LATEST NEWS
ಆಗಸ್ಟ್ ತಿಂಗಳಲ್ಲಿ ಓಲಾ ಎಲೆಕ್ಟ್ರಿಕ್ ಸ್ಕೂಟರ್ ರಸ್ತೆಗಿಳಿಯಲಿದೆ
ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೆ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಶೀಘ್ರದಲ್ಲೇ ರಸ್ತೆಗಿಳಿಯಲಿದೆ. ಈಗಾಗಲೇ ಕಂಪೆನಿ ಬುಕ್ಕಿಂಗ್ ಆರಂಭಿಸಿದ್ದು, 1 ಲಕ್ಷಕ್ಕೂ ಅಧಿಕ ಮಂದಿ ಓಲಾ ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು ಬುಕ್ ಮಾಡಿಕೊಂಡಿದ್ದಾರೆ. ಆಗಸ್ಟ್ ತಿಂಗಳಲ್ಲಿ ಓಲಾ ಸ್ಕೂಟರ್ನ ಮೊದಲ ಆವೃತ್ತಿ ಬಿಡುಗಡೆಯಾಗಲಿದೆ.
ಶೀಘ್ರದಲ್ಲೇ ಆಯ್ದ ನಗರಗಳಲ್ಲಿ ಫಾಸ್ಟ್ ಚಾರ್ಜಿಂಗ್ ಸೆಂಟರ್ಗಳನ್ನು ನಿರ್ಮಿಸಲಿದ್ದು, ಈಗಾಗಲೇ ನಿರ್ಮಾಣ ಪ್ರಕ್ರಿಯೆಗಳ ಸಿದ್ಧತೆಗಳು ಶುರುವಾಗಿದೆ. ಇದರಿಂದ ಓಲಾ ಸ್ಕೂಟರ್ನ್ನು ಚಾರ್ಜಿಂಗ್ ಸ್ಟೇಷನ್ ಮೂಲಕ ವೇಗವಾಗಿ ಚಾರ್ಜ್ ಮಾಡಿಕೊಳ್ಳಬಹುದು.
ಓಲಾ ಎಲೆಕ್ಟ್ರಿಕ್ ಸ್ಕೂಟರ್ಗಳು ನೀವು ಚಾರ್ಜಿಂಗ್ ಸ್ಟೇಷನ್ನಿಂದ ಚಾರ್ಜ್ ಮಾಡಿದರೆ ಶೂನ್ಯದಿಂದ ಸಂಪೂರ್ಣವಾಗಿ ಚಾರ್ಜ್ ಮಾಡಲು ಸುಮಾರು ಎರಡೂವರೆ ಗಂಟೆ ಸಮಯ ತೆಗೆದುಕೊಳ್ಳಲಿದೆ. ಹೈಪರ್ ಚಾರ್ಜಿಂಗ್ ಕೇಂದ್ರದಲ್ಲಿ, ಕೇವಲ 18 ನಿಮಿಷಗಳಲ್ಲಿ 50% ವರೆಗೆ ಚಾರ್ಜ್ ಮಾಡಬಹುದು. ಇನ್ನು ಮನೆಯಲ್ಲಿಯೇ ಸಂಪೂರ್ಣವಾಗಿ ಚಾರ್ಜ್ ಮಾಡಲು ಐದಾರು ಗಂಟೆ ತೆಗೆದುಕೊಳ್ಳಲಿದೆ. ಓಲಾ ತನ್ನ ಎಲೆಕ್ಟ್ರಿಕ್ ಸ್ಕೂಟರ್ಗಳ ಮೂರು ಮಾಡೆಲ್ಗಳಲ್ಲಿ ಬಿಡುಗಡೆ ಮಾಡಲಿದೆ. ಈ ಮೂರು ಮಾಡೆಲ್ಗಳಿಗೆ ಓಲಾ ಎಸ್, ಎಸ್ 1 ಮತ್ತು ಓಲಾ ಎಸ್ 1 ಪ್ರೊ ಎಂದು ಹೆಸರಿಡಲಾಗಿದೆ. ಇವುಗಳು ಕ್ರಮವಾಗಿ 2kW, 4kW ಮತ್ತು 7kW ಮೋಟರ್ಗಳನ್ನು ಹೊಂದಿರಲಿವೆ.
ಇನ್ನು ಓಲಾ ಎಲೆಕ್ಟ್ರಿಕ್ ಸಿಇಒ ಭಾವೀಶ್ ಅಗರ್ವಾಲ್, ತಮ್ಮ ಕಂಪೆನಿಯ ನೂತನ ಸ್ಕೂಟರ್ನ ಟಾಪ್ ಸ್ಪೀಡ್ ಎಷ್ಟಿರಬೇಕು ಎಂದು ಸೋಷಿಯಲ್ ಮೀಡಿಯಾದಲ್ಲಿ ಸಮೀಕ್ಷೆ ನಡೆಸಿದ್ದಾರೆ. 80Kmph, 90Kmph, 100Kmph ಗಿಂತ ಹೆಚ್ಚಿನ ವೇಗದ ಆಯ್ಕೆಗಳನ್ನು ನೀಡಿ ಕೇಳಲಾದ ಈ ಪ್ರಶ್ನೆಗೆ ಶೇ. 49.4 ರಷ್ಟು ಮಂದಿ 100 ಕಿ.ಮೀ ವೇಗಕ್ಕಿಂತ ಹೆಚ್ಚಿರಬೇಕೆಂದು ತಿಳಿಸಿದ್ದಾರೆ. ಈ ಸಮೀಕ್ಷೆ ಪ್ರಕಾರ ಓಲಾ ಎಲೆಕ್ಟ್ರಿಕ್ ಸ್ಕೂಟರ್ನ ವೇಗ 100 ಕಿ.ಮೀ ಅಸುಪಾಸಿನಲ್ಲಿರಲಿದೆ ಎಂಬುದನ್ನು ಅಂದಾಜಿಸಬಹುದು.
ಆಟೋಮೊಬೈಲ್ ಎಕ್ಸ್ಪರ್ಟ್ಗಳ ಮಾಹಿತಿ ಪ್ರಕಾರ, ಓಲಾ ಸ್ಕೂಟರ್ ಬೇಸ್ ಮಾಡೆಲ್ 45 ಕಿಲೋಮೀಟರ್ ವೇಗ ಹೊಂದಿದ್ದರೆ, ಎರಡನೆಯದು 70 ಕಿಲೋಮೀಟರ್ ವೇಗದಲ್ಲಿ ಚಲಿಸಲಿದೆ. ಇದೀಗ ಭಾವೀಶ್ ಅಗರ್ವಾಲ್ ಅವರು ಟಾಪ್ ಸ್ಪೀಡ್ ಸಮೀಕ್ಷೆಯನ್ನು ನಡೆಸಿದ್ದರಿಂದ 7kW ಮೋಟರ್ ಮಾಡೆಲ್ ವೇಗ 100 ಅಥವಾ ಅದಕ್ಕಿಂತ ಹೆಚ್ಚಿರಲಿದೆ ಎಂದೇ ಹೇಳಲಾಗುತ್ತಿದೆ. ಒಂದು ವೇಳೆ 100 ಕಿ.ಮೀ ಗಿಂತ ಹೆಚ್ಚಿನ ವೇಗ ನೀಡಿದರೆ ಹೈವೇ ಸೇರಿದಂತೆ ದೂರದ ಪ್ರಯಾಣಕ್ಕೆ ಓಲಾ ಸ್ಕೂಟರ್ನ್ನು ಬಳಸಿಕೊಳ್ಳಬಹುದು.
ಇನ್ನು ಒಟ್ಟು 10 ಬಣ್ಣಗಳಲ್ಲಿ ಓಲಾ ಸ್ಕೂಟರ್ ಖರೀದಿಗೆ ಬುಕ್ಕಿಂಗ್ಗೆ ಲಭ್ಯವಿದ್ದು, ಗ್ರಾಹಕರು ಕೆಂಪು, ಪಿಂಕ್, ಹಳದಿ, ಸ್ವಿಲರ್, ಬಿಳಿ ಹಾಗೂ ನೀಲಿ ಬಣ್ಣಗಳಲ್ಲಿ ಖರೀದಿಸಬಹುದು. ಹಾಗೆಯೇ ಈ ಸ್ಕೂಟರ್ನ ಮೈಲೇಜ್ ಅದರ ವೇಗಕ್ಕೆ ಅನುಗುಣವಾಗಿರಲಿದೆ. ಅಂದರೆ 20 ಕಿ.ಮೀ ವೇಗದಲ್ಲಿ ಚಲಾಯಿಸಿದರೆ ಬರೋಬ್ಬರಿ 240 ಕಿ.ಮೀ ರೇಂಜ್ (ಮೈಲೇಜ್) ಸಿಗಲಿದೆ ಎಂದು ಕಂಪೆನಿ ತಿಳಿಸಿದೆ. ಸಾಮಾನ್ಯ ವೇಗದಲ್ಲಿ 130-150 ಕಿಲೋಮೀಟರ್ ವ್ಯಾಪ್ತಿಯವರೆಗೆ ಚಲಿಸಬಹುದು. ಈ ಸ್ಕೂಟರ್ ಬೆಲೆಯು ಸುಮಾರು 1 ಲಕ್ಷ ರೂ.ನಿಂದ ಆರಂಭವಾಗಲಿದ್ದು, ಆ ಮಾಡೆಲ್ಗೆ ಅನುಗುಣವಾಗಿ ಬೆಲೆಯಲ್ಲಿ ವ್ಯತ್ಯಾಸಗಳು ಕಂಡು ಬರುತ್ತದೆ.
kerala
5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.
ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.
ಆನ್ ಲೈನ್ ಗೇಮಿಂಗ್ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?
ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್ಲೈನ್ ಗೇಮಿಂಗ್ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
LATEST NEWS
WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.
ಸೀಟ್ ಗಾಗಿ ಎಡವಟ್ಟು :
ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.
ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್ಗೆ 60 ರೂ., ಹಾಲ್ಫ್ಗೆ 40 ರೂ.
ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.
ರೋಹಿತ್ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.
ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ