DAKSHINA KANNADA
ಸ್ವಂತ ಮಕ್ಕಳಿಂದಲೇ ವಂಚನೆಗೊಳಗಾದ ವೃದ್ಧೆ; ತುತ್ತು ಅನ್ನಕ್ಕೂ ತತ್ವಾರ..!
ಉಡುಪಿ:ವೃದ್ದೆಯೊಬ್ಬರು ಮಕ್ಕಳಿಂದಲೇ ವಂಚನೆಗೊಳಗಾಗಿದ್ದಾರೆ. ಪತಿಬಿಟ್ಟು ಹೋದ ಎಕರೆಗಟ್ಟಲೆ ಆಸ್ತಿ ಇದ್ದರೂ ಆಸ್ತಿಯಲ್ಲಿ ತನ್ನ ಪಾಲು ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಕಣ್ಣೆದುರೇ ತನ್ನ ಭೂಮಿ ಪರರ ಪಾಲಾಗುತ್ತಿರುವುದನ್ನು ಕಂಡು ಕಂಗಾಲಾಗಿದ್ದಾರೆ. ಹಿರಿಯ ನಾಗರಿಕರ ನ್ಯಾಯ ಮಂಡಳಿಯ ಆದೇಶಕ್ಕೂ ಬೆಲೆ ಕೊಡದ ಮಕ್ಕಳು, ತಾಯಿಗೆ ಹೋರಾಟಕ್ಕಿಳಿಯುವ ಅನಿವಾರ್ಯತೆ ಸೃಷ್ಟಿಸಿದ್ದಾರೆ. ಗಿಣಿಯಂತೆ ಸಾಕಿದ ಮಕ್ಕಳು ಮುಂದೆ ಹದ್ದಾಗಿ ಚುಚ್ಚುವುದು ಅಂದ್ರೆ ಇದೇ ಇರಬೇಕು. ಈ ವೃದ್ಧೆಯ ಹೆಸರು ಮೋಂತಿ ಡಿಸಿಲ್ವಾ,ಮಂಗಳೂರಿನ ಕಲ್ಲಮುಂಡ್ಕೂರು ಗ್ರಾಮದ ನಿವಾಸಿ.
ಪತಿ ಬ್ಯಾಪ್ಟಿಸ್ಟ್ ಡಿಸಿಲ್ವರು ಬದುಕಿದ್ದಾಗ, ದಂಪತಿಗಳು ಸೇರಿ ಸ್ವಂತ ಪರಿಶ್ರಮದಿಂದ ದುಡಿದು, ಮಕ್ಕಳಿಗೆಲ್ಲಾ ಶಿಕ್ಷಣ ನೀಡಿ, ಮದುವೆ ಮಾಡಿದ್ದರು.2006 ರಲ್ಲಿ ಬ್ಯಾಪ್ಟಿಸ್ಟ್ ಡಿಸೋಜರು ಸತ್ತಾಗ, ಕುಟುಂಬಕ್ಕಾಗಿ 6.25 ಎಕರೆ ಜಮೀನು ಹಾಗೂ ಒಂದು ಮನೆ ಬಿಟ್ಟು ಹೋಗಿದ್ದರು. ತಂದೆ ಸತ್ತ ಕೂಡಲೇ ನಾಲ್ಕು ಹೆಣ್ಣು ಹಾಗೂ ಓರ್ವ ಗಂಡು ಮಗ ಆಸ್ತಿ ಪಾಲು ಮಾಡಲು ಒತ್ತಾಯ ಮಾಡಿದರು.
ದಿನನಿತ್ಯದ ಒತ್ತಡದಿಂದ ರೋಸಿ ಹೋದ ಮೋಂತಿಯಮ್ಮ ಪರಸ್ಪರ ಒಪ್ಪಿಗೆ ಮೂಲಕ ಪಾಲು ಮಾಡಿಕೊಳ್ಳಲು ಸೂಚಿಸಿದರು. 2009 ರಲ್ಲಿ ಎಲ್ಲರೂ ವಿಭಾಗದ ಪತ್ರದ ಮೂಲಕ ಆಸ್ತಿಗಳನ್ನು ತಮ್ಮ ಪಾಲಿಗೆ ಮಾಡಿಕೊಂಡರು.
ತಾಯಿಯ ಪಾಲಿಗೆ ಬಂದ 2.25 ಎಕ್ರೆ ಜಮೀನು ವಿಂಗಡಿಸಿದ್ದರೂ ಹಕ್ಕುಪತ್ರಗಳಲ್ಲಿ ಮೋಂತಿಯಮ್ಮನ ಹೆಸರೇ ಸೇರಿಸಿಲ್ಲ. ಅಮ್ಮನ ಆಸ್ತಿಗೆ ಎಲ್ಲಾ ಮಕ್ಕಳು ಜಂಟಿಯಾಗಿ ಹಕ್ಕುದಾರರು ಎಂದು ವಿಭಾಗ ಪತ್ರದಲ್ಲೇ ದಾಖಲಿಸಿದ್ದರು.
ಅನಕ್ಷರಸ್ಥೆ ಮೋಂತಿಯಮ್ಮನಿಗೆ ಅಕ್ಷರಸ್ಥ ಮಕ್ಕಳು ಮಾಡಿದ ಕಿತಾಪತಿ ಗೊತ್ತೇ ಆಗಿಲ್ಲ. ಮತ್ತೆ 2018ರಲ್ಲಿ ಮೋಂತಿಯಮ್ಮ ಮಂಗಳೂರಿನ ಹಿರಿಯ ನಾಗರಿಕರ ನ್ಯಾಯ ಮಂಡಳಿಗೆ ದೂರಿತ್ತಿದ್ದಾರೆ.
ನ್ಯಾಯ ಮಂಡಳಿಯು ವಿಚಾರಣೆ ನಡೆಸಿ, ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ಪ್ರತೀ ಐವರು ಮಕ್ಕಳೂ ಪ್ರತಿ ತಿಂಗಳು ತಲಾ 2ಸಾವಿರ ರೂಪಾಯಿ ನೀಡುವಂತೆ ಆದೇಶಿಸಿತ್ತು.
ಆದರೆ ಇದಕ್ಕೂ ಒಪ್ಪದ ಮೂವರು ಮಕ್ಕಳು ತಾಯಿಗೆ ಪೋಷಣೆಗ ಹಣ ಕೊಡಲು ಸಾಧ್ಯವಿಲ್ಲವೆಂದು ಸಹಾಯಕ ಆಯುಕ್ತರಿಗೆ ಲಿಖಿತ ಪತ್ರ ಬರೆದು ತಿಳಿಸಿದ್ದಾರೆ. ಇದರಿಂದ ಚಿಂತೆಗೀಡಾದ ಮೋಂತಿಯಮ್ಮ ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಮೊರೆ ಹೋಗಿದ್ದಾರೆ.
ತನ್ನ ಕಣ್ಣೆದುರೇ ಆಸ್ತಿಯ ಪರಭಾರೆ ಆಗುವುದನ್ನು ಕಂಡು ಮೋಂತಿಯಮ್ಮ ಕಣ್ಣೀರಿಡುತ್ತಿದ್ದಾರೆ, ಸ್ವಯಾರ್ಜಿತ ಆಸ್ತಿಯಾದ ಕಾರಣ ಪಾಲು ಮಾಡಿಕೊಂಡಿರುವುದನ್ನು ರದ್ದು ಮಾಡಲು ಕಾನೂನಿನಲ್ಲಿ ಅವಕಾಶ ಇದೆ.
ಆದರೆ ತನ್ನ ಪಾಲು ತನಗೆ ಕೊಟ್ಟರೆ ಸಾಕು,ಅದನ್ನು ಮಾರಿ ಬಂದ ಹಣದಲ್ಲಿ ಉಳಿದ ಜೀವನ ಕಳೆಯುತ್ತೇನೆ ಅನ್ನೋದು ಮೋಂತಿಯಮ್ಮನ ಉದಾರತೆ. ಇನ್ನಾದರೂ ಮಕ್ಕಳು ವೃದ್ಧಾಪ್ಯದಲ್ಲಿ ತಾಯಿಗೆ ಆರ್ಥಿಕವಾಗಿ ಆಸರೆ ಆಗ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ.
BANTWAL
ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!
ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
- FILM4 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM5 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM5 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru4 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!