Connect with us

MANGALORE

NSS ಮಾತ್ರ ಜನರೊಂದಿಗೆ ಅತ್ಯಂತ ಆಪ್ತವಾಗಿ ಬದುಕುಲು ಸಾಧ್ಯ: ಪ್ರೊ.ಪಿ.ಎಲ್‌ ಧರ್ಮ

Published

on

ಮಂಗಳೂರು: ಎನ್‌ಎಸ್‌ಎಸ್‌ ಮಾತ್ರ ಜನರೊಂದಿಗೆ ಅತ್ಯಂತ ಆಪ್ತವಾಗಿ ಬದುಕುಲು ಸಾಧ್ಯ. ಎನ್‌ಎಸ್‌ಎಸ್‌ ಸ್ವಯಂ ಸೇವಕರನ್ನು ಈ ದೇಶದ ಆಸ್ತಿಗಳನ್ನಾಗಿ ಮಾಡಬೇಕಾದರೆ ಅವರಿಗೆ ಸರಕಾರದ ಕಾರ್ಯಕ್ರಮಗಳ ಪರಿಚಯ ಮಾಡಿಕೊಡಬೇಕು ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಪಿ.ಎಲ್‌ ಧರ್ಮ ಹೇಳಿದ್ದಾರೆ.


ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಇಂದು ನಡೆದ ವಿ.ವಿ ಮಟ್ಟದ ರಾಷ್ಟ್ರೀಯ ಸೇವಾ ಯೋಜನಾ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯ ಉದ್ದೇಶ ಸಮುದಾಯದಲ್ಲಿ ಕೆಲಸ ಮಾಡುವುದು. ಹಾಗಾಗಿ ಹಳ್ಳಿ ಹಳ್ಳಿಗೆ ಹೋಗಿ ಸೇವೆ ಮಾಡುತ್ತಿದ್ದೀರಿ.

ಎನ್‌ಎಸ್‌ಎಸ್‌ ಸ್ವಯಂ ಸೇವಕರನ್ನು ಈ ದೇಶದ ಆಸ್ತಿಗಳನ್ನಾಗಿ ಮಾಡಬೇಕಾದರೆ ಅವರಿಗೆ ಸರಕಾರದ ಕಾರ್ಯಕ್ರಮಗಳ ಪರಿಚಯ ಮಾಡಿಕೊಡಬೇಕು.

ಯಾಕೆಂದರೆ ಈ ದೇಶದಲ್ಲಿ ಸಂಘಸಂಸ್ಥೆಗಳು ದಾರಿ ತಪ್ಪಿವೆ. ಅಗತ್ಯ ಮಾಹಿತಿ ಇಲ್ಲದೇ ನಾವು ಹಲವು ಸೋಲುಗಳನ್ನು ಕಾಣುತ್ತಿದ್ದೇವೆ.

ಎನ್‌ಎಸ್‌ಎಸ್‌ ಮಾತ್ರ ಜನರೊಂದಿಗೆ ಅತ್ಯಂತ ಆಪ್ತವಾಗಿ ಬದುಕುಲು ಸಾಧ್ಯ. ಇಂದು ಸರಕಾರವು ಹೆಣ್ಣು ಮಕ್ಕಳಿಗೆ ಬಿಡುಗಡೆ ಮಾಡಿರುವ ಅನುದಾನವು ಸರಿಯಾಗಿ ಉಪಯೋಗವಾಗದೇ ಸರಕಾರಕ್ಕೆ ಮರಳಿ ಹೋಗುತ್ತಿದೆ.

ಅದಕ್ಕೆ ಮುಖ್ಯ ಕಾರಣ ಮಾಹಿತಿಯ ಕೊರತೆ. ಇದನ್ನು ಸರಿತೂಗಿಸುವ ಕೆಲಸವನ್ನು ಎನ್‌ಎಸ್‌ಎಸ್‌ ಮಾಡಬೇಕಿದೆ ಎಂದು ಹೇಳಿದರು.


ಇದೇ ವೇಳೆ ಪದ್ಮಶ್ರೀ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಸೇವಾ ಯೋಜನೆಯ ಪ್ರಾಂತೀಯ ನಿರ್ದೇಶನಾಲಯದ ಯೂತ್‌ ಆಫೀಸರ್‌ ವೈ.ಎಂ.ಉಪ್ಪಿನ್‌, ಮಂಗಳೂರು ನಗರ ಪೂರ್ವ ಸಂಚಾರಿ ಠಾಣಾಧಿಕಾರಿ ಗೋಪಾಲಕೃಷ್ಣ ಭಟ್‌, ವಿವಿ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ, ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ, ಹಾಗೂ ಕಾರ್ಯಕ್ರಮದ ಆಯೋಜಕರು ಡಾ. ನಾಗರತ್ನ ಕೆ.ಎ ಇದ್ದರು.


ಪ್ರಶಸ್ತಿ ಪುರಸ್ಕೃತರು
ಮಂಗಳೂರು ವಿಶ್ವವಿದ್ಯಾನಿಲಯ
ರಾಷ್ಟ್ರೀಯ ಸೇವಾ ಯೋಜನೆ 2018-19 ನೇ ಸಾಲಿನ ವಿಶ್ವವಿದ್ಯಾನಿಲಯ ಮಟ್ಟದ ಪ್ರಶಸ್ತಿ ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನಾ ಘಟಕ ಪ್ರಶಸ್ತಿಗೆ ಎಸ್.ಡಿ.ಎಂ.ಕಾಲೇಜು, ಉಜಿರೆ ಹಾಗೂ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು
ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರಶಸ್ತಿಗೆ ಗಣೇಶ್ ವಿ.ಶೆಂಡ್ಯೆ, ಎಸ್.ಡಿ.ಎಂ.ಕಾಲೇಜು, ಉಜಿರೆ, ಡಾ. ಭಾರತಿ ಪಿಲಾರ್, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು
ಅತ್ಯುತ್ತಮ ರಾಸೇಯೋಜನಾ ಸ್ವಯಂಸೇವಕ ಪ್ರಶಸ್ತಿಗೆ ಆದಿತ್ಯ, ಎಸ್.ಡಿ.ಎಂ.ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್‌ಮೆಂಟ್, ಮಂಗಳೂರು, ಕೃತಿ ವಿ.ರಾವ್, ಗೋವಿಂದದಾಸ ಕಾಲೇಜು, ಸುರತ್ಕಲ್


2019-20ನೇ ಸಾಲಿನ ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನಾ ಘಟಕ ಪ್ರಶಸ್ತಿಗೆ ಸರಕಾರಿ ಪ್ರಥಮ ದರ್ಜೆ ಕಾಲೇಜು, ಹೆಬ್ರಿ ಹಾಗೂ ಎಸ್.ಡಿ.ಎಂ. ಕಾಲೇಜು, ಉಜಿರೆ
ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರಶಸ್ತಿಗೆ ಬಾಲರಾಜ್ ಡಿ.ಬಿ. ಸರಕಾರಿ ಪ್ರಥಮ ದರ್ಜೆ ಕಾಲೇಜು, ಹೆಬ್ರಿ, ಆಶಾಕಿರಣ್, ಎಸ್.ಡಿ.ಎಂ. ಕಾಲೇಜು, ಉಜಿರೆ ಅತ್ಯುತ್ತಮ ರಾಸೇಯೋಜನಾ ಸ್ವಯಂಸೇವಕ ಪ್ರಶಸ್ತಿಗೆ ಸತ್ಯಪ್ರಸಾದ್ ಪಿ. ಎಸ್.ಡಿ.ಎಂ.ಕಾಲೇಜು, ಉಜಿರೆ ಹಾಗೂ ಬಿಂದಿಯಾ ಶೆಟ್ಟಿ, ಗೋವಿಂದದಾಸ ಕಾಲೇಜು, ಸುರತ್ಕಲ್.
2020-21 ನೇ ಸಾಲಿನ ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನಾ ಘಟಕ ಪ್ರಶಸ್ತಿಗೆ ಪಾದುವಾ ಕಾಲೇಜ್ ಆಪ್ ಕಾಮರ್ಸ್ ಆಂಡ್ ಮ್ಯಾನೇಜ್‌ಮೆಂಟ್,ನಂತೂರು ಹಾಗೂ ಕಾರ್ಮೆಲ್ ಕಾಲೇಜು, ಮೊಡಂಕಾಪು ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರಶಸ್ತಿಗೆ ರೋಶನ್ ವಿನ್ಸಿ ಸಾಂತುಮಾಯರ್, ಪಾದುವಾ ಕಾಲೇಜ್ ಆಫ್‌ ಕಾಮರ್ಸ್ ಆಂಡ್ ಮ್ಯಾನೇಜ್‌ಮೆಂಟ್, ನಂತೂರು, ಮಂಗಳೂರು, ಮಧುರ ಕೆ. ಕಾರ್ಮೆಲ್ ಕಾಲೇಜು, ಮೊಡಂಕಾಪು ಹಾಗೂ ಅತ್ಯುತ್ತಮ ರಾ.ಸೇ.ಯೋಜನಾ ಸ್ವಯಂಸೇವಕ ಪ್ರಶಸ್ತಿಗೆ ಪ್ರದೀಪ, ರುಕ್ಮಿಣಿ ಶೆಡ್ತಿ ಮೆಮೋರಿಯಲ್ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು, ಬಾರ್ಕೂರು ಹಾಗೂ ರಶ್ಮಿ ಜೆ.ಅಂಚನ್, ದ್ವಿತೀಯ ಬಿ.ಕಾಂ. ಗೋವಿಂದದಾಸ ಕಾಲೇಜು, ಸುರತ್ಕಲ್ ಇವರಿಗೆ ನೀಡಿ ಗೌರವಿಸಲಾಯಿತು.

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

DAKSHINA KANNADA

ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

Published

on

ನ್ಯೂಯಾರ್ಕ್‌ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್‌ಗಳನ್ನು ದಾಟಿ, ಹಂಪ್‌ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್‌ನ ಆನಂದ್ ಜಿಲ್ಲೆಯ ರೇಖಾಬೆನ್‌ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್‌ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.

 

ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.


ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್‌ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

Continue Reading

LATEST NEWS

Trending