LATEST NEWS
ಮಂಗಳೂರು: ರಸ್ತೆ ಕಾಮಗಾರಿಗೆ ಅಡ್ಡಿಪಡಿಸಿ ಅಡ್ಡಲಾಗಿ ಮಲಗಿ ಪ್ರತಿಭಟಿಸಿದ ವೃದ್ಧೆ..!
ಮಂಗಳೂರು: ಓಣಿ ರಸ್ತೆಯೊಂದಕ್ಕೆ ಮಹಾನಗರಪಾಲಿಕೆ ಕಾಂಕ್ರೀಟೀಕರಣ ಮಾಡುವ ವೇಳೆ ವೃದ್ದ ಮಹಿಳೆಯೊಬ್ಬರು ಈ ಸ್ಥಳ ಖಾಸಗಿಯಾಗಿದ್ದು ಜಾಗ ನನ್ನದು ಎಂದು ನಡು ರಸ್ತೆಯಲ್ಲೇ ಮಲಗಿ ಅಡ್ಡಿಪಡಿಸಿದ ಘಟನೆ ಮಣ್ಣಗುಡ್ಡ ಗುರ್ಜಿ ಬಳಿ ಇಂದು ಬೆಳಗ್ಗೆ ನಡೆದಿದೆ.
ಮಣ್ಣಗುಡ್ಡೆಯ ಗುರ್ಜಿಯ ವಾರ್ಡ್ ನಂ.28 ರಲ್ಲಿ ಮೂರು ಮನೆ ಸಂಪರ್ಕಿಸುವ ಓಣಿ ರಸ್ತೆಗೆ ಇಂದು ಬೆಳಗ್ಗೆ ಮಂಗಳೂರು ಮಹಾನಗರಪಾಲಿಕೆ ವತಿಯಿಂದ ಕಾಂಕ್ರೀಟೀಕರಣ ನಡೆಯುತ್ತಿತ್ತು.
ಈ ವೇಳೆ ಈ ಖಾಸಗಿ ಜಾಗ ನನಗೆ ಸೇರಿದ್ದು, ಇಲ್ಲಿ ಬಲವಂತಾವಾಗಿ ಪಾಲಿಕೆ ಕಾಂಕ್ರಿಟೀಕರಣ ಮಾಡುತ್ತಿದೆ ಎಂದು ಆರೋಪಿಸಿ ಸ್ಥಳೀಯ ವೈಲೇಟ್ ಪಿರೇರಾ ಎನ್ನುವ ವೃದ್ದೆ ರಸ್ತೆಯಲ್ಲಿ 2 ಗಂಟೆಗೂ ಹೆಚ್ಚು ಕಾಲ ಮಲಗಿ ಏಕಾಂಗಿಯಾಗಿ ಪ್ರತಿಭಟಿಸಿದ್ದಾರೆ.
ಸ್ಥಳಕ್ಕೆ ಬಂದ ಅಧಿಕಾರಿಗಳಿಗೆ ಕಾಮಗಾರಿ ಆದೇಶ ಪತ್ರ ತನ್ನಿ ಎಂದು ಒತ್ತಾಯಿಸಿದ ಮಹಿಳೆ, ಈ ಕಾಮಗಾರಿಯಿಂದ ತನ್ನ ಮನೆಯ ಅಂಗಳಕ್ಕೆ ನೀರು ನುಗ್ಗುತ್ತಿದೆ ಎಂದು ಆರೋಪಿಸಿದರು. ಈ ರಸ್ತೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನಕ್ಷೆಯಲ್ಲಿ ಕೂಡ ಇಲ್ಲ ಎಂದು ವಾದಿಸಿದರು.
ಸ್ಥಳೀಯರ ಪ್ರಕಾರ ಈ ದಾರಿಯ ಬಗ್ಗೆ ಹೈಕೋರ್ಟ್ನಲ್ಲಿ ವಿಚಾರಣೆ ಮುಗಿದು ವೈಲೇಟ್ ಪೀರೇರಾ ಅವರಿಗೆ ಯಾವುದೇ ಹಕ್ಕಿಲ್ಲ ಎಂದು ತೀರ್ಪು ನೀಡಿತ್ತು ಎಂದು ಮಾಹಿತಿ ನೀಡಿದ್ದಾರೆ. ಸ್ಥಳದಲ್ಲಿ ವೇಳೆ ಕಾರ್ಪೋರೇಟರ್ ಸಂಧ್ಯಾ ಮೋಹನ್ ಆಚಾರ್ ಕೂಡ ಹಾಜರಿದ್ದು ಮಹಿಳೆಯ ಮನವೊಲಿಸಲು ವಿಫಲ ಪ್ರಯತ್ನ ನಡೆಸಿದರು.
ಘಟನೆ ಬಗ್ಗೆ ಮಾಹಿತಿ ಪಡೆದ ಮಂಗಳೂರು ಕಮೀಷನರೇಟ್ ಕೇಂದ್ರ ವಿಭಾಗದ ಎಸಿಪಿ ಪಿಎ ಹೆಗ್ಡೆ, ಉರ್ವಾ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಭಾರತಿ, ಬರ್ಕೆ ಠಾಣೆಯ ಇನ್ಸ್ಪೆಕ್ಟರ್ ಶರೀಫ್ ಸಹಿತ ವಿವಿಧ ಠಾಣೆಯ 10ಕ್ಕೂ ಹೆಚ್ಚು ಮಹಿಳಾ ಪೊಲೀಸರು ಸ್ಥಳಕ್ಕೆ ಬಂದು ಎಷ್ಟೇ ಮನವೊಲಿಸಿದರೂ ಮಹಿಳೆ ಮಲಗಿದ್ದಲ್ಲಿಂದ ಕದಲದೇ ಪ್ರತಿಭಟನೆ ನಡೆಸುತ್ತಿದ್ದರು.
ಕೊನೆಗೆ ತೀವ್ರ ಪ್ರತಿರೋಧದ ಮಧ್ಯೆಯೂ ದಾರಿ ಕಾಣದ ಪೊಲೀಸರು ಸ್ಥಳಕ್ಕೆ ಅಂಬುಲೆನ್ಸ್ ಕರೆಸಿ ಮಹಿಳೆಯನ್ನು ಬಲವಂತವಾಗಿ ಅಂಬುಲೆನ್ಸ್ ಎತ್ತಿ ಹಾಕಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಹಿಳೆಯನ್ನು ಬಲವಂತದಿಂದ ಎತ್ತುವಾಗ ಒಂದಿಬ್ಬರ ಕೈ ವೃದ್ದೆ ಕಚ್ಚಿದ ವಿದ್ಯಮಾನವೂ ನಡೆಯಿತು. ಸ್ಥಳದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಇದ್ದರೂ,
ಹಿರಿಯ ನಾಗರಿಕರ ವೇದಿಕೆ ಇದ್ದರೂ ಹಿರಿಯ ನಾಗರಿಕಳಾದ ವೃದ್ದೆಯನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದರು
FILM
ಕೊನೆಗೂ ಉರ್ಫಿ ಜಾವೇದ್ ಇನ್ಸ್ಟಾಗ್ರಾಮ್ ಅಕೌಂಟ್ ಡಿಲೀಟ್…
Urfi javed: ಸೋಷಿಯಲ್ ಮೀಡಿಯಾದಲ್ಲಿ ಮಾಡೆಲ್ ಆಗಿ ಗುರುತಿಸಿಕೊಂಡಿರುವ ಉರ್ಫಿ ಜಾವೇದ್ ಆಕೆಯ ಇನ್ಸ್ಟಾಗ್ರಾಮ್ ಖಾತೆ ಡಿಲೀಟ್ ಆಗಿರುವುದು ಇದೀಗ ಆಕೆಗೆ ಸಂಕಷ್ಟ ಎದುರಾಗಿದೆ.
ಉರ್ಫಿ ಜಾವೇದ್ ಎಂದರೆ ಅವಳ ಡ್ರೇಸ್ ನೋಡಿ.. ಅದೇನು ಡ್ರೇಸ್ ಹಾಕಿದ್ದಾಳೆ ಅಂತಾರೆ ಜನ. ಅಂತೂ ಸಾಮಾಜಿಕ ಜಾಲತಾಣದಲ್ಲಿ ಆಕೆಯು ವಿಚಿತ್ರ ವಿಚಿತ್ರ ಪೋಟೋಗಳನ್ನು ಅಪ್ಲೋಡ್ ಮಾಡ್ತಾ ಇರುತ್ತಾಳೆ.
ಆಕೆ ಫಾಲೋವರ್ಸ್ ಹೆಚ್ಚಾಗಳು ಇಂತಹ ಡ್ರೇಸ್ ಹಾಕ್ತ ಇದ್ದಾಳ…ಎಸ್, ಈಕೆ ಅಂತಹ ವಿಚಿತ್ರವಾದ ಡ್ರೇಸ್ ಗಳನ್ನು ಹಾಕಿ ಫೋಟೊ ಶೂಟ್ ಮಾಡಿದ ಬಳಿಕ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಪ್ಲೋಡ್ ಮಾಡುತ್ತಾಳೆ. ಹಾಗೇ ಫಾಲೋವರ್ಸ್ ಗಳ ಸಂಖ್ಯೆ ಹೆಚ್ಚಾಗುತ್ತಿತ್ತು. ಸುಮಾರು 4 ಮಿಲಿಯನ್ ಗೂ ಅಧಿಕ ಫಾಲೋವರ್ಸ್ ಗಳನ್ನು ಹೊಂದಿದ್ದಳು.
ಅರೆಬರೆ ಡ್ರೇಸ್ ಹಾಕುತ್ತಾ ದಿನದಿಂದ ದಿನಕ್ಕೆ ಹೊಸ ಟ್ರೆಂಡ್ ಗಳನ್ನು ಸೃಷ್ಟಿಸುತ್ತಿದ್ದಳು. ಆದರೆ ಇದೀಗ ಆಕೆಯ ಖಾತೆಯನ್ನು ಇನ್ಸ್ಟಾಗ್ರಾಂ ಅಮಾನತು ಮಾಡಿದೆ. ಡಿಲೀಟ್ ಆಗಿರುವ ಕುರಿತು ಆಕೆ ಮಾಡೆಲ್ ಸ್ಕ್ರೀನ್ ಶಾಟ್ ತೆಗೆಯುವ ಮೂಲಕ ಹಂಚಿಕೊಂಡಿದ್ದಾಳೆ.
ಇನ್ನು ಇನ್ಸ್ಟಾ ಆಕೆಯ ಖಾತೆಯನ್ನು ಅಮಾನತುಗೊಳಿಸಿದ್ದಲ್ಲದೆ, ಈ ನಿರ್ಧಾರವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು 180 ದಿನಗಳ ಕಾಲಾವಕಾಶ ನೀಡಿದೆ. ಆದರೆ ಉರ್ಫಿ ಇವೆಲ್ಲದಕ್ಕೆ ಉತ್ತರ ನೀಡಿ ತನ್ನ ಖಾತೆಯನ್ನು ಮರಳಿ ಪಡೆಯುತ್ತಾಳಾ ಎಂಬ ಪ್ರಶ್ನೆ ಫ್ಯಾನ್ಸ್ಗೆ ಕಾಡಿದೆ. ಇನ್ಸ್ಟಾಗ್ರಾಮ್ ಖಾತೆ ಮರಳಿ ಬಂದರೆ ಆಕೆ ಇನ್ನಾದರೂ ಸರಿಯಾದ ಡ್ರೇಸ್ ಹಾಕುತ್ತಾಳ ಎಂದು ಕಾದು ನೋಡಬೇಕಷ್ಟೇ.
ಆಕೆಯ ಅರೆಬರೆ ಡ್ರೇಸ್ ನೋಡಿ ಕೆಳವರು ಆಕೆಯ ಖಾತೆ ಡಿಲೀಟ್ ಆಗಿದ್ದು, ಒಳ್ಳೆಯದೇ ಎಂದು ಹೆಳುತ್ತಿದ್ದಾರೆ. ಆದರೆ ಆಕೆ ಮಾತ್ರ ನೊಂದುಕೊಂಡಿದ್ದಾಳೆ.
FILM
ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ
ಬೆಂಗಳೂರು : ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬೃಂದಾವನ ಧಾರವಾಹಿಯ ನಟ ಧಾರವಾಹಿಗೆ ಆಯ್ಕೆಯಾದ ತಮ್ಮ ಅಭಿಪ್ರಾಯವನ್ನು ಕೊನೆಗೂ ಹಂಚಿಕೊಂಡಿದ್ದಾರೆ.
ಎಲ್ಲರಿಗೂ ಗೊತ್ತಿರುವಂತೆ ವರುಣ್ ಸೋಷಿಯಲ್ ಮೀಡಿಯಾದಲ್ಲಿ ಈಗಾಗ್ಲೇ ಜನಪ್ರಿಯತೆ ಪಡೆದುಕೊಂಡವರು. ಅಲ್ಲದೇ ಇತ್ತೀಚೆಗೆ ಗರ್ಲ್ ಫ್ರೆಡ್ ಜೊತೆಗೆ ಬ್ರೇಕಪ್ ಮಾಡಿಕೊಂಡಿದ್ದು ದೊಡ್ಡ ಸುದ್ದಿಯಾಗಿತ್ತು.
ಇದೀಗ ಸೀರಿಯಲ್ ಗೆ ಆಯ್ಕೆಯಾದ ಬಗ್ಗೆ ಮಾತನಾಡಿರುವ ನಟ ವರುಣ್ ಆರಾಧ್ಯ “ದೀಪಾವಳಿ ಹಬ್ಬದ ಊಟ ಮುಗಿಸಿಕೊಂಡು ಮಲಗಿಕೊಂಡಿದ್ದೆ. ರಾತ್ರಿ 12.30ಗೆ ಕರೆ ಮಾಡಿ ಸೀರಿಯಲ್ನಲ್ಲಿ ನಟಿಸುವ ಇಂಟ್ರೆಸ್ಟ್ ಇದ್ಯಾ. ಅವಕಾಶ ಇದೆ ಎಂದು ಫೋನ್ ಮಾಡಿದರು. ರಾತ್ರಿ ಆ ಸಮಯದಲ್ಲಿ ಮಾಡಿದಕ್ಕೆ ನಾನು ಗಾಬರಿ ಆಗಿದೆ ಆ ಸಮಯದಲ್ಲಿ ಆಡಿಷನ್ಗೆ ಬರೆಲು ಹೇಳಿದರು. ನನ್ನ ಸ್ನೇಹಿತರನ್ನು ಕರೆದುಕೊಂಡು ನಾಗರಭಾವಿಯಲ್ಲಿ ನಿರ್ದೇಶಕರಾದ ರಾಮ್ಜೀ ಹೇಳಿದ ಸ್ಥಳಕ್ಕೆ ಹೋದೆ. ಕೈಗೆ ಒಂದು ಸ್ಕ್ರಿಪ್ಟ್ ಕೊಟ್ಟರು ಆಡಿಷನ್ ಮಾಡಿದೆ.
ಮಧ್ಯರಾತ್ರಿ 2.30ಕ್ಕೆ ಸೆಲೆಕ್ಟ್ ಆಗಿರುವೆ ಎಂದು ಹೇಳಿದರು. ನಾನು ಫುಲ್ ಶಾಕ್ ಆಗಿಬಿಟ್ಟಿ..ಅಲ್ಲದೆ ಬೆಳಗ್ಗೆನಿಂದ ಶೂಟಿಂಗ್ ಎಂದು ಹೇಳಿದರು. ಅಷ್ಟೊತ್ತರಲ್ಲಿ ಮನೆಗೆ ಬಂದು ಅಕ್ಕ ಮತ್ತು ಅಮ್ಮ ಮಲಗಿದ್ದರು, ಅವರನ್ನು ಎಬ್ಬಿಸಿ ಸೆಲೆಕ್ಟ್ ಅನ್ನೋ ವಿಚಾರ ಹೇಳಿದೆ. ಬೆಳಗ್ಗೆ ಶೂಟಿಂಗ್ ಇತ್ತು…ಹೇರ್ ಕಟ್ ಮಾಡಿಸಬೇಕು ಮತ್ತು ಗಡ್ಡ ಟ್ರಿಮ್ ಮಾಡಬೇಕು ಎಂದು ಹೇಳಿದರು ಅದೂ ಮಾಡಿಸಿಕೊಂಡು ಬೆಳಗ್ಗೆ ಶೂಟಿಂಗ್ ಸ್ಥಳಕ್ಕೆ ಹೋದೆ ಮರು ದಿನವೇ ಪ್ರಸಾರ ಮಾಡಲು ಶುರು ಮಾಡಿದ್ದರು. ಮೊದಲ ದೃಶ್ಯವೇ ಮದುವೆ ಮನೆ ಸೀನ್ ಅಗಿತ್ತು ಎಂದಿದ್ದಾರೆ.
bengaluru
ಹೈಕೋರ್ಟ್ ಕಲಾಪವನ್ನೂ ಬಿಡದ ಸೈಬರ್ ಹ್ಯಾಕರ್ಸ್-ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯ ಅಪ್ಲೋಡ್
ಬೆಂಗಳೂರು: ಸೈಬರ್ ಖದೀಮರ ಉಪಟಳ ಎಲ್ಲಿಯವರೆಗೆ ತಲುಪಿದೆ ಎಂದರೆ ಅದು ಇದೀಗ ಕರ್ನಾಟಕ ಹೈಕೋರ್ಟ್ ಕಲಾಪಕ್ಕೂ ತಟ್ಟಿದೆ.
ಮಂಗಳವಾರ ಸಂಜೆ ಹೈಕೋರ್ಟಿನ ಹಾಲ್ ನಂಬರ್ 6, 12, 18, 23, 24, 26 ಮತ್ತು ಇತರ ಹಾಲ್ ಗಳಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿದ್ದಾಗಲೇ ಲಿಂಕ್ ಮೂಲಕ ಭಾಗವಹಿಸಿದ್ದ ಅಪರಿಚಿತ ಆರೋಪಿಗಳು ಅಶ್ಲೀಲ ಚಿತ್ರಗಳನ್ನು ಪ್ರದರ್ಶಿಸಿ ಕಲಾಪಕ್ಕೆ ಅಡ್ಡಿ ಪಡಿಸಿದ್ದಾರೆ. ಈ ಬಗ್ಗೆ ಹೈಕೋರ್ಟಿನ ಕಂಪ್ಯೂಟರ್ ವಿಭಾಗದ ರಿಜಿಸ್ಟ್ರಾರ್ ಅವರು ಸೆಂಟ್ರಲ್ ಸೆನ್ ಕ್ರೈಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಹೈಕೋರ್ಟ್ ಪೀಠಗಳಲ್ಲಿ ಲೈವ್ ಸ್ಟ್ರೀಮಿಂಗ್ ಮತ್ತು ವೀಡಿಯೋ ಕಾನ್ಫರೆನ್ಸ್ ಸೌಲಭ್ಯವನ್ನು ಕೆಲವು ದಿನಗಳ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ. ಬುಧವಾರ ಸಂಜೆ ಹೈಕೋರ್ಟ್ ಕಲಾಪದ ವೇಳೆ ವೀಡಿಯೋ ಕಾನ್ಫರೆನ್ಸ್ ಆ್ಯಪ್ ಅನ್ನು ಹ್ಯಾಕ್ ಮಾಡಿ ಆಶ್ಲೀಲ ದೃಶ್ಯಾವಳಿಯನ್ನು ಅಪ್ ಲೋಡ್ ಮಾಡಲಾಗಿತ್ತು. ಅಶ್ಲೀಲ ವೀಡಿಯೋ ಪ್ರಸಾರವಾಗುತ್ತಿದ್ದಂತೆ ಅದನ್ನು ನಿರ್ವಹಣೆ ಮಾಡುತ್ತಿದ್ದ ಸಿಬಂದಿಯನ್ನು ಕರೆದು ವಿಚಾರಿಸಿದಾಗ ಸೈಬರ್ ಹ್ಯಾಕ್ ಆಗಿರುವ ವಿಷಯ ಗೊತ್ತಾಗಿದೆ. ಕೂಡಲೇ ವೀಡಿಯೋ ಕಾನ್ಫರೆನ್ಸ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ.
- Ancient Mangaluru6 days ago
ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ
- DAKSHINA KANNADA6 days ago
ಉಡುಪಿ : ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ
- bangalore5 days ago
ಇವ್ರು ಯಾರಂತ ಗೊತ್ತಾಯ್ತ ಫ್ರೆಂಡ್ಸ್? ನ್ಯೂ ಕಪಲ್ಸ್ ಫಾರಿನ್ ಟ್ರಿಪ್ ಅಂತೆ..!
- bangalore4 days ago
ದೈವಕೋಲ ವೀಕ್ಷಣೆಗೆ ಟೂರ್ ಪ್ಯಾಕೇಜ್ – ತುಳುವರ ಧಾರ್ಮಿಕ ಭಾವನೆಗೆ ಪೆಟ್ಟು..!