LATEST NEWS
ಓಮಿಕ್ರಾನ್ ಭೀತಿ-ಟಫ್ ರೂಲ್ಸ್ ಜಾರಿ: ಮದುವೆಗೆ 500 ಜನ, ನೆಗೆಟಿವ್ ಬಾರದೆ ಏರ್ಪೋರ್ಟ್ನಿಂದ ಹೊರಬರುವಂತಿಲ್ಲ
ಬೆಂಗಳೂರು: ಕೊರೋನಾ ರೂಪಾಂತರಿ ವೈರಸ್ ರಾಜ್ಯಕ್ಕೆ ಕಾಲಿಟ್ಟ ಬೆನ್ನಲ್ಲೇ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆದಿದ್ದು, ರಾಜ್ಯಾದ್ಯಾಂತ ಟಫ್ ರೂಲ್ಸ್ ಜಾರಿ ಮಾಡಿದ್ದಾರೆ. ಈ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಸದ್ಯ ಅಧಿಕೃತವಾಗಿ ರಾಜ್ಯದಲ್ಲಿ 2 ಓಮಿಕ್ರಾನ್ ಸೋಂಕು ಪ್ರಕರಣ ಪತ್ತೆಯಾಗಿದೆ. ಅಂತರರಾಷ್ಟ್ರೀಯ ಪ್ರಯಾಣಿಕರು ರಾಜ್ಯದ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕೂಡಲೇ ಕಡ್ಡಾಯ ಕೊರೋನಾ ಪರೀಕ್ಷೆ ನಡೆಸಬೇಕು. ಅದರ ವರದಿ ಬಂದ ನಂತರವೇ ಮನೆಗೆ ತೆರಳಲು ಅವಕಾಶ ಇದೆ. ಇಲ್ಲದಿದ್ದರೆ ಕ್ವಾರಂಟೈನ್ ನಡೆಸಲಾಗುವುದು.
ವಿಮಾನ ನಿಲ್ದಾಣದಲ್ಲಿ ಕೊರೋನಾ ಪರೀಕ್ಷೆಗೆ ರಾಜ್ಯ ಸರ್ಕಾರ ದರ ಪ್ರಕಟಿಸಿದ್ದು, ತ್ವರಿತ ರಿಪೋರ್ಟ್ ಕೊಡಲು 3000 ಸಾವಿರ ರೂಪಾಯಿ, ನಾರ್ಮಲ್ ರಿಪೋರ್ಟ್ ಕೊಡಲು 500 ರೂಪಾಯಿ ಶುಲ್ಕ ವಿಧಿಸಲಾಗಿದೆ.
ಇನ್ಮುಂದೆ ಸಿನಿಮಾ ಥಿಯೇಟರ್, ಮಾಲ್ನಲ್ಲಿ ಎರಡು ಡೋಸ್ ಪಡೆಯದ ಹೊರತು ಪ್ರವೇಶವಿಲ್ಲ. ಶಾಲೆಗೆ ತೆರಳುವ ಮಕ್ಕಳ ಹೆತ್ತವರಿಗೆ ಎರಡು ಡೋಸ್ ಕಡ್ಡಾಯ. ಇಲ್ಲದಿದ್ದರೆ ಅಂತವರ ಮಕ್ಕಳು ಶಾಲೆಗೆ ತೆರಳುವಂತಿಲ್ಲ.
ಜೊತೆಗೆ ಶಾಲಾ-ಕಾಲೇಜಿನಲ್ಲಿ ಸಭೆ ಸಮಾರಂಭ ನಡೆಸುವಂತಿಲ್ಲ.
500 ಜನರ ಮಿತಿಯೊಳಗೆ ಮದುವೆ ಸಮಾರಂಭಕ್ಕೆ ಅವಕಾಶ. ಪ್ರತಿದಿನ 1 ಲಕ್ಷ ಟೆಸ್ಟ್ ನಡೆಸಲು ಆರೋಗ್ಯ ಇಲಾಖೆಗೆ ಸೂಚನೆ.
ಆಸ್ಪತ್ರೆಗಳಲ್ಲಿರುವ ಆಕ್ಸಿಜನ್ ಪ್ಲಾಂಟ್, ಬೆಡ್, ವೆಂಟಿಲೇಟರ್ ಸೇರಿದಂತೆ ವೈದ್ಯಕೀಯ ಉಪಕರಣ ಮತ್ತೆ ಸಜ್ಜುಗೊಳಿಸಲು ನಿರ್ಧಾರ. ರಾಜ್ಯದಲ್ಲಿ ಕೊರೋನಾ ಕಂಟ್ರೋಲ್ ರೂಂ ಮತ್ತೆ ಪ್ರಾರಂಭ.
DAKSHINA KANNADA
ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!
ಮಂಗಳೂರು: ಮಂಗಳೂರು ಸಬ್ ಜೈಲಿನಲ್ಲಿದ್ದ ಕೇರಳ ಮೂಲದ ಖೈದಿಯೊಬ್ಬ ಆಸ್ಪತ್ರೆಯಲ್ಲೇ ಕುಣಿಕೆಗೆ ಕೊರಳೊಡ್ಡಿ ಜೀವಾಂತ್ಯಗೊಳಿಸಿದ್ದಾನೆ. ಕೊಣಾಜೆಯ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2022 ರಲ್ಲಿ ಈತ ಬಂಧಿತನಾಗಿದ್ದ . ಕೇರಳ ಮೂಲದವನಾಗಿದ್ದ ಮಹಮ್ಮದ್ ನೌಫಲ್ ಜೀವಾಂತ್ಯಗೊಳಿಸಿದ ಖೈದಿಯಾಗಿದ್ದಾನೆ. ಕೆಲ ಸಮಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಈತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಏಪ್ರಿಲ್ 25 ರಂದು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಯ ಸೆಲ್ ವಾರ್ಡ್ ಗೆ ದಾಖಲಿಸಲಾಗಿತ್ತು. ಸೆಲ್ ವಾರ್ಡನಲ್ಲಿ ಇರುವಾಗಲೇ ಈತ ಜೀವಾಂತ್ಯಗೊಳಿಸಿದ್ದಾನೆ. ಈತನನ್ನು ಉಳಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳ ನಡೆಸಿದರಾದ್ರೂ ಸಾದ್ಯವಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
LATEST NEWS
ಐವರು ಮೆಡಿಕಲ್ ವಿದ್ಯಾರ್ಥಿಗಳು ನೀರುಪಾಲು…!
ಮಂಗಳೂರು ( ಕನ್ಯಾಕುಮಾರಿ ) : ಮದುವೆ ಸಮಾರಂಭಕ್ಕೆಂದು ಕನ್ಯಾಕುಮಾರಿಗೆ ತೆರಳಿದ್ದ ಐವರು ಮೆಡಿಕಲ್ ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಅಸು ನೀಗಿದ್ದಾರೆ. ಮದುವೆಗೆ ತೆರಳಿದ್ದ ಸ್ನೇಹಿತರು ಲೇಮುರ್ ಬೀಚ್ನಲ್ಲಿ ಈಜಲು ಇಳಿದಾಗ ಈ ಧುರ್ಘಟನೆ ಸಂಭವಿಸಿದೆ. ಒಟ್ಟು ಎಂಟು ವಿದ್ಯಾರ್ಥಿಗಳು ಸಮುದ್ರಲ್ಲಿ ಈಜಲು ಹೋಗಿದ್ದು ಮೂವರನ್ನು ಸ್ಥಳಿಯರು ರಕ್ಷಣೆ ಮಾಡಿದ್ದಾರೆ. ಎಲ್ಲರೂ ತಿರುಚಿನಪಳ್ಳಿಯಲ್ಲಿರುವ ಎಸ್ಆರ್ಎಂ ಮೆಡಿಕಲ್ ಕಾಲೇಜಿನವರು ಎಂದು ಮಾಹಿತಿ ಲಭ್ಯವಾಗಿದೆ. ತಂಜಾವೂರಿನ ಚಾರುಕವಿ, ನೇಯ್ವೇಲಿಯ ಗಾಯತ್ರಿ, ಕನ್ಯಾಕುಮಾರಿಯ ಸರ್ವದರ್ಶಿತ್, ದಿಂಡಿಗಲ್ನ ಪ್ರವೀಣ್ ಸ್ಯಾಮ್ ಹಾಗೂ ಆಂದ್ರದ ವೆಂಕಟೇಶ್ ನೀರುಪಾಲದ ಮೆಡಿಕಲ್ ವಿದ್ಯಾರ್ಥಿಗಳಾಗಿದ್ದಾರೆ. ಇಂಟರ್ನ್ಗಳಾಗಿದ್ದ ಕರೂರಿನ ನೇಶಿ, ಥೆಂಗಿಯ ಪ್ರಿಯಾಂಕಾ ಹಾಗೂ ಮದುರೈನ ಶರಣ್ಯ ಎಂಬ ಯುವತಿಯರನ್ನು ರಕ್ಷಿಸಲಾಗಿದೆ
ನಿಶೇಧವಿದ್ರೂ ಸಮುದ್ರಕ್ಕೆ ಪ್ರವೇಶ ಮಾಡಿದ್ದರು
ಖಾಸಗಿ ಬೀಚ್ ಆಗಿರೋ ಲೆಮುರ್ ಬೀಚ್ ಒಳಗೆ ಸಾರ್ವಜನಿಕರಿಗೆ ಪ್ರವೇಶ ನಿರಾಕರಿಲಾಗಿತ್ತು. ಇನ್ನು ಭಾನುವಾರದಂದು ಸಮುದ್ರದಲ್ಲಿ ಭಾರಿ ಅಲೆಗಳು ಇದ್ದ ಕಾರಣ ಯಾರೂ ಸಮುದ್ರಕ್ಕೆ ಇಳಿಯಬಾರದು ಅನ್ನೋ ಎಚ್ಚರಿಕೆ ನೀಡಲಾಗಿತ್ತು. ಹೀಗಿದ್ರೂ ಇವರು ಸಮುದ್ರಕ್ಕೆ ಹೇಗೆ ಹೋದ್ರು ಅನ್ನೋದು ತನಿಖೆ ನಡೆಸಲಾಗುತ್ತಿದೆ. ಮದುವೆಗೆ ಬಂದಿದ್ದ ಸ್ನೇಹಿತರೆಲ್ಲ ಬೇರೆ ಬೇರೆ ಗುಂಪುಗಳಾಗಿ ಚದುರಿ ಹೋಗಿದ್ದು, ಈ ಎಂಟು ಜನ ವಿದ್ಯಾರ್ಥಿಗಳು ಸಮುದ್ರ ಕಿನಾರೆ ಬಂದು ಸಮುದ್ರಕ್ಕೆ ಇಳಿದಿದ್ದಾರೆ.
ಕೋರ್ಸು ಮುಗಿಸುವ ಹಂತದಲ್ಲಿ ನಡೆಯಿತು ದುರ್ಘಟನೆ
ಈ ವಿದ್ಯಾರ್ಥಿಗಳ ಕೋರ್ಸ್ ಇನ್ನೇನು ಕೆಲವೇ ದಿನಗಳಲ್ಲಿ ಮುಗಿದು ಎಲ್ಲರೂ ವೈದ್ಯರಾಗುವ ಕನಸು ಕಾಣುತ್ತಿದ್ದರು. ಯಾವ ಆಸ್ಪತ್ರೆಯಲ್ಲಿ ಇಂಟರ್ನ್ಶಿಪ್ ಮಾಡಬೇಕು, ಯಾವ ನಗರಕ್ಕೆ ಹೋದರೆ ಸೂಕ್ತ ಎಂಬ ಕುರಿತು ಅವರ ಮಧ್ಯೆಯೇ ಚರ್ಚೆ ನಡೆಯುತ್ತಿತ್ತು. ಅವರ ಪೋಷಕರು ಕೂಡ ನೂರಾರು ಕನಸು ಕಂಡಿದ್ದರು. ಆದರೆ, ಮದುವೆಗೆ ಹೋದವರು, ಮದುವೆ ಮುಗಿಸಿ ನೇರ ಮನೆಗೆ ಬಂದಿದ್ರೆ ಎಲ್ಲವೂ ಎನಿಸಿದಂತೆ ನಡೆಯುತ್ತಿತ್ತು. ಆದ್ರೆ ವಿಧಿ ಇವರ ಎಲ್ಲಾ ಕನಸುಗಳನ್ನ ಕಿತ್ತುಕೊಂಡಿದೆ.
LATEST NEWS
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ; ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ನಿರ್ಬಂಧ..!
ಬೆಂಗಳೂರು: ಹಾಸನದ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೆಸರು ಬಳಸದಂತೆ ಬೆಂಗಳೂರಿನ ನ್ಯಾಯಾಲಯ ನಿರ್ಬಂಧ ಹೇರಿದೆ.
ಪ್ರಜ್ವಲ್ ರೇವಣ್ಣ ಪ್ರಕರಣ ; ವೀಡಿಯೋ ಹರಿಬಿಟ್ಟ ಕಾರ್ತಿಕ್ ನಾಪತ್ತೆ! ಮಲೇಷ್ಯಾಕ್ಕೆ ಹೋಗಿರುವ ಶಂಕೆ
ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಗಳು ತಮ್ಮ ಹೆಸರು ಬಳಸುವುದನ್ನು ನಿರ್ಬಂಧಿಸುವಂತೆ ಕೋರಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಎಚ್. ಡಿ ದೇವೇಗೌಡ ಮತ್ತು ಎಚ್. ಡಿ. ಕುಮಾರಸ್ವಾಮಿ ಹೆಸರು ಬಳಸಂತೆ ಮಾಧ್ಯಮಗಳು, ಪತ್ರಿಕೆಗಳು ಮತ್ತು ಸಾಮಾಜಿಕ ಜಾಲತಾಣಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ. ‘ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ. ಮಾಧ್ಯಮಗಳಲ್ಲಿ ನಮ್ಮ ಹೆಸರು ಬಳಸುವುದರಿಂದ ತಮ್ಮ ಘನತೆ, ಗೌರವಕ್ಕೆ ಧಕ್ಕೆಯಾಗುತ್ತಿದೆ. ಹೀಗಾಗಿ ಮಧ್ಯಂತರ ತಡೆಯಾಜ್ಞೆ ನೀಡಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದರು. ಮನವಿ ಆಲಿಸಿದ ನ್ಯಾಯಾಧೀಶರು ಮಾಧ್ಯಮಗಳು ಸತ್ಯಕ್ಕೆ ದೂರವಾದ, ಆಧಾರ ರಹಿತ ಸುದ್ದಿಗಳನ್ನು ಅರ್ಜಿದಾರರ ವಿರುದ್ಧ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿ ಪ್ರತಿವಾದಿಗಳಿಗೆ ಸಮನ್ಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದ್ದಾರೆ.
- DAKSHINA KANNADA4 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- FILM6 days ago
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
- dehali5 days ago
ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
- BELTHANGADY5 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು