Connect with us

    ಪೇಜಾವರ ವಿಶ್ವೇಶ ತೀರ್ಥರಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರಕಟ

    Published

    on

    ಪೇಜಾವರ ವಿಶ್ವೇಶ ತೀರ್ಥರಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರಕಟ

    ಉಡುಪಿ : ಉಡುಪಿ ಪೇಜಾವರ ಶ್ರೀಗಳು ಮಾಡಿದ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ದೇಶದ ಅತ್ಯುನ್ನತ ಗೌರವಗಳಲ್ಲಿ ಒಂದಾದ ಪದ್ಮವಿಭೂಷಣವನ್ನು ನೀಡಿ ಗೌರವಿಸಿದೆ.

    ವಿಶ್ವೇಶ ತೀರ್ಥರಿಗೆ ಮರಣೋತ್ತರವಾಗಿ ಈ ಪ್ರಶಸ್ತಿ ಪ್ರಕಟವಾಗಿದೆ. ಪೇಜಾವರ ಶ್ರೀಗಳಿಗೆ ಪ್ರಶಸ್ತಿ ಬಂದಿರುವುದಕ್ಕೆ ಪೇಜಾವರ ಮಠ ಹರ್ಷ ವ್ಯಕ್ತಪಡಿಸಿದೆ.

    ಪ್ರಸ್ತುತ ಮುಳಬಾಗಿಲುನಲ್ಲಿರುವ ಮಠದ ಯತಿಗಳಾದ ವಿಶ್ವಪ್ರಸನ್ನ ತೀರ್ಥರು ಪ್ರತಿಕ್ರಿಯೆ ನೀಡಿದ್ದು, ಗುರುಗಳಿಗೆ ಪ್ರಶಸ್ತಿ ಬಂದದ್ದು ಕೇಳಿ ಸಂತೋಷವಾಗಿದೆ. ಆದರೆ ಗುರುಗಳು ಇದ್ಯಾವೂದು ಧರಿಸಿದವರಲ್ಲ,ಅವರು ಬದುಕಿರುವಾಗಲೂ ಯಾವುದೇ ಬಗೆಯ ವಿಭೂಷಣ ಧರಿಸಿದವರಲ್ಲ.

    ಆದರೆ ಸರ್ಕಾರ ಇವತ್ತು ವಿಭೂಷಣವನ್ನು ಸಮರ್ಪಿಸಿದೆ. ಇದರಿಂದ ತುಂಬಾ ಸಂತೋಷ ವಾಗಿದೆ.

    ಇದು ಜೀವಿತಾವಧಿಯಲ್ಲೇ ಬಂದಿದ್ದರೆ ಮತ್ತಷ್ಟು ಸಂತೋಷವಾಗುತ್ತಿತ್ತು ಅದರೂ ಶ್ರೀ ಮಠ ಈ ಪ್ರಶಸ್ತಿಯನ್ನು ಸ್ವಾಗತಿಸುತ್ತದೆ.ಇದು ಗುರುಗಳಿಗೆ ಸಂದ ಪ್ರಶಸ್ತಿ ಸಂತ ಸಮಾಜಕ್ಕೆ ದೊರಕಿದ ಗೌರವವಾಗಿದೆ.

    ಈ ಪ್ರಶಸ್ತಿಯಿಂದ ಸಂತ ಸಮಾಜದ ಜವಾಬ್ದಾರಿ ಹೆಚ್ವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ತಿರುಪತಿ ಲಡ್ಡಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ; ಗುಣಮಟ್ಟ ಪರೀಕ್ಷೆಗೆ ಸಮಿತಿ ರಚನೆ

    Published

    on

    ಮಂಗಳೂರು/ಆಂಧ್ರ : ದೇಶ – ವಿದೇಶದ ಭಕ್ತರನ್ನು ಹೊಂದಿರುವ ದೇಶದ ಪ್ರಸಿದ್ಧ ದೇವಸ್ಥಾನ ತಿರುಪತಿಯಲ್ಲಿ ಪ್ರಸಾದ ರೂಪವಾಗಿ ನೀಡುವ ಲಡ್ಡು ಅಪವಿತ್ರವಾಗಿರುವ ವಿಚಾರ ಬೆಳಕಿಗೆ ಬಂದಿದೆ. ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಆರೋಪದ ಬಳಿಕ ಲ್ಯಾಬ್‌ ಪರೀಕ್ಷೆಯಲ್ಲಿ ಲಡ್ಡು ಅಪವಿತ್ರವಾಗಿರುವುದು ಸಾಬೀತಾಗಿದೆ. ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಇದೀಗ ತುಪ್ಪದ ಗುಣಮಣ್ಣ ಪರೀಕ್ಷೆಗೆ ಸಮಿತಿಯನ್ನು ರಚಿಸಲಾಗಿದೆ.

    ಡಾ.ಸುರೇಂದ್ರನಾಥ್, ಡಾ.ವಿಜಯ್ ಭಾಸ್ಕರ್ ರೆಡ್ಡಿ, ಡಾ.ಸ್ವರ್ಣಲತಾ ಮತ್ತು ಡಾ.ಮಹದೇವನ್ ಅವರನ್ನೊಳಗೊಂಡ ನಾಲ್ಕು ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಒಂದು ವಾರದ ಒಳಗಾಗಿ ವರದಿ ನೀಡಲಿದೆ ಎಂದು ಟಿಟಿಡಿ ಕಾರ್ಯನಿರ್ವಹಣಾಧಿಕಾರಿ ಜೆ. ಶ್ಯಾಮಲಾ ರಾವ್ ಮಾಹಿತಿ ನೀಡಿದ್ದಾರೆ. ತುಪ್ಪ ಸರಬರಾಜು ಮಾಡಲು ಟೆಂಡರ್ ಪಡೆದವರು ಕಳಪೆ ತುಪ್ಪ ಪೂರೈಕೆ ಮಾಡಿದ್ರೆ, ಕಠಿಣ ಕ್ರಮ ಜರುಗಿಸುವ ಎಚ್ಚರಿಕೆಯನ್ನೂ ನೀಡಲಾಗಿದೆ. ಕಲಬೆರಕೆಯ ಪರೀಕ್ಷಾ ಸಾಧನಗಳಿಲ್ಲದ ಕಾರಣ ಈ ಪ್ರಮಾದ ಉಂಟಾಗಿದೆ ಎಂದು ಹೇಳಿದ್ದಾರೆ.

    ಇದನ್ನೂ ಓದಿ : ಉದ್ಯಮಿ ಮನೆ ದರೋಡೆ ಪ್ರಕರಣ; ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರ ಬಂಧನ

    ತಿರುಪತಿಯ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಹಾಗೂ ಮೀನಿನ ಎಣ್ಣೆಯ ಬಳಕೆ ಬಗ್ಗೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದು ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ಉಂಟು ಮಾಡಿದ ಪ್ರಕರಣವಾಗಿದ್ದು, ಅಸಂಖ್ಯಾತ ಹಿಂದೂಗಳಿಗೆ ಇದರಿಂದ ನೋವು ಉಂಟಾಗಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಇದರಲ್ಲಿ ಭಾಗಿಯಾಗಿರುವ ಆಂಧ್ರ ಪ್ರದೇಶದ ಹಿಂದಿನ ವೈಎಸ್‌.ಆರ್ ಸರಕಾರದ ಎಲ್ಲರನ್ನೂ ತನಿಖೆಗೆ ಒಳಪಡಿಸಬೇಕು ಎಂದು ವಿಶ್ವಹಿಂದೂ ಪರಿಷತ್ ಆಗ್ರಹಿಸಿದೆ.

     

    Continue Reading

    DAKSHINA KANNADA

    ಉದ್ಯಮಿ ಮನೆ ದರೋಡೆ ಪ್ರಕರಣ; ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರ ಬಂಧನ

    Published

    on

    ಮಂಗಳೂರು : ಉದ್ಯಮಿ ಐಕಳ ಹರೀಶ್‌ ಶೆಟ್ಟಿ ಅವರ ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿದ್ದಕಟ್ಟೆ ನಿವಾಸಿ ಹುಸೈನಬ್ಬ ಯಾನೆ ಸುಹೈಲ್ , ಕೊಲ್ನಾಡು ನಿವಾಸಿ ಝುಬೈರ್‌ ಹಾಗೂ ಕಾಸರಗೋಡು ನಿವಾಸಿ ಕಲಾಮ್‌  ಬಂಧಿತರು.  ಈ ಪೈಕಿ ಸುಹೈಲ್ ಹಾಗೂ ಝುಬೈರ್‌ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಕಲಾಮ್‌ ಆರೋಪಿಗಳು ತಲೆ ಮರೆಸಿಕೊಳ್ಳಲು ನಕಲಿ ಪಾಸ್‌ ಪೋರ್ಟ್‌ ಮಾಡಿಸಿಕೊಟ್ಟ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

    ಬಂಧಿತರಿಂದ ನಕಲಿ ಪಾಸ್‌ ಪೋರ್ಟ್‌, ಮೊಬೈಲ್‌ ಫೋನ್‌, ಪಿಸ್ತೂಲು, ಸಜೀವ ಮದ್ದುಗುಂಡುಗಳು, ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು 2023ರಲ್ಲಿ ಉದ್ಯಮಿ ಹರೀಶ್‌ ಶೆಟ್ಟಿ ಐಕಳ ಅವರ ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ಕಾಸರಗೋಡು ನಿವಾಸಿ ಕಲಾಮ್‌ನ ಸಹಕಾರದಲ್ಲಿ ನಕಲಿ ಪಾಸ್‌ ಪೋರ್ಟ್‌ ಮಾಡಿಸಿಕೊಂಡು  ವಿದೇಶಕ್ಕೆ ತೆರಳಿ ಅಲ್ಲಿ ತಲೆ ಮರೆಸಿಕೊಂಡಿದ್ದರು. ಇತ್ತೀಚೆಗೆ ಊರಿಗೆ ಬಂದಿದ್ದ ಆರೋಪಿಗಳು ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕೊಲ್ನಾಡು ಕೋರ್ದಬ್ಬು ದೈವಸ್ಥಾನ ಬಳಿ ಮುಲ್ಕಿ ಸುಂದರರಾಮ ಶೆಟ್ಟಿ ಸಭಾಭವನದ ಬಳಿ ಇರುವುದನ್ನು ಖಚಿತ ಪಡಿಸಿಕೊಂಡ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

    ಇದನ್ನೂ ಓದಿ : ಕಿನ್ನಿಗೋಳಿ : ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿಗಳು

    ಈಗಾಗಲೇ ಮುಲ್ಕಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬುಧವಾರ ಸಿಸಿಬಿ ಪೊಲೀಸರು ಮತ್ತಿಬ್ಬರನ್ನು ಬಂದಿಸಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 5ಕ್ಕೇರಿದೆ.

    Continue Reading

    DAKSHINA KANNADA

    ಕಿನ್ನಿಗೋಳಿ : ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿಗಳು

    Published

    on

    ಕಿನ್ನಿಗೋಳಿ: ಕಿನ್ನಿಗೋಳಿ ಪಟ್ಟಣ ಪಂಚಾಯತಿ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಗುತ್ತಿಗೆದಾರರಿಂದ ಲಂಚ ಸ್ವೀಕರಿಸುತ್ತಿದ್ದ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಮತ್ತು ಜೂನಿಯರ್ ಎಂಜಿನಿಯರ್ ನಾಗರಾಜ್‌ ಎಂಬುವವರನ್ನು ಕಿನ್ನಿಗೋಳಿ ಲೋಕಾಯುಕ್ತ ಪೊಲೀಸರು ಸೆರೆ ಹಿಡಿದಿದ್ದಾರೆ.
    ಗುತ್ತಿಗೆದಾರರಿಂದ ಲಂಚ ಸ್ವೀಕಾರ:
    ಪಿಡಬ್ಲ್ಯೂಡಿ ಕ್ಲಾಸ್‌ ವನ್‌ ಪಂಚಾಯತ್ ವ್ಯಾಪ್ತಿಯ ಎಸ್ ಕೋಡಿ ಸರಕಾರಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿಯ ಗುತ್ತಿಗೆ ವಹಿಸಿ ಕೆಲಸ ನಿರ್ವಹಿಸುತ್ತಿದ್ದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯವರು ದೂರು ನೀಡಿದ್ದಾರೆ. ಕಾಮಗಾರಿಯ ಮೊತ್ತ 9,77,154 ರೂಪಾಯಿಗಳ ಬಿಲ್ಲು ಮಂಜೂರಾತಿಯಾಗಿದ್ದು, ಜೂನಿಯ‌ರ್ ಎಂಜಿನಿಯರ್ ನಾಗರಾಜು ಅವರು 37,000 ರೂಪಾಯಿ ಹಾಗೂ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿ ಎಂ.ಆರ್ ಸ್ವಾಮಿ ಅವರು 15,000 ರೂಪಾಯಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಪ್ರಕರಣ ದಾಖಲಾಗಿದ್ದು, ಜೂನಿಯರ್ ಎಂಜಿನಿಯರ್ ನಾಗರಾಜು ಅವರು ಮುಂಗಡವಾಗಿ 7000 ರೂ. ಹಣವನ್ನು ಗುತ್ತಿಗೆದಾರರಿಂದ ಪಡೆದುಕೊಂಡಿದ್ದರು.
    ಈ ದೂರಿನ ಹಿನ್ನೆಲೆಯಿಂದ ಕಿನ್ನಿಗೋಳಿ ಲೋಕಾಯುಕ್ತ ಪೊಲೀಸರು ಪಟ್ಟಣ ಪಂಚಾಯಿತಿ ದಾಳಿಗೆ ವ್ಯವಸ್ಥೆ ಮಾಡಿ ಆರೋಪಿಗಳಾದ ಜೂನಿಯರ್ ಎಂಜಿನಿಯರ್ ನಾಗರಾಜುರಿಂದ 30 ಸಾವಿರ ರೂಪಾಯಿ ಹಾಗೂ ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿಯವರಿಂದ 15 ಸಾವಿರ ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದಾಗಲೇ ಅವರನ್ನು ಸೆರೆ ಹಿಡಿಯಲಾಗಿದೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎ.ನಟರಾಜ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಡಾ. ಉಪಾಧೀಕ್ಷಕರಾದ ಗಾನಾ ಪಿ. ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ.ಎ, ಸುರೇಶ್ ಕುಮಾರ್ ಪಿ, ಚಂದ್ರಶೇಖರ್ ಕೆ.ಎನ್, ಚಂದ್ರಶೇಖರ್ ಸಿ.ಎಲ್ ಮತ್ತು ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು.

    ವಿಡಿಯೋ ನೋಡಿ:

    Continue Reading

    LATEST NEWS

    Trending