Connect with us

DAKSHINA KANNADA

ಉಳ್ಳಾಲ ತಲಪಾಡಿಯಲ್ಲಿ ಲಾರಿ ಢಿಕ್ಕಿ ಪಾದಚಾರಿ ವ್ಯಕ್ತಿ ಸಾವು : ತಿಂಗಳ ಅಂತರದಲ್ಲಿ ಮೂವರು ಸಹೋದರರ ಸಾವು..!

Published

on

ಲಾರಿ ಅಪಘಾತಕ್ಕೀಡಾಗಿ ಪಾದಚಾರಿ ಮುಳ್ಳೇರಿಯ ಆದೂರು ನಿವಾಸಿ ವಸಂತ್‌ ಕುಮಾರ್‌ ರೈ (55) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ ಟೋಲ್‌ ಗೇಟ್‌ ಸಮೀಪ ಸೋಮವಾರ ಸಂಜೆ ಸಂಭವಿಸಿದೆ.

ಉಳ್ಳಾಲ: ಲಾರಿ ಅಪಘಾತಕ್ಕೀಡಾಗಿ ಪಾದಚಾರಿ ಮುಳ್ಳೇರಿಯ ಆದೂರು ನಿವಾಸಿ ವಸಂತ್‌ ಕುಮಾರ್‌ ರೈ (55) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ ಟೋಲ್‌ ಗೇಟ್‌ ಸಮೀಪ ಸೋಮವಾರ ಸಂಜೆ ಸಂಭವಿಸಿದೆ.

ತಿಂಗಳ ಅಂತರದಲ್ಲಿ ಸಹೋದರರ ನಡುವೆ ಸಂಭವಿಸಿದ ಮೂರನೇಯ ಸಾವಾಗಿದೆ.

ಟೋಲ್‌ ಗೇಟ್‌ ಬಳಿ ರಾಷ್ಟ್ರೀಯ ಹೆದ್ದಾರಿ 66 ರನ್ನು ದಾಟುವ ಸಂದರ್ಭ ಕೇರಳದ ಕಡೆಯಿಂದ ಅತಿವೇಗದಿಂದ ಧಾವಿಸುತ್ತಿದ್ದ ಕಲ್ಲು ಲೋಡ್‌ ಇದ್ದ ಲಾರಿ ವಸಂತ್‌ ಅವರಿಗೆ ಢಿಕ್ಕಿ ಹೊಡೆದಿದೆ.

ತಲೆಗೆ ಗಂಭೀರ ಗಾಯಗೊಂಡ ಅವರನ್ನು ಟೋಲ್‌ ಸಿಬ್ಬಂದಿ ಸೇರಿ, ತಮ್ಮದೇ ಆಂಬ್ಯುಲೆನ್ಸ್‌ ಮೂಲಕ ಆಸ್ಪತ್ರೆಗೆ ದಾಖಲಿಸುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ. ಮಂಗಳೂರು ಸಂಚಾರಿ ಠಾಣಾ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದುಕೊಂಡು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತ ವಸಂತ್‌ ರೈ ಅವರು ಕಳೆದ 10 ವರ್ಷಗಳಿಂದ ಕಾಸರಗೋಡಿನ ಕೆಎಸ್‌ ಆರ್‌ ಟಿಸಿ ಡಿಪೋದಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಶಿರಿಯಾ ದೇವಸ್ಥಾನದಲ್ಲಿ ನಡೆದಿದ್ದ ಸಂಬಂಧಿಕರ ಉತ್ತರಕ್ರಿಯೆಯಲ್ಲಿ ಪಾಲ್ಗೊಂಡು ಕೋಟೆಕಾರು ತೆರಳಲು ತಲಪಾಡಿವರೆಗೆ ಬಸ್ಸಿನಲ್ಲಿ ಬಂದು ಇಳಿದಿದ್ದರು.

ಅಲ್ಲಿಂದ ಕೋಟೆಕಾರು ಕಡೆಗೆ ತೆರಳಲು ಮಂಗಳೂರು ಸಿಟಿ ಬಸ್ಸನ್ನೇರಲು ರಾ.ಹೆ.ಯನ್ನು ದಾಟುವಾಗ ಘಟನೆ ಸಂಭವಿಸಿದೆ.

ಮೃತರು ಪತ್ನಿ, ಮೂವರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಎಲ್ಲರೂ ಶಾಲೆ ಕಲಿಯುವ ವಿದ್ಯಾರ್ಥಿಗಳಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಿಂಗಳೊಳಗೆ ಮೂವರು ಸಹೋದರರ ದುರ್ಮರಣ!
ವಸಂತ್‌ ಕುಮಾರ್‌ ರೈ ಅಪಘಾತದಲ್ಲಿ ಸಾವನ್ನಪ್ಪುವ ಮೂಲಕ ಎರಡು ತಿಂಗಳ ಅಂತರದಲ್ಲಿ ಸಾವು ಕಂಡ ಮೂರನೇ ವ್ಯಕ್ತಿಯಾಗಿದ್ದಾರೆ. ಮುಂಬೈನಲ್ಲಿದ್ದ ಸಹೋದರ ಸದಾನಂದ ರೈ ಅವರು ಕ್ಯಾನ್ಸರ್‌ ರೋಗಕ್ಕೆ ತುತ್ತಾಗಿ ತಿಂಗಳ ಹಿಂದೆ ಸಾವನ್ನಪ್ಪಿದ್ದರು. ಅವರ ಮಕ್ಕಳು ಸೋಮವಾರ ರಾತ್ರಿ ರೈಲಿನಲ್ಲಿ ವಾಪಸ್ಸು ಮುಂಬೈಗೆ ಪ್ರಯಾಣಿಸುವ ಹಿನ್ನೆಲೆಯಲ್ಲಿ ಅವರನ್ನು ಭೇಟಿಯಾಗುವ ಸಲುವಾಗಿ ವಸಂತ್‌ ರೈ ಕೋಟೆಕಾರಿಗೆ ತೆರಳುತ್ತಿದ್ದರು. ಇನ್ನೋರ್ವ ಸಹೋದರ ಚಂದ್ರಹಾಸ್‌ ರೈ 15 ದಿನಗಳ ಅಂತರದಲ್ಲಿ ಅದೇ ಕ್ಯಾನ್ಸರ್‌ ರೋಗಕ್ಕೆ ತುತ್ತಾಗಿ ಸಾವನ್ನಪ್ಪಿದ್ದರು. ಇದೀಗ ಅವರ ಸಾವಿನ 17 ದಿನಗಳ ಅಂತರದಲ್ಲಿ ವಸಂತ್‌ ಕುಮಾರ್‌ ರೈ ಸಾವನ್ನಪ್ಪಿದ್ದಾರೆ. ತಿಂಗಳ ಅಂತರದಲ್ಲಿ ಒಂದೇ ಕುಟುಂಬದ ಮೂವರ ಸಾವಿನಿಂದ ಇಡೀ ಕುಟುಂಬ ಶೋಕಸಾಗರದಲ್ಲಿ ಮುಳುಗಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending