Connect with us

BELTHANGADY

ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಗೆ ಹೋದ ರೋಗಿಗೆ ಶಾಕ್..!!

Published

on

ಬೆಳ್ತಂಗಡಿ : ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಬಹುತೇಕ ಗ್ರಾಮದ ನಿವಾಸಿಗಳು ಅವಲಂಬಿತರಾಗಿರುವ ಪುಂಜಾಲಕಟ್ಟೆಯಲ್ಲಿರುವ ಸರಕಾರಿ ಆಸ್ಪತ್ರೆಯು ಇದ್ದೂ ಇಲ್ಲದಂಗೆ ಇರುವ ಆಸ್ಪತ್ರೆ ಎಂದು ಭಾಸವಾಗುತ್ತಿದೆ.

ಯಾಕೆಂದರೆ ರಜಾದಿನವಾದ ಇಂದು ಭಾನುವಾರ ಒಂದು ಕುಟುಂಬ ಶೀಘ್ರ ಚಿಕಿತ್ಸೆಗೆ ಬೆಳಿಗ್ಗೆ 11:24 ರ ಹೊತ್ತಿಗೆ ಪುಂಜಾಲಕಟ್ಟೆಯಲ್ಲಿರುವ ಸರಕಾರಿ ಆಸ್ಪತ್ರೆಗೆ ಹೋದಾಗ ರೋಗಿಯನ್ನು ಸ್ವೀಕರಿಸಲು ಒಂದೇ ಒಂದು ಸಿಬ್ಬಂದಿಗಳೂ,ವೈದ್ಯರೂ ಆಸ್ಪತ್ರೆಯಲ್ಲಿಲ್ಲ.

ಸಾರ್ವಜನಿಕರ ತೆರಿಗೆ ಹಣದಿಂದ ಕಟ್ಟಿದ ಅಷ್ಟು ದೊಡ್ಡ ಆಸ್ಪತ್ರೆಯಲ್ಲಿ ಇಂತಹ ಅವ್ಯವಸ್ಥೆಯು ನಿಜಕ್ಕೂ ಪ್ರಶ್ನಿಸುವಂಥದ್ದಾಗಿದೆ. ಅಷ್ಟಕ್ಕೂ ಇಂದು ಆದಿತ್ಯವಾರ ಅಲ್ಲವೇ..ರಜೆಯಲ್ಲಿರಬಹುದು ಎಂದು ನಾವು ಭಾವಿಸಿದರೆ ಅದು ತಪ್ಪು.

ಆದಿತ್ಯವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ 2ಗಂಟೆಯ ವರೆಗೆ ಸಮಯ ಆಸ್ಪತ್ರೆಯಲ್ಲಿ ನಿಗದಿತವಾಗಿದ್ದರೂ ಇಂತಹ ಒಂದು ನಡೆ ನಾವು ಖಂಡಿಸಬೇಕಾಗಿದೆ. ಇದು ನಿರ್ಲಕ್ಷ್ಯತನವೋ ಅಥವಾ ಆಲಸ್ಯತನವೋ ಎಂದು ನಾವೇ ತೀರ್ಮಾನಿಸಬೇಕಿದೆ.

ಇಂತಹ ಸಂದಿಗ್ಧತೆಯಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಇಂತಹ ಅವ್ಯವಸ್ಥೆಯು ಉಂಟಾದರೆ ತುರ್ತು ಅವಶ್ಯಕತೆಯಿದ್ದರೆ ಇವರ ಈ ಅವ್ಯವಸ್ಥೆಯಿಂದ ಹಲವು ಜೀವಗಳು ಅಸುನೀಗಬಹುದು.

ಈ ಕಡೆ ಬಂಟ್ವಾಳ ಸರಕಾರಿ ಆಸ್ಪತ್ರೆ ಮತ್ತು ಆ ಕಡೆ ಬೆಳ್ತಂಗಡಿ ಸಕರಾರಿ ಆಸ್ಪತ್ರೆ ಬಿಟ್ಟರೆ ಮಧ್ಯದಲ್ಲಿ ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆ ಇರುವಂಥದ್ದು. ಇದು ಅನೇಕ ಹಳ್ಳಿ,ಗ್ರಾಮಗಳಿಗೆ ಅವಲಂಬಿತವಾಗಿರುವ ಆಸ್ಪತ್ರೆ .

ಹೀಗಿರುವಾಗ ಜನ ಹೇಗೆ ಅವಲಂಬಿತರಾಗಿದ್ದಾರೆಯೋ ಅದಕ್ಕೆ ತಕ್ಕಂತೆ ಈ ಆಸ್ಪತ್ರೆಯು ಸ್ಪಂದಿಸಬೇಕಾಗಿದೆ.ಈ ಬಗ್ಗೆ ಸ್ಥಳೀಯ ಶಾಸಕರು,ಆರೋಗ್ಯ ಇಲಾಖೆಯವರು ಅಥವಾ ಸರಕಾರವು ಎಚ್ಚೆತ್ತಕೊಂಡು ಇದಕ್ಕೆ ಸೂಕ್ತ ವ್ಯವಸ್ಥೆಯನ್ನು ಮಾಡಬೇಕು.

ಹೆಚ್ಚುವರಿ ಆರೋಗ್ಯ ಸಿಬ್ಬಂದಿಗಳು,ವೈದ್ಯರನ್ನು ಪುಂಜಾಲಕಟ್ಟೆ ಆಸ್ಪತ್ರೆಗೆ ನೇಮಿಸಬೇಕು. ರೋಗಕ್ಕೆ ಆದಿತ್ಯವಾರ ,ಸೋಮವಾರ, ಶುಕ್ರವಾರ ಎಂದು ನಿರ್ದಿಷ್ಟ ದಿನ ಇಲ್ಲ.

ಅದು ಯಾವಾಗ ಬೇಕಾದರೂ ಬರಬಹುದು. ಕನಿಷ್ಠ ಪಕ್ಷದ ಸ್ಪಂದನೆಯಾದರೂ ಸರಕಾರಿ ಆಸ್ಪತ್ರೆ ನೀಡಬೇಕು.ಇದರ ಬಗ್ಗೆ ಸಂಬಂಧಪಟ್ಟವರು ಸೂಕ್ತ ಕ್ರಮಕೈಗೊಳ್ಳಬೇಕಾಗಿದೆ.

ಒಂದು ವೇಳೆ ಇಂತಹ ಅವ್ಯವಸ್ಥೆ ಮುಂದುವರಿದರೆ, ಆಸ್ಪತ್ರೆಯ ನಿರ್ಲಕ್ಷ್ಯತನ ಅಥವಾ ಆಲಸ್ಯತನದಿಂದ ಜೀವಗಳು ಹೋದರೆ ಅದಕ್ಕೆ ಸ್ಥಳೀಯ ಶಾಸಕರು ಮತ್ತು ಆರೋಗ್ಯ ಅಧಿಕಾರಿಗಳೇ ನೇರ ಹೊಣೆ ಸಾರ್ವಜನಿಕರು ಎಚ್ಚರಿಕೆ ಕೂಡ ನೀಡಿದ್ದಾರೆ.

BELTHANGADY

ಮುಂದಿನ ನಾಲ್ಕು ದಿನ ಕರಾವಳಿಯಲ್ಲಿ ಮಳೆಯ ಸಿಂಚನ..! ಹವಾಮಾನ ಇಲಾಖೆ ಮುನ್ಸೂಚನೆ

Published

on

ಮಂಗಳೂರು: ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿಗೆ ಬಸವಳಿದು ಜನರು ಕಂಗಾಲಾಗಿದ್ದು, ಕೆಲವೊಂದು ಕಡೆ ವರುಣನ ಕೃಪೆಗಾಗಿ ಜನರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪೂಜಾ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ.

rain

ಈ ನಡುವೆ ಬಿಸಿ ಶಾಖದಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಜನರು ನಿನ್ನೆ ಕೆಲವೆಡೆ ಸುರಿದ ಮಳೆಯಿಂದಾಗಿ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಇನ್ನು ಬೆಂಗಳೂರಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅಲ್ಲಲ್ಲಿ ಅಲ್ಪಾ ಸ್ವಲ್ಪ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ರಾಜ್ಯದ ​ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ.

ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ. ಅದರಲ್ಲೂ ಬೆಂಗಳೂರಿನಲ್ಲಿ ಗುಡುಗು, ಮಿಂಚಿನ ಜತೆಗೆ ಅಲ್ಲಲ್ಲಿ ಚದುರಿದ ಮಳೆ ಬೀಳುವ ಸಂಭವವಿದೆ. ಮೇ 6 ಮತ್ತು 7 ರಂದು ಸಾಧಾರಣ ಅಥವಾ ಅದಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಬಿಸಿಗಾಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading

BELTHANGADY

ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

Published

on

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.

gangadhar

ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

gangadhar

ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು  ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

LATEST NEWS

Trending