LATEST NEWS
ಪೆನ್ ಡ್ರೈವ್ ಪ್ರಕರಣ : ಪುತ್ರ ಪ್ರಜ್ವಲ್ ಬಗ್ಗೆ ಹಾಸನದಲ್ಲಿ ರೇವಣ್ಣ ಪ್ರತಿಕ್ರಿಯೆ
ಹಾಸನ : ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಪ್ರಕರಣ ರಾಜ್ಯ ಮಾತ್ರವಲ್ಲ, ಇಡೀ ದೇಶದಲ್ಲೇ ಭಾರಿ ಸದ್ದು ಮಾಡಿದೆ. ಈ ಪ್ರಕರಣದ ಸಂತ್ರಸ್ತೆ ಮಹಿಳೆಯ ಕಿಡ್ನ್ಯಾಪ್ ಆರೋಪದಲ್ಲಿ ಜೈಲು ಸೇರಿದ್ದ ರೇವಣ್ಣ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಇದೇ ಮೊದಲ ಬಾರಿಗೆ ಮಗನ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಹೊಳೆನರಸೀಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಪ್ರಜ್ವಲ್ ಅವರ ಬಗ್ಗೆ ಏನೂ ಗೊತ್ತಿಲ್ಲ ಎಂದಿದ್ದಾರೆ. ಅಲ್ಲದೇ, ಅವರ ಬಗ್ಗೆ ಮಾಹಿತಿಯೂ ನನಗಿಲ್ಲ ಎಂದಿದ್ದಾರೆ. ನಾನು ಯಾರ ಬಗ್ಗೆಯೂ ಮಾತನಾಡಲ್ಲ. ಅದರ ಬಗ್ಗೆ ನನಗೇನು ಗೊತ್ತಿಲ್ಲ. ಪ್ರಜ್ವಲ್ ವಿಚಾರ ಏನೂ ಗೊತ್ತಿಲ್ಲ ಎಂದು ಜಾರಿಕೊಂಡಿದ್ದಾರೆ.
ಶಾಸಕನಾಗಿ ನಾನು 25 ವರ್ಷ ಹಾಸನದಲ್ಲಿ ಕೆಲಸ ಮಾಡಿದ್ದೇನೆ. ಯಾರೂ ಧೃತಿಗೆಡುವುದು ಬೇಡ. ಇಂದು ಜಿಲ್ಲೆಯ ಶಾಸಕರ ಜೊತೆ ಚರ್ಚೆ ಮಾಡಿದ್ದೇನೆ. ಯಾರೂ ಧೃತಿಗೆಡುವುದು ಬೇಡ. ಇಂದು ಜಿಲ್ಲೆಯ ಶಾಸಕರ ಜೊತೆ ಚರ್ಚಿಸಿದ್ದೇನೆ. ಪ್ರಕರಣ ಕೋರ್ಟ್ ನಲ್ಲಿರುವುದರಿಂದ ಏನೂ ಹೇಳಲ್ಲ. ನನಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ. ನಾನು ಅದರ ಬಗ್ಗೆ ಏನೂ ಮಾತನಾಡಲ್ಲ ಎಂದರು.
ಇದನ್ನೂ ಓದಿ : ಮಲಗಿದ್ದಲ್ಲೇ ಸಾವು ಕಂಡ ಕುಮಾರಸ್ವಾಮಿ ಮತ್ತು ಕುಟುಂಬ..! ಅನಿಲ ಸೋರಿಕೆ ಶಂಕೆ
ಸದ್ಯ ರೇವಣ್ಣ ಜೈಲಿನಿಂದ ಹೊರ ಬರುತ್ತಲೇ ದೇವಾಲಯಗಳತ್ತ ಪಯಣ ಬೆಳೆಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ವಿಶೇಷ ಪೂಜೆ, ಹೋಮ ಹವನಗಳಲ್ಲಿ ಭಾಗಿಯಾಗುತ್ತಿದ್ದಾರೆ.
LATEST NEWS
ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ..! ವಾಹನ ಸವಾರರಿಗೆ ಬಿಗ್ ಶಾಕ್..
ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಗೊಳಿಸಿ ವಾಹನ ಸವಾರರಿಗೆ ಶಾಕ್ ನೀಡಿದೆ.
ಪೆಟ್ರೋಲ್, ಡಿಸೇಲ್ ಮೇಲಿನ ಟ್ಯಾಕ್ಸ್ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಿಟೇಲ್ ಸೇಲ್ಸ್ ಟ್ಯಾಕ್ಸ್ ದರ ಹೆಚ್ಚಳ ಮಾಡಲಾಗಿದೆ. ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂಪಾಯಿ ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳವಾಗಿದೆ. ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್- 25.92% ಇದ್ದಿದ್ದು, ಈಗ 29.84% ಗೆ ಏರಿಕೆ ಅಂದರೆ 3.9% ಹೆಚ್ಚಳವಾಗಿದೆ. ಅಂತೆಯೇ ಡೀಸೆಲ್ ಈ ಹಿಂದೆ- 14.34% ಇದ್ದಿದ್ದು, ಈಗ 18.44%ಗೆ ಏರಿಕೆ ಕಂಡಿದೆ. ಅಂದರೆ 4.1% ರಷ್ಟು ಏರಿಕೆಯಾಗಿದೆ. ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ಪೆಟ್ರೋಲ್ ದರ 100 ರೂಪಾಯಿ ದಾಟಲಿದೆ. ಈಗ ಪೆಟ್ರೋಲ್ ದರ 99.54 ರೂ. ಇದ್ದು, ಮುಂದೆ 102 ರೂಪಾಯಿಗೆ ಏರಿಕೆಯಾಗಲಿದೆ. ಇವತ್ತಿನ ಡೀಸೆಲ್ ದರ 85.93 ರೂಪಾಯಿ ಇದೆ. ಅದು 89.43 ರೂಪಾಯಿಗೆ ಏರಿಕೆಯಾಗಲಿದೆ.
LATEST NEWS
ಪ್ರಕಾಶ್ ಶೆಟ್ಟಿ, ರೊನಾಲ್ಡ್ ಕೊಲಾಸೋರಿಗೆ ಗೌರವ ಡಾಕ್ಟರೇಟ್ ಪ್ರದಾನ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವ ಶನಿವಾರ ವಿ.ವಿ.ಯ ಆವರಣದಲ್ಲಿರುವ ಮಂಗಳಾ ಸಭಾಂಗಣದಲ್ಲಿ ಶನಿವಾರ ಜರಗಿತು.
ಮಂಗಳೂರು ವಿವಿ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ, ಅನಿವಾಸಿ ಭಾರತೀಯ ಉದ್ಯಮಿ ಡಾ। ರೊನಾಲ್ಡ್ ಕೊಲಾಸೋ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನಿಸಿದರು. ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ। ತುಂಬೆ ಮೊಯ್ದೀನ್ ಅವರು ಕಾರ್ಯಕ್ರಮಕ್ಕೆ ಗೈರಾಗಿದ್ದರು.
155 ಮಂದಿಗೆ ಪಿಎಚ್ಡಿ, 58 ಚಿನ್ನದ ಪದಕ ಮತ್ತು 57 ನಗದು ಬಹುಮಾನ ಪ್ರದಾನ ಮಾಡಿದರು.
ಉನ್ನತ ಶಿಕ್ಷಣ ಸಚಿವ, ಸಹಕುಲಾಧಿಪತಿ ಡಾ। ಎಂ.ಸಿ.ಸುಧಾಕರ್ ಉಪಸ್ಥಿತರಿದ್ದರು. ನವದೆಹಲಿಯ ಅಭಿವೃದ್ಧಿಶೀಲ ರಾಷ್ಟ್ರಗಳ ಸಂಶೋಧನೆ ಮತ್ತು ಮಾಹಿತಿ ವ್ಯವಸ್ಥೆ ಮಹಾನಿರ್ದೇಶಕ ಪ್ರೊ। ಸಚಿನ್ ಚತುರ್ವೇದಿ ಅವರು ಘಟಿಕೋತ್ಸವ ಭಾಷಣ ಮಾಡಿದರು.
ವಿ.ವಿ. ಕುಲಪತಿ ಪ್ರೊ। ಪಿ.ಎಲ್. ಧರ್ಮ ಪ್ರಸ್ತಾವಿಸಿದರು. ಕುಲಸಚಿವ (ಆಡಳಿತ) ರಾಜು ಮೊಗವೀರ, ಕುಲಸಚಿವ (ಪರೀಕ್ಷಾಂಗ) ಡಾ। ದೇವೇಂದ್ರಪ್ಪ, ವಿ.ವಿ.ಯ, ಸಿಂಡಿಕೇಟ್ ಸದಸ್ಯರು, ವಿದ್ಯಾವಿಷಯ ಪರಿಷತ್ ಸದಸ್ಯರು, ವಿವಿಧ ನಿಕಾಯಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
DAKSHINA KANNADA
ಏಕಕಾಲಕ್ಕೆ ಅರಳಿ ನಿಂತ 42 ಬ್ರಹ್ಮಕಮಲ ಪುಷ್ಪ; ಮಧ್ಯರಾತ್ರಿಯೇ ವಿಶೇಷ ಪೂಜೆ ಸಲ್ಲಿಕೆ!
ಉತ್ತರ ಕನ್ನಡ: ಶ್ರಾವಣದ ಸಂಜೆಗಳಲ್ಲಿ ಬ್ರಹ್ಮ ಕಮಲ ಅರಳುವುದು ವಾಡಿಕೆ. ಒಮ್ಮೊಮ್ಮೆ ಅದಕ್ಕೆ ವ್ಯತಿರಿಕ್ತವಾಗಿ ಬೇಗವೂ ಬ್ರಹ್ಮ ಕಮಲ ಅರಳುತ್ತದೆ. ಆದರೆ ಒಮ್ಮೆಲೆ ಪುಷ್ಪಗುಚ್ಛದಷ್ಟು ಅಂದವಾಗಿ ಒಂದೆಡೆಗೇ ಅರಳುವ ಬ್ರಹ್ಮಕಮಲದ ಸೊಬಗನ್ನು ನೋಡುವ ಅನುಭವವೇ ಬೇರೆ! ಬ್ರಹ್ಮಕಮಲವು ಅಧ್ಯಾತ್ಮಿಕ ಸ್ಥಾನವನ್ನು ಹಿಂದೂ ಹಾಗೂ ಜೈನ, ಬೌದ್ಧ ಧರ್ಮಗಳಲ್ಲಿ ಹೊಂದಿದೆ. ಹೀಗಾಗಿ ಬ್ರಹ್ಮಕಮಲ ಬರೀ ಹೂವಾಗದೇ ಈ ಹೂವೇ ಆರಾಧನೆಯ ವಸ್ತುವಾಗಿರುವುದು ವಿಶೇಷ!
ಏಕಕಾಲಕ್ಕೆ 42 ಹೂಗಳು!
ಯಲ್ಲಾಪುರ ಪಟ್ಟಣದ ರಾಮಾಪುರ ವ್ಯಾಪ್ತಿಯಲ್ಲಿ ವಾಸಿಸುವ ಗಣೇಶ್ ಪಂಡರಾಪುರ ಅವರ ಮನೆಯ ವಿಶೇಷವಾದ ಬ್ರಹ್ಮಕಮಲದ ಹೂವುಗಳು! ಯಾಕೆ ವಿಶೇಷ ಎಂದರೆ, ಹೋದ ವರ್ಷ ಇವರ ಮನೆಯಲ್ಲಿ ಸುಮಾರು 84 ಬ್ರಹ್ಮಕಮಲಗಳು ಒಟ್ಟಿಗೆ ಅರಳಿದ್ದವು. ಈ ವರ್ಷ 42 ಬ್ರಹ್ಮಕಮಲ ಏಕಕಾಲಕ್ಕೆ ಅರಳಿ ನಿಂತಿವೆ.
ಪುಷ್ಪಕ್ಕೆ ಪೂಜೆ!
ಮಧ್ಯರಾತ್ರಿ 12: 40 ರ ಸುಮಾರಿಗೆ ಈ ಹೂವುಗಳೆಲ್ಲಾ ಅರಳಿದ್ದವು ತಕ್ಷಣ ಗಣೇಶ್ ಪಂಡರಾಪುರ ಅವರ ಕುಟುಂಬ ವಾಡಿಕೆಯಂತೆ ಪೂಜೆ ಮಾಡಿ ನಂತರ ಮನೆಯವರಿಗೆ ಜನರಿಗೆ ಪ್ರಸಾದ ಹಂಚಿ ಹೂವುಗಳ ಮುಂದೆ ಭಕ್ತಿ ಭಾವದಿಂದ ಪ್ರಾರ್ಥನೆ ಸಲ್ಲಿಸಿದರು, ಬ್ರಹ್ಮಕಮಲ ಅರಳುವ ವೇಳೆ ಕೇಳಿದ ಕೋರಿಕೆಗಳು ಈಡೇರುತ್ತವೆ ಎಂಬುದು ಪ್ರಸಿದ್ಧ ಲೋಕಾರೂಢಿಯ ನಂಬಿಕೆ.
- LATEST NEWS6 days ago
ನಿವೇದಿತಾಗೆ ಡಿವೋರ್ಸ್ ಕೊಟ್ಟಿದ್ದು ಯಾಕಂದ್ರೆ.. ಕೊನೆಗೂ ಕಾರಣ ಹೇಳಲು ಮುಂದೆ ಬಂದ ಚಂದನ್!
- FILM3 days ago
ಡ್ರೋನ್ ಪ್ರತಾಪ್ ಹುಟ್ಟು ಹಬ್ಬಕ್ಕೆ ಸಿಕ್ತು ಬ್ಯೂಟಿಫುಲ್ ಗಿಫ್ಟ್
- LATEST NEWS4 days ago
ಅಡುಗೆಯಲ್ಲಿ ಉಪ್ಪು ಜಾಸ್ತಿ ಆಯ್ತಾ? ಯೋಚನೆ ಬೇಡ, ಈ ಟಿಪ್ಸ್ ಫಾಲೋ ಮಾಡಿ
- LATEST NEWS3 days ago
ಅಡುಗೆ ಮನೆಯಿಂದ ಹಲ್ಲಿಗಳನ್ನು ಓಡಿಸಲು ಈ ಟಿಪ್ಸ್ ಅನುಸರಿಸಿ
Pingback: ವಿದೇಶದಲ್ಲೇ ಠಿಕಾಣಿ ಹೂಡಿದ ಪ್ರಜ್ವಲ್..! ತಾತಾ, ಚಿಕ್ಕಪ್ಪನ ಮನವಿಗೂ ಡೋಂಟ್ ಕ್ಯಾರ್..! - NAMMAKUDLA NEWS - ನಮ್ಮಕುಡ್ಲ ನ್ಯೂ