾಗೂ ಹ್ಯಾರಿಸ್ ಅವರ ಎಲ್ಲಾ ಸಮಸ್ಯೆಗೆ ಸ್ಪಂದಿಸಿ ಆಹಾರ, ವಸತಿ ಸೌಕರ್ಯವನ್ನು ಮಾಡಿ ಕೊಟ್ಟು, ತಾಯ್ನಾಡಿಗೆ ಪ್ರಯಾಣಿಸುವ ಟಿಕೆಟ್ ಕೊಟ್ಟು,ಮಾರ್ಚ್ 30 ರಂದು ಅವರನ್ನು ತಾಯ್ನಾಡಿಗೆ ಕಳುಹಿಸಿ ಕೊಟ್ಟಿದ್ದಾರೆ.
ಸದಸ್ಯರ ಈ ಕಾರ್ಯ ತುಂಬಾ ಶ್ಲಾಘನಾರ್ಹವಾಗಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುವುದಲ್ಲದೆ. ತಾಯ್ನಾಡಿಗೆ ಹಿಂತಿರುಗಿದ ಮೊಹಮ್ಮದ್ ಹುಸೈದ್ ಅನಿವಾಸಿ ಭಾರತೀಯ ಒಕ್ಕೂಟದ ಸದಸ್ಯರಿಗೆ ತುಂಬು ಹೃದಯದ ಕೃತಜ್ಞತೆ ಸೂಚಿಸಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಫಿರೋಜ್ ಹಾಗೂ ಝಹಿರ್ ಉಪಸ್ಥಿತರಿದ್ದರು..
ದೂರದ ಬೆಟ್ಟ ನುಣ್ಣಗೆ ಎನ್ನುವ ಗಾದೆ ಮಾತಿನಂತಾಗದೆ, ಏಜೆಂಟರ ಮೋಸದ ಬಲೆಗೆ ಬೀಳುವ ಮುನ್ನ ಸರಿಯಾಗಿ ಯೋಚಿಸಿ, ಕೊಲ್ಲಿ ರಾಷ್ಟ್ರದಲ್ಲಿರುವ ತಮ್ಮ ಸಂಬಧಿಕರಿಂದಲೋ, ಗೆಳೆಯರು ಅಥವಾ ಪರಿಚಯದವರ ಬಳಿ ಮಾಹಿತಿ ಪಡೆದು ಹೊರದೇಶಗಳಿಗೆ ನೌಕರಿಗಾಗಿ ತೆರಳುವುದೊಳಿತು ಅನ್ನೋದೆ ಎಲ್ಲರ ಆಶಯ..
BANTWAL
ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!
ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
- FILM5 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM5 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM6 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru5 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!