DAKSHINA KANNADA
ಮಂಗಳೂರಿನಲ್ಲಿ ಪೇಯಿಂಗ್ ಗೆಸ್ಟ್, ಹೋಂ ಸ್ಟೇ ನಿಯಮ ಇನ್ನೂ ಬಿಗಿ..!
ಮಂಗಳೂರು ನಗರದಲ್ಲಿ ಪೇಯಿಂಗ್ ಗೆಸ್ಟ್ (ಪಿಜಿ), ಹಾಸ್ಟೆಲ್, ಹೋಮ್ ಸ್ಟೇ ಇತ್ಯಾದಿಗೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿ ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಆದೇಶ ಹೊರಡಿಸಿದ್ದಾರೆ.
ಮಂಗಳೂರು: ಮಂಗಳೂರು ನಗರದಲ್ಲಿ ಪೇಯಿಂಗ್ ಗೆಸ್ಟ್ (ಪಿಜಿ), ಹಾಸ್ಟೆಲ್, ಹೋಮ್ ಸ್ಟೇ ಇತ್ಯಾದಿಗೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿ ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಆದೇಶ ಹೊರಡಿಸಿದ್ದಾರೆ.
ಹಾಸ್ಟೆಲ್, ಹೋಂ ಸ್ಟೇ, ಪೇಯಿಂಗ್ ಗೆಸ್ಟ್, ಸರ್ವಿಸ್ ಅಪಾರ್ಟ್ಮೆಂಟ್, ವಾಣಿಜ್ಯ ಉದ್ದೇಶದ ಗೆಸ್ಟ್ ಹೌಸ್, ಶಿಕ್ಷಣ ಸಂಸ್ಥೆಗಳು ನಡೆಸುತ್ತಿರುವ ವಸತಿ ಗೃಹಗಳ ಮಾಲಕರು/ಪಾಲುದಾರರು, ಆಡಳಿತ ಮಂಡಳಿಯ ಮುಖ್ಯಸ್ಥರು ಸಂಬಂಧಿಸಿದ ಇಲಾಖೆಗಳಿಂದ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು.
ಮಾಲಕರ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಗುರುತಿನ ಚೀಟಿಯನ್ನು ಹಾಗೂ ಸಂಸ್ಥೆಯ ರಿಜಿಸ್ಟರ್ ಪುಸ್ತಕವನ್ನು ಕಡ್ಡಾಯವಾಗಿ ಪ್ರತೀ ವರ್ಷ ಪೊಲೀಸ್ ಆಯುಕ್ತರ ಕಚೇರಿಗೆ ಹಾಜರುಪಡಿಸಬೇಕು.
ಅಲ್ಲದೆ ಮಾಲಕರ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಗುರುತಿನ ಚೀಟಿಯನ್ನು ವ್ಯಾಪ್ತಿಯ ಪೊಲೀಸ್ ಠಾಣೆಗೆ ನೀಡಬೇಕು.
ವಿದೇಶಿ ವಿದ್ಯಾರ್ಥಿಗಳು ವಾಸ್ತವ್ಯ ಹೂಡಿದ 24 ಗಂಟೆಗಳೊಳಗೆ ಅವರ ಪೂರ್ಣ ಮಾಹಿತಿಯನ್ನು ಪಾಸ್ಪೋರ್ಟ್, ವೀಸಾದ ವಿವರ ಸಹಿತವಾಗಿ ನೀಡಬೇಕು. ಅವರು ವಾಸ್ತವ್ಯ ತೆರವುಗೊಳಿಸಿದಾಗಲೂ ಮಾಹಿತಿ ನೀಡಬೇಕು ಎಂದು ಸೂಚಿಸಿದ್ದಾರೆ.
ಉತ್ತಮ ಗುಣಮಟ್ಟದ ಸಿಸಿ ಕೆಮರಾಗಳನ್ನು ಅಳವಡಿಸಬೇಕು. ಅವುಗಳಲ್ಲಿ ಒಂದು ಕ್ಯಾಮರಾ ಮುಖ್ಯ ದ್ವಾರಕ್ಕೆ/ರಸ್ತೆಗೆ ಮುಖ ಮಾಡಿರುವಂತೆ ಅಳವಡಿಸಿರಬೇಕು.
ಸಿಸಿ ಕ್ಯಾಮರಾಗಳ ಫೂಟೇಜ್ಗಳು ಕನಿಷ್ಠ 30 ದಿನಗಳವರೆಗೆ ವೀಕ್ಷಣೆಗೆ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಠಾಣಾಧಿಕಾರಿಗಳು ಕೇಳಿದಾಗ ಮಾಹಿತಿ ಸಲ್ಲಿಸಬೇಕು.
ಅಪರಾಧದ ಕೃತ್ಯಗಳು, ಮಾದಕ ದ್ರವ್ಯ ಮತ್ತು ಅನೈತಿಕ ಹಾಗೂ ಇತರ ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಯದಂತೆ ಮುಂಜಾಗ್ರತೆ ವಹಿಸಬೇಕು.
ಎಲ್ಲಾ ಪೇಯಿಂಗ್ ಗೆಸ್ಟ್ಗಳಲ್ಲಿ ಮಂಗಳೂರು ನಗರ ವ್ಯಾಪ್ತಿಯ ಅತಿಥಿಗಳನ್ನು ಹೊರತುಪಡಿಸಿ ಉಳಿದ ಅತಿಥಿಗಳಿಗೆ ಅವರ ಮೂಲ ವಿಳಾಸಕ್ಕೆ ಸಂಬಂಧಿಸಿದ ಪೊಲೀಸ್ ಕಚೇರಿಯಿಂದ ಕಡ್ಡಾಯವಾಗಿ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣ ಪತ್ರ ಪಡೆದುಕೊಳ್ಳಬೇಕು.
ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಭದ್ರತೆಯ ಜವಾಬ್ದಾರಿಯನ್ನು ಸಂಬಂಧಪಟ್ಟವರು ವಹಿಸಿಕೊಂಡು ಈ ಬಗ್ಗೆ ಮುಚ್ಚಳಿಕೆ ಪ್ರಮಾಣ ಪತ್ರವನ್ನು ಸ್ಥಳೀಯ ಪೊಲೀಸ್ ಠಾಣೆಗೆ ಸಲ್ಲಿಸಬೇಕು ಎಂದು ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಚುನಾವಣಾ ಆಯೋಗಕ್ಕೆ ದೂರು
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಪ್ರಕರಣ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
- FILM4 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM4 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM5 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru4 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!