Connect with us

DAKSHINA KANNADA

ಬಿಜೆಪಿ ಡಬಲ್ ಇಂಜಿನ್ ಸರ್ಕಾರದಲ್ಲಿ ಸೈಲೆನ್ಸರ್ ಮಾತ್ರ ಸದ್ದು : ಯು ಟಿ ಖಾದರ್ ವ್ಯಂಗ್ಯ..!

Published

on

ಮಂಗಳೂರು : ಬಿಜೆಪಿ ಮಾಡುತ್ತಿರುವುದು ಜನ ಸಂಕಲ್ಪ ಯಾತ್ರೆ ಅಲ್ಲ ಸಂಕಷ್ಟ ಯಾತ್ರೆ ಮತ್ತು ಡಬಲ್ ಇಂಜಿನ್ ಸರ್ಕಾರದಲ್ಲಿ ಸೈಲೆನ್ಸರ್ ಮಾತ್ರ ಸದ್ದು ಮಾಡುತ್ತಿದೆಯೆಂದು ಶಾಸಕ ಹಾಗೂ ಮಾಜಿ ಸಚಿವ ಯು.ಟಿ.ಖಾದರ್ ವ್ಯಂಗ್ಯವಾಡಿದ್ದಾರೆ.

ಮಂಗಳೂರಿನಲ್ಲಿ ಕಾಂಗ್ರೆಸ್ ಜಿಲ್ಲಾ ಕಛೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಡಬಲ್ ಇಂಜಿನ್ ಸರಕಾರ ಅಪರೇಶನ್ ಕಮಲದ ಮೂಲಕ ಅಧಿಕಾರಕ್ಕೆ ಬಂದು ಜನಸಾಮಾನ್ಯರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಕನಿಷ್ಠ ರಸ್ತೆಗಳ ಗುಂಡಿಗಳನ್ನು ಮುಚ್ಚಿಸುವ ತಾಕತ್ತು ಸರಕಾರಕ್ಕೆ ಇಲ್ಲ. ಮುಖ್ಯ ರಸ್ತೆಗಳು ಹೊಂಡ ಗುಂಡಿಗಳಿಂದ ತುಂಬಿದ್ದು, ನನ್ನ ಕ್ಷೇತ್ರದ ಪಿಡಬ್ಲ್ಯುಡಿ ವ್ಯಾಪ್ತಿಯ ರಸ್ತೆ ಗುಂಡಿ ಮುಚ್ಚಿಸಲು 5 ಲಕ್ಷ ರೂ. ಅನುದಾನ ಮಂಜೂರಾಗಿದೆ.

ವಾಸ್ತವದಲ್ಲಿ ಕನಿಷ್ಠ 50 ಲಕ್ಷ ರೂ.ಗಳಾದರೂ ಬೇಕಾಗಿದೆ. ಶಾಸಕ ನಿಧಿಯನ್ನು ಬಳಸಿಕೊಂಡು ದೇರಳಕಟ್ಟೆ ಸೇರಿದಂತೆ ನನ್ನ ವ್ಯಾಪ್ತಿಯ ರಸ್ತೆಗಳ ಗುಂಡಿ ಮುಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ರಾಜ್ಯದ ಬಿಜೆಪಿ ಸರಕಾರ 2019ರಿಂದ ಈವರೆಗಿನ ಬಜೆಟ್‌ನ ಭರವಸೆ, ಘೋಷಣೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ.

ಪಣಜಿಯಿಂದ ಮಂಗಳೂರಿಗೆ ವಾಟರ್ ವೇ ಇನ್ನೂ ಆರಂಭ ಆಗಿಲ್ಲ. ಸಾಗರ ಮಾಲ ಯೋಜನೆ ಬಗ್ಗೆ ಕಳೆದ ಐದು ವರ್ಷಗಳಿಂದ ಮಾತನಾಡುತ್ತಿದ್ದಾರೆ. ಮೀನುಗಾರರಿಗೆ ಮನೆ ಕೊಡುವುದಾಗಿ ಹೇಳಿ ಇನ್ನೂ ಕೊಟ್ಟಿಲ್ಲ.

ಒಳನಾಡು ಮೀನುಗಾರಿಕೆಯಡಿ ಸಿಗಡಿ ಕೃಷಿ ಇನ್ನೂ ಗುರಿ ತಲುಪಿಲ್ಲ. ಕೇರಳ ಮಾದರಿ ಸಾಲ ಪರಿಹಾರ ಆಯೋಗ ರಚನೆ ಇನ್ನೂ ಆಗಿಲ್ಲ.

ಒಟ್ಟಿನಲ್ಲಿ ಮೀನುಗಾರರಿಗೆ ಬಿಜೆಪಿ ಸರಕಾರ ಮೋಸ ಮಾಡಿದ್ದಷ್ಟು ಯಾರೂ ಮಾಡಿಲ್ಲ. ಮೀನುಗಾರರ ಮುಗ್ಧತೆಯ ಲಾಭ ಪಡೆಯುತ್ತಾರೆ ಎಂದು ಯು.ಟಿ.ಖಾದರ್ ಆರೋಪಿಸಿದರು.

DAKSHINA KANNADA

“ಗಬ್ಬರ್ ಸಿಂಗ್” ಮೇ 3 ರಂದು ತೆರೆಗೆ ; ಇಂದು ವಿಡಿಯೋ ಸಾಂಗ್ ರಿಲೀಸ್..!

Published

on

ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ‘ಗಬ್ಬರ್ ಸಿಂಗ್’ ತುಳು ಚಲನ ಚಿತ್ರ ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಇದೀಗ ಈ ಸಿನೆಮಾದ ವಿಡಿಯೋ ಸಾಂಗ್‌ ರಿಲೀಸ್ ಆಗಿದ್ದು, ಜಸ್ಟ್‌ ರೋಲ್‌ ಫಿಲಂಸ್‌ನ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಸೂಜಿ ಕಣ್‌ದ ಮೋನಾಲಿಸಾ ಎಂಬ ಉತ್ತಮ ಸಾಹಿತ್ಯವನ್ನು ಹೊಂದಿರುವ ಹಾಡನ್ನು ರಿಲೀಸ್ ಮಾಡಲಾಗಿದೆ. ಹಾಡಿಗೆ ಉಮೇಶ್ ಮಿಜಾರ್ ಸಾಹಿತ್ಯ ಬರೆದಿದ್ದರೆ, ಬೋಜರಾಜ ವಾಮಂಜೂರು, ವಿಸ್ಮಯ ವಿನಾಯಕ ಹಾಗೂ ಸ್ವತಹ ಉಮೇಶ್ ಮಿಜಾರ್ ಹಾಡುಗಳನ್ನು ಹಾಡಿದ್ದಾರೆ.


‘ಗಬ್ಬರ್ ಸಿಂಗ್’ ತುಳು ಸಿನಿಮಾ ವಿಭಿನ್ನ ಕತೆಯನ್ನೊಳಗೊಂಡಿದ್ದು, ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ಕತೆಯನ್ನು ಹೆಣೆಯಲಾಗಿದೆ. ಉತ್ತಮ‌ ಕತೆ, ನವಿರಾದ ಹಾಸ್ಯದೊಂದಿಗೆ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಸಿನಿಮಾಕ್ಕೆ ಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಾಯಕ ನಟನಾಗಿ ಶರಣ್ ಶೆಟ್ಟಿ ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಯಾದಾಗ ಮತ್ತೆ ಶಾಂತಿ ನೆಲೆಸುವಂತೆ ಮಾಡುವ ಖಡಕ್ ಅಧಿಕಾರಿ ಪಾತ್ರದಲ್ಲಿ ಶರಣ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ.

‘ಗಬ್ಬರ್ ಸಿಂಗ್’ ಸಿನಿಮಾ ಮೇ 3 ರಂದು ಕರಾವಳಿ ಜಿ,ಲ್ಲೆಯಾದ್ಯಂತ ತೆರೆ ಕಾಣಲಿದೆ.  ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದ್ದು,  ಈಗಾಗಲೇ ಮಸ್ಕತ್ ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಸಾಂಸಾರಿಕ ಕತೆಯ ಜೊತೆ ಇಲ್ಲಿ ಹಾಸ್ಯವೂ ಚೆನ್ನಾಗಿ ವಕ್೯ಹೌಟ್ ಆಗಿದೆ. ನವೀನ್ ಪಡೀಲ್, ಬೋಜರಾಜ್ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ರವಿರಾಮ ಕುಂಜ ಇವರ ಹಾಸ್ಯ ಸಕ್ಕತ್ತಾಗಿದೆ. ಜೊತೆಗೆ ಗಿರೀಶ್ ಶೆಟ್ಟಿ ಕಟೀಲು, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್ ಮೊದಲಾದವರ ಪಾತ್ರಗಳೂ ಕೂಡಾ ಇಲ್ಲಿ ಪ್ರಾಮುಖ್ಯತೆಯನ್ನು ಪಡೆದಿದೆ. ಸಿನಿಮಾ ಮೇ 3 ರಂದು ತೆರೆ ಕಾಣಲಿದೆ ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.

ಛಾಯಾಗ್ರಹಣ: ರವಿ ಸುವರ್ಣ, ಸಂಕಲನ: ಪ್ರಜ್ವಲ್ ಸುವರ್ಣ, ಕಲೆ: ವೆಂಕಟೇಶ್ ಬೆಂಗಳೂರು, ಸಂಗೀತ: ಡೊಲ್ಪಿನ್ ಕೊಳಲಗಿರಿ. ಹಿನ್ನಲೆ ಸಂಗೀತ: ಕಾರ್ತಿಕ್ ಮುಲ್ಕಿ, ಸಾಹಸ: ಅಲ್ಟಿಮೆಟ್ ಶಿವ್ ನೃತ್ಯ: ಅವಿನಾಶ್ ಬಂಗೇರ, ಶುಭಕಿರಣ್, ಮೇಕಪ್ ಪ್ರದೀಪ್, ವಸ್ತ್ರಾಲಂಕಾರ : ಶರತ್ ಬರ್ಕೆ, ಸಹ ನಿರ್ದೇಶನ: ಪುಷ್ಪರಾಜ ರೈ, ಜಯರಾಜ್, ಸಹಾಯ: ಭಾಗ್ಯರಾಜ್.

 

 

Continue Reading

DAKSHINA KANNADA

ಪುತ್ತೂರಿನಲ್ಲಿ ಭೀ*ಕರ ಅಪಘಾ*ತ; ರಿಕ್ಷಾ ಚಾಲಕ ಸಾ*ವು

Published

on

ಪುತ್ತೂರು : ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್‌ ಮತ್ತು ಆಟೋ ರಿಕ್ಷಾ ನಡುವೆ ಡಿ*ಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃ*ತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ನಸುಕಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ.

ಆಟೋ ರಿಕ್ಷಾ ಚಾಲಕ 30 ವರ್ಷದ ಜೈಸನ್ ಮೃ*ತಪಟ್ಟವರು. ಪುತ್ತೂರಿಗೆ ಬರುತ್ತಿದ್ದ ಬಸ್ ಮತ್ತು ವಿರುದ್ಧ ದಿಕ್ಕಿನಿಂದ ಚಲಿಸುತ್ತಿದ್ದ ರಿಕ್ಷಾ ನಡುವೆ ಡಿ*ಕ್ಕಿ ಸಂಭವಿಸಿದೆ.

ಇದನ್ನೂ ಓದಿ : ಕಡೆ ಕ್ಷಣ ವರನಿಂದ ತಾಳಿ ಕಟ್ಟಲು ನಿರಾಕರಿಸಿದ ವಧು; ಮುರಿದು ಬಿದ್ದ ಮದುವೆ

ಅಪಘಾತದ ತೀವ್ರತೆಗೆ ರಿಕ್ಷಾ ನಜ್ಜುಗುಜ್ಜಾಗಿದೆ. ಚಾಲಕ ಜೈಸನ್ ರಿಕ್ಷಾದ ಒಳಗೆ ಸಿಲುಕಿ ಹಾಕಿಕೊಂಡಿದ್ದರು. ಪುತ್ತೂರು ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಜೈಸನ್‌ ಅವರನ್ನು ಹೊರತೆಗೆದಿದ್ದಾರೆ. ಆದರೆ, ಜೈಸನ್ ಆಗಲೇ ಇಹಲೋಕ ತ್ಯಜಿಸಿದ್ದರು.

Continue Reading

DAKSHINA KANNADA

ಕಡೆ ಕ್ಷಣ ವರನಿಂದ ತಾಳಿ ಕಟ್ಟಲು ನಿರಾಕರಿಸಿದ ವಧು; ಮುರಿದು ಬಿದ್ದ ಮದುವೆ

Published

on

ಉಪ್ಪಿನಂಗಡಿ: ಇತ್ತೀಚಿನ ದಿನಗಳಲ್ಲಿ ಕಡೆ ಕ್ಷಣದಲ್ಲಿ ಅದೆಷ್ಟೋ ಮದುವೆಗಳು ಮುರಿದು ಬಿದ್ದ ಘಟನೆ ನಡೆದಿದೆ. ಹಾಗೆಯೇ ಇಲ್ಲೊಂದು ಮದುವೆ ಮಂಟಪದಲ್ಲಿ ಕೊನೆಯ ಕ್ಷಣ ವರನಿಂದ ತಾಳಿ ಕಟ್ಟಲು ವಧು ನಿರಾಕರಸಿದ ಕಾರಣ ಮದುಮೆ ಮುರಿದು ಬಿದ್ದ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ನಡೆದಿದೆ.

ಕೊಣಾಲು ಗ್ರಾಮದ ಕೋಲ್ಪೆ ದಿ। ಬಾಬು ಗೌಡ ಅವರ ಪುತ್ರ ಉಮೇಶ ಅವರ ಮದುವೆಯು ಬಂಟ್ವಾಳ ತಾಲೂಕು ಕುಳ ಗ್ರಾಮದ ಕಂಟ್ರಮಜಲು ದಿ। ಕೊರಗಪ್ಪ ಗೌಡ ಅವರ ಪುತ್ರಿ ಸರಸ್ವತಿ ಅವರೊಂದಿಗೆ ನಿಗದಿಯಾಗಿತ್ತು. ಎ.26 ರಂದು ಬೆಳಗ್ಗೆ 11.35ರ ಮೂಹೂರ್ತದಲ್ಲಿ ಕಾಂಚನ ಪೆರ್ಲದ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ಮದುವೆ ನಿಗದಿಯಾಗಿತ್ತು. ಅದರಂತೆ ವರ ಹಾಗೂ ವಧುವಿನ ಕಡೆಯವರು ಮದುವೆಯ ದಿಬ್ಬಣದಲ್ಲಿ ಬಂದಿದ್ದರು. ವಧು ದಾರೆ ಸೀರೆ ಹಾಕಿ ಪರಸ್ಪರ ಹೂಮಾಲೆ ಕೂಡ ಹಾಕಿದ್ದರು. ಆದರೆ ತಾಳಿ ಕಟ್ಟಲು ಮುಂದಾದಗ ನನಗೆ ಈ ಮದುವೆ ಇಷ್ಟ ವಿಲ್ಲ ಎಂದು ವಧು ಹೇಳಿದ್ದಾಳೆ.

ಇದರಿಂದ ಎರಡೂ ಕಡೆಯವರು ಕಂಗಾಲಾಗಿ ವಧುವಿನ ಮನವೊಲಿಕೆಗೆ ಮುಂದಾದರು. ಆದರೆ ವಧು ಒಪ್ಪಲಿಲ್ಲ. ಬಳಿಕ ಎರಡೂ ಕಡೆ ಅವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತೆರಳಿದರು.

ಔತಣ ಕೂಟಕ್ಕೆ ಸಿದ್ಧತೆ:

ವರನ ಮನೆಯಲ್ಲಿ ಮಧ್ಯಾಹ್ನದ ಔತಣ ಕೂಟಕ್ಕೆ ಸುಮಾರು 500 ಜನರಿಗೆ ಮಾಂಸಾಹಾರಿ ಊಟ ತಯಾರಾಗಿತ್ತು. 1 ಸಾವಿರದಷ್ಟು ಐಸ್‌ಕ್ರೀಮ್ ವ್ಯವಸ್ಥೆಯನ್ನು ಮಾಡಲಾಗಿತ್ತು. ಮದುವೆ ಮುರಿದು ಬಿದ್ದ ಕಾರಣ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಮತ್ತೆ ಮದುವೆಯಾಗಲು ಒಪ್ಪಿದ ವಧು:

ಪೊಲೀಸ್ ಠಾಣೆಯಲ್ಲಿ ನಡೆದ ಮಾತುಕತೆ ವೇಳೆ ವಧು ಸರಸ್ವತಿ ಮತ್ತೆ ಮದುವೆ ಆಗಲು ಒಪ್ಪಿದ್ದರು. ಆದರೆ ಆಗ ವರ ಉಮೇಶ್ ಅವರು ಮದುವೆ ಆಗಲು ನಿರಾಕರಿಸಿದರು. ಇದರಿಂದಾಗಿ ಎರಡೂ ಕಡೆಯವರು ಪೊಲೀಸ್ ಠಾಣೆಯಲ್ಲಿ ಮುಚ್ಚಳಿಕೆ ಬರೆಯಿಸಿಕೊಂಡು ತಮ್ಮ ತಮ್ಮ ಮನೆಗಳಿಗೆ ತೆರಳಿದರು.

Continue Reading

LATEST NEWS

Trending