Connect with us

DAKSHINA KANNADA

ಉಳ್ಳಾಲದಲ್ಲಿ ದುಷ್ಕರ್ಮಿಗಳ ಅಟ್ಟಹಾಸ : ಕೊರಗಜ್ಜನ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್-ಕರಪತ್ರ..!

Published

on

ಉಳ್ಳಾಲದಲ್ಲಿ ದುಷ್ಕರ್ಮಿಗಳ ಅಟ್ಟಹಾಸ : ಕೊರಗಜ್ಜನ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್-ಕರಪತ್ರ..!

  outlaws in ullala- Condoms-pamphlets Found at Koragajja Kshetra..! 
ಮಂಗಳೂರು : ಮಂಗಳೂರಿನ ವಿವಿಧ ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಯಲ್ಲಿ ಕಾಂಡೊಮ್ ಹಾಗೂ‌‌ ಹಳೇ ನೋಟುಗಳ ಪ್ರಕರಣ ಮಾಸುವ ಮುನ್ನವೇ ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಮಂಗಳೂರು ಹೊರವಲಯದ ಉಳ್ಳಾಲ ನಗರಸಭಾ ವ್ಯಾಪ್ತಿಯ ಪ್ಯಾರಿಸ್ ಜಂಕ್ಷನ್​ನಲ್ಲಿರುವ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ‌ ಅದೇ ರೀತಿಯ ಕೃತ್ಯ ಬೆಳಕಿಗೆ ಬಂದಿದೆ.

ಕಾಂಡೊಮ್ ಸಹಿತ ಚುಣಾವಣಾ ಪ್ರಚಾರದ ಪತ್ರಗಳು ಹಾಗೂ ಸಿಎಂಯಾದಿಯಾಗಿ ಬಿಜೆಪಿ ಮುಖಂಡರ ಬಗ್ಗೆ ಅವಹೇಳನಕಾರಿಯಾಗಿ ಬರೆದು ಅವರ ಭಾವಚಿತ್ರ ವಿರೂಪಗೊಳಿಸಿದಂತಹ ಘಟನೆ ಕೂಡ ನಡೆದಿದೆ.

ಕೋಮುಸೂಕ್ಷ್ಮ ಪ್ರದೇಶವಾದ ಉಳ್ಳಾಲದಲ್ಲಿ‌ ಇಂತಹ ಹೇಯ ಕೃತ್ಯ ನಡೆದಿದ್ದು ಸ್ಥಳೀಯರು ಹಾಗೂ ಭಕ್ತವೃಂದ ಆರೋಪಿಗಳನ್ನು ಪತ್ತೆ ಮಾಡುವಂತೆ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಉಳ್ಳಾಲದ ಕೊರಗಜ್ಜ ಸೇವಾ ಸಮಿತಿಯವರು ಪ್ರತೀ ತಿಂಗಳ ಸಂಕ್ರಾಂತಿಯಂದು ಕಾಣಿಕೆ ಡಬ್ಬಿಯ ಹಣ ತೆಗೆಯುವ ವಾಡಿಕೆ ಇಟ್ಟಿದ್ದಾರೆ.

ಈ ಬಾರಿ ಸ್ವಲ್ಪ ತಡವಾಗಿ ಇಂದು ಸಂಜೆ ಕಾಣಿಕೆ‌ ಡಬ್ಬಿ ತೆರೆದಿದ್ದು ಡಬ್ಬಿಯ ಒಳಗೆ ಕಾಂಡೋಮ್ ಗಳು ಮತ್ತು ಪ್ರಚೋದನಕಾರಿ ಬರಹಗಳಿದ್ದ ಪ್ಲೆಕ್ಸ್ ಒಂದು ಲಭಿಸಿದೆ.

ಬೆಂಗಳೂರಿನ K.R.I.D .L ನಿಗಮ ಅಧ್ಯಕ್ಷ ಎಂ.ರುದ್ರೇಶ್ ಅವರಿಗೆ ಶುಭಕೋರಿದ ಪ್ಲೆಕ್ಸ್ ಇದಾಗಿದ್ದು ಫ್ಲೆಕ್ಸಲ್ಲಿರುವ ಸಿಎಂ ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಅಮಿತ್ ಷಾ, ಬಿಜೆಪಿ ರಾಜ್ಯಾಧ್ಯಕ್ಷ ನಳಿಕ್ ಕುಮಾರ್ ಸೇರಿದಂತೆ ಅನೇಕ ಬಿಜೆಪಿ ನಾಯಕರ ಭಾವ ಚಿತ್ರಗಳಿದ್ದು ಎಲ್ಲವನ್ನು ಗೀಚಿ ವಿರೂಪಗೊಳಿಸಲಾಗಿದೆ.

ರಾಜಕಾರಣಿಗಳನ್ನು ಹೊಡೆದು ಕೊಲ್ಲಬೇಕು..!

ದೇವಲೋಕದಿಂದ ಹೊರಹಾಕಲ್ಪಟ್ಟ ದ್ರೋಹಿ ದೂತರುಗಳು ಸೇಡಿನ ಸ್ವಭಾವ ಹೊಂದಿದ್ದು ವಿಗ್ರಹಗಳ ಮೂಲಕ ಭೂಲೋಕದ ಜನರನ್ನು ಭ್ರಷ್ಟರನ್ನಾಗಿಸಿ ನಕಲಿ ದೇವರಾಗಿ ಅನಾದಿ ಕಾಲದಿಂದ ಮೆರೆಯಲ್ಪಡುತ್ತಿವೆ, ಎಚ್ಚರ.

ರಕ್ತ ಹೀರುವ ಸೊಳ್ಳೆಗಳಂತೆ ಜನರನ್ನು ದೋಚಿ ,ಬಾಚಿ ತಿಂದು ತೇಗುವ ಈ ಹಡಬೆ ರಾಜಕಾರಣಿಗಳನ್ನು ಅಟ್ಟಾಡಿಸಿ ಹೊಡೆದು , ಹಿಡಿದು ಕೊಲ್ಲ ಬೇಕಾಗಿದೆ. ಜನರು ಸಿದ್ಧರಾಗಬೇಕು ಎಂದು ಪ್ಲೆಕ್ಸಲ್ಲಿ ಬರೆಯಲಾಗಿದೆ.

ಕೊರಗಜ್ಜ ಸೇವಾ ಸಮಿತಿಯವರು ಈ ಬಗ್ಗೆ ಉಳ್ಳಾಲ ಠಾಣೆಗೆ ದೂರು ನೀಡಿದ್ದು, ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿದ್ದಾರೆ.

ಇತ್ತೀಚೆಗೆ ಮಂಗಳೂರು ನಗರದ ಕೊಟ್ಟಾರದ ಬಬ್ಬುಸ್ವಾಮಿ ಮತ್ತು ಅತ್ತಾವರದ ಬಾಬುಗುಡ್ಡೆಯ ಕೊರಗಜ್ಜನ ಕಟ್ಟೆಯ ಕಾಣಿಕೆ ಡಬ್ಬಿಯಲ್ಲೂ ಇದೇ ರೀತಿಯ ಅವಹೇಳನ ಬರಹದ ಪತ್ರ ಮತ್ತು ಕಾಂಡೋಮ್ ಕಂಡುಬಂದಿತ್ತು.

ಕೊಣಾಜೆ ಠಾಣಾ ವ್ಯಾಪ್ತಿಯಲ್ಲೂ ದುಷ್ಕೃತ್ಯ..!

ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮಲಾರ್ ಬೆಳ್ಮಾ ಪ್ರದೇಶದ ಗೋಪಾಲ ಕೃಷ್ಣ ಮಂದಿರದಲ್ಲೂ ವಿಖೃತಿ ಮೆರೆಯಲಾಗಿದ್ದು ಭಾಗವಾ ಧ್ವಜವನ್ನು ಧ್ವಂಸ ಮಾಡಿ ಪರಿಸರವನ್ನು ಮಲ-ಮೂತ್ರಗಳಿಂದ ಅಪವಿತ್ರಗೊಳಿಸಲಾಗಿದೆ.

ಘಟನಾ ಸ್ಥಳಗಳಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಗಳನ್ನು ಶೀಘ್ರವೇ ಬಂಧಿಸುವ ಭರವಸೆ ನೀಡಿದ್ದಾರೆ.

 

 

news update..!

ಇನ್ನು ಉಳ್ಳಾಲ ಕೇಂದ್ರ ಬಸ್ಸು ನಿಲ್ದಾಣದಲ್ಲಿರುವ ಸ್ವಾಮಿ ಕೊರಗಜ್ಜ ಮತ್ತು ಗುಳಿಗಜ್ಜನ ಕ್ಷೇತ್ರದ ಕಾಣಿಕೆ ಹುಂಡಿಗೆ ಕಿಡಿಗೇಡಿಗಳು ಕಾಂಡಮ್ ಮತ್ತು ನಿಂದನಾರ್ಹ ಬರಹಗಳುಲ್ಲ ಭಿತ್ತಿಪತ್ರವನ್ನು ಹಾಕಿ ವಿಕೃತಿ ಮೆರೆದಿದ್ದು, ಈ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ ಕೊರಗಜ್ಜ ,ಗುಳಿಗಜ್ಜನ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ವಿಕೃತಿ ಮೆರೆದ ಕಿಡಿಗೇಡಿಗಳಿಗೆ ಕ್ಷೇತ್ರದ ಕಾರಣೀಕ ಶಕ್ತಿಗಳಾದ ಗುಳಿಗಜ್ಜ ಮತ್ತು ಕೊರಗಜ್ಜನವರು ತಕ್ಷಣವೇ ಶಿಕ್ಷಿಸಿ ಸಾನಿಧ್ಯದ ಕೀರ್ತಿ ಬೆಳಗಿಸುವಂತೆ ಸಾಮೂಹಿಕವಾಗಿ ಪ್ರಾರ್ಥಿಸಲಾಯಿತು.

 

Ancient Mangaluru

ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

Published

on

ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.

ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು.  ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ  ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು.  ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ  ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Continue Reading

DAKSHINA KANNADA

ಉಡುಪಿ : ಬೈಕ್ ಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ

Published

on

ಉಡುಪಿ : ಉಡುಪಿಯ ಬ್ರಹ್ಮಾವರದ ಧರ್ಮಾವರಂ ಎಂಬಲ್ಲಿ ಬೈಕಿಗೆ ಬಸ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಉಪ್ಪಿನಕೋಟೆಯ 31 ವರ್ಷ ಪ್ರಾಯದ ಪ್ರೀತಮ್‌ ಡಿ’ ಸಿಲ್ವಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ನಡೆದಿದೆ.

ಪ್ರೀತಮ್‌ ಅವರು ಬೈಕ್‌ ಚಲಾಯಿಸಿಕೊಂಡು ಬ್ರಹ್ಮಾವರ ಆಕಾಶವಾಣಿ ಪೆಟ್ರೋಲ್‌ ಪಂಪ್‌ ಕಡೆಯಿಂದ ಸರ್ವಿಸ್‌ ರೋಡ್‌ನ‌ಲ್ಲಿ ಆಗಮಿಸಿ ಉಪ್ಪಿನಕೋಟೆಗೆ ತೆರಳಲು ಡಿವೈಡರ್‌ ಬಳಿ ಸಾಗುತ್ತಿದ್ದಾಗ ಎದುರಿನಿಂದ ಬಂದ ಖಾಸಗಿ ಬಸ್‌ ಢಿಕ್ಕಿ ಹೊಡೆಯಿತು. ಅವಿವಾಹಿತರಾಗಿದ್ದ ಪ್ರೀತಮ್‌ ಕೆಟರಿಂಗ್‌ ಉದ್ಯಮ ನಡೆಸುತ್ತಿದ್ದರು. ಪ್ರೀತಮ್‌ ಅವರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Continue Reading

DAKSHINA KANNADA

ಮನೆ ಬಿಟ್ಟು ಓಡಿ ಹೋಗಿದ್ದ ಬಂಟ್ವಾಳದ ಪ್ರೇಮಿಗಳು ಕಾಸರಗೋಡಿನಲ್ಲಿ ಪತ್ತೆ

Published

on

ಬಂಟ್ವಾಳ : 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕು ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿಗಳಾದ ಅಕ್ಕ ಪಕ್ಕದ ಮನೆಗಳ ಯುವಕ ಹಾಗೂ ಯುವತಿಯನ್ನು ಬಂಟ್ವಾಳ ಪೊಲೀಸರು ಕೇರಳದ ಕಾಸರಗೋಡು ಜಿಲ್ಲೆಯ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿ ಊರಿಗೆ ಕರೆ ತಂದಿದ್ದಾರೆ.

ಉದ್ದೊಟ್ಟು ನಿವಾಸಿ ಅಬ್ದುಲ್‌ಹಮೀದ್‌ಅವರ ಪುತ್ರಿ ಆಯಿಸತ್‌ರಸ್ಮಾ(18) ಮತ್ತು ಹೈದರ್‌ಅವರ ಪುತ್ರ ಮಹಮ್ಮದ್‌ಸಿನಾನ್‌ (23) ಅವರು ನ. 23 ರಂದು ತಂತಮ್ಮ ಮನೆಗಳಲ್ಲಿ ಮಲಗಿದ್ದವರು ನ. 24ರಂದು ಬೆಳಗಾಗುವಷ್ಟರಲ್ಲಿ ಕಾಣೆಯಾಗಿದ್ದರು. ಮನೆಯವರ ದೂರಿನಂತೆ ಹುಡುಕಾಟ ನಡೆಸಿದ ಬಂಟ್ವಾಳ ಪೊಲೀಸರು ಅವರಿಬ್ಬರನ್ನೂ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿದ್ದು, ಠಾಣೆಗೆ ತಂದು ವಿಚಾರಿಸಿದಾಗ ತಾವಿಬ್ಬರೂ ಪರಸ್ಪರ ಪ್ರೀತಿಸಿದ್ದು, ಮದುವೆಯಾಗುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

Continue Reading

LATEST NEWS

Trending