Connect with us

DAKSHINA KANNADA

 ಮಂಗಳೂರು ಪೊಲೀಸ್‌ ಕಮೀಷನರ್‌ ಮುಸ್ಲಿಂ ಸಮುದಾಯದ ಕ್ಷಮೆ ಕೋರಬೇಕು: PFI

Published

on

ಮಂಗಳೂರು: ದ.ಕ.ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ರೀತಿಯ ದುಷ್ಕೃತ್ಯಗಳ ಹೆಸರಿನಲ್ಲಿ ಮುಸ್ಲಿಮ್ ಸಮುದಾಯವನ್ನು ಗುರಿಪಡಿಸುತ್ತಿರುವುದು ಖಂಡನಾರ್ಹವಾಗಿದೆ.

ಈ ಬಗ್ಗೆ ಹಲವು ಪ್ರಕರಣದಲ್ಲಿ ತನಿಖೆ ಪೂರ್ಣಗೊಳ್ಳುವ ಮೊದಲೇ ಮುಸ್ಲಿಂ ಯುವಕರನ್ನುಸಾರ್ವಜನಿಕವಾಗಿ ಅಪರಾಧಿಗಳನ್ನಾಗಿ ಬಿಂಬಿಸಿದ್ದು, ಹಾಗೂ ಜನರಿಗೆ ತಪ್ಪು ಮಾಹಿತಿ ನೀಡುವ ಮೂಲಕ ಅಮಾಯಕ ಮುಸ್ಲಿಂ ಹಾಗೂ ಸಮುದಾಯದ ಮೇಲಾದ ಮಾನಹಾನಿಗೆ ಮಂಗಳೂರು ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌ ಕ್ಷಮೆಯಾಚಿಸಬೇಕು ಎಂದು ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಆಗ್ರಹಿಸಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಿಎಫ್‌ಐ ರಾಜ್ಯ ಕಾರ್ಯದರ್ಶಿ ಎ.ಕೆ ಆಶ್ರಫ್‌, ಜಿಲ್ಲೆಯಲ್ಲಿ ಸರಣಿ ದುಷ್ಕೃತ್ಯಗಳು ನಡೆದಾಗಲೆಲ್ಲಾ ಪರಿಸ್ಥಿತಿಯ ಲಾಭ ಪಡೆದುಕೊಳ್ಳಲು ಮುಸ್ಲಿಮರನ್ನು ಗುರಿಪಡಿಸಿಕೊಂಡು ಅಪಪ್ರಚಾರಗಳನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ.

ಜೊತೆಗೆ ಪ್ರಚೋದನಾಕಾರಿ ಭಾಷಣಗಳನ್ನು ಮಾಡುತ್ತಾ ಶಾಂತಿ ಕದಡಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಇದರ ಬೆನ್ನಲ್ಲೇ ನಡೆಯುವ ಪೊಲೀಸರ ಕೋಮು ಪೂರ್ವಾಗ್ರಹಪೀಡಿತ ತನಿಖೆಗಳು ಕಳವಳಕಾರಿಯಾಗಿವೆ.

ಇದೀಗ ಮಂಗಳೂರಿನ ನಂದಿಗುಡ್ಡೆಯಲ್ಲಿ ಕೊರಗಜ್ಜ ದೈವಸ್ಥಾನ ಕಟ್ಟೆಯನ್ನು ಅಪವಿತ್ರಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ದೇವದಾಸ್ ದೇಸಾಯಿ ಎಂಬಾತನನ್ನು ಬಂಧಿಸಿದ್ದಾರೆ. ತಾನು 18 ಕಡೆ ಇಂತಹ ದುಷ್ಕೃತ್ಯಗಳನ್ನು ಎಸಗಿದ್ದೆ ಎಂಬ ವಿಚಾರವನ್ನು ಆರೋಪಿ ಒಪ್ಪಿಕೊಂಡಿರುವುದನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ಜೊತೆಗೆ ಕೃತ್ಯ ನಡೆಸಿರುವುದರ ಬಗ್ಗೆ ಆರೋಪಿಯ ಹೇಳಿಕೆಯೂ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.
ಇದಕ್ಕೂ ಮೊದಲು ಮಂಗಳೂರು ನಗರದ ಸುತ್ತಮುತ್ತಲಿನ ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಅಪಚಾರ ಎಸಗಿದ ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಹೇಳಿ ಪೊಲೀಸರು ಜೋಕಟ್ಟೆ ಪರಿಸರದ ರಹೀಂ ಮತ್ತು ತೌಫೀಕ್ ಎಂಬ ಇಬ್ಬರು ಯುವಕರನ್ನು ಮಾಧ್ಯಮದವರ ಮುಂದೆ ಹಾಜರುಪಡಿಸಿದ್ದರು. ಆರೋಪಿಗಳು ತಮ್ಮ ಕೃತ್ಯಗಳನ್ನು ಒಪ್ಪಿಕೊಂಡಿದ್ದಾರೆಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಸ್ವತಃ ಪತ್ರಿಕಾಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದರು. ಮಾಧ್ಯಮಗಳಲ್ಲೂ ಪೊಲೀಸ್ ಕಮಿಷನರ್ ಅವರ ಹೇಳಿಕೆಗಳು ಪ್ರಕಟವಾಗಿದ್ದವು. ಇವರಿಬ್ಬರ ಬಂಧನದ ಬಳಿಕ ಒಟ್ಟು ಮುಸ್ಲಿಮ್ ಸಮುದಾಯವನ್ನು ಸಂಶಯದ ದೃಷ್ಟಿಯಿಂದ ನೋಡಲಾಯಿತು ಎಂದು ಅಶ್ರರ್ಪ್ ಆರೋಪಿಸಿದರು.
ಜೋಕಟ್ಟೆಯಲ್ಲಿ ಅನಾರೋಗ್ಯದಿಂದ ಸಾವನ್ನಪ್ಪಿದ ಮುಸ್ಲಿಮ್ ಯುವಕ ಕೊರಗಜ್ಜನ ಕಟ್ಟೆ ಅಪವಿತ್ರಗೊಳಿಸಿದ್ದರಿಂದಲೇ ರಕ್ತ ವಾಂತಿ ಮಾಡಿ ಸತ್ತಿದ್ದಾನೆಂದು ಹೇಳಿ ಭಾವನಾತ್ಮಕವಾಗಿ ಪ್ರಚೋದಿಸುವ ಹುನ್ನಾರವೂ ನಡೆಯಿತು. ಜಿಲ್ಲೆಯ ಪೊಲೀಸ್ ಇಲಾಖೆಯೂ ತನಿಖೆಗೆ ಮುನ್ನವೇ ಮುಸ್ಲಿಮರನ್ನು ಅರೋಪಿ ಸ್ಥಾನದಲ್ಲಿ ನಿಲ್ಲಿಸಿಬಿಟ್ಟಿತು.
ಸತತ 4 ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕವೂ ಪೊಲೀಸರಿಗೆ, ರಹೀಂ ಮತ್ತು ತೌಫೀಕ್ ಎಂಬ ಇಬ್ಬರು ಯುವಕರ ವಿರುದ್ಧವೂ ಯಾವುದೇ ಸಾಕ್ಷ್ಯಾಧಾರ ದೊರಕಲಿಲ್ಲ. ನಂತರದಲ್ಲಿ ಈ ಘಟನೆಗಳ ಸಂಬಂಧ ಯಾವುದೇ ಪ್ರಕರಣ ದಾಖಲಿಸದೇ ಅವರಿಬ್ಬರನ್ನೂ ಬಿಡುಗಡೆಗೊಳಿಸಲಾಗಿತ್ತು. ಬಂಧನದ ವೇಳೆ ಪೊಲೀಸರು ನಡೆಸಿದ ಪತ್ರಿಕಾಗೋಷ್ಠಿ ಅಮಾಯಕರ ಬಿಡುಗಡೆಯ ವೇಳೆ ನಡೆಯದಿರುವುದು ಮಾತ್ರ ವಿಪರ್ಯಾಸವಾಗಿದೆ ಎಂದರು.
ಕೆಲ ಸಮಯಗಳ ಹಿಂದೆ ಜೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಕರ್ಕೇರ ಮೂಲ ದೈವಸ್ಥಾನದಲ್ಲಿ ಮೂರ್ತಿಗಳನ್ನು ಭಗ್ನಗೊಳಿಸಿದ ಘಟನೆ ನಡೆದಿತ್ತು. ಈ ವೇಳೆ ಘಟನೆಯನ್ನು ಮುಂದಿಟ್ಟುಕೊಂಡು ಪ್ರತಿಭಟನೆ, ಕೋಮುಪ್ರಚೋದನಕಾರಿ ಹೇಳಿಕೆಗಳ ಮೂಲಕ ಶಾಂತಿ ಕದಡುವ ಪ್ರಯತ್ನ ನಡೆಸಿತ್ತು. ಆದರೆ ಆ ಘಟನೆಯಲ್ಲಿ ಆರೋಪಿ ರೋಹಿತಾಶ್ವ ಎಂಬಾತನ ಬಂಧನವಾಗಿತ್ತು.
ಮಂಜನಾಡಿ ವಿಷ್ಣುಮೂರ್ತಿ ಜನಾರ್ದನ ದೈವಸ್ಥಾನದಲ್ಲಿ ಕಾಣಿಕೆ ಡಬ್ಬಿ ಕಳವು ಮತ್ತು ಇತರ ಬೈಕುಗಳು ಕಳವಾದ ಘಟನೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೊಂಟೆಪದವು ನಿವಾಸಿ ತಾರನಾಥ್ ಮೋಹನ್ ಎಂಬಾತನನ್ನು ಬಂಧಿಸಿದ್ದು, ಈತ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಉಳ್ಳಾಲ ಪ್ರಖಂಡದ ಸಂಚಾಲಕನಾಗಿದ್ದ ಎಂಬ ಮಾಹಿತಿಯೂ ಬಹಿರಂಗವಾಗಿತ್ತು.

ಈ ಹಿಂದೆ ಕೊಣಾಚೆಯ ಕಾರ್ತಿಕ್ ರಾಜ್ ಕೊಲೆ ನಡೆದಾಗಲೂ ಪೊಲೀಸರು ಅಮಾಯಕ ಮುಸ್ಲಿಮ್ ಯುವಕರನ್ನು ಠಾಣೆಯಲ್ಲಿಟ್ಟು ನಿರಂತರವಾಗಿ ಚಿತ್ರಹಿಂಸೆ ನೀಡಿದ್ದರು. ಕೆಲ ಸಮಯಗಳ ಬಳಿಕ ಹತ್ಯೆಯಲ್ಲಿ ಕಾರ್ತಿಕ್ ರಾಜ್ ಸಹೋದರಿ ಮತ್ತು ಪ್ರಿಯಕರನ ಪಾತ್ರವಿರುವುದು ಬಹಿರಂಗವಾಗಿತ್ತು ಎಂದರು.

ಜಿಲ್ಲಾ ಪೊಲೀಸರ ಕೋಮು ಪೂರ್ವಾಗ್ರಹಪೀಡಿತ ತನಿಖೆಗಳೂ ಆತಂಕ ಹುಟ್ಟಿಸುತ್ತಿವೆ. ತನಿಖೆಯಲ್ಲಿ ನೈಜ ಆರೋಪಿಗಳು ಪತ್ತೆಯಾದಾಗ ಪೊಲೀಸರು ಘಟನೆಯನ್ನು ಕೇವಲವಾಗಿ ಪ್ರಸ್ತುತಪಡಿಸುತ್ತಿರುವುದು ಕಂಡು ಬರುತ್ತಿದೆ.

ಪೊಲೀಸ್ ಇಲಾಖೆಯ ಇಂತಹ ವರ್ತನೆಗಳು ಯಾವುದೇ ಕಾರಣಕ್ಕೂ ಸಹಿಸುವಂಥದ್ದಲ್ಲ. ತನಿಖೆ ಪೂರ್ಣಗೊಳ್ಳುವ ಮುನ್ನವೇ ಪೊಲೀಸ್ ಇಲಾಖೆ ಮುಸ್ಲಿಮ್ ಯುವಕರನ್ನು ಸಾರ್ವಜನಿಕವಾಗಿ ಅಪರಾಧಿಗಳನ್ನಾಗಿ ಬಿಂಬಿಸಿದ್ದು ಯಾರನ್ನು ತೃಪ್ತಿಪಡಿಸಲು ಎಂಬುದು ಬಹಿರಂಗವಾಗಬೇಕು.

ಅಮಾಯಕ ಮುಸ್ಲಿಮ್ ಯುವಕರನ್ನು ಬಂಧಿಸಿ ಜನರಿಗೆ ತಪ್ಪು ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು, ಅಮಾಯಕ ಯುವಕರು ಮತ್ತು ಒಟ್ಟು ಮುಸ್ಲಿಮ್ ಸಮುದಾಯದ ಮೇಲಾದ ಮಾನಹಾನಿಗೆ ಕ್ಷಮೆ ಯಾಚಿಸಬೇಕು ಎಂದು ಅವರು ಆಗ್ರಹಿಸಿದರು.

DAKSHINA KANNADA

ಮಂಡ್ಯದಲ್ಲಿ ಅವಳಿ ಮಕ್ಕಳ ಸಾ*ವಿನ ಪ್ರಕರಣಕ್ಕೆ ಟ್ವಿಸ್ಟ್..! ತಾಯಿಯಿಂದ ಕೃತ್ಯ..!

Published

on

ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್‌ ಕ್ರೀಮ್‌ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲಾಗಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎನ್ನುವುದು ಖಚಿತವಾಗಿದೆ.

ಹೆತ್ತ ಮಕ್ಕಳಿಗೆ ವಿಷವಿಕ್ಕಿದ ತಾಯಿ!

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.

ಪೊಲೀಸ್‌ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.

ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು. ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.

ಪೂಜಾ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಈ ಜಗಳದಿಂದ ಬೇಸತ್ತು ಬುಧವಾರ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾಳೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ‌ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು.

ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

DAKSHINA KANNADA

ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!

Published

on

ಮಂಗಳೂರು (ಹುಬ್ಬಳ್ಳಿ) : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ. ನೇಹಾ ಹಿರೇಮಠ ಕೊಲೆಗೀಡಾದಾಕೆ. ಕಾಲೇಜ್ ಕ್ಯಾಂಪಸ್​ನಲ್ಲಿರುವ ಕ್ಯಾಂಟೀನ್​ನಲ್ಲಿ ಫೈಜಲ್ ಎಂಬಾತ 9 ಬಾರಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ನೇಹಾಳನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇಹಾ ಮೃತಪಟ್ಟಿದ್ದಾಳೆ.

                  ತಂದೆ ನಿರಂಜನ್ ಹಿರೇಮಠ ಜೊತೆಗೆ ನೇಹಾ

ಪ್ರೀತಿ ನಿರಾಕರಣೆಗೆ ಪಾಪಿಯಿಂದ ಹೇಯ ಕೃತ್ಯ..!

ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿರುವ ನೇಹಾ ಹಿರೇಮಠಗೆ ಆರೋಪಿ ಫೈಜಲ್ ಎಂಬಾತ ಪ್ರೀತಿಸುವಂತೆ ಪೀಡಿಸಿದ್ದಾನೆ. . ಆದರೆ, ನೇಹಾ ಇದನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.ಇನ್ನು ನೇಹಾ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

 

Continue Reading

DAKSHINA KANNADA

“ಸೆಕ್ಸ್‌” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್‌..!

Published

on

ಮಂಗಳೂರು ( ಪಶ್ಚಿಮ ಬಂಗಾಳ ) : ಮಾಜಿ  ಸಂಸದೆ ಮಹುವಾ ಮೋಯಿತ್ರಾ ( Mahua Moitra ) ವಿವಾದದ ಕಾರಣದಿಂದ ಸಂಸತ್‌ನಿಂದ ಉಚ್ಚಾಟಿತರಾಗಿದ್ದರು. ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದರು ಎಂಬ ಆರೋಪ ಅವರ ಮೇಲಿತ್ತು. ಈಗ ಅವರು ಮತ್ತೊಂದು ವಿವಾದಕ್ಕೆ ಸಿಲುಕಿದ್ದು ಅವರ ಹೇಳಿಕೆ ಬಾರಿ ವೈರಲ್ ಆಗಿದೆ. ಕೃಷ್ಣ ನಗರ ಲೋಕಸಭಾ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿ ಅವರು ಕಣಕ್ಕೆ ಇಳಿದಿದ್ದಾರೆ. ಭರ್ಜರಿ ಪ್ರಚಾರ ನಡೆಸುತ್ತಿರುವ ಅವರನ್ನ ಪತ್ರಕರ್ತರೊಬ್ಬರು ಸಂದರ್ಶನ ನಡೆಸಿದ್ದಾರೆ. ಈ ವೇಳೆ ಪತ್ರಕರ್ತ ನಿಮ್ಮ ಸಾಮಾರ್ಥ್ಯದ ರಹಸ್ಯ ಏನು ಎಂಬ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಮೊಯಿತ್ರಾ ಅವರು “ಸೆಕ್ಸ್‌” ಎಂದು ಹೇಳಿರುವ ವಿಡಿಯೋವನ್ನು ಮೋದಿ ಕಾ ಪರಿವಾರ ವೈರಲ್ ಮಾಡಿದೆ. ವಿಡಿಯೊ ವೈರಲ್‌ ಆಗುತ್ತಲೇ ಜನ ಟೀಕೆ ವ್ಯಕ್ತಪಡಿಸಿದ್ದಾರೆ. ಒಬ್ಬ ಸಂಸದೆಯಾಗಿ ಬಹಿರಂಗವಾಗಿ ಹೀಗೆ ಹೇಳುವುದು ತಪ್ಪು ಎಂದು ಖಂಡಿಸಿದ್ದಾರೆ.

ನ್ಯೂಸ್‌ ದಿ ಟ್ರುತ್‌ ಎಂಬ ಮಾದ್ಯಮ ಮಾಡಿದ ಸಂದರ್ಶನ

ಸ್ಪಷ್ಟನೆ ನೀಡಿದ ಸಂದರ್ಶನ ನೀಡಿದ ವರದಿಗಾರ..!

“ಮಹುವಾ ಮೊಯಿತ್ರಾ ಅವರನ್ನು ಸಂದರ್ಶನ ಮಾಡಿದ್ದು ನಾನೇ. ನಿಮ್ಮ ಸಾಮರ್ಥ್ಯದ ಗುಟ್ಟೇನು ಎಂಬುದಾಗಿ ಕೇಳಿದೆ. ಅದಕ್ಕೆ ಅವರು, ಎಗ್ಸ್‌ (ಮೊಟ್ಟೆಗಳು) ಎಂಬುದಾಗಿ ಎರಡು ಬಾರಿ ಉತ್ತರಿಸಿದರು. ಆದರೆ, ಭಕ್ತ ಮಂಡಳಿಯು ಎಗ್ಸ್‌ ಎಂಬುದನ್ನು ಸೆಕ್ಸ್‌ ಎಂಬುದಾಗಿ ತಿರುಚಿದೆ” ಎಂಬುದಾಗಿ ನ್ಯೂಸ್‌ ದಿ ಟ್ರುತ್‌ ಎಂಬ ಮಾಧ್ಯಮ ಸಂಸ್ಥೆ ವರದಿಗಾರ ತಮಲ್‌ ಸಾಹ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಆದರೆ, ವರದಿಗಾರ ಸ್ಪಷ್ಟನೆ ನೀಡುವ ಹೊತ್ತಿಗೆ ವಿಡಿಯೊ ಭಾರಿ ವೈರಲ್‌ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

49 ವರ್ಷದ ಮಹುವಾ ಮೊಯಿತ್ರಾ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳಲು 2 ಕೋಟಿ ರೂ. ನಗದು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದಾರೆ. ಮೊಯಿತ್ರಾ ಅವರು ತಮ್ಮ ಸಂಸತ್ತಿನ ಲಾಗ್-ಇನ್ ವಿವರಗಳನ್ನು ಉದ್ಯಮಿ ದರ್ಶನ್ ಹಿರಾನಂದಾನಿಗೆ ನೀಡಿದ್ದನ್ನು ಮೋಯಿತ್ರಾ ಒಪ್ಪಿಕೊಂಡಿದ್ದರು.  ಈ ಹಿನ್ನೆಲೆಯಲ್ಲಿ ಅವರನ್ನು ಡಿಸೆಂಬರ್ 8, 2023ರಂದು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು.

 

Continue Reading

LATEST NEWS

Trending