LATEST NEWS
ರಾಜ್ಯದಲ್ಲಿ ಜುಲೈ ಮೊದಲವಾರದಿಂದ ‘ಕಲಿ ಗಡಂಗ್’ ಆರಂಭ
ಕುಂದಾಪುರ: ಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೀಡಾದ ಸಣ್ಣಪುಟ್ಟ ರೈತರಿಗೆ ಈ ಹೊಸ ಉದ್ಯಮ ಆಶಾದೀಪವಾಗುವ ಲಕ್ಷಣ ಗೋಚರಿಸುತ್ತಿದ್ದು, ಅದರಂತೆ ತಾಲೂಕಿನ ಜಪ್ತಿ ಎಂಬಲ್ಲಿ ಕಲ್ಪರಸ ತೆಗೆಯುವ ಸಂಸ್ಕರಣಾ ಘಟಕ ಆರಂಭಿಸಲಾಗಿದೆ. 14 ಯುವಕರಿಗೆ 45 ದಿನದ ತರಬೇತಿ ಈಗಾಗಲೇ ನೀಡಲಾಗಿದೆ. ತೆಂಗಿನ ಮರ ಹತ್ತುವುದು, ಹೊಂಬಾಳೆಗೆ ಕಟ್ಟು ಬಿಗಿದು ಐಸ್ ಬಾಕ್ಸ್ ಜೋಡಿಸುವುದು, ದಿನಕ್ಕೇರಡು ಬಾರಿ ಕಲ್ಪರಸ ತೆಗೆದು ಕೆಡದಂತೆ ಕಾಪಾಡುವ ತರಬೇತಿ ಕೊಡಲಾಗುತ್ತಿದೆ. ಜುಲೈ ಮೊದಲ ವಾರದಲ್ಲಿ ಅಧಿಕೃತವಾಗಿ ಕಲ್ಪರಸ ಸಿಗುವ ಔಟ್ ಲೆಟ್ಗಳು ಆರಂಭವಾಗಿಲಿದೆ ಎಂದು ಉ.ಕಾ.ಸ ಸಂಸ್ಥೆಯ ನಿರ್ದೇಶಕರಾದ ಸತ್ಯನಾರಾಯಣ ಉಡುಪ ತಿಳಿಸಿದ್ದಾರೆ.
ರೈತರೇ ಸೇರಿಕೊಂಡು ಈ ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ಭಾರತೀಯ ಕಿಸಾನ್ ಸಂಘ ನೇತೃತ್ವದಲ್ಲಿ ಉ.ಕಾ.ಸ ಎಂಬ ಸಂಸ್ಥೆಯನ್ನು ಕಲ್ಪರಸ ಮಾರುಕಟ್ಟೆ ನಿರ್ವಹಣೆಗಂತಲೇ ಹುಟ್ಟುಹಾಕಿದ್ದು, ಯುವ ಜನಾಂಗವನ್ನು ಈ ಉದ್ಯಮಕ್ಕೆ ಆಕರ್ಷಿಸಲಾಗುತ್ತಿದೆ. ಸದ್ಯ ಉಡುಪಿ ಜಿಲ್ಲೆಯಲ್ಲಿ 1,028 ರೈತರು ಸಂಸ್ಥೆಗೆ ಶೇರುದಾರರಾಗಿದ್ದು, ಮುಂದಿನ 5 ವರ್ಷದಲ್ಲಿ 5 ಸಾವಿರ ಕುಟುಂಬ ಸೇರ್ಪಡೆಯಾಗಲಿದೆ.
ಒಂದು ರೈತ ಕುಟುಂಬಕ್ಕೆ 8 ತೆಂಗಿನ ಮರಗಳಿಂದ ಮಾತ್ರ ಕಲ್ಪರಸ ಸಂಗ್ರಹಿಸುವ ಅವಕಾಶವಿದೆ. ಒಂದು ಮರದಿಂದ ಪ್ರತಿದಿನ 2 ಲೀಟರ್ ಸಿಹಿ ರಸ ಇಳಿಯಲಿದೆ. ವರ್ಷಕ್ಕೆ 8 ಮರದಿಂದ 5,000 ಲೀಟರ್ ರಸ ಇಳಿದರೆ ವಾರ್ಷಿಕ ಸುಮಾರು 1 ಲಕ್ಷ ರೂಪಾಯಿ ಆದಾಯ ಸಿಗುತ್ತದೆ. ಕಲ್ಪರಸ ತೆಗೆಯುವ ತಜ್ಞ ಯುವಕರು ಲೀಟರ್ಗೆ 25 ರೂಪಾಯಿ, ಪಿಎಫ್, ಇಎಸ್ಐ ಸೌಲಭ್ಯ ಪಡೆಯಲಿದ್ದಾರೆ ಎಂದು ಮಾಹಿತಿ ನೀಡಿದರು.
DAKSHINA KANNADA
ಮಂಗಳೂರು : ಭಾರಿ ಮಳೆಗೆ ಧರೆಗುರುಳಿದ ಮರ
ಮಂಗಳೂರು : ಬಿರುಬಿಸಿಲಿನಿಂದ ಕಂಗಾಲಾಗಿದ್ದ ಕರಾವಳಿಗರ ಮೇಲೆ ವರುಣ ಕೃಪೆ ತೋರಿದ್ದು, ಎರಡು ದಿನಗಳಿಂದ ಮಳೆಯಾಗುತ್ತಿದೆ. ಇಂದು(ಮೇ 21) ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿದಿದೆ.
ಸಂಜೆಯಿಂದ ಶುರುವಾದ ಮಳೆಗೆ ಮಂಗಳೂರು ನಗರದ ಕರಂಗಲ್ಪಾಡಿ ಬಳಿ ಇರುವ ರಾಧಾ ಮೆಡಿಕಲ್ಸ್ ಎದುರುಗಡೆ ಭಾರಿ ಗಾತ್ರದ ಮರವೊಂದು ಧರೆಗುರುಳಿದ್ದು, ವಾಹನಗಳು ಜಖಂ ಗೊಂಡಿವೆ.
ಘಟನೆಯಿಂದ ಸ್ವಲ್ಪ ಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಮರದ ಕೊಂಬೆಗಳನ್ನು ಸ್ವಲ್ಪ ಮಟ್ಟಿಗೆ ತೆರವುಗೊಳಿಸಿ, ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಮಾಹಿತಿ ಲಭಿಸಿದೆ.
DAKSHINA KANNADA
ಮೊಬೈಲ್ ಇಂಟರ್ನೆಟ್ ಬೇಗ ಖಾಲಿ ಆಗ್ತಿದ್ಯಾ…? ಈ ಟ್ರಿಕ್ಸ್ ಫಾಲೋ ಮಾಡಿ ನೋಡಿ….!!
ಮಂಗಳೂರು: ಹೊಸ ಹೊಸ ಮೊಬೈಲ್ ಅಪ್ಲಿಕೇಶನ್ ಬಂದಂತೆ ನಾವು ಮೊಬೈಲ್ ಗೆ ಹೆಚ್ಚೆಚ್ಚು ಎಡಿಕ್ಟ್ ಆಗುತ್ತಿದ್ದೇವೆ. ಅದರ ಜೊತೆಗೆ ನೆಟ್ ಪ್ಯಾಕ್ ಕೂಡಾ ಇದೀಗ ದುಬಾರಿಯಾಗಿಬಿಟ್ಟಿದೆ. ಮೊಬೈಲ್ನಲ್ಲಿ ಡೇಟಾ ಪ್ಯಾಕ್ ಹಾಕಿಸಿದ್ದರೂ, ಇಂಟರ್ನೆಟ್ ಬೇಗ ಖಾಲಿ ಆಗ್ತಾ ಇದ್ಯಾ? ಅದಕ್ಕೆ ಕಾರಣವೇನು? ದಿನಕ್ಕೆ 2 ಜಿಬಿ ಡೇಟಾ ಇದ್ದರೂ ಸಾಕಾಗುತ್ತಿಲ್ಲವೇ? ರೀಲ್ಸ್ ನೋಡುತ್ತಲೇ ಡೇಟಾ ಖಾಲಿ ಆಗುತ್ತಿರುವ ಬಗ್ಗೆ ಮೆಸೇಜ್ ಬರುತ್ತಿದೆಯಾ? ಹಾಗಾದರೆ ನಿಮ್ಮ ಸ್ಮಾರ್ಟ್ಫೋನ್ನಲ್ಲಿ ನೆಟ್ ಬೇಗ ಖಾಲಿ ಆಗದಿರಲು ಏನು ಮಾಡಬೇಕು? ಡೇಟಾ ಪ್ಯಾಕ್ ಹೆಚ್ಚು ಇರುವಂತೆ ನೋಡಿಕೊಳ್ಳುವುದು ಹೇಗೆ? ಇಲ್ಲಿದೆ ನೋಡಿ.
- ಸ್ಮಾರ್ಟ್ಫೋನ್ ಗಳಲ್ಲಿ ಕೆಲವು ಆ್ಯಪ್ ಗಳು ಸ್ವಯಂಚಾಲಿತವಾಗಿ ಅಪ್ಡೇಟ್ ಆಗುತ್ತದೆ. ಆಗ ನೆಟ್ ಬೇಗ ಖಾಲಿಯಾಗುತ್ತದೆ. ಇದಕ್ಕಾಗಿ ನೀವು ಸೆಟ್ಟಿಂಗ್ ಗೆ ಹೋಗಿ ಆಟೋಮ್ಯಾಟಿಕ್ ಡೌನ್ ಲೋಡ್ ಆಪ್ಶನ್ ನ್ನು ಆಫ್ ಮಾಡಬೇಕು. ವೈಫೈ ಬಳಸುವಾಗ ಮಾತ್ರ ಅಪ್ಲಿಕೇಶನ್ ಗಳನ್ನು ಅಪ್ಡೇಟ್ ಮಾಡೋದು ಒಳಿತು.
- ಆಂಡ್ರಾಯ್ಡ್ ಫೋನ್ ಗಳು ಡೇಟಾ ಉಳಿತಾಯ ಮೋಡ್ ಎಂಬ ಆಯ್ಕೆಯನ್ನು ಹೊಂದಿದೆ. ಈ ಆಯ್ಕೆ ನಿಮ್ಮ ಮೊಬೈಲ್ ನಲ್ಲಿದ್ದು ಅದನ್ನು ಸಕ್ರಿಯಗೊಳಿಸಿದ್ರೆ ಡೇಟಾ ಉಳಿಸಬಹುದು. ಡೇಟಾ ಸೇವಿಂಗ್ ಮೋಡ್ ನಿಮ್ಮ ಫೋನ್ ನಲ್ಲಿ ಅನಗತ್ಯ ಡೇಟಾ ಪೋಲು ಆಗುವುದನ್ನು ತಡೆಯುತ್ತದೆ. ಇದರಿಂದ ನಿಮಗೆ ಬಳಕೆಗೆ ಡೇಟಾ ಹೆಚ್ಚು ಲಭ್ಯ ಆಗುತ್ತದೆ.
- ಇತ್ತೀಚಿನ ದಿನಗಳಲ್ಲಿ ಗೂಗಲ್ ಮ್ಯಾಪ್ ಆ್ಯಪ್ ಬಳಸೋದು ಹೆಚ್ಚಾಗಿದೆ. ಇದು ಅತ್ಯಂತ ಹೆಚ್ಚು ಡೇಟಾವನ್ನು ಬಳಸಿಕೊಳ್ಳುತ್ತೆ. ಹಾಗಿರುವಾಗ ಇಂತಹ ಆ್ಯಪ್ ಗಳನ್ನು ಆಫ್ ಲೈನ್ ನಲ್ಲಿ ಉಪಯೋಗಿಸಬೇಕೇ ಹೊರತು ಆನ್ಲೈನ್ ನಲ್ಲಲ್ಲ. ಈ ಆ್ಯಪ್ ನ ಅಪ್ಡೇಟ್ ನ್ನು ಕೂಡಾ ವೈಫೈನಲ್ಲೇ ಮಾಡೋದು ಉತ್ತಮ.
- ನಾವು ಎಲ್ಲಿಯಾದರೂ ಸಂಚರಿಸುತ್ತಿದ್ದರೆ ಯೂಟ್ಯೂಬ್ ವೀಡಿಯೋಗಳನ್ನು ಅಥವಾ ಇನ್ನಾವುದೋ ಆ್ಯಪ್ ಬಳಸೋದು ಹೆಚ್ಚು. ಸಂಚಾರದ ಸಂದರ್ಭದಲ್ಲಿ ವೈಫೈ ಅನುಕೂಲತೆ ಇದ್ದರೆ ವೀಡಿಯೋ ಆಗಲೇ ಡೌನ್ಲೋಡ್ ಮಾಡಿಡುವುದು ಉತ್ತಮ. ನಂತರ ಆಫ್ಲೈನಲ್ಲೇ ಅದನ್ನು ವೀಕ್ಷಿಸಬಹುದು.
- ವೀಡಿಯೋ ಮತ್ತು ಫೋಟೋಗಳನ್ನು ಆಟೋಮ್ಯಾಟಿಕ್ ಡೌನ್ ಲೋಡ್ ಆಪ್ಶನ್ ನಿಂದ ತೆಗೆಯಿರಿ. ಆಗ ಡೇಟಾ ಉಳಿತಾಯವಾಗುತ್ತದೆ.
BELTHANGADY
ಬಸ್ ನಿಲ್ದಾಣಕ್ಕೆ ಬಂಗೇರ ಹೆಸರು ; ನುಡಿನಮನದಲ್ಲಿ ಸಿಎಂ ಘೋಷಣೆ..!
ಬೆಳ್ತಂಗಡಿ: ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು. ಮಾಜಿ ಸಚಿವ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು. ಇವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ ಎಂದರು.
ಸತ್ಯ, ಬಡವರ ಪರ ಕಾಳಜಿ, ರಾಜಿ ರಹಿತ ಜನಪರ ಕೆಲಸಗಳ ಮೂಲಕ ತಮ್ಮ ವೈಯುಕ್ತಿಕ ಮತ್ತು ರಾಜಕೀಯ ಜೀವನವನ್ನು ಸಾರ್ಥಕಗೊಳಿಸಿಕೊಂಡವರು ಬಂಗೇರ ಅವರು ನನ್ನ ಬಳಿಗೆ ಯಾವತ್ತೂ ವೈಯುಕ್ತಿಕ ಕೆಲಸಗಳಿಗಾಗಿ ಬಂದಿಲ್ಲ. ಬಂದಾಗಲೆಲ್ಲಾ ಜನರ ಕೆಲಸಗಳಿಗಾಗಿ ಬೇಡಿಕೆ ಇಟ್ಟಿದ್ದರು. 2023 ರಲ್ಲೂ ಚುನಾವಣೆಯಲ್ಲಿ ಸ್ಪರ್ಧಿಸಲು ಮನವಿ ಮಾಡಿದರೂ ಅವರು ಒಪ್ಪಲಿಲ್ಲ. ಈ ಬಾರಿ ಸ್ಪರ್ಧಿಸಿದ್ದರೆ ಖಂಡಿತಾ ಗೆದ್ದು ಮಂತ್ರಿಯಾಗುತ್ತಿದ್ದರು ಎಂದರು.
ವಸಂತ ಬಂಗೇರ ಅವರ ಸಾವಿನಿಂದ ರಾಜ್ಯ, ರಾಜಕಾರಣ ಅತ್ಯಂತ ಬಡವಾಗಿದೆ. ಬಂಗೇರ ಅವರ ಆರೋಗ್ಯ ಚೇತರಿಸಿಕೊಳ್ಳುತ್ತದೆ, ಮತ್ತಷ್ಟು ಕಾಲ ನಮ್ಮ ಜೊತೆಗೆ ಇರುತ್ತಾರೆ ಎನ್ನುವ ಆಸೆ ಇತ್ತು. ಆದರೆ ನಮ್ಮನ್ನು ಅಗಲಿಬಿಟ್ಟಿರುವುದು ನನ್ನ ಪ್ರೀತಿಯ ಸ್ನೇಹಿತನನ್ನು ಕಳೆದುಕೊಂಡಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮಾಜಿ ಸಚಿವ ಜನಾರ್ಧನ ಪೂಜಾರಿ, ಸ್ಪೀಕರ್ ಯು.ಟಿ.ಖಾದರ್ ಮತ್ತು ವಸಂತ ಬಂಗೇರ ಅವರ ಕುಟುಂಬದ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಉಪಸ್ಥಿತರಿದ್ದರು.
ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಬಂಗೇರ ಹೆಸರಿಡಲು ಸರ್ಕಾರ ಸಿದ್ದ
ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ವಸಂತ ಬಂಗೇರ ಅವರ ಹೆಸರಿಡಲು ಸರ್ಕಾರ ಸಿದ್ದವಿದೆ. ಜೊತೆಗೆ ಅವರ ಪ್ರತಿಮೆ ನಿರ್ಮಿಸಿ ವೃತ್ತದಲ್ಲಿ ಸ್ಥಾಪಿಸಬೇಕು ಎನ್ನುವ ಬೇಡಿಕೆಗೂ ಸರ್ಕಾರ ಸ್ಪಂದಿಸಲಿದೆ ಎಂದು ಸಿಎಂ ಭರವಸೆ ನೀಡಿದರು.
- DAKSHINA KANNADA2 days ago
ವೈರಲ್ ಆಯ್ತು ಮೆಟರ್ನಿಟಿ ಶೂಟ್..! ಮೆಚ್ಚುಗೆ ಪಡೆದ ಫೋಟೋಗ್ರಾಫರ್..!
- LATEST NEWS4 days ago
ಕೊನೆಗೂ ಮೌನ ಮುರಿದ ಎಚ್ಡಿ ದೇವೇಗೌಡ..! ಪ್ರಜ್ವಲ್ ಬಗ್ಗೆ ಹೇಳಿದ್ದೇನು?
- LATEST NEWS1 day ago
ಮಲತಾಯಿಯ ಕ್ರೌರ್ಯಕ್ಕೆ ಮೂರು ವರ್ಷದ ಮಗು ಬ*ಲಿ
- LATEST NEWS6 days ago
ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಮತ್ತೆ ಚಿನ್ನದ ಬೆಲೆಯಲ್ಲಿ ಇಳಿಕೆ