Connect with us

DAKSHINA KANNADA

ಪತ್ತನಾಜೆ ಪ್ರಯುಕ್ತ ಕರಾವಳಿಯಲ್ಲಿ ಯಕ್ಷಗಾನ-ಉತ್ಸವಗಳಿಗೆ ಬಿತ್ತು ಬ್ರೇಕ್…

Published

on

ಮಂಗಳೂರು: ಬಾರ್ಕೂರಿನಿಂದ ಕಾಸರಗೋಡಿನ ಚಂದ್ರಗಿರಿಯವರೆಗೆ ವ್ಯಾಪಿಸಿಕೊಂಡಿರುವ ಪರಶುರಾಮ ಸೃಷ್ಠಿ ತುಳುನಾಡಿನಲ್ಲಿ ಇಂದು ಪತ್ತನಾಜೆ ಸಂಭ್ರಮ.

ಕೋಲ, ನೇಮ,ಅಂಕ ಆಯನ, ಆಚರಣೆಗಳಿಗೆ ತೆರೆ ಬೀಳುವ ವಿಶೇಷ ದಿನವೇ ಈ “ಪತ್ತನಾಜೆ”. ಪತ್ತನಾಜೆಯಿಂದ ಹಿಡಿದು ದೀಪಾವಳಿವರೆಗೂ ತುಳುನಾಡಿನಲ್ಲಿ ಧಾರ್ಮಿಕ ಉತ್ಸವಗಳ ಆಚರಣೆ ನಡೆಯುವುದಿಲ್ಲ. ಒಂದರ್ಥದಲ್ಲಿ ಈ ಎಲ್ಲಾ ಆಚರಣೆಗಳಿಗೆ ಒಪೂರ್ಣವಿರಾಮ ನೀಡುವುದೇ ಈ ಪತ್ತನಾಜೆ ಎಂದರೆ ತಪ್ಪಾಗಲ್ಲ.

ಪತ್ತನಾಜೆ ಎಂದರೇನು?

ತುಳು ಪಂಚಾಂಗದಲ್ಲಿ ವೃಷಭ ಮಾಸಕ್ಕೆ ಬೇಶ ತಿಂಗಳು ಎಂದು ಕರೆಯುತ್ತಾರೆ. ಬೇಶ ತಿಂಗಳಿನಲ್ಲಿ ಬರುವ 10ನೇ ದಿನಕ್ಕೆ ಪತ್ತನಾಜೆ ಎಂದು ಕರೆಯುತ್ತಾರೆ.

ಹಿಂದಿನ ಕಾಲದಲ್ಲಿ ಪತ್ತನಾಜೆಯಿಂದ ಗದ್ದೆ ಉಳುವ ಮೂಲಕ ಕೃಷಿ ಕೆಲಸ ಮೊದಲ್ಗೊಂಡು 18ನೇ ದಿನ ನೇಜಿ ನೆಡುವ ಸಂಪ್ರದಾಯವಿತ್ತು. ಮೊದಲೆಲ್ಲ ಆರು ತಿಂಗಳು ಮಳೆಗಾಲ, ಆರು ತಿಂಗಳು ಸೆಕೆಗಾಲವಿದ್ದು ಮೇ ತಿಂಗಳಿಂದ ನವೆಂಬರ್ ತಿಂಗಳವರೆಗೆ ಗದ್ದೆ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಯಕ್ಷಗಾನ, ನೇಮ, ಕೋಲ ಮುಂತಾದ ಧಾರ್ಮಿಕ ಕಾರ್ಯಕ್ರಮಗಳಿಗೆ ಹೋಗಲು ಪುರುಷೋತ್ತು ಸಿಗುತ್ತಿರಲಿಲ್ಲ. ಆದ್ದರಿಂದ ಇಂತಹ ಕಾರ್ಯಕ್ರಮಗಳು ಕೆಲವೊಮ್ಮೆ ಸ್ಥಗಿತಗೊಳ್ಳುತ್ತಿತ್ತು.

ನವೆಂಬರ್ ತಿಂಗಳಿನಲ್ಲಿ ಎರ್ಮಾಳಿನಲ್ಲಿ ನಡೆಯುವ ಜಾತ್ರಾ ಮಹೋತ್ಸವದ ಮೂಲಕ ಕರಾವಳಿಯಲ್ಲಿ ಉತ್ಸವವಗಳು ಮೊದಲ್ಗೊಂಡು ಮೇ ತಿಂಗಳ ಮೇಷ ಸಂಕ್ರಮಣದಂದು ಪಾವಂಜೆ ಸಮೀಪದ ಖಂಡೇವಿನಲ್ಲಿ ನಡೆಯುವ ಜಾತ್ರೆ ಮೂಲಕ ಸಂಪನ್ನಗೊಳ್ಳುತ್ತದೆ ಎಂಬ ಮಾತಿದೆ.

ಆದರೆ ಅವಿಭಜಿತ ದ.ಕ ಜಿಲ್ಲೆಯಲ್ಲಿ ಕೊಡಿ ಏರಿ ನಡೆಸುವ ಧಾರ್ಮಿಕ ಉತ್ಸವಗಳಲ್ಲಿ ಕೊಂಡಾಣ ಜಾತ್ರೆಯು ಪತ್ತನಾಜೆಯ ಹಿಂದಿನ ದಿನ ಸಂಪನ್ನಗೊಳ್ಳುವುದು ಪ್ರತೀತಿ.

ಪತ್ತನಾಜೆ ವಿಶೇಷತೆ:
ಪತ್ತನಾಜೆ ದಿನದಂದು ಮಳೆ ಬಂದೇ ಬರುತ್ತದೆ ಎಂಬುವುದು ಪೂರ್ವಜರ ನಂಬಿಕೆ. ಈ ದಿನ ಎರಡು ಮಳೆ ಹನಿ ಆದರೂ ಬೀಳಲೇಬೇಕು.

ಆದರೆ ಈಗ ಪ್ರಕೃತಿಯ ಏರಿಳಿತಗಳಿಂದ ಹವಾಮಾನದಲ್ಲಿ ವ್ಯತ್ಯಾಸ ಉಂಟಾದರೂ ಸಂಪ್ರದಾಯದ ಕ್ರಮದಲ್ಲಿ ಯಾವುದೇ ರೀತಿಯ ರಾಜಿ ನಡೆಯುವುದಿಲ್ಲ.

ಈ ದಿನ ದೇವಸ್ಥಾನಗಳಲ್ಲಿ ವಸಂತ ಪೂಜೆ ನಡೆದು ದೇವರು ಗರ್ಭಗುಡಿಯೊಳಗೆ ಸೇರುತ್ತಾರೆ. ದೀಪಾವಳಿಯ ಬಳಿಕ ದೇವರು ಗರ್ಭಗುಡಿಯಿಂದ ಹೊರಗೆ ಬಂದು ಉತ್ಸವಗಳು ಆರಂಭಗೊಳ್ಳುತ್ತದೆ. ಹಿಂದೂ ಸಂಪ್ರದಾಯದ ಪ್ರಕಾರ ಆಟಿ ತಿಂಗಳ ನಂತರ ಬರುವ ಸೋಣ ತಿಂಗಳಿನಲ್ಲಿ ಶುಭ ಕಾಲವಿರುತ್ತದೆ. ಆದ್ದರಿಂದ ಅಂದಿನಿಂದ ಎಲ್ಲಾ ಆಚರಣೆಗಳು, ಉತ್ಸವಗಳು ಶುರುವಾಗುತ್ತದೆ.

ಯಕ್ಷಗಾನ ತಿರುಗಾಟಕ್ಕೂ ಸಮಾಪ್ತಿ:
ಯಕ್ಷಗಾನಗಳ ಮೇಳಗಳು ಕೂಡಾ ಪತ್ತನಾಜೆಯಂದು ತಮ್ಮ ಕೊನೆಯ ಪ್ರದರ್ಶನ ನೀಡಿ ಗೆಜ್ಜೆ ಕಳಚಿ ಪೂಜೆ ಸಲ್ಲಿಸಿ ತಿರುಗಾಟ ಮುಕ್ತಾಯ ಮಾಡುತ್ತದೆ. ದೀಪಾವಳಿಯ ಬಳಿಕ ದೀಪೋತ್ಸವ ಸಂದರ್ಭದಲ್ಲಿ ಪುನಃ ಪ್ರದರ್ಶನಕ್ಕೆ ಅಣಿಯಾಗುತ್ತದೆ.

ಪತ್ತನಾಜೆಯ ಬಳಿಕ ಯಕ್ಷಗಾನ ಮೇಳಗಳು ತಮ್ಮ ಪ್ರದರ್ಶನ ನಿಲ್ಲಿಸುವುದರಿಮದ ಅದರ ಕಲಾವಿದರಿಗೆ ಜೀವನ ನಿರ್ವಹಣೆ ಕಷ್ಟ.

ಶ್ರೀ ಕ್ಷೇತ್ರ ಕಟೀಲಿನಲ್ಲಿ ಕಟೀಲು ಮೇಳದ ಕಲಾವಿದರ ಆರ್ಥಿಕ ಸಮಸ್ಯೆಯನ್ನು ಮನಗೊಂಡು ಯಕ್ಷ ಧರ್ಮ ಬೋಧಿನಿ ಟ್ರಸ್ಟ್ ಕಲಾವಿದರಿಗೆ ಮಳೆಗಾಲದಲ್ಲೂ ವೇತನ ನೀಡುತ್ತದೆ.

ಯಕ್ಷಗಾನದ ತಿರುಗಾಟದ ಸಂದರ್ಭದಲ್ಲಿ ರಂಗಸ್ಥಳ ಮತ್ತಿತ್ತರ ವಿಧದಲ್ಲಿ ಬರುವ ಅನುದಾನದಲ್ಲಿನ ಉಳಿಕೆ ಮೊತ್ತವನ್ನು ಕಟೀಲಿನ 6 ಮೇಳ ಸುಮಾರು 300 ಕಲಾವಿದರಿಗೆ 6 ತಿಂಗಳ ಕಾಲ ಮಾಸಿಕ ವೇತನವಾಗಿ ಕಳೆದ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ.

ಈ ಬಾರಿ ಧರ್ಮಸ್ಥಳ, ಕಟೀಲು, ಸಾಲಿಗ್ರಾಮ, ಮಂದಾರ್ತಿ, ಸಸಿಹಿತ್ಲು, ಬಪ್ಪನಾಡು, ಪಾವಂಜೆ, ಹನುಮಗಿರಿ, ಶ್ರೀ ಶನೀಶ್ವರ ಮೇಳ ಸೇರಿದಂತೆ 15ಕ್ಕೂ ಹೆಚ್ಚು ಮೇಳಗಳು ತಿರುಗಾಟ ನಡೆಸಿವೆ.

 

Click to comment

Leave a Reply

Your email address will not be published. Required fields are marked *

DAKSHINA KANNADA

ಬಡಗುತಿಟ್ಟು ಯಕ್ಷಗಾನದ ಗಾನ ಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ..

Published

on

ಉಡುಪಿ: ಬಡಗುತಿಟ್ಟು ಯಕ್ಷಗಾನ ಲೋಕದ ಶ್ರೇಷ್ಠ ಭಾಗವತ, ಸ್ವರ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ (67ವ) ಇಹಲೋಕ ತ್ಯಜಿಸಿದ್ದಾರೆ. ಅಲ್ಪಕಾಲದಿಂದ ಅಸೌಖ್ಯದಿಂದಿದ್ದ ಇವರು ಬೆಂಗಳೂರಿನಲ್ಲಿರುವ ಪುತ್ರನ  ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನ ಮನೆಯಲ್ಲಿ ಇಂದು(ಎ.25) ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಕಾಳಿಂಗ ನಾವುಡರ ಬಳಿಕ ಮಧುರ ಕಂಠದಿಂದ ಹೆಚ್ಚು ಜನಪ್ರಿಯತೆಗಳಿಸಿದ್ದ ಕೀರ್ತಿ ಅವರದ್ದಾಗಿತ್ತು.

bharadeshwara

ಭಾಗವತಿಕೆಯಲ್ಲಿ ಗಾನ ಕೋಗಿಲೆ ಎನಿಸಿಕೊಂಡ ಧಾರೇಶ್ವರ:

ಇವರು ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿ ಪೇರ್ಡೂರು ಮೇಳದಲ್ಲಿ ನಿವೃತ್ತಿ ಹೊಂದಿದ್ದರು. ಆರಂಭದಲ್ಲಿ ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಇವರು ಭಾಗವತರಾಗಿ ಪ್ರಖ್ಯಾತಿಗೊಂಡಿದ್ದರು. ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಇವರು ಪ್ರಯೋಗಶೀಲ ಭಾಗವತರೆಂದೇ ಹೆಸರುವಾಸಿಯಾಗಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ 28 ವರ್ಷಗಳ ಕಾಲ ಪೆರ್ಡೂರು ಮೇಳದಲ್ಲಿ  ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು. 1957 ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ‌ಮಾಡಿ ಕಾರ್ಯಕ್ರಮ ನೀಡುತ್ತಿದ್ದರು. ನಂತರ ಎಲೆಕ್ಟ್ರಿಕ್ ಅಂಗಡಿ ಹಾಕಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆಗೆ ಸೇರಿದ್ದರು. ಮೇಳ ಬಿಟ್ಟು 10 ವರ್ಷದ ಬಳಿಕವೂ ಅನಿವಾರ್ಯ ಸಂದರ್ಭದಲ್ಲಿ ಭಾಗವತರಾಗಿ ಕಲಾ ಸೇವೆ ಮಾಡಿ ಕಲಾವಿದರ ಮನ ಗೆದ್ದಿದ್ದರು.

ಮುಂದೆ ಓದಿ..; ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು. ಸಜ್ಜನ, ಸದ್ಗುಣಿ, ಮಿತಭಾಷಿಯಾಗಿದ್ದ ಧಾರೇಶ್ವರರು ಯಕ್ಷಗಾನಕ್ಕೆ ಕಾಳಿಂಗ ನಾವಡರ ಅನಂತರ ಭಾಗವತಿಕೆ ತಾರಾ ಮೌಲ್ಯ ತಂದಿದ್ದರು. ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು. ಕೀರ್ತಿಯ ಉತ್ತುಂಗದಲ್ಲಿ ಇದ್ದಾಗಲೇ ಮೇಳದ ತಿರುಗಾಟ ನಿಲ್ಲಿಸಿದ್ದರು. ಸುಮಾರು 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಕೀರ್ತಿ ಧಾರೇಶ್ವರ ಅವರಿಗಿದೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಹಾಗೂ ಅಪಾರ ಬಂಧುಬಳಗ, ಯಕ್ಷ ಅಭಿಮಾನಿಗಳನ್ನು ಅಗಲಿದ್ದಾರೆ. ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ.

Continue Reading

DAKSHINA KANNADA

ಹಿಂಜಾವೇ ಮುಖಂಡ ಅಕ್ಷಯ್ ರಜಪೂತ್‌ಗೆ ಗಡಿಪಾರು..!

Published

on

ಪುತ್ತೂರು:  ಹಿಂದೂ ಜಾಗರಣ ವೇದಿಕೆಯ ಮುಖಂಡ ಅಕ್ಷಯ್ ರಜಪೂತ್‌ ರವರನ್ನು (ನಿನ್ನೆ) ಎ.25ರಂದು ರಾತ್ರಿ ಗಡಿಪಾರು ಮಾಡಲಾಗಿದೆ. ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿಯ ಸದಸ್ಯ ಅಕ್ಷಯ್ ರಜಪೂತ್‌ ರವರನ್ನು ತಡರಾತ್ರಿ ವೇಳೆ ಅವರ ಮನೆಯಲ್ಲಿ ಬಂಧಿಸಿ ಇದೀಗ ಅವರನ್ನು ಹಾವೇರಿ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.

akshaya rajaputh

ಮುಂದೆ ಓದಿ..; ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಖಾದರ್‌ ಭಾಷಾನನ್ನು ಭೀಕರವಾಗಿ ಹ*ತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!

ಅಕ್ಷಯ್‌ ಗಡಿಪಾರನ್ನು ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಖಂಡಿಸಿದ್ದು ಕಾಂಗ್ರೆಸ್ಸಿನ ಹಿಂದೂ ವಿರೋಧೀ ನೀತಿ ಎಂದು ಹೇಳಿದ್ದಾರೆ.

Continue Reading

DAKSHINA KANNADA

ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

Published

on

ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್‌ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್‌ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್‌ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

mobile not allowed

ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

ಮತದಾನ ಮಾಡುವಾಗ ಫೋನ್‌ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್‌ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್‌ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

LATEST NEWS

Trending