ಬೆಂಗಳೂರು: ತನ್ನ ಮನೆಯಿಂದಲೇ ಕೋಟಿ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ ಕದ್ದ ಮಗಳ ವಿರುದ್ಧವೇ ತಾಯಿ ದೂರು ನೀಡಿದ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ. ಎಫ್ಐಆರ್ ದಾಖಲಾಗಿದೆ.
ವಿಜಯಲಕ್ಷ್ಮಿ ಎಂಬುವರು ಮಗಳು ತೇಜವಂತಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವಿಜಯಲಕ್ಷ್ಮಿ ಅವರು ಕೆಲ ದಿನಗಳ ಹಿಂದೆ ಅಪರೇಶನ್ಗೆ ಒಳಗಾಗಿದ್ದರು.
ಈ ವೇಳೆ ಮನೆಗೆ ಬಂದಿದ್ದ ತೇಜವಂತಿ ಲಾಕರ್ನಲ್ಲಿ ಸುರಕ್ಷಿತವಾಗಿ ಇಡುವುದಾಗಿ ಹೇಳಿ ನಾಲ್ಕು ಕೋಟಿ ಮೌಲ್ಯದ
ಏಳೂವರೆ ಕೆಜಿ ವಜ್ರ ಹಾಗೂ ಚಿನ್ನಾಭರಣ ತೆಗೆದುಕೊಂಡು ಹೋದ ನಂತರ ತೇಜವಂತಿ ನಾಪತ್ತೆಯಾಗಿದ್ದಾಳೆ.
ಈ ಕುರಿತು ವಿಜಯಲಕ್ಷ್ಮಿ ಅವರು ಜೆ ಪಿನಗರ ಠಾಣೆಗೆ ದೂರು ನೀಡಿದ್ದಾರೆ. ಭಾರತೀಯ ದಂಡಸಂಹಿತೆಯ ಸೆಕ್ಷನ್ 420ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದ್ದು,
ತೇಜವಂತೆ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.