Connect with us

    DAKSHINA KANNADA

    ಕುಕ್ಕೆ ಕ್ಷೇತ್ರದಲ್ಲೇ ಸ*ತ್ತ ನಾಗರಹಾವಿನ ಸಂಸ್ಕಾರಕ್ಕೆ ಹಿಂದೇಟು ಹಾಕಿದ ಅಧಿಕಾರಿಗಳು; ಸಾರ್ವಜನಿಕರಿಂದ ಪ್ರತಿಭಟನೆ

    Published

    on

    ಕುಕ್ಕೆ : ಜ್ಯೋತಿಷ್ಯ ಪರಿಹಾರ ಕೇಂದ್ರವಾಗಿ ಸರ್ಪ ದೋಷ ನಿವಾರಿಸುವ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರಮುಖ ಸೇವೆಯೇ ಸರ್ಪ ಸಂಸ್ಕಾರ. ನಾಗರ ಹಾವನ್ನು ಸಾ*ಯಿಸಿದ್ರೆ ಅಥವಾ ನೋ*ವು ಮಾಡಿದ್ದಲ್ಲಿ ಜ್ಯೋತಿಷಿಗಳು ಕುಕ್ಕೆಯಲ್ಲಿ ಪರಿಹಾರವಾಗಿ ಸರ್ಪ ಸಂಸ್ಕಾರ ಮಾಡಿಸಲು ಸಲಹೆ ನೀಡುತ್ತಾರೆ. ಆದ್ರೆ, ಕುಕ್ಕೆ ಕ್ಷೇತ್ರದಲ್ಲೇ ಸ*ತ್ತ ನಾಗರಹಾವಿನ ಸಂಸ್ಕಾರಕ್ಕೆ ಸಾರ್ವಜನಿಕರು ದೇವಸ್ಥಾನದ ಮುಂದೆ ಪ್ರತಿಭಟನೆ ನಡೆಸಿದ್ದಾರೆ ಅಂದ್ರೆ ಅಚ್ಚರಿಯಾಗುತ್ತದೆ.

    ಜುಲೈ 11 ರಂದು ಕುಕ್ಕೆ ಸುಬ್ರಹ್ಮಣ್ಯದ ಆಡಳಿತ ಕಚೇರಿ ಮುಂದಿ ಇಂತಹ ಒಂದು ವಿಲಕ್ಷಣ ಸನ್ನಿವೇಶ ನಿರ್ಮಾಣವಾಗಿದೆ. ಪಂಚಾಯತ್ ಸದಸ್ಯರೊಬ್ಬರು ಸ*ತ್ತ ಹಾವನ್ನು ಕಚೇರಿ ಮುಂದೆ ಮೆಟ್ಟಿಲಿನಲ್ಲಿ ಇರಿಸಿ ಗ್ರಾಮಸ್ಥರ ಜೊತೆ ಪ್ರತಿಭಟನೆ ನಡೆಸಿದ್ದಾರೆ. ಕುಕ್ಕೆಯ ಬೈಪಾಸ್ ರಸ್ತೆಯಲ್ಲಿ ವಾಹನದ ಅಡಿಗೆ ಸಿಲುಕಿ ನಾಗರ ಹಾವೊಂದು ಸ*ತ್ತಿದ್ದು ಗಮನಕ್ಕೆ ಬಂದಿದೆ. ಇದನ್ನು ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ಎಂಬವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಗಮನಕ್ಕೆ ತಂದಿದ್ದಾರೆ. ಆದ್ರೆ, ದೇವಸ್ಥಾನ ಕಡೆಯಿಂದ ಯಾವುದೇ ಸೂಕ್ತ ಸ್ಪಂದನೆ ಸಿಗದ ಕಾರಣ ಹಾವಿನ ಕಳೇ*ಬರ ಹಿಡಿದುಕೊಂಡು ದೇವಸ್ಥಾನದ ಆಡಳಿತ ಕಚೇರಿಗೆ ಬಂದು ಪ್ರತಿಭಟನೆ ಮಾಡಿದ್ದಾರೆ.

    ಒಂದು ಗಂಟೆಗಳ ಕಾಲ ಪಂಚಾಯತ್ ಸದಸ್ಯನ ನೇತೃತ್ವದಲ್ಲಿ ಸಾರ್ವಜನಿಕರು ನಾಗರ ಹಾವಿನ ಸಂಸ್ಕಾರ ಮಾಡಿಸಲು ದೇವಸ್ಥಾನದವರಲ್ಲಿ ಕೇಳಿಕೊಂಡಿದ್ದಾರೆ. ಆದ್ರೆ, ಯಾವುದೇ ಕಾರಣಕ್ಕೂ ನಮ್ಮಿಂದ ಆಗುವುದಿಲ್ಲ ಎಂದು ಹೇಳಿದ ದೇವಸ್ಥಾನದವರು, ಅರ್ಚಕರಿಲ್ಲ ಎಂಬ ಕಾರಣ ನೀಡಿದ್ದಾರೆ. ಈ ವೇಳೆ ನೀವು ಹಣ ನೀಡಿದ್ರೆ ಅರ್ಚಕರು ಬರ್ತಾರೆ ಎಂದು ಸಲಹೆ ನೀಡಿದ್ರೂ, ದೇವಸ್ಥಾನದ ಆಡಳಿತ ಸಿಬ್ಬಂದಿ ಕ್ಯಾರೆ ಅಂದಿಲ್ಲ. ಕೊನೆಗೆ ಪಂಚಾಯತ್ ಸದಸ್ಯ ರಾಜೇಶ್ ಅವರು ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ಅವರಿಗೆ ವಿಚಾರ ತಿಳಿಸಿದ್ದಾರೆ.

    ಇದನ್ನೂ ಓದಿ : ವಿದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ ಖ್ಯಾತ ಕಿರುತೆರೆ ದಂಪತಿ; ಪ್ರೀತಿ ಕಳೆದುಹೋಗಿಲ್ಲ! ಅಂದಿದ್ದು ಯಾಕೆ?

    ವಿಚಾರ ಗಮನಕ್ಕೆ ಬಂದ ತಕ್ಷಣ ಸಹಾಯಕ ಆಯುಕ್ತರು ದೇವಸ್ಥಾನದ ಆಡಳಿತ ವರ್ಗಕ್ಕೆ ಹಾವಿನ ಅಂ*ತ್ಯಸಂಸ್ಕಾರ ಮಾಡಲು ಸೂಚನೆ ನೀಡಿದ್ದಾರೆ. ಬಳಿಕ ಅರ್ಚಕರ ವಿಧಿವಿಧಾನ ಪ್ರಕಾರವಾಗಿ ನಾಗರ ಹಾವಿನ ಅಂ*ತ್ಯಕ್ರಿಯೆ ನೆರವೇರಿಸಿದ್ದಾರೆ.

    DAKSHINA KANNADA

    ಬ್ರೇಕ್ ಫೇಲ್ ಆಗಿ ದ್ವಿಚಕ್ರ ವಾಹನಕ್ಕೆ ಲಾರಿ ಡಿ*ಕ್ಕಿ; ಓರ್ವ ಸಾ*ವು

    Published

    on

    ಮಂಗಳೂರು/ಆನೇಕಲ್ ದ್ವಿಚಕ್ರ ವಾಹನಕ್ಕೆ ಲಾರಿ ಡಿ*ಕ್ಕಿ ಹೊಡೆದು, ಸವಾರ ಸ್ಥಳದಲ್ಲಿಯೇ ಮೃ*ತಪಟ್ಟಿರುವ ಘಟನೆ ತಮಿಳುನಾಡು ಗಡಿ ಪ್ರದೇಶವಾದ ಹೊಸೂರು ಸಮೀಪದ ಸೂಳಗಿರಿ ಬಳಿ ನಡೆದಿದೆ. ಆನೇಕಲ್ ತಾಲೂಕಿನ ರಾಚಮಾನಹಳ್ಳಿಯ ನಿವಾಸಿ ಅರ್ಚಕ ಶ್ರೀನಿವಾಸ್ ಮೃ*ತ‌ ದುರ್ದೈವಿ.

    ದೇವಾಲಯದ ಅರ್ಚಕರಾಗಿದ್ದ ಶ್ರೀನಿವಾಸ್, ಪೂಜೆಯ ನಿಮಿತ್ತ ಬೈಕ್‌ ಮೂಲಕ ಆನೇಕಲ್‌ನಿಂದ ಹೋಗುತ್ತಿದ್ದರು. ಈ ವೇಳೆ ತಮಿಳುನಾಡಿನ ಲಾರಿಯೊಂದರ ಬ್ರೇಕ್ ಫೇಲ್ ಆಗಿ ಹೆದ್ದಾರಿಯಿಂದ ಡಿವೈಡರ್ ದಾಟಿಕೊಂಡು ಬಂದು ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಶ್ರೀನಿವಾಸ್ ಅವರ ವಾಹನಕ್ಕೆ ಡಿ*ಕ್ಕಿ ಹೊಡೆದಿದೆ. ಪರಿಣಾಮ ಶ್ರೀನಿವಾಸ್ ಸ್ಥಳದಲ್ಲಿಯೇ ಮೃ*ತಪಟ್ಟರೆ, ರಾಘವೇಂದ್ರ ಎಂಬುವವರಿಗೆ ಗಂಭೀರ ಗಾ*ಯವಾಗಿದೆ.

    ಇದನ್ನೂ ಓದಿ : ಖಾಸಗಿ ಬಾಹ್ಯಾಕಾಶ ನಡಿಗೆ ಯಶಸ್ವಿ; ಸುರಕ್ಷಿತವಾಗಿ ಭೂಮಿಗೆ ಮರಳಿದ ಗಗನಯಾತ್ರಿಗಳು

    ಅಪಘಾ*ತದ ರಭಸಕ್ಕೆ ಬೈಕ್‌ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಸೂಳಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮ*ರಣೋತ್ತರ ಪರೀಕ್ಷೆಗಾಗಿ ಮೃ*ತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

    Continue Reading

    DAKSHINA KANNADA

    ಬಿಜೆಪಿ ಹೈಕಮಾಂಡಿಂದ ಭರ್ಜರಿ ಗಿಫ್ಟ್ ; ನಳೀನ್ ಕುಮಾರ್ ಕಟೀಲ್ ಸುತ್ತಾಟ ಮತ್ತೆ ಆರಂಭ !

    Published

    on

    ಮಂಗಳೂರು: ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ದ.ಕ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಅವರು ಎಂಪಿ ಚುನಾವಣೆಯಲ್ಲಿ ಟಿಕೆಟ್ ಸಿಗದೆ ವಂಚಿತರಾದ ಬಳಿಕ ಅಷ್ಟಾಗಿ ರಾಜಕೀಯ ವಿಚಾರದಲ್ಲಿ ಪ್ರಚಲಿತದಲ್ಲಿರಲಿಲ್ಲ. ಆದರೆ ಇದಿಗ ಕಟೀಲ್ ಮತ್ತೆ ಸುದ್ದಿಯಲ್ಲಿದ್ದಾರೆ.


    ನಳೀನ್ ಕುಮಾರ್‌ಗೆ ಗುಡ್ ನ್ಯೂಸ್;
    ಬಿಜೆಪಿಯು ನಳೀನ್ ಕುಮಾರ್ ಕಟೀಲ್ ಅವರನ್ನು ಒಡಿಶಾ ರಾಜ್ಯದ ಬಿಜೆಪಿ ಸದಸ್ಯತ್ವ ಅಭಿಯಾನದ ಉಸ್ತುವಾರಿಯಾಗಿ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ. ಅಂದಹಾಗೆ ಒಡಿಶಾದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಸದಸ್ಯತ್ವದ ಗುರಿಯನ್ನು ನೀಡಿದ್ದು, ಕೇಂದ್ರ ನಾಯಕತ್ವ ನಳಿನ್ ಕುಮಾ‌ರ್ ಕಟೀಲ್‌ಗೆ ಈ ಜವಾಬ್ದಾರಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
    ಈ ಹಿನ್ನೆಲೆಯಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಸೆ.17ರಂದು ಒಡಿಶಾಗೆ ತೆರಳಲಿದ್ದು, ಅಲ್ಲಿ ಒಂದು ವಾರ ಕಾಲ ಸದಸ್ಯತ್ವ ಅಭಿಯಾನದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

     

    Continue Reading

    DAKSHINA KANNADA

    ಮಂಗಳೂರಿನ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ

    Published

    on

    ಸುರತ್ಕಲ್ : ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳ 3ನೆ ಬ್ಲಾಕ್‌ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ದು*ಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಭಾನುವಾರ(ಸೆ.15) ರಾತ್ರಿ 11ರ ಸುಮಾರಿಗೆ ಈ ಘಟನೆ ನಡೆದಿದೆ.

    ಎರಡು ಬೈಕ್‌ ಗಳಲ್ಲಿ ಬಂದ ನಾಲ್ಕು ಮಂದಿ ದು*ಷ್ಕರ್ಮಿಗಳು ಮಸೀದಿಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಮಸೀದಿಯ ಕಿಟಕಿಗಳಿಗೆ ಹಾನಿಯಾಗಿದೆ.

    ಸುರತ್ಕಲ್‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮಸೀದಿಯ ಸಿಸಿಟಿವಿ ಸೇರಿದಂತೆ ಸಮೀಪದ ಸಿಸಿಟಿವಿ ಫೂಟೇಜ್‌ ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

    ಇಂದು(ಸೆ.16) ಈದ್ ಮಿಲಾದ್  ಹಬ್ಬ. ಹಾಗಾಗಿ ಸುರತ್ಕಲ್ ಸೇರಿದಂತೆ ಮಂಗಳೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

    Continue Reading

    LATEST NEWS

    Trending