bangalore
ಲೋಕ ಸಮರಕ್ಕೆ ‘ಕೈ’ ಕಸರತ್ತು…! ಮಹಿಳೆಯರಿಗೆ ಪಂಚ ಗ್ಯಾರೆಂಟಿ ಘೋಷಣೆ…!
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ (Legislative Assembly Election ) ಕಾಂಗ್ರೆಸ್ ನೀಡಿದ್ದ ಪಂಚ ಗ್ಯಾರೆಂಟಿಗೆ ಮತದಾರರು ಜೈ ಅಂದು ರಾಜ್ಯದಲ್ಲಿ 136 ಸೀಟು ಗೆಲ್ಲಿಸಿಕೊಟ್ಟಿದ್ದರು. ಇದೀಗ ಲೋಕಸಭಾ ಚುನಾವಣೆ ( Parliament Election ) ಸಮೀಪಿಸ್ತಾ ಇದ್ದು ಕೇಂದ್ರದಲ್ಲೂ ಕಾಂಗ್ರೆಸ್ ತನ್ನ ಮೊದಲ ಪ್ರಣಾಳಿಕೆಯಲ್ಲಿ ಐದು ಗ್ಯಾರೆಂಟಿ ನೀಡಿದೆ. ಕರ್ನಾಟಕದಲ್ಲಿ ಪಂಚ ಗ್ಯಾರೆಂಟಿ ಯಶಸ್ವಿಯ ಹಿನ್ನಲೆಯಲ್ಲಿ ಸಮಾವೇಶಗಳನ್ನು ನಡೆಸ್ತಾ ಇರೋ ಸರ್ಕಾರ ನಾವು ನುಡಿದಂತೆ ನಡೆಯುತ್ತೇವೆ ಅಂತ ಹೇಳುತ್ತಿದೆ. ಇದೇ ಸಮಯದಲ್ಲಿ ಕೇಂದ್ರದಲ್ಲಿ ಐದು ನ್ಯಾಯ್ ಗ್ಯಾರೆಂಟಿ ( Nyay Guarantee ) ಯೋಜನೆಯನ್ನು ಘೋಷಣೆ ಮಾಡಿ ಮತ್ತೆ ಜನರ ವಿಶ್ವಾಸಗಳಿಸುವ ಪ್ರಯತ್ನ ಮಾಡಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಯ ಘೋಷಣೆ ಮಾಡಲಾಗಿತ್ತು. ಆದ್ರೆ ಲೋಕಸಭಾ ಚುನಾವಣೆಯಲ್ಲಿ ಇದು ಕೇವಲ ಮಹಿಳೆಯರಿಗೆ ಮಾತ್ರ ಸೀಮಿತವಾಗಿದ್ದು ‘ನಾರಿ ನ್ಯಾಯ್’ ಯೋಜನೆ ಎಂದು ಕರೆಯಲಾಗಿದೆ.
ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ನೀಡಿರುವ ನ್ಯಾಯ್ ಯೋಜನೆಗಳು ಯಾವುದು..?
1) ಮಹಾಲಕ್ಷ್ಮಿ ಯೋಜನೆ
2) ಆದಿ ಅಬಾದಿ ಪೂರಾ ಹಕ್
3) ಶಕ್ತಿ ಕಾ ಸಮ್ಮಾನ್
4) ಅಧಿಕಾರ ಮೈತ್ರಿ
5) ಸಾವಿತ್ರಿ ಬಾಯಿ ಪುಲೆ ಹಾಸ್ಟೆಲ್
ಈ ನ್ಯಾಯ್ ಯೋಜನೆಯಿಂದ ಮಹಿಳೆಯರಿಗೆ ಸಿಗಲಿರುವುದೇನು..?
1) ಮಹಾಲಕ್ಷ್ಮಿ ಯೋಜನೆ : ದೇಶದ ಬಡ ಕುಟುಂಬದ ಓರ್ವ ಮಹಿಳೆಗೆ ವಾರ್ಷಿಕ 1 ಲಕ್ಷ ರೂಪಾಯಿ ನಗದು ಹಣ ನೀಡಲಾಗುವುದು.
2) ಆದಿ ಅಬಾದಿ ಪೂರಾ ಹಕ್ : ಕೇಂದ್ರ ಸರ್ಕಾರದ ನೌಕರಿಯಲ್ಲಿ ಶೇಖಡಾ 50 ರಷ್ಟು ಮೀಸಲಾತಿ.
3) ಶಕ್ತಿ ಕಾ ಸಮ್ಮಾನ್ : ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಿಸುವ ಮಹಿಳೆಯರಿಗೆ ನೀಡುವ ವೇತನದಲ್ಲಿನ ಕೇಂದ್ರದ ಪಾಲು ದ್ವಿಗುಣಗೊಳಿಸಲಾಗುವುದು.
4) ಅಧಿಕಾರ ಮೈತ್ರಿ : ಪಂಚಾಯತ್ ಮಟ್ಟದಲ್ಲೇ ಮಹಿಳೆಯರ ಹಕ್ಕುಗಳ ಜಾಗೃತಿ ಮೂಡಿಸುವುದು ಹಾಗೂ ಇದಕ್ಕಾಗಿ ಕಾನೂನು ತಜ್ಞರನ್ನು ನಿಯೋಜಿಸುವುದು. ಈ ಮೂಲಕ ಮಹಿಳೆಯರಿಗೆ ಅವರ ಹಕ್ಕುಗಳನ್ನು ಪಡೆಯಲು ಅನುಕೂಲ ಮಾಡಿಕೊಡುವುದು.
5) ಸಾವಿತ್ರಿ ಬಾಯಿ ಪುಲೆ ಹಾಸ್ಟೆಲ್ : ದೇಶದ ಪ್ರತಿ ರಾಜ್ಯದ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಉದ್ಯೋಗಿ ಮಹಿಳೆಯರಿಗೆ ಸರ್ಕಾರಿ ಹಾಸ್ಟೆಲ್ಗಳ ನಿರ್ಮಾಣ
ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಪ್ರಮುಖವಾಗಿ ಉಲ್ಲೇಖಿಸಲಾಗಿರುವ ಈ ನಾರಿ ನ್ಯಾಯ್ ಬಗ್ಗೆ ಕಾಂಗ್ರೆಸ್ ಭಾರಿ ನಿರೀಕ್ಷೆ ಇಟ್ಟುಕೊಂಡಿದೆ. ಶತಾಯಗತಾಯ ಎನ್ಡಿಎ ಓಟವನ್ನು ಕಟ್ಟಿ ಹಾಕುವ ನಿಟ್ಟಿನಲ್ಲಿ ಕಾಂಗ್ರೆಸ್ ಹೊಸ ಹೊಸ ತಂತ್ರಗಳನ್ನು ರೂಪಿಸ್ತಾ ಇದೆ. ಇದರ ಭಾಗವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ‘ನಾರಿ ನ್ಯಾಯ್’ ಯೋಜನೆಯ ಘೋಷಣೆ ಮಾಡಿದ್ದಾರೆ. ನ್ಯಾಯ್ ಯಾತ್ರೆಯಲ್ಲಿ ಇರುವ ರಾಹುಲ್ ಗಾಂಧಿ ಜೊತೆ ಆನ್ಲೈನ್ ಕಾನ್ಫರೆನ್ಸ್ ಮೂಲಕ ಈ ಘೋಷಣೆ ಮಾಡಿದ್ದಾರೆ. ಕಲಬುರ್ಗಿಯ ಸಮಾವೇಶದಲ್ಲೂ ಜನರಿಗೆ ಈ ನ್ಯಾಯ್ ಯೋಜನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
bangalore
ವರದಕ್ಷಿಣೆ ಕಿರುಕುಳ; ನೇ*ಣಿಗೆ ಶರಣಾದ ಟೆಕ್ಕಿ
ಮಂಗಳೂರು/ಬೆಂಗಳೂರು : ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿಯಲ್ಲಿ ನಡೆದಿದೆ. ಪೂಜಾ (22) ಜೀವಾಂತ್ಯಗೊಳಿಸಿದ ವಿವಾಹಿತೆ. ಪೂಜಾ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ.
ಕಳೆದ ಎರಡು ವರ್ಷಗಳ ಹಿಂದೆ ಸುನೀಲ್ ಎಂಬಾತನನ್ನು ಪೂಜಾ ಮದುವೆಯಾಗಿದ್ದರು. ಮದುವೆಯಾದ ಬಳಿಕ ವರದಕ್ಷಿಣೆಗಾಗಿ ಪತಿ ಪೀಡಿಸುತ್ತಿದ್ದ. ಇದರಿಂದ ಮನನೊಂದು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಇದನ್ನೂ ಓದಿ : ಸೀಲ್ಡ್ ತಂಪು ಪಾನೀಯ ಬಾಟಲ್ ಒಳಗಿತ್ತು ಜೇಡರ ಹುಳ!
ಮಗಳ ಸಾವಿಗೆ ಪತಿ ಸುನೀಲ್ ಹಾಗೂ ಮೈದುನ ಅನಿಲ್ ಕಾರಣ ಎಂದು ಪೂಜಾ ಪೋಷಕರು ಆರೋಪಿಸಿದ್ದಾರೆ. ಈ ಬಗ್ಗೆ ಗಂಗಮ್ಮನಗುಜಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bangalore
ಈ ಪುಣ್ಯಕ್ಷೇತ್ರಕ್ಕೆ ಹೋಗಲು ರಾಜ್ಯ ಸರ್ಕಾರದಿಂದ ಸಹಾಯಧನ ಸಿಗಲಿದೆ..!
ಬೆಂಗಳೂರು : ಕರ್ನಾಟಕ ರಾಜ್ಯದಿಂದ ಕೈಲಾಸ ಮಾನಸ ಸರೋವರ ಹಾಘೂ ಚಾರ್ಧಾಮ್ ಯಾತ್ರಿಗಳಿಗೆ ಅನುದಾನ ನೀಡುವ ಕುರಿತು ಮುಜರಾಯಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಮಾನಸ ಸರೋವರ ಯಾತ್ರಿಗಳಿಗೆ ರೂ.30 ಸಾವಿರ, ಚಾರ್ಧಾಮ್ ಯಾತ್ರಿಗಳಿಗೆ ರೂ.20 ಸಾವಿರ , ಹಾಗೂ ಈಗಾಗಲೇ ಕಾಶಿ ಯಾತ್ರೆ ಕೈಗೊಂಡ 30 ಸಾವಿರ ಯಾತ್ರಿಗಳಿಗೆ ತಲಾ ರೂ.5 ಸಾವಿರ ಸಹಾಯಧನ ನೀಡಲಾಗುತ್ತದೆ.
ಕೇವಲ ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳು ಮಾತ್ರ ಈ ಸಹಾಯಧನ ಪಡೆಯಲು ಅರ್ಹರಾಗಿದ್ದಾರೆ. ಈಗಾಗಲೇ ಈ ತೀರ್ಥ ಕ್ಷೇತ್ರಗಳಿಗೆ ಹೋಗಿ ಬಂದಿರುವವರು ಸಹಾಯಧನವನ್ನು ಪಡೆಯಲು ಅರ್ಹರಾಗಿದ್ದಾರೆ. ಇದಕ್ಕಾಗಿ ರೂ.25 ಪಾವತಿಸಿ ಸಂಬಂಧಿಸಿದ ವೆಬ್ಸೈಟ್ ಅಥವಾ ಮೊಬೈಲ್ ಆಪ್ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.
ಚಾರ್ಧಾಮ್ ಯಾತ್ರೆಯ ಮಾರ್ಗಸೂಚಿಗಳು
- ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ಚುನಾವಣಾ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ ಅನ್ನು ಅಪ್ಲೋಡ್ ಮಾಡುವುದು.
- 45 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಮಾತ್ರ ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಇದಕ್ಕೆ ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಅಪ್ಲೋಡ್ ಮಾಡಬೇಕು.
- ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ ಅದೇ ವ್ಯಕ್ತಿಗೆ ಮತ್ತೊಮ್ಮೆ ಅನುದಾನ ನೀಡಲಾಗುವುದಿಲ್ಲ.
ಕಾಶಿ ಯಾತ್ರೆಯ ಮಾರ್ಗಸೂಚಿಗಳು
- ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್ 1ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರತಕ್ಕದ್ದು.
- 18 ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹಾಜರುಪಡಿಸಬೇಕು.
ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮಾರ್ಗಸೂಚಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುತ್ತದೆ
bangalore
ಗೋಬಿ ಮಂಚೂರಿ ಆಯ್ತು..! ಈಗ ಚಿಕನ್ ಕಬಾಬ್, ಫಿಶ್ ಫುಡ್ ಮೇಲೆ ಕಣ್ಣು…!
ಮಂಗಳೂರು : ಫಿಶ್ ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನ ನಿಷೇಧಿಸಲಾಗಿತ್ತು.
ಇದೀಗ ಆರೋಗ್ಯ ಸಚಿವರ ಸೂಚನೆಯಂತೆ ಪರಿಶೀಲನೆ ನಡೆಸಿದ ಅಧಿಕಾರಿಗಳು ಚಿಕನ್ ಕಬಾಬ್ ಮತ್ತು ಫಿಶ್ ಫುಡ್ ನಲ್ಲಿ ಕಲರಿಂಗ್ ಇರುವುದು ಪತ್ತೆಯಾಗಿದೆ. ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಚಿಕನ್ ಕಬಾಬ್ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಹಿನ್ನೆಲೆಯಲ್ಲಿ ಚಿಕನ್ ಕಬಾಬ್, ಫಿಶ್ ಆಹಾರಗಳಲ್ಲಿ ಕೃತಕ ಬಣ್ಣ ಬೆರಸುವಿಕೆಯನ್ನ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಕಾನೂನು ಉಲ್ಲಂಘಿಸಿದ್ರೆ 7 ವರ್ಷದಿಂದ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ವರೆಗಿನ ದಂಡ ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಸಲಾಗಿದೆ.
ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲಾಗಿದೆ. 08 ಕಬಾಬ್ನ ಮಾದರಿಗಳು ಕೃತಕ ಬಣ್ಣದಿಂದ ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದೆ.
- LATEST NEWS4 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS4 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS6 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA1 day ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ