ಅಯೋಧ್ಯೆ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯ ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಇಂದು ಅಯೋಧ್ಯೆಯ ಧರ್ಮನಗರಿಗೆ ಭೇಟಿ ನೀಡಿ, ಮಂದಿರ ನಿರ್ಮಾಣ ಕಾಮಗಾರಿ ವೀಕ್ಷಿಸಿದರು.
ಜನ್ಮಭೂಮಿಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ತಳಹದಿ ತುಂಬಿಸುವ ಕಾಮಗಾರಿ ಆರಂಭವಾದ ನಂತರ ಇದು ಅವರ ಮೊದಲ ಭೇಟಿಯಾಗಿದೆ. ಆರಂಭದಲ್ಲಿ ಶ್ರೀರಾಮ ಲಲ್ಲಾನ ತಾತ್ಕಾಲಿಕ ಗುಡಿಗೆ ತೆರಳಿದ ಪೇಜಾವರ ಶ್ರೀಗಳು ದರ್ಶನ ಪಡೆದರು. ಬಳಿಕ ಅಲ್ಲಿಂದ ಮಂದಿರ ನಿರ್ಮಾಣ ಮಾಡುವ ಬುನಾದಿ ತುಂಬಿಸುವ ಸ್ಥಳಕ್ಕೆ ತೆರಳಿ, ಅಲ್ಲಿ ನಡೆಯುತ್ತಿರುವ ಕಾಮಗಾರಿ ವೀಕ್ಷಿಸಿದರು.