Connect with us

LATEST NEWS

ನಿಧಿಗಾಗಿ ‘ಮಹಿಳೆಯ ಬೆತ್ತಲೆ ಪೂಜೆ’: ಹೆಂಡತಿ ಒಪ್ಪದಕ್ಕೆ ಕೆಲಸದವಳ ನಗ್ನ ಪೂಜೆ-6 ಜನರ ಬಂಧನ

Published

on

ರಾಮನಗರ: ನಾನು ಪೂಜೆ ಮಾಡುತ್ತಿರುವ ಸಂದರ್ಭ ಮಹಿಳೆ ನಗ್ನವಾಗಿ ನಿಂತರೆ ನಿನ್ನ ಭೂಮಿಯಲ್ಲಿ ಅಡಗಿರುವ ನಿಧಿ ತನ್ನಿಂದ ತಾನಾಗಿಯೇ ಮೇಲೆ ಬರುತ್ತದೆ ಎಂದು ಮಹಿಳೆಯ ಬೆತ್ತಲೆ ಪೂಜೆ ನಡೆಸುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.


ಮಹಿಳೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡು ಮೂಲದ ಪಾರ್ಥಸಾರಥಿ, ನಾಗರಾಜು, ಶಶಿಕುಮಾರ್, ಲೋಕೇಶ್, ಮೋಹನ್, ಲಕ್ಷ್ಮಿನರಸಪ್ಪ ಬಂಧಿತರು.

ಪೂಜೆ ನೆಪದಲ್ಲಿ ಬಲಿಯಾಗುತ್ತಿದ್ದ ಯಾದಗಿರಿ ಮೂಲದ ಕೂಲಿ ಕಾರ್ವಿುಕ ಮಹಿಳೆಯನ್ನು ರಕ್ಷಿಸಲಾಗಿದೆ.
ಘಟನೆ ಹಿನ್ನೆಲೆ
ಶ್ರೀನಿವಾಸ್ ಎಂಬಾತ ತನ್ನೂರಿನಲ್ಲಿ ಏಳಿಗೆ ಕಂಡಿರಲಿಲ್ಲ. ಜಮೀನು ಕೈತಪ್ಪಿತ್ತು. ಹೀಗಾಗಿ ಊರು ಬಿಟ್ಟು ಹೆಂಡತಿ ತವರು (ಬನ್ನೂರು) ಸೇರಿಕೊಂಡಿದ್ದ.

6 ತಿಂಗಳ ಹಿಂದೆ ಶ್ರೀರಂಗಪಟ್ಟಣದಲ್ಲಿ ಸಂಬಂಧಿಯೊಬ್ಬರ ಸಾವಿಗೆ ಹೋಗಿದ್ದಾಗ ಅಲ್ಲಿನ ಮೇಸ್ತ್ರಿ ಪಾರ್ಥಸಾರಥಿ ಪರಿಚಯವಾಗಿತ್ತು. ಮನೆಯಲ್ಲಿ ನಿಧಿ ಇದ್ದರೆ, ಹೀಗೆಲ್ಲ ಆಗುತ್ತದೆ.

ನಮ್ಮ ಕಡೆ ಪೂಜಾರಿಯೊಬ್ಬರು ಇದ್ದಾರೆ. ಅವರ ಬಳಿ ಮಾತನಾಡುತ್ತೇನೆಂದು ಶಶಿಕುಮಾರ್ ಪರಿಚಯಿಸಿದ್ದ.

ಅದರಂತೆ ಆ ಪೂಜಾರಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದ, ಆ ಪ್ರಕಾರ ಮನೆಯೊಳಗೆ ಗುಂಡಿಯೊಂದನ್ನು ಅಗೆದು ಅಲ್ಲಿ ಪೂಜೆ ನಡೆಯಬೇಕು.

ಈ ವೇಳೆ ಮನೆಯ ಯಜಮಾನನ ಪತ್ನಿ ಬೆತ್ತಲಾಗಿ ನಿಲ್ಲಬೇಕೆಂದು ಪೂಜಾರಿ ಹೇಳಿದ್ದನು. ಇದನ್ನು ಶ್ರೀನಿವಾಸ್ ತನ್ನ ಪತ್ನಿಗೆ ಒತ್ತಾಯಿಸಿದ್ದಾನೆ. ಆದರೆ ಆಕೆ ಬೆತ್ತಲಾಗಲು ಒಪ್ಪಲಿಲ್ಲ.
ಕೂಲಿಯಾಳನ್ನು 50 ಸಾವಿರ ಕೊಟ್ಟು ತಂದಿದ್ದರು
ನಿಧಿಯ ಮೋಹ ಬಿಡದ ಶ್ರೀನಿವಾಸ್ ತನ್ನ ಜೊತೆಗಿದ್ದ ಪಾರ್ಥಸಾರಥಿಯ ಮನೆಯಲ್ಲಿದ್ದ ಕೆಲಸದಾಳು ಸುಜಾತಳನ್ನು 50 ಸಾವಿರ ರೂಪಾಯಿ ಕೊಟ್ಟು ಬೆತ್ತಲು ಪೂಜೆಗೆ ಬುಕ್‌ ಮಾಡಿಕೊಂಡಿದ್ದ,

ಅದರಂತೆ ನ.2ರಂದು ಸುಜಾತ ಬೆತ್ತಲೆ ಪೂಜೆಗೆ ತನ್ನ 4 ವರ್ಷದ ಹೆಣ್ಣು ಮಗುವಿನೊಂದಿಗೆ ಬಂದಿದ್ದಾಳೆ.

ಆದರೆ ಕೆಲಸದಾಳು ಸುಜಾತ ನೋಡಲು ಕಪ್ಪು ಸುಂದರಿ, ಅದು ಪೂಜಾರಿ ಹಿಡಿಸಲಿಲ್ಲ. ಇದರಿಂದ ಅಸಮಾಧಾನ ಮಾಡಿಕೊಂಡ ಪೂಜಾರಿ ಸುಜಾತಾ ನೋಡಲು ಸುಂದರವಾಗಿಲ್ಲ ಆದ್ದರಿಂದ ಮತ್ತೊಂದು ಸಲ ಇಂತಹವನ್ನೆಲ್ಲ ಬಿಟ್ಟು ಸುಂದರ ಹೆಣ್ಣನ್ನು ಕರೆತನ್ನಿ ಆಗ ಪೂಜೆ ಮಾಡುತ್ತೇನೆ ಎಂದಿದ್ದಾನೆ.

ಅಷ್ಟರೊಳಗೆ ಪೊಲೀಸರು ದಾಳಿ ನಡೆಸಿದ್ದಾರೆ. ಮನೆ ಮಾಲೀಕನ ವಿರುದ್ಧ ವಂಚನೆ, ಮೌಢ್ಯ ನಿಷೇಧ ಕಾಯ್ದೆ ಉಲ್ಲಂಘನೆ, ಮಹಿಳೆ ಮೇಲಿನ ದೌರ್ಜನ್ಯ ಸೇರಿ ವಿವಿಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಟೈಟ್‌ ಸೆಕ್ಯೂರಿಟಿ ಇತ್ತು
ಭೂಹಳ್ಳಿಯಲ್ಲಿಯೇ ಶ್ರೀನಿವಾಸ್ ಅವರದು ದೊಡ್ಡ ಮನೆ. ನಿಧಿಗಾಗಿ ಕಳೆದ ಹುಣ್ಣಿಮೆಯಿಂದಲೂ ಪೂಜೆ ನಡೆಯುತ್ತಲೇ ಇತ್ತು.

ರಾತ್ರಿ ವೇಳೆ ತಮಿಳುನಾಡು ನೋಂದಣಿ ಸಂಖ್ಯೆಯ ವಾಹನಗಳಲ್ಲಿಯೇ ಬರುತ್ತಿದ್ದ ಇವರು, ತಮ್ಮೊಂದಿಗೆ ಪುಡಿ ರೌಡಿಗಳನ್ನು ಕರೆತಂದು ಗ್ರಾಮದಲ್ಲಿ ಕಾವಲು ಕಾಯಿಸುತ್ತಿದ್ದರು.

ಬೆಳಗ್ಗೆ ಆಗುತ್ತಿದ್ದಂತೆ ಎಲ್ಲರೂ ಸದ್ದಿಲ್ಲದೆ ಜಾಗ ಖಾಲಿ ಮಾಡುತ್ತಿದ್ದರು.

DAKSHINA KANNADA

ಪ್ರಜ್ವಲ್‌ ಅಶ್ಲೀಲ್ ವಿಡಿಯೋ ಡಿಲೀಟ್ ಮಾಡಿ..! ಎಸ್‌ಐಟಿ ವಾರ್ನಿಂಗ್..!

Published

on

ಮಂಗಳೂರು : ಸದ್ಯ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಕರಣ ಬೆಂಬತ್ತಿರುವ ಎಸ್ ಐ ಟಿ ಖಡಕ್ ವಾರ್ನ್ ಮಾಡಿದೆ. ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡದಂತೆ ಹೇಳಿದೆ. ಅಷ್ಟೇ ಅಲ್ಲದೆ, ಅಶ್ಲೀಲ ವಿಡಿಯೋ ಮೊಬೈಲ್ ನಲ್ಲಿ ಸ್ಟೋರ್ ಮಾಡಿಕೊಂಡಿದ್ದರೆ, ಒಂದು ವೇಳೆ ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೇ, ಯಾವುದೇ ಅಶ್ಲೀಲ ವೀಡಿಯೋ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಇದ್ದರೆ ಅದರ ರಚನಕಾರರು ನೀವು ಎಂದು ಪರಿಗಣಿಸಿ ಕ್ರಿಮಿನಲ್ ಕೇಸ್ ಬೀಳುತ್ತದೆ. ಆದ್ದರಿಂದ, ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

BANTWAL

ಸಾಲದ ಶೂಲಕ್ಕೆ ಜೀವಾಂತ್ಯಗೊಳಿಸಿದ ಯುವಕ…!

Published

on

ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ‌ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃ*ತದೇಹದ ಪತ್ತೆಯಾಗಿದೆ.


ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ನೋವಿನಲ್ಲೂ ಇದ್ದ ಎಂದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

WATCH : ಕೋಳಿಗೂ ಯುವತಿಗೂ ನಡುವೆ ಫೈಟ್; ಗೆದ್ದವರು ಯಾರು? ವೀಡಿಯೋ ವೈರಲ್

Published

on

ಮಂಗಳೂರು : ಇದೊಂತರ ಸೋಶಿಯಲ್ ಮೀಡಿಯಾ ಯುಗ. ಇಲ್ಲಿ ಎಲ್ಲವೂ ವೈರಲ್ ವೈರಲ್. ದಿನನಿತ್ಯ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋಗಳು ಸದ್ದು ಮಾಡುತ್ತಲೇ ಇರುತ್ತವೆ. ಮನುಷ್ಯರದ್ದೇ ಆಗಿರಲಿ, ಪ್ರಾಣಿ, ಪಕ್ಷಿಗಳದೇ ಆಗಿರಲಿ ಇಲ್ಲಿ ಸುದ್ದಿ ಆಗುತ್ತಲೇ ಇರುತ್ತದೆ. ಸದ್ಯ ಅಂತಹುದೇ ವೀಡಿಯೋವೊಂದು ವೈರಲ್ ಆಗುತ್ತಿದೆ. ಈ ವೀಡಿಯೋದಲ್ಲಿ ಕೋಳಿ ಹಾಗೂ ಯುವತಿಯ ನಡುವೆ ಫೈಟ್ ನಡೆದಿದೆ.


ವೀಡಿಯೋದಲ್ಲಿ ಏನಿದೆ?

ವೀಡಿಯೋ ಆರಂಭದಲ್ಲಿ ಯುವತಿಯೊಬ್ಬಳು ತನ್ನಷ್ಟಕ್ಕೆ ಬರುತ್ತಿರುವುದನ್ನು ಕಾಣಬಹುದು. ಈ ವೇಳೆ, ಪಕ್ಕದಲ್ಲಿದ್ದ ಕೋಳಿ ಸುಖಾಸುಮ್ಮನೆ ಆಕೆಯ ಕಾಲಿಗೆ ಬಂದು ಕುಕ್ಕುತ್ತದೆ. ಇದರಿಂದ ಕೋಪಗೊಂಡ ಯುವತಿ ಆ ಕೋಳಿಗೆ ಒದೆಯುತ್ತಾಳೆ. ಅದು ಮತ್ತೆ ಅಟ್ಯಾಕ್ ಮಾಡಲು ಬಂದಾಗ, ಕೈಯಿಂದ ಚೆನ್ನಾಗಿ ಬಾರಿಸುತ್ತಾಳೆ. ಆದರೆ, ಆ ಕೋಳಿ ಹೆದರಿ ಓಡುವುದಿಲ್ಲ. ಬದಲಿಗೆ ಅದು ಮತ್ತೆ ದಾಳಿ ನಡೆಸುತ್ತದೆ.

ಆಗ ಕೋಪದಲ್ಲಿ ಯುವತಿ ಅದಕ್ಕೆ ಒಂದೇಟು ಬಾರಿಸುತ್ತಾಳೆ. ಅವಳಿಗೆ ಇದರಿಂದ ಸಿಟ್ಟು ಬರುತ್ತದೆ. ಅದನ್ನು ಎತ್ತಿ ನೆಲಕ್ಕೆ ಕುಕ್ಕುತ್ತಾಳೆ. ಅಯ್ಯೋ ಓಡೋಗ್ಹೋಣ ಅಂತ ಯೋಚಿಸದ ಕೋಳಿ ಮತ್ತೆ ಅಟ್ಯಾಕ್ ಗೆ ಬರುತ್ತದೆ. ಆಗ ಆಕೆ ತಿರುಗಿಸಿ ತಿರುಗಿಸಿ ಎಸೆಯುತ್ತಾಳೆ. ಆದರೆ, ಅದು ಮತ್ತೆ ಎದ್ದು ಬರುತ್ತೆ. ಆಕೆ ಅಲ್ಲೇ ಸಿಕ್ಕಿದ ವಸ್ತುವಿನಿಂದ ಹೊಡೆಯುತ್ತಾಳೆ.

ಇದನ್ನೂ ಓದಿ : ತಾಯಿಯನ್ನು ಕೊಂ*ದ ಮಗನಿಗೆ ವಿಶಿಷ್ಟ ಶಿಕ್ಷೆ; ಅಪರೂಪದ ಆದೇಶ ನೀಡಿದ ಹೈಕೋರ್ಟ್

ಸದ್ಯ ಈ ವೀಡಿಯೋ ವೈರಲ್ ಆಗುತ್ತಿದೆ. ಮಿಲಿಯನ್ ಗಟ್ಟಲೆ ವೀಕ್ಷಣೆ ಪಡೆದಿದೆ. ವೀಡಿಯೋ ನೋಡಿದವರು ಕಮೆಂಟ್ಸ್ ಮಾಡುತ್ತಿದ್ದು, ಚಿಕನ್ ವರ್ಸಸ್ ಚಿಕ್ ಎಂದು ಕಮೆಂಟ್ಸ್ ಮಾಡಿದ್ದಾರೆ. ಸೋಲೊಪ್ಪಿಕೊಳ್ಳಬೇಡ ಕೋಳಿ, ನೀನು ಆಕೆಯನ್ನು ಸೋಲಿಸಬಲ್ಲೆ, ಎಂತಹ ಫೈಟ್ ಇದು, ಚಿಕನ್ ಟಕ್ಕರ್ ಎಂದು ಕಮೆಂಟ್ಸ್ ಮಾಡುತ್ತಿದ್ದಾರೆ.

 

 

Continue Reading

LATEST NEWS

Trending