LATEST NEWS
ಉಚಿತ ಉಮ್ರಾ ತೆರಳುವ ಆಫರ್ ನಿರಾಕರಿಸಿದ ಪದ್ಮಶ್ರೀ ಹಾಜಬ್ಬ
ಮಂಗಳೂರು: ಕಿತ್ತಲೆ ಹಣ್ಣು ವ್ಯಾಪಾರಿ ಹರೇಕಳ ಹಾಜಬ್ಬ ಅವರು ತನ್ನೂರಿಗೆ ಶಾಲೆಯನ್ನು ಕಟ್ಟಿ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದುಕೊಂಡಿದ್ದು, ಅವರಿಗೆ ಮಂಗಳೂರಿನ ದೇರಳಕಟ್ಟೆಯ ಸಂಸ್ಥೆಯೊಂದು ನೀಡಿದ ಉಚಿತ ಉಮ್ರಾಗೆ ತೆರಳುವ ಆಫರ್ ನಿರಾಕರಿಸಿದ್ದಾರೆ.
ನಿನ್ನೆ ಪದ್ಮಶ್ರೀ ಪ್ರಶಸ್ತಿ ಪಡೆದು ಇಂದು ಹುಟ್ಟೂರಿಗೆ ಆಗಮಿಸಿದ ಹಾಜಬ್ಬ ಅವರಿಗೆ ವಿವಿಧ ಸಂಘ-ಸಂಸ್ಥೆಗಳು ಹಾಜಬ್ಬ ಅವರ ಶಾಲೆಯಲ್ಲಿ ಸನ್ಮಾನಿಸಿದವು. ದೇರಳಕಟ್ಟೆಯ ಫಾಹಿಮಾ ಇಂಟರ್ನ್ಯಾಷನಲ್ ನವರು ಹಾಜಬ್ಬನವರಿಗೆ ಉಮ್ರಾ ನಿರ್ವಹಣೆಗೆ ಅವಕಾಶ ಒದಗಿಸುವ ಭರವಸೆಯನ್ನು ನೀಡಿದ್ದಾರೆ.
ಈ ಕುರಿತಾದ ಪತ್ರವನ್ನು ಸಂಸ್ಥೆಯ ನಿರ್ದೇಶಕ ಕಲಂದರ್, ಮ್ಯಾನೇಜರ್ ಅಝೀಝ್ ಝುಹ್ರಿ ಅವರಿಗೆ ಹಸ್ತಾಂತರಿಸಿದರು. ಆದರೆ ವೇದಿಕೆಯಲ್ಲಿಯೇ ಸಂಸ್ಥೆ ನೀಡಿದ ಆಫರ್ ಅನ್ನು ಹರೇಕಳ ಹಾಜಬ್ಬ ಅವರು ನಿರಾಕರಿಸಿದ್ದಾರೆ.
ನಂತರ ಮಾತನಾಡಿದ ಅವರು, ನನಗೆ ಖಾಸಗಿಯಾಗಿ ಕೆಲವೊಂದು ಜವಾಬ್ದಾರಿಗಳಿದ್ದು ಈ ಕಾರಣದಿಂದ ಉಚಿತ ಉಮ್ರಾ ಯಾತ್ರೆ ನಿರಾಕರಿಸಿದ್ದೇನೆ ಮತ್ತು ಅವರಿಂದ ಪತ್ರವನ್ನು ಸ್ವೀಕರಿಸಿಲ್ಲ ಎಂದು ತಿಳಿಸಿದರು.
ಈ ಬಗ್ಗೆ ಫಾಹಿಮಾ ಇಂಟರ್ನ್ಯಾಷನಲ್ ನವರು ಮಾತನಾಡಿ ಅವರು ಯಾವಾಗ ಯಾತ್ರೆ ಬಯಸುತ್ತಾರೋ ಆ ದಿನ ಅವರನ್ನು ನಾವು ಉಚಿತವಾಗಿ ಕಳುಹಿಸಿಕೊಡಲು ಸಿದ್ದರಿದ್ದೇವೆ ಎಂದರು.
DAKSHINA KANNADA
ಬೆಂ*ಕಿಗೆ ಆಹುತಿಯಾದ ಹಡಗಿನಿಂದ ಅಪಾಯವಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ
ಮಂಗಳೂರು : ಮಂಗಳೂರು ಕರಾವಳಿಯ ಸಮುದ್ರದಲ್ಲಿ ಬೆಂ*ಕಿಗೆ ಆಹುತಿಯಾದ ವಿದೇಶಿ ಹಡಗಿನಿಂದ ಮಂಗಳೂರು ಕರಾವಳಿಗೆ ಯಾವುದೇ ಆತಂಕ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.
ಜುಲೈ 19 ರಂದು ಗುಜರಾತ್ನಿಂದ ಕೊಲೊಂಬೋಕ್ಕೆ ತೆರಳುತ್ತಿದ್ದ ಸರಕು ಸಾಗಟದ ಹಡುಗು ಬೆಂ*ಕಿಗೆ ಆಹುತಿಯಾಗಿತ್ತು. ತಕ್ಷಣ ಕೋಸ್ಟ್ಗಾರ್ಡ್ ತಂಡ ನಿರಂತರ ನಲುವತ್ತು ಗಂಟೆ ಪ್ರಯತ್ನ ನಡೆಸಿ ಬೆಂಕಿ ನಂದಿಸುವ ಕೆಲಸವಾಗಿತ್ತು. ಬಳಿಕ ಹಡಗನ್ನು ಮಂಗಳೂರು ಕರಾವಳಿಯ 30 ನಾಟಿಕಲ್ ದೂರದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ತೈಲ ಸೋರಿಕೆ ಆಗುವ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದರು.
ಇದನ್ನೂ ಓದಿ : 5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಹಡಗು ಮುಳುಗಡೆಯಾಗುವ ಭೀತಿ ಇದ್ದು ಹಾಗಾದಲ್ಲಿ ಹಡಗಿನಲ್ಲಿರುವ ತೈಲ ಸೋರಿಕೆ ಆಗಬಹುದು ಎಂದು ಸುದ್ದಿಯಾಗಿತ್ತು. ಆದ್ರೆ, ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಅಂತಹ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ. ಅಂತಹ ಅವ*ಘಡ ನಡೆದಲ್ಲಿ ಅದನ್ನು ಎದುರಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಕೋಸ್ಟ್ಗಾರ್ಡ್ ಮತ್ತು ಕರಾವಳಿ ಕಾವಲು ಪಡೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
kerala
5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.
ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.
ಆನ್ ಲೈನ್ ಗೇಮಿಂಗ್ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?
ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್ಲೈನ್ ಗೇಮಿಂಗ್ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ