Connect with us

BANTWAL

ಅಧಿಕಾರಿಗಳು 24 ಗಂಟೆಯೂ ಸಾರ್ವಜನಿಕರ ಕರೆ ಸ್ವೀಕರಿಸಬೇಕು-ಶಾಸಕ ರಾಜೇಶ್ ನಾಯ್ಕ್‌

Published

on

ಬಂಟ್ವಾಳ: ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ದಿನದ 24 ಗಂಟೆಯೂ ಸಾರ್ವಜನಿಕರ ಪೋನ್ ಕರೆ ಸ್ವೀಕರಿಸಬೇಕು, ಯಾವುದೇ ಕಾರಣಕ್ಕೆ ಸರಕಾರಿ ಸಿಮ್ ಹೊಂದಿರುವ ಮೊಬೈಲ್ ಪೋನ್ ಸ್ವಿಚ್ ಆಪ್ ಆಗಿರಕೂಡದು, ಪಾಕೃತಿಕ ವಿಕೋಪದ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಕೆಲಸಗಳು ಆಗಬೇಕು , ಆ ನಿಟ್ಟಿನಲ್ಲಿ ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳು ಹೊಂದಾಣಿಕೆಯಿಂದ ಕೆಲಸ ಮಾಡಿ, ಟಾಸ್ಕ್ ಫೋರ್ಸ್‌ ಸಮಿತಿಯ ಮೂಲಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು.

ಪಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಅವರು ಶಾಸಕರ ಕಚೇರಿಯಲ್ಲಿ ಗೂಗಲ್ ಮೀಟಿಂಗ್ ನಡೆಸಿ ಅಧಿಕಾರಿಗಳಿಗೆ ಸೂಚಿಸಿದರು.

ಕಳೆದ ಕೆಲವು ದಿನಗಳಿಂದ ಮಳೆಯಿಂದ ತೀವ್ರ ಹಾನಿಗಳು ಸಂಭವಿಸುವ ಹಿನ್ನೆಲೆಯಲ್ಲಿ ತಾಲೂಕಿನ ಅಧಿಕಾರಿಗಳು ಅಯಾಯ ಗ್ರಾಮದಲ್ಲಿ ಇರಬೇಕು ಎಂಬ ಉದ್ದೇಶದಿಂದ ಶಾಸಕರು ಕಚೇರಿಯಲ್ಲಿ ತಹಶೀಲ್ದಾರ್ ಸ್ಮಿತಾರಾಮು, ಹಾಗೂ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ ಅವರ ಉಪಸ್ಥಿತಿ ಯಲ್ಲಿ ತಾಲೂಕಿನ ಪಿ.ಡಿ.ಒ.ಗಳಿಗೆ ಹಾಗೂ ಅಧ್ಯಕ್ಷ ಉಪಾಧ್ಯಕ್ಷ , ಕಂದಾಯ ಇಲಾಖೆಯ ಅಧಿಕಾರ ಗಳ ಜೊತೆ ಗೂಗಲ್ ಮೀಟಿಂಗ್ ನಡೆಸಿ ಅವರ ಸಮಸ್ಯೆಗಳ ಮಾಹಿತಿ ಮತ್ತು ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿದರು.


39 ಗ್ರಾಮ ಪಂಚಾಯತ್ ಗಳಲ್ಲಿ ಮನೆಗಳಿಗೆ ಹಾನಿಯಾಗುವ ಸಂಭವವು ಕಂಡು ಬಂದಲ್ಲಿ ತುರ್ತಾಗಿ ಮನೆಯಲ್ಲಿರುವ ಕುಟುಂಬಗಳನ್ನು ಸ್ಥಳಾಂತರ ಮಾಡುವ ಕೆಲಸ ಆರಂಭಿಕ ಹಂತದಲ್ಲಿ ಮಾಡಬೇಕು ಎಂದು ತಿಳಿಸಿದರು.

ಸ್ಥಳಾಂತರ ಮಾಡಲು ಒಪ್ಪದ ಕುಟುಂಬಗಳು ಇದ್ದಲ್ಲಿ ಪೊಲೀಸರ ಮೂಲಕ ಅವರ ಮನವೊಲಿಸಿ ಸೂಕ್ತವಾದ ಸ್ಥಳಕ್ಕೆ ಸ್ಥಳಾಂತರ ಮಾಡುವ ಕೆಲಸ ಮಾಡಬೇಕು.

ತಾಲೂಕಿನ ಎಲ್ಲಾ ಗ್ರಾ.ಪಂ.ಗಳು ಪಂಜಿಕಲ್ಲು ಗ್ರಾಮ ಪಂಚಾಯತ್ ಅವರ ಮಾದರಿಯಲ್ಲಿ ತಂಡ ರಚನೆ ಮಾಡಿ ಸಮಸ್ಯೆ ಗಳಿಗೆ ಸ್ಪಂದಿಸುವ ಕೆಲಸ ಮಾಡಿ ಎಂದು ಅವರು ಸಲಹೆ ನೀಡಿದರು. ತಾಲೂಕಿನ ಪ್ರತಿ ಶಾಲಾ ಕಟ್ಟಡದ ಮೇಲೆ ನಿಗಾವಹಿಸಿ, ಕಟ್ಟಡದ ಸಮಸ್ಯೆ ಗಳು ಇದ್ದಲಿ ಅಂತಹ ಶಾಲೆಯ ಮಕ್ಕಳನ್ನು ಸುರಕ್ಷಿತ ಕೊಠಡಿಗಳಿಗೆ ಸ್ಥಳಾಂತರ ಮಾಡುವ ಕೆಲಸ ಶಿಕ್ಷಣ ಬಿ.ಇ.ಒ.ಜ್ಞಾನೇಶ್ ಅವರು ಮಾಡಬೇಕು ಎಂದು ಸೂಚನೆ ನೀಡಿದರು.

ಪಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳು ನಡೆದಲ್ಲಿ ತಾಲೂಕಿನ ಹಿರಿಯ ಅಧಿಕಾರಿಗಳಿಗೆ ಶೀಘ್ರವಾಗಿ ಮಾಹಿತಿ ನೀಡುವ ಕೆಲಸ ಮಾಡಿ, ಅದರ ನಷ್ಟ ಹಾಗೂ ಇತರ ಸಂಪೂರ್ಣ ಮಾಹಿತಿಯನ್ನು ಸರಿಯಾಗಿ ನೀಡುವಂತೆ ಅವರು ಸೂಚಿಸಿದರು. ನದಿ ತೀರದ ಪ್ರದೇಶಗಳಲ್ಲಿ ನೀರಿನ ಹರಿವು ಹೆಚ್ಚಳವಾದಲ್ಲಿ ಅಂತಹ ಮನೆಯ ಸದಸ್ಯರ ನ್ನು ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರ ಮಾಡುವಂತೆ ತಹಶೀಲ್ದಾರ್ ಸ್ಮಿತಾರಾಮು ತಿಳಿಸಿದರು. ಜೊತೆಗೆ ಅಂತಹ ಮನೆಗಳಿಗೆ ಮುಂಜಾಗ್ರತಾ ಕ್ರಮವಾಗಿ ನೋಟೀಸ್ ಕೂಡ ಜಾರಿ ಮಾಡಬೇಕು ಎಂದು ಪಿ.ಡಿ.ಒ.ಗಳಿಗೆ ಸಲಹೆ ನೀಡಿದರು.

ಹಾನಿಯಾಗುವ ಪ್ರದೇಶಗಳು ಹಾಗೂ ಕ್ರಮಗಳು

ಅಮ್ಮುಂಜೆ ಕಿದೆಪಡ್ಪು ಎಂಬಲ್ಲಿ ಗುಡ್ಡ ಜರಿದು ಎರಡು ಮನೆಗಳಿಗೆ ಹಾನಿಯಾಗಿ ಬೀಳುವ ಹಂತದಲ್ಲಿ ರುವುದರಿಂದ ಅ ಎರಡು ಮನೆಯ ಸದಸ್ಯರುಗಳುನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಅಲ್ಲಿನ ಗ್ರಾಮಪಂಚಾಯತ್ ಅಧ್ಯಕ್ಷ ರು ಮೂಡಬಿದಿರೆ ಹೆದ್ದಾರಿಯ ರಾಯಿ -ಕುದ್ಕೋಳಿ ರಸ್ತೆಯ ಮಧ್ಯೆ ಅಣ್ಣಳಿಕೆ ಎಂಬಲ್ಲಿ ಚರಂಡಿ ಹೂಳೆತ್ತುವ ಕಾರ್ಯ ಮಾಡದೆ ಇರುವ ಕಾರಣ ರಸ್ತೆಯಲ್ಲಿ ನೀರು ತುಂಬಿದೆ ಎಂದು ರಾಯಿ ಗ್ರಾ.ಪಂ.ನ ದೂರಿನ ಹಿನ್ನೆಲೆಯಲ್ಲಿ ನಾಳೆ ಚರಂಡಿ ಹೂಳೆತ್ತುವ ಕಾರ್ಯ ಮಾಡಲು ಶಾಸಕರು ಪಿ.ಡಬ್ಲೂ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಕಟ್ಟತ್ತಿಲ ಎಂಬಲ್ಲಿ ನಿರ್ಮಿಸಿದ ಚೆಕ್ ಡ್ಯಾಂನಿಂದ ಅಲ್ಲಿ ಸುತ್ತಲೂ ಮಣ್ಣು ಹಾಕದ ಹಿನ್ನೆಲೆಯಲ್ಲಿ ಶಾಲೆಗೆ ಮಕ್ಕಳು ನಡೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ಮಣ್ಣು ಹಾಕುವಂತೆ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಅವರಿಗೆ ಶಾಸಕರು ಸೂಚಿಸಿದರು.

ತುಂಬೆ ಶಾಲಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೈವೆ ಓವರ್ ಬ್ರಿಡ್ಜ್ ನ ಕಬ್ಬಿಣ ತುಕ್ಕು ಹಿಡಿದು ಬೀಳುವ ಹಂತದಲ್ಲಿದ್ದು ಈ ಬಗ್ಗೆ ಗಮನ ಹರಿಸಲು ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅವಾಂತರದಿಂದ ಹೆದ್ದಾರಿಯಲ್ಲಿ ನಿತ್ಯ ಸಂಚಾರಕ್ಕೆ ಅಡಚಣೆ ಒಂದೆಡೆಯಾದರೆ, ಗೋಳ್ತಮಜಲು ಗ್ರಾಮಪಂಚಾಯತ್ ಕಚೇರಿ ಹಾಗೂ ಕುದ್ರೆಬೆಟ್ಟು ಅಯ್ಯಪ್ಪ ಮಂದಿರ ಸಹಿತ ಅನೇಕ ಮನೆ ಹಾಗೂ ಅಂಗಡಿಗಳಿಗೆ ಹಾನಿಯಾಗುವ ಸಂಭವಿದೆ ಎಂಬ ದೂರಿಗೆ ಸ್ಪಂದಿಸಿಸದ ಶಾಸಕರು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳ ನ್ನು ಸ್ಥಳಕ್ಕೆ ಕರೆದು ಕ್ರಮಕೈಗೊಳ್ಳುವ ಭರವಸೆ ನೀಡಿದರು.

ಇದರ ಜೊತೆಯಲ್ಲಿ ಅನೇಕ ಸಣ್ಣ ಪುಟ್ಟ ಸಮಸ್ಯೆ ಗಳಿಗೆ ಶಾಸಕರು ಸ್ಥಳದಿಂದಲೇ ಅಧಿಕಾರಿಗಳ ಜೊತೆ ಪೋನ್ ಮೂಲಕ ಸಂಪರ್ಕ ಮಾಡಿ ಸಮಸ್ಯೆ ಪರಿಹಾರಕ್ಕೆ ಸೂಚಿಸಿದರು.

BANTWAL

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ

Published

on

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.

ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.

ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.

ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್‌ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

BANTWAL

ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು

Published

on

ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್‌ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.


ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು

ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.

Continue Reading

LATEST NEWS

Trending