Connect with us

    MANGALORE

    NSS ಮಾತ್ರ ಜನರೊಂದಿಗೆ ಅತ್ಯಂತ ಆಪ್ತವಾಗಿ ಬದುಕುಲು ಸಾಧ್ಯ: ಪ್ರೊ.ಪಿ.ಎಲ್‌ ಧರ್ಮ

    Published

    on

    ಮಂಗಳೂರು: ಎನ್‌ಎಸ್‌ಎಸ್‌ ಮಾತ್ರ ಜನರೊಂದಿಗೆ ಅತ್ಯಂತ ಆಪ್ತವಾಗಿ ಬದುಕುಲು ಸಾಧ್ಯ. ಎನ್‌ಎಸ್‌ಎಸ್‌ ಸ್ವಯಂ ಸೇವಕರನ್ನು ಈ ದೇಶದ ಆಸ್ತಿಗಳನ್ನಾಗಿ ಮಾಡಬೇಕಾದರೆ ಅವರಿಗೆ ಸರಕಾರದ ಕಾರ್ಯಕ್ರಮಗಳ ಪರಿಚಯ ಮಾಡಿಕೊಡಬೇಕು ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಪಿ.ಎಲ್‌ ಧರ್ಮ ಹೇಳಿದ್ದಾರೆ.


    ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಇಂದು ನಡೆದ ವಿ.ವಿ ಮಟ್ಟದ ರಾಷ್ಟ್ರೀಯ ಸೇವಾ ಯೋಜನಾ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯ ಉದ್ದೇಶ ಸಮುದಾಯದಲ್ಲಿ ಕೆಲಸ ಮಾಡುವುದು. ಹಾಗಾಗಿ ಹಳ್ಳಿ ಹಳ್ಳಿಗೆ ಹೋಗಿ ಸೇವೆ ಮಾಡುತ್ತಿದ್ದೀರಿ.

    ಎನ್‌ಎಸ್‌ಎಸ್‌ ಸ್ವಯಂ ಸೇವಕರನ್ನು ಈ ದೇಶದ ಆಸ್ತಿಗಳನ್ನಾಗಿ ಮಾಡಬೇಕಾದರೆ ಅವರಿಗೆ ಸರಕಾರದ ಕಾರ್ಯಕ್ರಮಗಳ ಪರಿಚಯ ಮಾಡಿಕೊಡಬೇಕು.

    ಯಾಕೆಂದರೆ ಈ ದೇಶದಲ್ಲಿ ಸಂಘಸಂಸ್ಥೆಗಳು ದಾರಿ ತಪ್ಪಿವೆ. ಅಗತ್ಯ ಮಾಹಿತಿ ಇಲ್ಲದೇ ನಾವು ಹಲವು ಸೋಲುಗಳನ್ನು ಕಾಣುತ್ತಿದ್ದೇವೆ.

    ಎನ್‌ಎಸ್‌ಎಸ್‌ ಮಾತ್ರ ಜನರೊಂದಿಗೆ ಅತ್ಯಂತ ಆಪ್ತವಾಗಿ ಬದುಕುಲು ಸಾಧ್ಯ. ಇಂದು ಸರಕಾರವು ಹೆಣ್ಣು ಮಕ್ಕಳಿಗೆ ಬಿಡುಗಡೆ ಮಾಡಿರುವ ಅನುದಾನವು ಸರಿಯಾಗಿ ಉಪಯೋಗವಾಗದೇ ಸರಕಾರಕ್ಕೆ ಮರಳಿ ಹೋಗುತ್ತಿದೆ.

    ಅದಕ್ಕೆ ಮುಖ್ಯ ಕಾರಣ ಮಾಹಿತಿಯ ಕೊರತೆ. ಇದನ್ನು ಸರಿತೂಗಿಸುವ ಕೆಲಸವನ್ನು ಎನ್‌ಎಸ್‌ಎಸ್‌ ಮಾಡಬೇಕಿದೆ ಎಂದು ಹೇಳಿದರು.


    ಇದೇ ವೇಳೆ ಪದ್ಮಶ್ರೀ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಸೇವಾ ಯೋಜನೆಯ ಪ್ರಾಂತೀಯ ನಿರ್ದೇಶನಾಲಯದ ಯೂತ್‌ ಆಫೀಸರ್‌ ವೈ.ಎಂ.ಉಪ್ಪಿನ್‌, ಮಂಗಳೂರು ನಗರ ಪೂರ್ವ ಸಂಚಾರಿ ಠಾಣಾಧಿಕಾರಿ ಗೋಪಾಲಕೃಷ್ಣ ಭಟ್‌, ವಿವಿ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ, ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ, ಹಾಗೂ ಕಾರ್ಯಕ್ರಮದ ಆಯೋಜಕರು ಡಾ. ನಾಗರತ್ನ ಕೆ.ಎ ಇದ್ದರು.


    ಪ್ರಶಸ್ತಿ ಪುರಸ್ಕೃತರು
    ಮಂಗಳೂರು ವಿಶ್ವವಿದ್ಯಾನಿಲಯ
    ರಾಷ್ಟ್ರೀಯ ಸೇವಾ ಯೋಜನೆ 2018-19 ನೇ ಸಾಲಿನ ವಿಶ್ವವಿದ್ಯಾನಿಲಯ ಮಟ್ಟದ ಪ್ರಶಸ್ತಿ ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನಾ ಘಟಕ ಪ್ರಶಸ್ತಿಗೆ ಎಸ್.ಡಿ.ಎಂ.ಕಾಲೇಜು, ಉಜಿರೆ ಹಾಗೂ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು
    ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರಶಸ್ತಿಗೆ ಗಣೇಶ್ ವಿ.ಶೆಂಡ್ಯೆ, ಎಸ್.ಡಿ.ಎಂ.ಕಾಲೇಜು, ಉಜಿರೆ, ಡಾ. ಭಾರತಿ ಪಿಲಾರ್, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು
    ಅತ್ಯುತ್ತಮ ರಾಸೇಯೋಜನಾ ಸ್ವಯಂಸೇವಕ ಪ್ರಶಸ್ತಿಗೆ ಆದಿತ್ಯ, ಎಸ್.ಡಿ.ಎಂ.ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್‌ಮೆಂಟ್, ಮಂಗಳೂರು, ಕೃತಿ ವಿ.ರಾವ್, ಗೋವಿಂದದಾಸ ಕಾಲೇಜು, ಸುರತ್ಕಲ್


    2019-20ನೇ ಸಾಲಿನ ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನಾ ಘಟಕ ಪ್ರಶಸ್ತಿಗೆ ಸರಕಾರಿ ಪ್ರಥಮ ದರ್ಜೆ ಕಾಲೇಜು, ಹೆಬ್ರಿ ಹಾಗೂ ಎಸ್.ಡಿ.ಎಂ. ಕಾಲೇಜು, ಉಜಿರೆ
    ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರಶಸ್ತಿಗೆ ಬಾಲರಾಜ್ ಡಿ.ಬಿ. ಸರಕಾರಿ ಪ್ರಥಮ ದರ್ಜೆ ಕಾಲೇಜು, ಹೆಬ್ರಿ, ಆಶಾಕಿರಣ್, ಎಸ್.ಡಿ.ಎಂ. ಕಾಲೇಜು, ಉಜಿರೆ ಅತ್ಯುತ್ತಮ ರಾಸೇಯೋಜನಾ ಸ್ವಯಂಸೇವಕ ಪ್ರಶಸ್ತಿಗೆ ಸತ್ಯಪ್ರಸಾದ್ ಪಿ. ಎಸ್.ಡಿ.ಎಂ.ಕಾಲೇಜು, ಉಜಿರೆ ಹಾಗೂ ಬಿಂದಿಯಾ ಶೆಟ್ಟಿ, ಗೋವಿಂದದಾಸ ಕಾಲೇಜು, ಸುರತ್ಕಲ್.
    2020-21 ನೇ ಸಾಲಿನ ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನಾ ಘಟಕ ಪ್ರಶಸ್ತಿಗೆ ಪಾದುವಾ ಕಾಲೇಜ್ ಆಪ್ ಕಾಮರ್ಸ್ ಆಂಡ್ ಮ್ಯಾನೇಜ್‌ಮೆಂಟ್,ನಂತೂರು ಹಾಗೂ ಕಾರ್ಮೆಲ್ ಕಾಲೇಜು, ಮೊಡಂಕಾಪು ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರಶಸ್ತಿಗೆ ರೋಶನ್ ವಿನ್ಸಿ ಸಾಂತುಮಾಯರ್, ಪಾದುವಾ ಕಾಲೇಜ್ ಆಫ್‌ ಕಾಮರ್ಸ್ ಆಂಡ್ ಮ್ಯಾನೇಜ್‌ಮೆಂಟ್, ನಂತೂರು, ಮಂಗಳೂರು, ಮಧುರ ಕೆ. ಕಾರ್ಮೆಲ್ ಕಾಲೇಜು, ಮೊಡಂಕಾಪು ಹಾಗೂ ಅತ್ಯುತ್ತಮ ರಾ.ಸೇ.ಯೋಜನಾ ಸ್ವಯಂಸೇವಕ ಪ್ರಶಸ್ತಿಗೆ ಪ್ರದೀಪ, ರುಕ್ಮಿಣಿ ಶೆಡ್ತಿ ಮೆಮೋರಿಯಲ್ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು, ಬಾರ್ಕೂರು ಹಾಗೂ ರಶ್ಮಿ ಜೆ.ಅಂಚನ್, ದ್ವಿತೀಯ ಬಿ.ಕಾಂ. ಗೋವಿಂದದಾಸ ಕಾಲೇಜು, ಸುರತ್ಕಲ್ ಇವರಿಗೆ ನೀಡಿ ಗೌರವಿಸಲಾಯಿತು.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending