HomeLATEST NEWSಸುರತ್ಕಲ್ ಕಡಲ ತೀರದಲ್ಲಿ ಭಾರೀ ಪ್ರಮಾಣದಲ್ಲಿ ತೈಲ ಜಿಡ್ಡಿನ ತ್ಯಾಜ್ಯ ಪತ್ತೆ: ಸ್ಥಳೀಯರಲ್ಲಿ ಆತಂಕ

ಸುರತ್ಕಲ್ ಕಡಲ ತೀರದಲ್ಲಿ ಭಾರೀ ಪ್ರಮಾಣದಲ್ಲಿ ತೈಲ ಜಿಡ್ಡಿನ ತ್ಯಾಜ್ಯ ಪತ್ತೆ: ಸ್ಥಳೀಯರಲ್ಲಿ ಆತಂಕ

ಮಂಗಳೂರು: ಕಡಲ ತೀರದಲ್ಲಿ ಅಲೆಗಳೊಂದಿಗೆ ಭಾರಿ ಪ್ರಮಾಣದಲ್ಲಿ ತೈಲ ಜಿಡ್ಡು ಸುರತ್ಕಲ್​ನ ದೊಡ್ಡಕೊಪ್ಪಲು ಬೀಚ್‌ನಲ್ಲಿ ಕಂಡುಬಂದಿದೆ.

ಹಡಗುಗಳು ಕಡಲ ತೀರ ಪ್ರದೇಶದಲ್ಲಿ ಲಂಗರು ಹಾಕಿದ ಸಂದರ್ಭ ತೈಲ ಜಿಡ್ಡಿನ ತ್ಯಾಜ್ಯವನ್ನು ಸಮುದ್ರಕ್ಕೆ ಸುರಿಯುತ್ತಿರುವ ಬಗ್ಗೆ ಆರೋಪಗಳು ಬಹಳ ಹಿಂದಿನಿಂದಲೂ ಕೇಳಿ ಬರುತ್ತಿದ್ದವು.

ಅದೇ ರೀತಿ ಬೃಹತ್ ಹಡಗುಗಳು ತಮ್ಮ ಅಳಿದುಳಿದ ತೈಲ ತ್ಯಾಜ್ಯಗಳನ್ನು ಬಂದರು ಒಳಭಾಗದಲ್ಲಿ ವಿಲೇವಾರಿ ಮಾಡಲು ಅವಕಾಶವಿದ್ದರೂ, ಶುಲ್ಕ ಪಾವತಿಸಬೇಕೆಂಬ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ತೈಲ ಜಿಡ್ಡು ತ್ಯಾಜ್ಯ ಸುರಿದು ಹೋಗುತ್ತಿರುವ ಬಗ್ಗೆ ಆರೋಪಗಳು ಇದ್ದವು.


ಅದೇ ರೀತಿ ಸಮುದ್ರತೀರದಲ್ಲಿ ಮುಳುಗಿರುವ ಬೋಟ್​​ಗಳಿಂದಲೂ ತೈಲತ್ಯಾಜ್ಯ ಹೊರ ತೆಗೆಯದ ಬಗ್ಗೆ ಆತಂಕ ಕಂಡು ಬರುತ್ತಿತ್ತು.

ಇದೆಲ್ಲದರ ನಡುವೆ ಸುರತ್ಕಲ್​ನ ದೊಡ್ಡ ಕೊಪ್ಪಲು ಸಮುದ್ರ ತೀರದಲ್ಲಿ ಇದೀಗ ಭಾರಿ ಅಲೆಗಳೊಂದಿಗೆ ತೈಲತ್ಯಾಜ್ಯ ಕಾಣಿಸಿಕೊಳ್ಳುತ್ತಿರುವುದು ಆತಂಕ ಸೃಷ್ಟಿಸಿದೆ.


ಸೈಕ್ಲೋನ್‌ನ ಎಫೆಕ್ಟ್ ನಿಂದ ಕಡಲ ಅಲೆಗಳು ಪ್ರಕ್ಷುಬ್ಧವಾಗಿದ್ದು, ಭಾರಿ ಅಲೆಗಳ ಜೊತೆಗೆ ತೈಲ ತ್ಯಾಜ್ಯವು ತೀರಕ್ಕಪ್ಪಳಿಸುತ್ತಿದೆ.

Latest articles

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...

ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!

ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...