Connect with us

    DAKSHINA KANNADA

     ಮಂಗಳೂರು ಪೊಲೀಸ್‌ ಕಮೀಷನರ್‌ ಮುಸ್ಲಿಂ ಸಮುದಾಯದ ಕ್ಷಮೆ ಕೋರಬೇಕು: PFI

    Published

    on

    ಮಂಗಳೂರು: ದ.ಕ.ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ರೀತಿಯ ದುಷ್ಕೃತ್ಯಗಳ ಹೆಸರಿನಲ್ಲಿ ಮುಸ್ಲಿಮ್ ಸಮುದಾಯವನ್ನು ಗುರಿಪಡಿಸುತ್ತಿರುವುದು ಖಂಡನಾರ್ಹವಾಗಿದೆ.

    ಈ ಬಗ್ಗೆ ಹಲವು ಪ್ರಕರಣದಲ್ಲಿ ತನಿಖೆ ಪೂರ್ಣಗೊಳ್ಳುವ ಮೊದಲೇ ಮುಸ್ಲಿಂ ಯುವಕರನ್ನುಸಾರ್ವಜನಿಕವಾಗಿ ಅಪರಾಧಿಗಳನ್ನಾಗಿ ಬಿಂಬಿಸಿದ್ದು, ಹಾಗೂ ಜನರಿಗೆ ತಪ್ಪು ಮಾಹಿತಿ ನೀಡುವ ಮೂಲಕ ಅಮಾಯಕ ಮುಸ್ಲಿಂ ಹಾಗೂ ಸಮುದಾಯದ ಮೇಲಾದ ಮಾನಹಾನಿಗೆ ಮಂಗಳೂರು ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌ ಕ್ಷಮೆಯಾಚಿಸಬೇಕು ಎಂದು ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಆಗ್ರಹಿಸಿದೆ.
    ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಿಎಫ್‌ಐ ರಾಜ್ಯ ಕಾರ್ಯದರ್ಶಿ ಎ.ಕೆ ಆಶ್ರಫ್‌, ಜಿಲ್ಲೆಯಲ್ಲಿ ಸರಣಿ ದುಷ್ಕೃತ್ಯಗಳು ನಡೆದಾಗಲೆಲ್ಲಾ ಪರಿಸ್ಥಿತಿಯ ಲಾಭ ಪಡೆದುಕೊಳ್ಳಲು ಮುಸ್ಲಿಮರನ್ನು ಗುರಿಪಡಿಸಿಕೊಂಡು ಅಪಪ್ರಚಾರಗಳನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ.

    ಜೊತೆಗೆ ಪ್ರಚೋದನಾಕಾರಿ ಭಾಷಣಗಳನ್ನು ಮಾಡುತ್ತಾ ಶಾಂತಿ ಕದಡಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಇದರ ಬೆನ್ನಲ್ಲೇ ನಡೆಯುವ ಪೊಲೀಸರ ಕೋಮು ಪೂರ್ವಾಗ್ರಹಪೀಡಿತ ತನಿಖೆಗಳು ಕಳವಳಕಾರಿಯಾಗಿವೆ.

    ಇದೀಗ ಮಂಗಳೂರಿನ ನಂದಿಗುಡ್ಡೆಯಲ್ಲಿ ಕೊರಗಜ್ಜ ದೈವಸ್ಥಾನ ಕಟ್ಟೆಯನ್ನು ಅಪವಿತ್ರಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ದೇವದಾಸ್ ದೇಸಾಯಿ ಎಂಬಾತನನ್ನು ಬಂಧಿಸಿದ್ದಾರೆ. ತಾನು 18 ಕಡೆ ಇಂತಹ ದುಷ್ಕೃತ್ಯಗಳನ್ನು ಎಸಗಿದ್ದೆ ಎಂಬ ವಿಚಾರವನ್ನು ಆರೋಪಿ ಒಪ್ಪಿಕೊಂಡಿರುವುದನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ಜೊತೆಗೆ ಕೃತ್ಯ ನಡೆಸಿರುವುದರ ಬಗ್ಗೆ ಆರೋಪಿಯ ಹೇಳಿಕೆಯೂ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.
    ಇದಕ್ಕೂ ಮೊದಲು ಮಂಗಳೂರು ನಗರದ ಸುತ್ತಮುತ್ತಲಿನ ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಅಪಚಾರ ಎಸಗಿದ ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಹೇಳಿ ಪೊಲೀಸರು ಜೋಕಟ್ಟೆ ಪರಿಸರದ ರಹೀಂ ಮತ್ತು ತೌಫೀಕ್ ಎಂಬ ಇಬ್ಬರು ಯುವಕರನ್ನು ಮಾಧ್ಯಮದವರ ಮುಂದೆ ಹಾಜರುಪಡಿಸಿದ್ದರು. ಆರೋಪಿಗಳು ತಮ್ಮ ಕೃತ್ಯಗಳನ್ನು ಒಪ್ಪಿಕೊಂಡಿದ್ದಾರೆಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಸ್ವತಃ ಪತ್ರಿಕಾಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದರು. ಮಾಧ್ಯಮಗಳಲ್ಲೂ ಪೊಲೀಸ್ ಕಮಿಷನರ್ ಅವರ ಹೇಳಿಕೆಗಳು ಪ್ರಕಟವಾಗಿದ್ದವು. ಇವರಿಬ್ಬರ ಬಂಧನದ ಬಳಿಕ ಒಟ್ಟು ಮುಸ್ಲಿಮ್ ಸಮುದಾಯವನ್ನು ಸಂಶಯದ ದೃಷ್ಟಿಯಿಂದ ನೋಡಲಾಯಿತು ಎಂದು ಅಶ್ರರ್ಪ್ ಆರೋಪಿಸಿದರು.
    ಜೋಕಟ್ಟೆಯಲ್ಲಿ ಅನಾರೋಗ್ಯದಿಂದ ಸಾವನ್ನಪ್ಪಿದ ಮುಸ್ಲಿಮ್ ಯುವಕ ಕೊರಗಜ್ಜನ ಕಟ್ಟೆ ಅಪವಿತ್ರಗೊಳಿಸಿದ್ದರಿಂದಲೇ ರಕ್ತ ವಾಂತಿ ಮಾಡಿ ಸತ್ತಿದ್ದಾನೆಂದು ಹೇಳಿ ಭಾವನಾತ್ಮಕವಾಗಿ ಪ್ರಚೋದಿಸುವ ಹುನ್ನಾರವೂ ನಡೆಯಿತು. ಜಿಲ್ಲೆಯ ಪೊಲೀಸ್ ಇಲಾಖೆಯೂ ತನಿಖೆಗೆ ಮುನ್ನವೇ ಮುಸ್ಲಿಮರನ್ನು ಅರೋಪಿ ಸ್ಥಾನದಲ್ಲಿ ನಿಲ್ಲಿಸಿಬಿಟ್ಟಿತು.
    ಸತತ 4 ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕವೂ ಪೊಲೀಸರಿಗೆ, ರಹೀಂ ಮತ್ತು ತೌಫೀಕ್ ಎಂಬ ಇಬ್ಬರು ಯುವಕರ ವಿರುದ್ಧವೂ ಯಾವುದೇ ಸಾಕ್ಷ್ಯಾಧಾರ ದೊರಕಲಿಲ್ಲ. ನಂತರದಲ್ಲಿ ಈ ಘಟನೆಗಳ ಸಂಬಂಧ ಯಾವುದೇ ಪ್ರಕರಣ ದಾಖಲಿಸದೇ ಅವರಿಬ್ಬರನ್ನೂ ಬಿಡುಗಡೆಗೊಳಿಸಲಾಗಿತ್ತು. ಬಂಧನದ ವೇಳೆ ಪೊಲೀಸರು ನಡೆಸಿದ ಪತ್ರಿಕಾಗೋಷ್ಠಿ ಅಮಾಯಕರ ಬಿಡುಗಡೆಯ ವೇಳೆ ನಡೆಯದಿರುವುದು ಮಾತ್ರ ವಿಪರ್ಯಾಸವಾಗಿದೆ ಎಂದರು.
    ಕೆಲ ಸಮಯಗಳ ಹಿಂದೆ ಜೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಕರ್ಕೇರ ಮೂಲ ದೈವಸ್ಥಾನದಲ್ಲಿ ಮೂರ್ತಿಗಳನ್ನು ಭಗ್ನಗೊಳಿಸಿದ ಘಟನೆ ನಡೆದಿತ್ತು. ಈ ವೇಳೆ ಘಟನೆಯನ್ನು ಮುಂದಿಟ್ಟುಕೊಂಡು ಪ್ರತಿಭಟನೆ, ಕೋಮುಪ್ರಚೋದನಕಾರಿ ಹೇಳಿಕೆಗಳ ಮೂಲಕ ಶಾಂತಿ ಕದಡುವ ಪ್ರಯತ್ನ ನಡೆಸಿತ್ತು. ಆದರೆ ಆ ಘಟನೆಯಲ್ಲಿ ಆರೋಪಿ ರೋಹಿತಾಶ್ವ ಎಂಬಾತನ ಬಂಧನವಾಗಿತ್ತು.
    ಮಂಜನಾಡಿ ವಿಷ್ಣುಮೂರ್ತಿ ಜನಾರ್ದನ ದೈವಸ್ಥಾನದಲ್ಲಿ ಕಾಣಿಕೆ ಡಬ್ಬಿ ಕಳವು ಮತ್ತು ಇತರ ಬೈಕುಗಳು ಕಳವಾದ ಘಟನೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೊಂಟೆಪದವು ನಿವಾಸಿ ತಾರನಾಥ್ ಮೋಹನ್ ಎಂಬಾತನನ್ನು ಬಂಧಿಸಿದ್ದು, ಈತ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಉಳ್ಳಾಲ ಪ್ರಖಂಡದ ಸಂಚಾಲಕನಾಗಿದ್ದ ಎಂಬ ಮಾಹಿತಿಯೂ ಬಹಿರಂಗವಾಗಿತ್ತು.

    ಈ ಹಿಂದೆ ಕೊಣಾಚೆಯ ಕಾರ್ತಿಕ್ ರಾಜ್ ಕೊಲೆ ನಡೆದಾಗಲೂ ಪೊಲೀಸರು ಅಮಾಯಕ ಮುಸ್ಲಿಮ್ ಯುವಕರನ್ನು ಠಾಣೆಯಲ್ಲಿಟ್ಟು ನಿರಂತರವಾಗಿ ಚಿತ್ರಹಿಂಸೆ ನೀಡಿದ್ದರು. ಕೆಲ ಸಮಯಗಳ ಬಳಿಕ ಹತ್ಯೆಯಲ್ಲಿ ಕಾರ್ತಿಕ್ ರಾಜ್ ಸಹೋದರಿ ಮತ್ತು ಪ್ರಿಯಕರನ ಪಾತ್ರವಿರುವುದು ಬಹಿರಂಗವಾಗಿತ್ತು ಎಂದರು.

    ಜಿಲ್ಲಾ ಪೊಲೀಸರ ಕೋಮು ಪೂರ್ವಾಗ್ರಹಪೀಡಿತ ತನಿಖೆಗಳೂ ಆತಂಕ ಹುಟ್ಟಿಸುತ್ತಿವೆ. ತನಿಖೆಯಲ್ಲಿ ನೈಜ ಆರೋಪಿಗಳು ಪತ್ತೆಯಾದಾಗ ಪೊಲೀಸರು ಘಟನೆಯನ್ನು ಕೇವಲವಾಗಿ ಪ್ರಸ್ತುತಪಡಿಸುತ್ತಿರುವುದು ಕಂಡು ಬರುತ್ತಿದೆ.

    ಪೊಲೀಸ್ ಇಲಾಖೆಯ ಇಂತಹ ವರ್ತನೆಗಳು ಯಾವುದೇ ಕಾರಣಕ್ಕೂ ಸಹಿಸುವಂಥದ್ದಲ್ಲ. ತನಿಖೆ ಪೂರ್ಣಗೊಳ್ಳುವ ಮುನ್ನವೇ ಪೊಲೀಸ್ ಇಲಾಖೆ ಮುಸ್ಲಿಮ್ ಯುವಕರನ್ನು ಸಾರ್ವಜನಿಕವಾಗಿ ಅಪರಾಧಿಗಳನ್ನಾಗಿ ಬಿಂಬಿಸಿದ್ದು ಯಾರನ್ನು ತೃಪ್ತಿಪಡಿಸಲು ಎಂಬುದು ಬಹಿರಂಗವಾಗಬೇಕು.

    ಅಮಾಯಕ ಮುಸ್ಲಿಮ್ ಯುವಕರನ್ನು ಬಂಧಿಸಿ ಜನರಿಗೆ ತಪ್ಪು ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು, ಅಮಾಯಕ ಯುವಕರು ಮತ್ತು ಒಟ್ಟು ಮುಸ್ಲಿಮ್ ಸಮುದಾಯದ ಮೇಲಾದ ಮಾನಹಾನಿಗೆ ಕ್ಷಮೆ ಯಾಚಿಸಬೇಕು ಎಂದು ಅವರು ಆಗ್ರಹಿಸಿದರು.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending