Connect with us

LATEST NEWS

ಭೀಕರ ಚಳಿಗೆ ಉತ್ತರ ಭಾರತ ತತ್ತರ: ನೂರಾರು ಜನ ಬಲಿ – ದೆಹಲಿಯಲ್ಲಿ ಜ.15ರವರೆಗೆ ಶಾಲೆಗಳಿಗೆ ರಜೆ ಘೋಷಣೆ..!

Published

on

ನವದೆಹಲಿ: ಕಳೆದ 15 ದಿನಗಳಿಂದ ಭೀಕರ ಚಳಿಗೆ ಉತ್ತರ ಭಾರತ ತತ್ತರಗೊಂಡಿದ್ದು ಜನ ಜೀವನವೇ ದುಸ್ತರವಾಗಿದೆ. ಭಾರಿ ಚಳಿ ಹಾಗೂ ಮಂಜು ಮುಸುಕಿದ ವಾತಾವರಣವು ಸದ್ದಿಲ್ಲದೆ ನೂರಾರು ಜನರನ್ನು ಬಲಿಪಡೆದುಕೊಂಡಿದೆ.  

ಭೀಕರ ಚಳಿ ಉತ್ತರಪ್ರದೇಶದ ಕಾನ್ಪುರ ಒಂದರಲ್ಲಿಯೇ 100 ಕ್ಕೂ ಅಧಿಕ ಜನರನ್ನು ಬಲಿ ಪಡೆದುಕೊಂಡಿದೆ.

ನಗರದ ಎಲ್’ಪಿಎಸ್ ಇನ್ ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ನೀಡಿರುವ ವರದಿ ಅನ್ವಯ ಕಳೆದೊಂದು ವಾರದಲ್ಲೇ ನಗರದಲ್ಲಿ 98 ಜನರು ಹೃದಯಾಘಾತ ಮತ್ತು ಮೆದುಳಿನ ಸಮಸ್ಯೆಯಿಂದಾಗಿ ಸಾವನ್ನಪ್ಪಿದ್ದಾರೆಂದು ಹೇಳಿದೆ.

ಮಂಜು ಮುಸುಕಿದ ವಾತಾವರಣ ಹಿನ್ನೆಲೆಯಲ್ಲಿ ಹಲವೆಡೆ ರೈಲು ಸಂಚಾರ ಹಾಗೂ ವಿಮಾನಗಳ ಹಾರಾಟದಲ್ಲಿ ವ್ಯತ್ಯಯಗಳು ಕಂಡು ಬಂದಿದೆ.

ಚಳಿಯ ತೀವ್ರತೆಗೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಜಮ್ಮು ಮತ್ತು ಕಾಶ್ಮೀರ, ದೆಹಲಿ, ಪಂಬಾಜ್, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ, ಉತ್ತರಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಉಷ್ಣಾಂಶ ಭಾರೀ ಕುಸಿದಿದ್ದು, ಸಾಮಾನ್ಯ ಜನಜೀವನದ ಮೇಲೆ ವ್ಯತ್ಯಯ ಬೀರಿದೆ.

ಮಂಜು ಮುಸುಕಿದ ವಾತಾವರಣವಿರುವುದರಿಂದ ಗೋಚರತೆ ಪ್ರಮಾಣ ಭಾರೀ ಇಳಿಕೆಯಾಗಿದ್ದು. ಉತ್ತಪ್ರದೇಶದ ಆಗ್ರಾ, ಪಂಜಾಬ್’ನ ಭಟಿಂಡಾದಲ್ಲಿ ಗೋಚರತೆಯು ಶೂನ್ಯಕ್ಕೆ ತಲುಪಿದೆ.

ಪರಿಣಾಮ ಭಾನುವಾರ 480ಕ್ಕೂ ಹೆಚ್ಚು ರೈಲುಗಳ ಓಡಾಟದಲ್ಲಿ ಏರುಪೇರಾಗಿದೆ. ಜೊತೆಗೆ 25 ವಿಮಾನಗಳ ಹಾರಾಟದಲ್ಲೂ ವ್ಯತ್ಯಯಗಳು ಕಂಡು ಬಂದಿವೆ.

ನಗರದಲ್ಲಿ ಕಳೆದ 15 ದಿನಗಳಿಂದ ಕನಿಷ್ಠ ಉಷ್ಣಾಂಶ 4ರಿಂದ 6 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿದೆ.

ಈ ನಡುವೆ ರಾಷ್ಟ್ರ ರಾಜಧಾನಿ ದೆಹಲಿಯ ಸಫ್ದರ್‍ಜಂಗ್‍ನಲ್ಲಿ ಕನಿಷ್ಠ ತಾಪಮಾನ 1.9 ಡಿಗ್ರಿ ಸೆಲ್ಸಿಯಸ್​ಗೆ ಕುಸಿದಿದೆ.

ಈ ಹಿನ್ನೆಲೆಯಲ್ಲಿ ಇಂದಿನಿಂದ ಜನವರಿ 15ರವರೆಗೆ ದೆಹಲಿಯಲ್ಲಿ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಈ ಬಗ್ಗೆ ದೆಹಲಿ ಸರ್ಕಾರದ ಸೂಚನೆಯಂತೆ ಶಿಕ್ಷಣ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದೆ.9ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪರ್ಯಾಯ ತರಗತಿಗಳು ನಡೆಯಲಿವೆ.

ರಜೆ ಇದ್ದರೂ ಶೈಕ್ಷಣಿಕ ಕಾರ್ಯಕ್ಷಮತೆ ಬಗ್ಗೆ ಗಮನಹರಿಸಲಾಗುವುದು ಎಂದು ದೆಹಲಿ ಶಿಕ್ಷಣ ನಿರ್ದೇಶನಾಲಯ ತಿಳಿಸಿದೆ.

ಇಂದು ಬೆಳಗ್ಗೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟವಾದ ಮಂಜು ಆವರಿಸಿರುವುದರಿಂದ ಜನ ತೀವ್ರ ಚಳಿಯಿಂದ ತತ್ತರಿಸಿ ಹೋಗಿದ್ದು, ಯಾರು ಮನೆಯಿಂದ ಹೊರಬರುತ್ತಿಲ್ಲ.

ಪ್ರತಿಕೂಲ ಹವಾಮಾನ ಮತ್ತು ಇತರ ಕಾರ್ಯಾಚರಣೆಯ ಸಮಸ್ಯೆಗಳಿಂದಾಗಿ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 20 ವಿಮಾನಗಳ ಹಾರಾಟದಲ್ಲಿ ವ್ಯತ್ಯವಾಗಿತ್ತು.

ಅಲ್ಲದೇ, ಮಂಜು ಕವಿದ ವಾತಾವರಣದಿಂದಾಗಿ 42 ರೈಲುಗಳು ಸಂಚಾರದಲ್ಲೂ ವ್ಯತ್ಯಯವಾಗಿದೆ ಎಂದು ಉತ್ತರ ರೈಲ್ವೆ ವಕ್ತಾರರು ತಿಳಿಸಿದ್ದಾರೆ.

ಚಳಿ ಹೆಚ್ಚಾಗುತ್ತಲೆ ಇದ್ದು, ಇನ್ನು ಎರಡು ದಿನಗಳವರೆಗೆ ಪರಿಸ್ಥಿತಿ ವಿಕೋಪಕ್ಕೆ ತೆರಳುವ ಸಾಧ್ಯತೆ ಇರುವುದರಿಂದ ಜನ ಎಚ್ಚರವಹಿಸಬೇಕು ಎಂದು ಸರ್ಕಾರ ಮನವಿ ಮಾಡಿಕೊಂಡಿದೆ.

DAKSHINA KANNADA

ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್‌ಗಳ ಹಗಲು ದರೋಡೆ..! ಏನಿದು ಘಟನೆ?

Published

on

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಸೇರಿದಂತೆ ಆಸುಪಾಸಿನ ಜನತೆಗೆ ಸರಕಾರಿ ಬಸ್ಸು ಸಿಬ್ಬಂದಿ ಹಗಲು ದರೋಡೆ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಕುಕ್ಕೆ ಕೆಎಸ್‌ಆರ್‌ಟಿಸಿ ಡಿಪೋದಿಂದ ಹೊರಡುವ ಸರಕಾರಿ ಬಸ್ ಸಿಬ್ಬಂದಿ ಹಗಲು ದರೋಡೆ ನಡೆಸುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಏಪ್ರಿಲ್ 28ರಂದು ಹುಬ್ಬಳ್ಳಿ ಕಡೆಯ ದಂಪತಿ ಕುಕ್ಕೆ ಸುಬ್ರಹ್ಮಣ್ಯದಿಂದ ಹುಬ್ಬಳ್ಳಿ‌ಗೆ ಹೋಗುವ ಸಲುವಾಗಿ ಬಿಎಂಟಿಸಿಯ KA 57 F 3463 ನಂಬರಿನ ಬಸ್ಸಿಗೆ ಹತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ ರೋಡ್ ಅಥವಾ ನೆಟ್ಟಣ ರೈಲ್ವೆ ನಿಲ್ದಾಣಕ್ಕೆ ಬಸ್ ಹೋಗುತ್ತದೆ ಎಂದು ಬಸ್ಸಿನ ಸಿಬ್ಬಂದಿ ಹೇಳಿದ್ದಾರೆ ಎನ್ನಲಾಗಿದೆ. ಈ ಭಾಗದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದ ಮತ್ತು ಬಸ್ಸಿನ ಸಿಬ್ಬಂದಿ ಹೇಳಿದ್ದನ್ನೇ ನಂಬಿದ ಹುಬ್ಬಳ್ಳಿ ಈ ದಂಪತಿ ಬೆಂಗಳೂರು ಮಹಾನಗರ ಪಾಲಿಕೆಯ ಡಿಪೋ ನಂಬರ್‌2ರ ಈ ಸರಕಾರಿ ಬಸ್ ಹತ್ತಿದ್ದಾರೆ. ಬಸ್ಸಿನ ನಿರ್ವಾಹಕ ಮಹಿಳೆಗೆ ಧರ್ಮಸ್ಥಳ ದಿಂದ ಸುಬ್ರಹ್ಮಣ್ಯ ಎಂಬುದಾಗಿ ಉಚಿತ ಟಿಕೆಟ್ ನೀಡಿದ್ದೂ, ಜೊತೆಯಲ್ಲಿ ಇದ್ದ ಪತಿ ಮತ್ತು ಮಕ್ಕಳಿಂದ 150 ರೂಪಾಯಿ ಹಣ ಪಡೆದು ಟಿಕೆಟ್ ನೀಡಿಲ್ಲ ಎನ್ನಲಾಗಿದೆ. ಇಷ್ಟು ಹಣ ಪಡೆದು ಇವರನ್ನು ಕುಕ್ಕೆ ಸುಬ್ರಹ್ಮಣ್ಯದಿಂದ ಸುಮಾರು ಮೂರು ಕಿಲೋ ಮೀಟರ್ ದೂರದ ಕೈಕಂಬ ಎಂಬಲ್ಲಿ ಬಸ್ಸಿಂದ ಇಳಿಸಿ ಹೋಗಿದ್ದಾರೆ. ನಂತರದಲ್ಲಿ ಈ ದಂಪತಿಗಳು ತಮ್ಮ ಮಕ್ಕಳೊಂದಿಗೆ ಸುಮಾರು ಆರು ಕಿಲೋ ಮೀಟರ್ ದೂರ ನಡೆದು ಕುಕ್ಕೆ ಸುಬ್ರಹ್ಮಣ್ಯ ರೋಡ್ (ನೆಟ್ಟಣ) ರೈಲು ನಿಲ್ದಾಣ ತಲುಪಿದ್ದಾರೆ. ನಂತರದಲ್ಲಿ ಸ್ಥಳೀಯರಲ್ಲಿ ತಮಗಾದ ಅನ್ಯಾಯದ ಬಗ್ಗೆ ಕಣ್ಣೀರಿಟ್ಟು ಇಂತಹ ಬಸ್ಸ್‌ಗಳ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

subrahmanya

ಇಂತಹ ಘಟನೆಗಳು ಈ ಭಾಗದಲ್ಲಿ ಪದೇಪದೇ ಮರುಕಳಿಸುತ್ತಿದ್ದೂ,ಈ ಬಗ್ಗೆ ಹಲವು ಬಾರಿ ಮೇಲಧಿಕಾರಿಗಳಿಗೆ ತಿಳಿಸಿದರೂ ಸಹಾ ಈ ತನಕ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.

ಮುಂದೆ ಓದಿ..;ನಾಯಿಗಳಿಗೂ ಬಂತು ಆಧಾರ್‌ ಕಾರ್ಡ್‌.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?

ಆದುದರಿಂದ ಈ ಭಾಗದಲ್ಲಿ ನಡೆಯುವ ಈ ಹಗಲು ದರೋಡೆಗೆ ಅಧಿಕಾರಿಗಳೂ ಸಾಥ್ ನೀಡುತ್ತಿದ್ದಾರೆ ಎನ್ನಲಾಗಿದೆ. ಆದುದರಿಂದ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಕ್ರಮಕ್ಕೆ ಮುಂದಾಗಬೇಕು ಎಂದು ರೈಲು ಬಳಕೆದಾರರ ವೇದಿಕೆ ನೆಟ್ಟಣ ಸಂಘವು ಆಗ್ರಹಿಸಿದೆ.

Continue Reading

LATEST NEWS

ಎರಡು ಬಾರಿ ಅಕ್ರಮವಾಗಿ ಗರ್ಭಿಣಿಯಾದ ಅಪ್ರಾಪ್ತೆ..! ಪೋಷಕರ ವಿರುದ್ಧ ದೂರು.!!ಮುಂದೇನಾಯ್ತು?

Published

on

ಮಹಾರಷ್ಟ್ರ: ಅಪ್ರಾಪ್ತ ಬಾಲಕಿಯೊಬ್ಬಳು ಎರಡು ಬಾರಿ ಅಕ್ರಮ ಗರ್ಭ ಧರಿಸಿ ಇದೀಗ ತನ್ನ ಪೋಷಕರ ವಿರುದ್ಧ ಠಾಣೆ ಮೆಟ್ಟಿಲೇರಿರುವ ಘಟನೆ ಮಹಾರಷ್ಟ್ರದಲ್ಲಿ ನಡೆದಿದೆ. ಹೌದು, 17 ವರ್ಷದ ಬಾಲಕಿಯೊಬ್ಬಳು ಬೇರೆ ಬೇರೆ ಯುವಕರಿಂದ ಎರಡು ಬಾರಿ ಗರ್ಭ ಧರಿಸಿದ್ದಾಳೆ.

pregnant

ಮೊದಲಾಗಿ ಅಕ್ರಮ ಸಂಬಂಧ ಹೊಂದಿದ್ದ ಪುರುಷನಿಂದ ಗರ್ಭ ಧರಿಸಿದ್ದಳು. ಈ ಮಗುವನ್ನು ಪೋಷಕರು ತನಗರಿಯದೆ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿ ಬಾಲಕಿ ಪೋಷಕರು ಸೇರಿದಂತೆ ಶಿಕ್ಷಕರು, ವಕೀಲರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ಮುಂದೆ ಓದಿ..; 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

ಪೋಷಕರು ನನ್ನನ್ನು ಮುಂಬೈಗೆ ಕರೆದುಕೊಂಡು ಹೋಗಿ ವಕೀಲರ ನೇತೃತ್ವದಲ್ಲಿ ಕೆಲವು ದಾಖಲೆ ಪತ್ರಗಳಿಗೆ ಸಹಿ ಹಾಕಿಸಿದ್ದಾರೆ.  7ನೇ ತರಗತಿಯ ಬಳಿಕ ಶಾಲೆಯಿಂದ ಹೊರಗುಳಿದ ಬಾಲಕಿಯ ನಿಯಮಿತ ತಪಾಸಣೆ ಮತ್ತು ಹೆರಿಗೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. 2021ರ ಸೆಪ್ಟೆಂಬರ್ 24ರಂದು ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಮರುದಿನ ಆ ಮಗುವನ್ನು ಸಾಮಾಜಿಕ ಕಾರ್ಯಕರ್ತರೊಬ್ಬರಿಗೆ ಹಸ್ತಾಂತರಿಸಿದ್ದು, ಹೆರಿಗೆಯ ಬಗ್ಗೆ ಯಾರಲ್ಲೂ ಮಾತನಾಡದಂತೆ ಆಕೆಗೆ ಪೋಷಕರು ಎಚ್ಚರಿಕೆ ನೀಡಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.

ಇನ್ನು ಹೆರಿಗೆ ಆದ ಆರು ತಿಂಗಳ ಬಳಿಕ ಅಪ್ರಾಪ್ತೆ ಮಗುವಿನ ತಂದೆಯನ್ನು ಸಂಪರ್ಕಿಸಿದ್ದಾಳೆ. ಈ ವೇಳೆ ಆತ ಅವಳನ್ನು ವರಿಸಳು ಸಿದ್ಧನಾಗಿದ್ದೇನೆ ಎಂದು ಹೇಳುತ್ತಾನೆ. ಆದರೆ ಮನೆಯವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ. ತನ್ನ ಪೋಷಕರು ಮಗುವನ್ನು 4 ಲಕ್ಷ ರೂ.ಗೆ ಮಾರಾಟ ಮಾಡಿದ್ದರು. ಈ ಪೈಕಿ ಪೋಷಕರು ಮತ್ತು ಚಿಕ್ಕಪ್ಪ ತಲಾ 1.5 ಲಕ್ಷ ರೂ. , ಸಾಮಾಜಿಕ ಕಾರ್ಯಕರ್ತೆ ಮತ್ತು ಇತರ ಕೆಲವರು ಉಳಿದ 1 ಲಕ್ಷ ರೂ.ಗಳನ್ನು ಹಂಚಿಕೊಂಡಿದ್ದಾರೆ ಎಂದು ಅಪ್ರಾಪ್ತೆ ದೂರಿನಲ್ಲಿ ತಿಳಿಸಿದ್ದಾಳೆ.

ಈ ಕುರಿತಾಗಿ ಪ್ರಶ್ನಿಸಿದಕ್ಕೆ ಅಜ್ಜಿ ಮನೆಗೆ ಕಳುಹಿಸಿದ್ದಾರೆ. ಇನ್ನು ಅಲ್ಲಿ ಈ ಬಾಲಕಿಗೆ 23ವರ್ಷದ ಯುವಕನ ಜೊತೆ ಮದುವೆ ಫಿಕ್ಸ್ ಮಾಡಲಾಗಿತ್ತು.  ಈ ವೇಳೆ ವಿವಾಹ ನಿಶ್ಚಯವಾಗಿದ್ದ ಯುವಕನ ಜೊತೆ ಲೈಂಗಿಕ ಸಂಪರ್ಕ ಹೊಂದುತ್ತಾಳೆ. ಬಳಿಕ ಬಾಲಕಿ ಮತ್ತೊಮ್ಮೆ ಗರ್ಭ ಧರಿಸುತ್ತಾಳೆ. ಅಷ್ಟಾಗಲೇ ವಿವಾಹ ನಿಶ್ಚಯವಾಗಿದ್ದ ಹುಡುಗನಿಗೆ ಇವಳ ಮೊದಲ ಮಗುವಿನ ಕುರಿತಾಗಿ ತಿಳಿದು ಇವಳನ್ನು ಮದುವೆಯಾಗಲು ನಿರಾಕರಿಸುತ್ತಾನೆ. ಬಳಿಕ ಅಜ್ಜಿ ಮನೆಯಿಂದ ಹೊರಟು ಬರ್ತಾಳೆ. ಪರಿಚಯಸ್ಥರ ನೆರವಿನಿಂದ ಗಂಡು ಮಗುವಿಗೆ ಜನ್ಮ ನೀಡಿದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದೀಗ ಪೋಷಕರು ಎರಡನೇ ಮಗವನ್ನೂ ಮಾರಾಟ ಮಾಡುವಂತೆ ಒತ್ತಡ ಹೇರುತ್ತಿದ್ದು ಈ ನಿಟ್ಟಿನಲ್ಲಿ ಬಾಲಕಿ ಪೊಲೀಸ್ ಮೆಟ್ಟಿಲೇರಿದ್ದಾಳೆ. ಇನ್ನು ಪೊಲೀಸರು ಮಾರಾಟ ಮಾಡಿದ್ದ ಹೆಣ್ಣು ಮಗುವನ್ನು ಹುಡುಕಲು ತನಿಖೆ ಆರಂಭಿಸಿದ್ದಾರೆ ಎನ್ನಲಾಗಿದೆ.

 

 

Continue Reading

FILM

ಕ್ಲಿಕ್ ಆಯ್ತು ‘ಪುಷ್ಪ ಪುಷ್ಪ’…ಅಲ್ಲು ಅರ್ಜುನ್ ಮಾಸ್ ಲುಕ್; ಸಕತ್  ಸ್ಟೆಪ್ಸ್ ಗೆ ಫ್ಯಾನ್ಸ್ ಫಿದಾ

Published

on

ಟಾಲಿವುಡ್ : ಸದ್ಯ ಟಾಲಿವುಡ್ ಅಂಗಳದಲ್ಲಿ ‘ಪುಷ್ಪ 2 : ದಿ ರೂಲ್‌’ ಸೌಂಡ್ ಜೋರಾಗಿದೆ. ಅಲ್ಲು ಅರ್ಜುನ್ ಸಿನಿಮಾ ಅಂದ್ರೆ ಹೇಳ್ಬೇಕಾ..ಮೊದಲೇ ಕ್ರೇಜ್ ಹೆಚ್ಚಿಸಿರುತ್ತೆ. ಪುಷ್ಪ ಈಗಾಗಲೇ ಫಸ್ಟ್ ಲುಕ್, ಟೀಸರ್ ಎಲ್ಲದರ ಮೂಲಕಾನೂ ನಿರೀಕ್ಷೆ ಹೆಚ್ಚಿಸುತ್ತಿದೆ. ಇದೀಗ ಹಾಡಿನ ಸರದಿ.


ಅಲ್ಲು ಅರ್ಜುನ್ ಮಾಸ್ ಲುಕ್; ಸಕತ್  ಸ್ಟೆಪ್ಸ್ :

‘ಪುಷ್ಪ 2 : ದಿ ರೂಲ್‌’ ಸಿನಿಮಾದ ಕುರಿತು ಯಾವ ಅಪ್ಡೇಟ್ ಕೊಡುತ್ತದೆ ಎಂದು ಅಲ್ಲು ಅರ್ಜುನ್ ಅಭಿಮಾನಿಗಳು ಕಾಯುತ್ತಿರುತ್ತಾರೆ. ಇದೀಗ ಮೇ 1 ರಂದು ಸಿನೆಮಾದ ಹಾಡೊಂದನ್ನು ರಿಲೀಸ್ ಮಾಡಲಾಗಿದೆ. ಪುಷ್ಪ ಪುಷ್ಪ ಅನ್ನೋ ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಡಿನಲ್ಲಿ ಅಲ್ಲು ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಮಾಸ್ ಲುಕ್ ನಲ್ಲಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಈ ಲುಕ್ ಗೆ ಫ್ಯಾನ್ಸ್ ಫಿದಾ ಆಗಿರೋದಂತೂ ಸುಳ್ಳಲ್ಲ. ಎಂದಿನಂತೆ ಅಲ್ಲು ಡ್ಯಾನ್ಸ್ ಸಕತ್ತಾಗಿಯೇ ಇದೆ. ಟೀ ಗ್ಲಾಸ್ ಹಿಡಿದು ಅಲ್ಲು ಅರ್ಜುನ್ ವ್ಹಾವ್ ಎಂದೆನಿಸುವಂತೆ ಸ್ಟೆಪ್ ಹಾಕಿದ್ದಾರೆ.

ಬಿಡುಗಡೆಯಾದ ಕೆಲವೇ ಘಂಟೆಯಲ್ಲಿ ಲಕ್ಷಾಂತರ ಜನರು ವೀಕ್ಷಣೆ ಮಾಡಿದ್ದಾರೆ. ಸದ್ಯ 9.7 ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಮೂಲಕ ಭಾರತದಲ್ಲಿನ ಸಂಗೀತ ಪಟ್ಟಿಯಲ್ಲಿ ಈ ಹಾಡು ಅಗ್ರಸ್ಥಾನ ಪಡೆದುಕೊಂಡಿದೆ.

ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಅಲ್ಲು ಅರ್ಜುನ್ ಪಾತ್ರದ ಮೇಲೆ ಚಿತ್ರಿಸಲಾಗಿದೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು ,ನಕಾಶ್ ಅಜೀಜ್, ದೀಪಕ್ ಬ್ಲೂ ದನಿಯಾಗಿದ್ದಾರೆ.  ‘ಪುಷ್ಪ ಪುಷ್ಪ’ ಹಾಡು ತೆಲುಗು, ಹಿಂದಿ, ತಮಿಳು, ಕನ್ನಡ, ಮಲಯಾಳಂ ಮತ್ತು ಬೆಂಗಾಲಿ ಎಂಬ ಆರು ಭಾಷೆಗಳಲ್ಲಿ ಬಿಡುಗಡೆಯಾಗಿದೆ.

ಇದನ್ನೂ ಓದಿ : 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

ತೆರೆಗೆ ಯಾವಾಗ?

ಅಲ್ಲು ಅರ್ಜುನ್ ಜೊತೆ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹಾದ್ ಫಾಸಿಲ್ , ಡಾಲಿ ಧನಂಜಯ್, ಜಗದೀಶ್ ಪ್ರತಾಪ್ ಭಂಡಾರಿ, ರಾವ್ ರಮೇಶ್, ಜಗಪತಿ ಬಾಬು, ಅಜಯ್, ಸುನಿಲ್, ಮೈಮ್ ಗೋಪಿ, ಅನಸೂಯಾ ಭಾರದ್ವಾಜ್, ಶ್ರೀತೇಜ್, ಬ್ರಹ್ಮಾಜಿ ಮೊದಲಾದವರು ಪಾತ್ರವಾಗಿದ್ದಾರೆ.

‘ಪುಷ್ಪ 2: ದಿ ರೂಲ್’ ಆಗಸ್ಟ್ 15, 2024 ರಂದು ವಿಶ್ವದಾದ್ಯಂತ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಪುಷ್ಪಾದಲ್ಲಿದ್ದ ಆಕ್ಷನ್‌ ಗಿಂತ ಹೆಚ್ಚಿನ ಆಕ್ಷನ್ ಪುಷ್ಪಾ 2 ನಲ್ಲಿ ಇರಲಿದೆಯಂತೆ. ಪುಷ್ಪಾದಲ್ಲಿ ಮರಗಳ್ಳತನದ ಕಥೆ ಇದ್ರೆ, ಪುಷ್ಪಾ2 ನಲ್ಲಿ ಕೆಂಪು ಮರಳು ಕಳ್ಳಸಾಗಾಟದ ಬಗ್ಗೆ ಹೇಳಲಾಗಿದೆ.

Continue Reading

LATEST NEWS

Trending