Connect with us

DAKSHINA KANNADA

ರಾಸಾಯನಿಕ ತ್ಯಾಜ್ಯಗಳಿಂದ ಕಲುಷಿತಗೊಳ್ಳುತ್ತಿದ್ದಾಳೆ ಫಲ್ಗುಣಿ ನದಿ ನೀರು..!

Published

on

ರಾಸಾಯನಿಕ ತ್ಯಾಜ್ಯಗಳಿಂದ ಕಲುಷಿತಗೊಳ್ಳುತ್ತಿದ್ದಾಳೆ ಫಲ್ಗುಣಿ ನದಿ ನೀರು..!

ಮಂಗಳೂರು : ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಮೀನುಗಾರರು ಮೀನುಗಾರಿಕೆ ಇಲ್ಲದೇ ಸಂಕಷ್ಟಕ್ಕೆ ಒಳಗಾಗಿದ್ದರೆ, ಇದೀಗ ಹೊಸದೊಂದು ನೋವು ಮೀನುಗಾರರನ್ನು ಕಾಡುತ್ತಿದೆ. ಜೊತೆಗೆ ಸ್ಮಾರ್ಟ್ ಆಗಿರ ಬೇಕಾದ ಮಂಗಳೂರು ನಗರ ಪಕ್ಕದ ನದಿ ಬದಿಯಲ್ಲಿ ಸುರಿದ ತ್ಯಾಜ್ಯ ಮತ್ತು ಅದರ ದುರ್ನಾತದಿಂದ ಗಬ್ಬೆದ್ದು ನಾರುತ್ತಿದೆ.   

ಮಂಗಳೂರು ಕಡಲ ತೀರದ ಮೀನುಗಾರರು ಎದುರಿಸುತ್ತಿರುವ ಸಮಸ್ಯೆ ಇದು. ಸಮುದ್ರ ಕಿನಾರೆಯ ಸುತ್ತ ಮುತ್ತ ತಲೆ ಎತ್ತಿರುವ ಉದ್ದಿಮೆಗಳಿಂದಾಗಿ ಅನೇಕ ನದಿಗಳು ವಿಷಪೂರಿತಗೊಂಡಿದೆ.

ಸದ್ಯ ಗುರುಪು ಫಲ್ಗುಣಿ ನದಿ ಕೈಗಾರಿಕೆಗಳ ರಾಸಾಯನಿಕದಿಂದಾಗಿ ಸಂಪೂರ್ಣವಾಗಿ ಕಲುಷಿತಗೊಂಡಿದೆ.

ನದಿಯನ್ನೆ ನಂಬಿರುವ ನೂರಾರು ಮೀನುಗಾರರ ಬದುಕು ಕಮರಿ ಹೋಗಿದ್ದು, ದಿನವಿಡೀ ನಿಂತೇ ಕೆಲಸ ಮಾಡುವ ಹೆಚ್ಚಿನ ಮೀನುಗಾರ ಕಾಲಿನ ಚರ್ಮ ಕೆಂಪಾದ ಹುಣ್ಣುಗಳು ಕಾಣಿಸಿಕೊಂಡಿವೆ.

ಇನ್ನೂ ಬೆಂಗ್ರೆ ಗ್ರಾಮವೊಂದರಲ್ಲೇ 200ಕ್ಕೂ ಅಧಿಕ ಸಾಂಪ್ರದಾಯಿಕ ನಾಡ ದೋಣಿಗಳಿದ್ದು, ಸಾವಿರಕ್ಕೂ ಹೆಚ್ಚು ಮೀನುಗಾರರು ಬದುಕು ಕಟ್ಟಿಕೊಂಡಿದ್ದಾರೆ.

ಇದೀಗ ಚರ್ಮದ ತುರಿಕೆಯಿಂದಾಗಿ ಹೆಚ್ಚಿನ ರಕ್ತ ಸ್ರಾವವಾಗ್ತಿದ್ದು ದುಡಿಮೆ ಮಾಡಲಾಗದ ಸ್ಥಿತಿ ತಲುಪಿದ್ದಾರೆ. ಇನ್ನಿ ಬಗ್ಗೆ ಪ್ರತಿಕ್ರೀಯಿಸಿರುವ ಕಿರಣ್ ಇದು ಸರ್ಕಾರಿ ಜಾಗ ಆಗಿದ್ದು, ಅನಧಿಕೃತವಾಗಿ ಜಾಗವನ್ನ ಕಬಳಿಸಿ ಈ ಕಾರ್ಯ ಮಾಡ್ತಿದ್ದಾರೆ.

ಜೊತೆಗೆ ಕಲ್ಮಶಗಳನ್ನ ತಂದು ಹಾಕುತ್ತಿದ್ದಾರೆ. ಇದರಿಂದ ನದಿ ನೀರು ಮಲಿನಗೊಳ್ಳುತ್ತಿದೆ ಜೊತೆಗೆ ಪರಿಸರನೂ ಹಾಳಾಗುತ್ತಿದೆ. ಇದನ್ನು ನಿಲ್ಲಿಸ್ಬೇಕು. ಮತ್ತೊಮ್ಮೆ ಈ ವಿಚಾರವನ್ನು ಪಾಲಿಕೆ ಆಯುಕ್ತರ ಗಮನಕ್ಕೆ ತರುವ ಭರವಸೆಯನ್ನು ನೀಡಿದ್ದಾರೆ.

ಇಲ್ಲಿ ತ್ಯಾಜ್ಯ ಸುರಿದು ಜಲ ಮೂಲವನ್ನು ಕಲುಶಿತಗೊಳಿಸುವವರ ಮೇಲೆ ಕಠಿಣ ಮತ್ತು ನಿರ್ದಕ್ಷಿಣ್ಯ ಕ್ರಮ ಜರುಗಿಸಬೇಕಾಗಿದೆ. ಜೊತೆಗೆ ಪ್ರಧಾನ ಮಂತ್ರಿ ಯವರ ಸ್ವಚ್ಚ ಭಾರತದ ಪರಿಕಲ್ಪನೆಯನ್ನು ಸಾಕಾರ ಮಾಡಬೇಕಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಮಂಗಳೂರು: 14.33% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 14.33 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

DAKSHINA KANNADA

ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ

Published

on

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.

ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ  ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.

 

ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.

Continue Reading

LATEST NEWS

Trending