LATEST NEWS
Raichuru: ತರಕಾರಿ ಕಾವಲು ಕಾಯುತಿದ್ದವನಿಗೆ ಚಾಕು ಇರಿತ..!
ತರಕಾರಿಗಳ ಬೆಲೆ ಗಗನಕ್ಕೇರಿದ ಬೆನ್ನಲೇ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ತರಕಾರಿ ಮಾರುಕಟ್ಟೆಯಲ್ಲಿ ಕಾವಲಿಗಾಗಿ ಮಲಗಿದ್ದವನ ಮೇಲೆ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದ ಘಟನೆ ನಡೆದಿದೆ.
ರಾಯಚೂರು: ತರಕಾರಿಗಳ ಬೆಲೆ ಗಗನಕ್ಕೇರಿದ ಬೆನ್ನಲೇ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ತರಕಾರಿ ಮಾರುಕಟ್ಟೆಯಲ್ಲಿ ಕಾವಲಿಗಾಗಿ ಮಲಗಿದ್ದವನ ಮೇಲೆ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದ ಘಟನೆ ನಡೆದಿದೆ.
ಗಾಯಗೊಂಡವನನ್ನು ರಫಿ ಎಂದು ಗುರುತಿಸಲಾಗಿದೆ.
ಅಬ್ದುಲ್ ರೌಫ್ ಚಾಕು ಇರಿದ ವ್ಯಕ್ತಿಯಾಗಿದ್ದಾನೆ.
ಮಾರುಕಟ್ಟೆಯಲ್ಲಿ ಟೊಮೆಟೋ, ಮೆಣಸಿನಕಾಯಿ ಬೆಲೆ ಗಗನಕ್ಕೇರಿರುವುದರಿಂದ ತರಕಾರಿ ಕಾಯಲು ರಫಿ ತಳ್ಳುವ ಬಂಡಿಯಲ್ಲೇ ಮಲಗಿದ್ದವನು.
ಈ ವೇಳೆ ಅಲ್ಲಿಗೆ ಬೀಡಿ ಕೇಳುವ ನೆಪದಲ್ಲಿ ಬಂದ ಅಬ್ದುಲ್ ರೌಫ್ ಮಲಗಿದ್ದ ರಫಿಯನ್ನ ಎಬ್ಬಿಸಿದ್ದಾನೆ.
ಬೀಡಿ ಕೊಡದ ಹಿನ್ನೆಲೆ ಮೊಬೈಲ್ ಕೇಳಿದ್ದಾನೆ, ಮೊಬೈಲ್ ಸಹ ಕೊಡದ ಹಿನ್ನೆಲೆ ಮದ್ಯಪಾನದ ಅಮಲಿನಲ್ಲಿ ಕುತ್ತಿಗೆ ಭಾಗಕ್ಕೆ ಚಾಕು ಹಾಕಿ ಸ್ಥಳದಿಂದ ಓಡಿಹೋಗಿದ್ದನೆ ಎನ್ನಲಾಗಿದೆ.
ಗಾಯಾಳು ರಫಿಗೆ ಮಾನ್ವಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಂಡಿದ್ದಾನೆ.
ಚಾಕು ಇರಿತದ ದೃಶ್ಯಾವಳಿ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಆರೋಪಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಕಡಲ ಮಧ್ಯೆ ಸಿಲುಕಿದ ಮೀನುಗಾರಿಕಾ ಬೋಟ್- ಮೀನುಗಾರರನ್ನು ರಕ್ಷಿಸಿದ ಕೋಸ್ಟ್ಗಾರ್ಡ್
ಮಂಗಳೂರು: ಮಂಗಳೂರು ನಗರದ ಹಳೆ ಬಂದರು ಧಕ್ಕೆಯಿಂದ ಮೀನುಗಾರಿಕೆಗೆ ಹೋಗಿದ್ದ ಬೋಟೊಂದು 39 ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ತಾಂತ್ರಿಕ ಸಮಸ್ಯೆಗೆ ಸಿಲುಕಿದಾಗ ಅದರಲ್ಲಿದ್ದ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ನೌಕೆ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ.
ತಿರುಚೆಂದೂರ್ ಮುರುಗನ್ ಹೆಸರಿನ ಬೋಟ್ ಸಮುದ್ರ ಮಧ್ಯೆ ತಾಂತ್ರಿಕ ಅಡಚಣೆಗೆ ಸಿಲುಕಿತ್ತು.
ಈ ಬಗ್ಗೆ ಬೋಟ್ನಿಂದ ಮುಂಬೈನ ತಟ ರಕ್ಷಣಾ ಕೇಂದ್ರಕ್ಕೆ ತುರ್ತು ಸಂದೇಶ ರವಾನಿಸಲಾಗಿತ್ತು.
ಈ ಸಂದೇಶ ಸ್ವೀಕರಿಸಿದ ಮುಂಬೈನ ಎಂಆರ್ಸಿಸಿ ಕೇಂದ್ರದ ಅಧಿಕಾರಿಗಳು ತಕ್ಷಣ ಕೋಸ್ಟ್ಗಾರ್ಡ್ಗೆ ಮಾಹಿತಿ ನೀಡಿದ್ದರು.
ಅದರಂತೆ ಕೋಸ್ಟ್ಗಾರ್ಡ್, ಮೀನುಗಾರಿಕಾ ಇಲಾಖೆ ಹಾಗೂ ಬೋಟ್ ಮಾಲಕರ ಸಹಕಾರದಲ್ಲಿ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ನ ಎರಡು ಇಂಟರ್ಸೆಪ್ಟರ್ ಬೋಟ್ಗಳು ತಾಂತ್ರಿಕ ತೊಂದರೆಗೆ ಸಿಲುಕಿದ ಬೋಟ್ನ್ನು ನವಮಂಗಳೂರು ಬಂದರು ತೀರಕ್ಕೆ ಎಳೆದು ತಂದು ರಕ್ಷಿಸಿವೆ ಎಂದು ಕೋಸ್ಟ್ಗಾರ್ಡ್ ತಿಳಿಸಿದೆ.
LATEST NEWS
Lucknow: ಪುತ್ರಿ ಮದುವೆ ಮಾಡಲು ಎಂದು ಲಾಕರ್ ನಲ್ಲಿಟ್ಟ 18 ಲಕ್ಷ ರೂ. ಗೆದ್ದಲು ಪಾಲು..!
ಲಕ್ನೋ: ಮಗಳ ಮದುವೆಗೆಂದು ತಾಯಿಯೊಬ್ಬರು ರೂಪಾಯಿ-ರೂಪಾಯಿ ಹಣವನ್ನು ಜೋಪಾನವಾಗಿ ಬ್ಯಾಂಕ್ನ ಲಾಕರ್ನಲ್ಲಿ ಕೂಡಿ ಇಟ್ಟ ಸುಮಾರು 18 ಲಕ್ಷ ರೂ. ಹಣವು ಗೆದ್ದಲು ಹಿಡಿದು ನಾಶವಾಗಿರುವ ಘಟನೆ ಉತ್ತರಪ್ರದೇಶದ ಮೊರಾದಾಬಾದ್ನಲ್ಲಿ ವರದಿಯಾಗಿದೆ.
ಮೊರಾದಾಬಾದ್ ನಿವಾಸಿ ಅಲ್ಕಾ ಪಠಾಕ್ ಅವರು ಕಳೆದ ವರ್ಷ ಅಕ್ಟೋಬರ್ನಲ್ಲಿ ಅಶಿಯಾನಾದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ 18 ಲಕ್ಷ ರೂ.ಗಳನ್ನು ಇಟ್ಟಿದ್ದರು.
ಇತ್ತೀಚಿಗೆ ಬ್ಯಾಂಕ್ ಸಿಬಂದಿ ಲಾಕರ್ ಅಗ್ರಿಮೆಂಟ್ ರಿನೀವಲ್ಗೆ ಎಂದು ಅಲ್ಕಾ ಅವರಿಗೆ ಕರೆ ಮಾಡಿ ಬರಲು ಹೇಳಿದ್ದಾರೆ.
ಈ ವೇಳೆ ಲಾಕರ್ ತೆರೆದರೆ ನೋಟುಗಳಿಗೆ ಗೆದ್ದಲು ಹಿಡಿದಿರುವುದು ಕಂಡು ಬಂದಿದೆ.
ಈ ಬಗ್ಗೆ ಬ್ಯಾಂಕ್ನ ಮುಖ್ಯ ಕಚೇರಿಗೆ ತಿಳಿಸಿರುವುದಾಗಿ ಸಿಬಂದಿ ಹೇಳಿದ್ದಾರೆ.
ತನಗಾದ ನಷ್ಟಕ್ಕೆ ಬ್ಯಾಂಕ್ನವರೇ ಪರಿಹಾರ ನೀಡಬೇಕೆಂದು ಮಹಿಳೆ ಪಟ್ಟು ಹಿಡಿದಿರುವುದು ವರದಿಯಾಗಿದೆ.
FILM
ವಯಸ್ಸಲ್ಲಿ ರಾಘವ್ ಚಡ್ಡಾ ಅವರಿಗಿಂತ ಸೀನಿಯರ್ ಪರಿಣಿತಿ ಚೋಪ್ರಾ…!
ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ಆಪ್ ಸಂಸದ ರಾಘವ್ ಚಡ್ಡಾ ಅವರ ವಯಸ್ಸಿನ ಅಂತರ ಈಗ ರಿವೀಲ್ ಆಗಿದೆ.
ಮುಂಬೈ: ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ಆಪ್ ಸಂಸದ ರಾಘವ್ ಚಡ್ಡಾ ಅವರ ವಯಸ್ಸಿನ ಅಂತರ ಈಗ ರಿವೀಲ್ ಆಗಿದ್ದು, ರಾಘವ್ ಚಡ್ಡಾ ಅವರಿಗಿಂತ ಪರಿಣಿತಿ ಚೋಪ್ರಾ ಸೀನಿಯರ್.
ಸೆಪ್ಟೆಂಬರ್ 24ರಂದು ಈ ಜೋಡಿ ಗ್ರ್ಯಾಂಡ್ ಆಗಿ ರಾಜಸ್ಥಾನದ ಉದಯಪುರದ ಲೀಲಾ ಪ್ಯಾಲೇಸ್ನಲ್ಲಿ ಸಪ್ತಪದಿ ತುಳಿದಿದ್ರು.
ರಾಘವ್ ಚಡ್ಡಾ ಅವರು 2022ರಲ್ಲಿ ಪಂಜಾಬ್ನಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆ ಆಗಿದ್ದಾರೆ.
33ನೇ ವಯಸ್ಸಿಗೆ ರಾಜ್ಯಸಭೆ ಪ್ರವೇಶಿಸಿದ ಅವರು, ಅತ್ಯಂತ ಕಿರಿಯ ರಾಜ್ಯಸಭಾ ಸದಸ್ಯ ಎಂಬ ಖ್ಯಾತಿಗೆ ಪಾತ್ರವಾಗಿದ್ದಾರೆ.
ಇನ್ನು ನಟಿ ಪರಿಣಿತಿ ಚೋಪ್ರಾ ಅವರು 2011ರಿಂದಲೂ ಬಾಲಿವುಡ್ನಲ್ಲಿ ಸಕ್ರಿಯರಾಗಿದ್ದಾರೆ.
‘ಶುದ್ಧ್ ದೇಸಿ ರೊಮ್ಯಾನ್ಸ್’, ‘ಹಸೀ ತೊ ಫಸೀ’, ‘ದಾವತ್ ಎ ಇಶ್ಕ್’, ‘ನಮಸ್ತೆ ಇಂಗ್ಲೆಂಡ್’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.
ಸದ್ಯ ಅಕ್ಷಯ್ ಕುಮಾರ್ ಜತೆ ಪರಿಣಿತಿ ನಟಿಸಿರುವ ‘ಮಿಷನ್ ರಾಣಿಗಂಜ್’ ಸಿನಿಮಾ ತೆರೆ ಕಾಣಬೇಕಿದೆ.
ಸದ್ಯಕ್ಕೆ ಪರಿಣಿತಿ ಚೋಪ್ರಾ ಹಾಗೂ ರಾಘವ್ ಚಡ್ಡಾ ಅವರ ವಯಸ್ಸಿನ ಅಂತರದ ಸಾಕಷ್ಟು ಬಗ್ಗೆ ಚರ್ಚೆಯಾಗುತ್ತಿದೆ.
ಇಬ್ಬರಿಗೂ ಈಗ 35 ವರ್ಷ ವಯಸ್ಸಾಗಿದ್ದು, ನಟಿ ಪರಿಣಿತಿ ಚೋಪ್ರಾ ಅವರು 22 ಅಕ್ಟೋಬರ್ 1988ರಲ್ಲಿ ಜನಿಸಿದ್ದಾರೆ. ರಾಘವ್ ಚಡ್ಡಾ ಅವರು 11 ನವೆಂಬರ್ 1988ರಲ್ಲಿ ಜನಿಸಿದ್ದಾರೆ.
ವಿಶೇಷ ಎಂದರೆ ನಟಿ ಪರಿಣಿತಿ ಚೋಪ್ರಾ ಅವರು ರಾಘವ್ ಚಡ್ಡಾ ಅವರಿಗಿಂತ 20 ದಿನ ದೊಡ್ಡವರಾಗಿದ್ದಾರೆ.
ವಯಸ್ಸಿನ ಮಿತಿಯನ್ನು ಲೆಕ್ಕಿಸದೇ ಸ್ಟಾರ್ ನಟ ನಟಿಯರು ದಾಂಪತ್ಯ ಜೀವನಕ್ಕೆ ಕಾಲಿಡುವುದು ಮಾಮೂಲು ಆಗಿದೆ.