DAKSHINA KANNADA
ಸುಳಿವೇ ಇಲ್ಲದ ಪ್ರಕರಣ ಬೇಧಿಸಿದ್ದ ಪೊಲೀಸ್ ಅಧಿಕಾರಿ ಪಿ.ಎ ಹೆಗ್ಡೆ
ಮಂಗಳೂರು: ಕೇಂದ್ರ ಗೃಹ ಇಲಾಖೆ ನೀಡುವ ತನಿಖಾ ಶ್ರೇಷ್ಠತೆ ಪದಕ ಗೌರವಕ್ಕೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಕೇಂದ್ರ ಉಪವಿಭಾಗದ ಎಸಿಪಿ ಪರಮೇಶ್ವರ್ ಹೆಗ್ಡೆ ಅವರು ಆಯ್ಕೆಯಾಗಿದ್ದಾರೆ. ಅಪರಾಧ ತನಿಖೆಯ ಉನ್ನತ ವೃತ್ತಿಪರ ಗುಣಮಟ್ಟಕ್ಕಾಗಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಎಸಿಪಿ ಪರಮೇಶ್ವರ್ ಹೆಗ್ಡೆ ಅವರು ಸುಳಿವೇ ಇಲ್ಲದ ಪ್ರಕರಣವೊಂದನ್ನು ಬೇಧಿಸಿದ್ದರು.
2008ರಲ್ಲಿ ಮುಲ್ಕಿ ಠಾಣೆಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಆಗಿದ್ದಾಗ ಯಾವುದೇ ಸುಳಿವು ಇಲ್ಲದ ಪ್ರಕರಣವೊಂದನ್ನು ಪತ್ತೆ ಮಾಡಿ ಗಮನ ಸೆಳೆದಿದ್ದರು. ಚಾಲಕನೊಬ್ಬನನ್ನು ಕೊಲೆ ಮಾಡಿ ಆತನ ಕಾರು ಅಪಹರಿಸಿದ್ದ ದರೋಡೆಕೋರರ ತಂಡ ಹಳೆಯಂಗಡಿ ಪ್ರದೇಶದಿಂದ ಇನ್ನೋವಾ ಕಾರೊಂದು ಚಾಲಕನ ಸಹಿತ ನಾಪತ್ತೆಯಾಗಿತ್ತು.
ಈ ಬಗ್ಗೆ ಮುಲ್ಕಿ ಠಾಣೆಯಲ್ಲಿ ಕಾರಿನ ಮಾಲೀಕರು ಪ್ರಕರಣ ದಾಖಲಿಸಿದ್ದರು. ಚಾಲಕನೇ ಕಾರನ್ನು ತೆಗೆದುಕೊಂಡು ಹೋಗಿ ನಾಪತ್ತೆಯಾಗಿದ್ದಾನೆ ಎಂದು ಹೇಳಲಾಗಿತ್ತು.
ಆದರೆ, ಎರಡು ದಿನಗಳ ಬಳಿಕ ಚಾಲಕ ಪ್ರವೀಣ್ ಎಂಬಾತನ ಮೃತದೇಹ ಸುರತ್ಕಲ್ ಸಮೀಪದ ಕಳವಾರಿನಲ್ಲಿ ಕಲ್ಲು ಕೋರೆಯೊಂದರಲ್ಲಿ ಪತ್ತೆಯಾಗಿತ್ತು.
ಆದರೆ ಕಾರು ನಾಪತ್ತೆಯಾಗಿತ್ತು. ಕಾರಿನ ಜಾಡು ಹಿಡಿದು ಸಾಕ್ಷ್ಯ ಸಂಗ್ರಹಿಸಿದ ಪೊಲೀಸ್ ಸಾಂದರ್ಭಿಕ ಸಾಕ್ಷ್ಯಗಳನ್ನು ಆಧರಿಸಿ ತನಿಖೆ ಮುಂದುವರಿಸುತ್ತಿರುವಾಗಲೇ ಬೆಳ್ತಂಗಡಿಯಲ್ಲಿ ಅನುಮಾನಾಸ್ಪದ ನೆಲೆಯಲ್ಲಿ ತಿರುಗಾಡುತ್ತಿದ್ದ ಕಾರನ್ನು ಪೊಲೀಸರು ಬೆನ್ನಟ್ಟಿದಾಗ,
ಕಾರನ್ನು ಬಿಟ್ಟು ಆಗಂತುಕರು ಪರಾರಿಯಾಗಿದ್ದರು. ತನಿಖೆಯಲ್ಲಿ ಅದು ಹಳೆಯಂಗಡಿಯಲ್ಲಿ ನಾಪತ್ತೆಯಾದ ಕಾರೆಂದು ತಿಳಿದು ಬಂದಿತ್ತು.
ಕಾರನ್ನು ದರೋಡೆಕೋರರ ತಂಡ ಅಪಹರಿಸಿದ್ದು ಮತ್ತು ತಂಡ ದರೋಡೆ ಕೃತ್ಯಕ್ಕೆ ಬಳಸಿಕೊಂಡಿದ್ದು ದೃಢಗೊಂಡಿತ್ತು. ನೇರ ಸಾಕ್ಷ್ಯಗಳಿಲ್ಲದೇ ಕೆಳ ನ್ಯಾಯಾಲಯದಲ್ಲಿ ಕೇಸ್ ಬಿದ್ದುಹೋಗಿತ್ತು.
ಬಳಿಕ ವಿವಿಧ ಕಡೆ ಡರೋಡೆ ನಡೆಸಿರುವ ತಂಡವನ್ನು ಮುಲ್ಕಿ ಪೊಲೀಸರು ಬಂಧಿಸಿದ್ದರು. ಆರೋಪಿ ಸಫ್ವಾನ್ ಮತ್ತು ಆತನ ತಂಡದ ಕೆಲವರು ಬಂಧಿತರಾಗಿದ್ದರು.
ಇಲ್ಲಿ, ಪೊಲೀಸರಲ್ಲಿ ನೇರ ಸಾಕ್ಷ್ಯಗಳಿಲ್ಲದೇ ಸಾಂದರ್ಭಿಕ ಮತ್ತು ತಾಂತ್ರಿಕ ಸಾಕ್ಷ್ಯಗಳಷ್ಟೇ ಇತ್ತು. ಈ ಸಾಕ್ಷ್ಯಗಳಿಂದಲೇ ಆರೋಪವನ್ನು ಪೊಲೀಸರು ಸಾಬೀತು ಮಾಡಿದ್ದರು.
ಆದರೆ, ಮಂಗಳೂರಿನ ನ್ಯಾಯಾಲಯದಲ್ಲಿ ಕೇವಲ ಸಾಂದರ್ಭಿಕ ಸಾಕ್ಷ್ಯಗಳ ಕಾರಣದಿಂದ ಪ್ರಕರಣದಲ್ಲಿ ಆರೋಪಿಗಳನ್ನು ಖುಲಾಸೆ ಮಾಡಲಾಗಿತ್ತು.
ಹೈಕೋರ್ಟ್ನಲ್ಲಿ ಸರ್ಕಾರಿ ಅಭಿಯೋಜಕರ ಮೂಲಕ ಪ್ರಕರಣವನ್ನು ಹೈಕೋರ್ಟಿನಲ್ಲಿ ಪ್ರಶ್ನೆ ಮಾಡಲಾಗಿತ್ತು. ತನಿಖಾಧಿಕಾರಿ ಆಗಿದ್ದ ಪಿಎ ಹೆಗ್ಡೆ ಸಾಕ್ಷ್ಯವನ್ನು ನಿರೂಪಿಸಿರುವುದನ್ನು ಪರಿಗಣಿಸಿ, ಹೈಕೋರ್ಟ್ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಿತ್ತು.
ಕಳೆದ 2020ರ ಫೆಬ್ರವರಿ ತಿಂಗಳಲ್ಲಿ ಆರೋಪಿಗಳಿಗೆ ಹೈಕೋರ್ಟ್ ಶಿಕ್ಷೆ ಪ್ರಕಟ ಮಾಡಿತ್ತು. ಇದೀಗ ಸುಳಿವೇ ಇಲ್ಲದ ಪ್ರಕರಣದಲ್ಲಿ ತನಿಖಾಧಿಕಾರಿ
ಪಿ.ಎ. ಹೆಗಡೆ ಮಾಡಿದ್ದ ಕೆಲಸಕ್ಕಾಗಿ ಕೇಂದ್ರ ಗೃಹ ಇಲಾಖೆಯಿಂದ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.
DAKSHINA KANNADA
ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ
ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ಮತದಾನ ಮಾಡುವಾಗ ಫೋನ್ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.