ಉಡುಪಿ: ‘ಪಿಎಫ್ಐ ಸಂಘಟನೆಯ ಕಾರ್ಯಕರ್ತರನ್ನು ಕಾಂಗ್ರೆಸ್ ಪೋಷಿಸಿದ್ದೆ ಪಿಎಫ್ ಐ ಇಷ್ಟು ದೊಡ್ಡ ಪ್ರಮಾಣದಲ್ಲಿ ಕರ್ನಾಟಕದಲ್ಲಿ ಬೆಳೆಯಲು ಕಾರಣವಾಗಿತ್ತು. 175 ಜನರ ಮೇಲೆ ಇದ್ದ ಕೇಸ್ ಅನ್ನು ಸಿದ್ದರಾಮಯ್ಯ ಕಾಲದಲ್ಲಿ ವಾಪಾಸ್ ಪಡೆದಿತ್ತು. ನಮ್ಮ ಸರ್ಕಾರ ಅದನ್ನು ವಿರೋಧಿಸುತ್ತಲೇ ಬಂದಿದೆ. ನಮ್ಮ ಸರಕಾರ ಇವತ್ತು ಬಧ್ದತೆ ಪ್ರದರ್ಶಿಸಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದರು.
ಉಡುಪಿಯಲ್ಲಿ ಪಿಎಫ್ಐ ಬ್ಯಾನ್ ಬಗ್ಗೆ ಮಾತನಾಡಿದ ಅವರು ‘ಪಿಎಫ್ ಐ ನಿಷೇಧ ಮಾಡಿರುವುದು ಸ್ವಾಗತಾರ್ಹ.
ಈ ಕಠಿಣ ನಿರ್ಧಾರ ತೆಗೆದುಕೊಂಡ ಪ್ರಧಾನ ಮಂತ್ರಿ ಮತ್ತು ಕೇಂದ್ರ ಗೃಹ ಸಚಿವರಿಗೆ ಅಬಿನಂದನೆಗಳು. ಬಹಳ ವರ್ಷಗಳಿಂದ ಕರ್ನಾಟಕ ಮತ್ತು ದೇಶದ ವಿವಿಧ ಭಾಗಗಳಲ್ಲಿ ಪಿಎಫ್ ಐ ಹಿಂಸೆಯನ್ನು ಪ್ರಚೋದಿಸಿದೆ. ಸವಾಲನ್ನು ನೀಡುವಂತೆ ಭಾರತವನ್ನು ದುರ್ಬಲಗೊಳಿಸುವ ಪ್ರಯತ್ನವನ್ನು ಅವರು ಮಾಡುತಿದ್ದರು.
‘ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ನಿರಂತರವಾದ ಹತ್ಯೆಯನ್ನು ಪಿಎಫ್ಐ ಮಾಡುತ್ತಾ ಇತ್ತು. ಅವರ ಉದ್ದೇಶ ಇದ್ದದ್ದು ಅವರೇ ಹೇಳುವ ಪ್ರಕಾರ ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡುತ್ತೇವೆ ಎಂಬ ಮಾತುಗಳನ್ನು ಅವರು ಹೇಳುತಿದ್ದರು.
ಇವತ್ತು ಅದಕ್ಕೆ ಬೇಕಾದ ಎಲ್ಲಾ ದಾಖಲೆ, ಆಧಾರಗಳು ಸಿಕ್ಕಿದ್ದರಿಂದ ಕೇಂದ್ರ ಸರ್ಕಾರ ದಿಟ್ಟ ನಿರ್ಧಾರವನ್ನು ತೆಗೆದುಕೊಂಡಿದೆ.
ಮಂಗಳೂರು, ಶಿವಮೊಗ್ಗ ಘಟನೆಯಿಂದ ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣ ಆಗಿತ್ತು. ಈ ಹಿಂದೆ ಬಿಜೆಪಿ ಸಿಮಿ ಸಂಘಟನೆಯನ್ನು ನಿಷೇಧಿಸಿತ್ತು.
ಅದರ ಇನ್ನೊಂದು ರೂಪದಲ್ಲಿ ಪಿಎಫ್ ಐ ಹುಟ್ಟಿಕೊಂಡಿತ್ತು. ಇದಕ್ಕೆ ಹಣಕಾಸು ನೆರವು, ಬೆಂಬಲ ನೀಡಿದವರ ಕೂಡಾ ತನಿಖೆ ಅಗುತ್ತೆ. ಭಾರತದಲ್ಲಿ ಇದ್ದುಕೊಂಡು ಭಾರತವನ್ನು ಪ್ರೀತಿಸಬೇಕು, ಈ ನೆಲದಲ್ಲಿ ಇದ್ದುಕೊಂಡು ಈ ನೆಲವನ್ನು ಗೌರವಿಸಬೇಕು’ ಎಂದು ಹೇಳಿದರು.