BANTWAL
ಅ.25ರಂದು ಮಂಗಳವಾರ ಸೂರ್ಯಗ್ರಹಣ ಹಿನ್ನೆಲೆ : ನಾಡಿನ ಅನೇಕ ದೇವಾಲಯಗಳಲ್ಲಿ ದೇವರ ದರ್ಶನ- ಪೂಜೆಗಳಲ್ಲಿ ವ್ಯತ್ಯಯ..!
ಬೆಂಗಳೂರು: ಅ.25ರಂದು ಮಂಗಳವಾರ ಸಂಭವಿಸಲಿರುವ ಸೂರ್ಯಗ್ರಹಣದಿಂದಾಗಿ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ದೇವರ ದರ್ಶನ ಹಾಗೂ ಸೇವೆಗಳಲ್ಲಿ ವ್ಯತ್ಯಯವಾಗಲಿದೆ.
ಬೆಳ್ತಂಗಡಿ: ಅ.25ರಂದು ಸೂರ್ಯಗ್ರಹಣ ಇರುವುದರಿಂದ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಅಂದು ಮಧ್ಯಾಹ್ನ 2.30ರಿಂದ ರಾತ್ರಿ 7.30ರ ವರೆಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ದೇವಳದ ಪ್ರಕಟಣೆ ತಿಳಿಸಿದೆ.
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ.25ರಂದು ಯಾವುದೇ ಸೇವೆಗಳು ಮತ್ತು ಭೋಜನ ಪ್ರಸಾದ ಇರುವುದಿಲ್ಲ ಎಂದು ದೇವಳದ ಪ್ರಕಟಣೆ ತಿಳಿಸಿದೆ.ಅಂದು ಬೆಳಿಗ್ಗೆ 7ರಿಂದ 8.30ರತನಕ, 10.30ರಿಂದ ಮಧ್ಯಾಹ್ನ 1ರತನಕ ಹಾಗೂ ಗ್ರಹಣದ ಸಮಯವಾದ ಸಂಜೆ 5.11ರಿಂದ 6.28ರ ತನಕ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಂತರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಅ.26ರಂದು ಬೆಳಿಗ್ಗೆ ದೇವಳದಲ್ಲಿ ಶುದ್ಧಿ ಕಾರ್ಯದ ಬಳಿಕ ನಿತ್ಯ ಪೂಜೆ ನಡೆಯಲಿದೆ. ಹೀಗಾಗಿ, 9 ಗಂಟೆಯ ನಂತರ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಆ ಬಳಿಕ ಸೇವಾಧಿಗಳು ಆರಂಭಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.
ಚಿಕ್ಕಮಗಳೂರು : ‘ಅ.25ರಂದು ಹೊರನಾಡು ಅನ್ನಪೂಣೇಶ್ವರಿ ದೇವಸ್ಥಾನದಲ್ಲಿ ಪ್ರಸಾದ ಭೋಜನ ಮತ್ತು ಪೂಜೆಯ ಸಮಯದಲ್ಲಿ ಕೆಲ ಬದಲಾವಣೆ ಇರಲಿದೆ’ ಎಂದು ದೇವಸ್ಥಾನದ ಮುಖ್ಯಸ್ಥ ಜಿ.ಭೀಮೇಶ್ವರ ಜೋಷಿ ಹೇಳಿದರು.
ಗ್ರಹಣ ಸ್ಪರ್ಶ ಕಾಲದಿಂದ ಗ್ರಹಣ ಮೋಕ್ಷ ಕಾಲದವರೆಗೆ ದೇವಿಗೆ ನಿರಂತರ ಅಭಿಷೇಕ ನೆರವೇರುತ್ತದೆ. ಮಧ್ಯಾಹ್ನ 11ರಿಂದ 12ರವರೆಗೆ ಮಾತ್ರ ಪ್ರಸಾದ ಭೋಜನ ಇರುತ್ತದೆ. ಮಹಾಮಂಗಳಾರತಿ 1.30ಕ್ಕೆ ನಡೆಯಲಿದೆ. ಎಂದಿನಂತೆ ದೇವಿಯ ದರ್ಶನ ಮತ್ತು ಅರ್ಚನೆ ಸಂಜೆ 4ರವರೆಗೆ ಇರಲಿದೆ. ಗ್ರಹಣ ಮುಗಿದು ಶುದ್ಧಿ ಕಾರ್ಯ ನಡೆದ ನಂತರ, ಎಂದಿನಂತೆ ಪೂಜೆ, ಪ್ರಸಾದ ಇರುತ್ತದೆ. ಭಕ್ತರು ಈ ಬದಲಾವಣೆ ಗಮನಿಸಬೇಕು’ ಎಂದು ಮನವಿ ಮಾಡಿದ್ದಾರೆ.
ಅರಸೀಕೆರೆ: ಹೋಬಳಿಯ ಉಚ್ಚಂಗಿ ದುರ್ಗ ಗ್ರಾಮದ ಐತಿಹಾಸಿಕ ಉತ್ಸವಾಂಬ ದೇವಿ ದರ್ಶನವನ್ನು ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ಅ.25ರ ಮಂಗಳವಾರ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಅಂದು ಮಧ್ಯಾಹ್ನ 2.28ರಿಂದ ಸಂಜೆ 6.38ರ ವರೆಗೆ ಗ್ರಹಣ ಸಂಭವಿಸಲಿದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನ ಪ್ರವೇಶ ನಿಷೇಧಿಸಲಾಗಿದೆ ಎಂದು ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊರಟಗೆರೆ: ಸೂರ್ಯಗ್ರಹಣದ ನಿಮಿತ್ತ ಅ. 25ರಂದು ತಾಲ್ಲೂಕಿನ ಗೊರವನಹಳ್ಳಿ ಮಹಾಲಕ್ಷ್ಮಿ ದೇವಿಯ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ.ಅಮಾವಾಸ್ಯೆ ದಿನದಂದು ಸೂರ್ಯಗ್ರಹಣದ ಪ್ರಯುಕ್ತ ಮಂಗಳವಾರ ಮಧ್ಯಾಹ್ನ 2.30 ಗಂಟೆಯಿಂದ ದೇವಿಯ ದರ್ಶನಕ್ಕೆ ಅವಕಾಶವಿರುವುದಿಲ್ಲ. ಸಂಜೆ 6.28 ಗಂಟೆಗೆ ಗ್ರಹಣ ಮೋಕ್ಷವಾಗಲಿದೆ. ಅ. 26ರಂದು ಬೆಳಿಗ್ಗೆ ಎಂದಿನಂತೆ ದೇವಿಯ ದರ್ಶನ ಪ್ರಾರಂಭವಾಗಲಿದೆ ಎಂದು ದೇಗುಲ ಕಾರ್ಯನಿರ್ವಹಣಾಧಿಕಾರಿ ಕೇಶವಮೂರ್ತಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಅ.25 ರಂದು ತಾಲ್ಲೂಕಿನ ಘಾಟಿ ಕ್ಷೇತ್ರದಲ್ಲಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ದೇವರಿಗೆ ಬೆಳಿಗ್ಗೆ 6.30ಕ್ಕೆ ಅಭಿಷೇಕ ಪ್ರಾರಂಭವಾಗುತ್ತದೆ. ಮಹಾಮಂಗಳಾರತಿ ಬೆಳಗ್ಗೆ 8ಕ್ಕೆ ನೆರವೇರಲಿದೆ. ಬೆಳಿಗ್ಗೆ 10.30ರ ವರೆಗೆ ಮಾತ್ರ ದೇವರ ದರ್ಶನ ಇರುತ್ತದೆ. ನಂತರ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.
ಶ್ರೀ ಕ್ಷೇತ್ರ ಕುದ್ರೊಳಿ : ಅಮಾವಾಸ್ಯೆ ದಿನ ಹಾಗೂ ಸೂರ್ಯಗ್ರಹಣ ನಿಮಿತ್ತ ಮಂಗಳೂರಿನ ಕುದ್ರೊಳಿಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅಂದು ಮಧ್ಯಾಹ್ನದ ಪೂಜೆ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ನಂತರ ರಾತ್ರಿ 7.30ರವರೆಗೆ ದೇವರ ದರ್ಶನಕ್ಕೆ ಅವಕಾಶವಿದೆ. ಯಾವುದೇ ಸೇವೆಗಳು ಇರುವುದಿಲ್ಲ. ಗ್ರಹಣ ಮೋಕ್ಷ ಬಳಿಕ ರಾತ್ರಿ 7.30ರ ನಂತರ ಮಹಾಪೂಜೆ ನಡೆಯಲಿದೆ ಎಂದು ದೇವಳಧ ಆಡಳಿತ ಮಂಡಳಿ ತಿಳಿಸಿದೆ.
ಹಾಸನ : ಇತಿಹಾಸ ಪ್ರಸಿದ್ದ ಪವಾಡ ಕ್ಷೇತ್ರ ಹಾಸನದ ಹಾಸನಾಂಬೆ ದೇವಿ ದರ್ಶನ ಕೂಡ ಇರುವುದಿಲ್ಲ ಜೊತೆಗೆ ಪಕ್ಕದ ಬೇಲೂರು ಚನ್ನಕೇಶವ ದೇವಸ್ಥಾನ ಕೂಡ ಮುಚ್ಚಲಾಗುತ್ತಿದೆ ಎಂದು ದೇವಳದ ಆಡಳಿತ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಮೇಲುಕೋಟೆ ಚಲುವನಾರಾಯಣಸ್ವಾಮಿ, ಶ್ರೀರಂಗಪಟ್ಟಣದ ನಿಮಿಷಾಂಬ ದೇಗುಲವನ್ನು ಸೂರ್ಯಗ್ರಹಣದ ವೇಳೆ ಮುಚ್ಚಲಾಗುತ್ತದೆ. ಮಂತ್ರಾಲಯದಲ್ಲಿ ದರ್ಶನಕ್ಕೆ ಅವಕಾಶವಿದೆ. ಆದರೆ, ಪೂಜೆ ನಡೆಯುವುದಿಲ್ಲ. ಹೊರನಾಡು ಅನ್ನಪೂರ್ಣೆಶ್ವರಿ ದೇವಸ್ಥಾನಕ್ಕೆ ಪ್ರವೇಶ ಇದ್ದು, ಪ್ರಸಾದ ಇರುವುದಿಲ್ಲ. ಸಿಗಂದೂರೇಶ್ವರಿ ದೇವಸ್ಥಾನದಲ್ಲಿ ಭಕ್ತರಿಗೆ ಪ್ರವೇಶ ಇರುವುದಿಲ್ಲ.
ಕಾಸರಗೋಡು: ಸೂರ್ಯಗ್ರಹಣ ಪ್ರಯುಕ್ತ ಅ.25ರಂದು ಕುಂಬಳೆ ಕಣಿಪುರ ಕಣಿಪುರ ಗೋಪಾಲಕೃಷ್ಣ ದೇವಾಲಯ, ಮಂಜೇಶ್ವರ ಮದನಂತೇಶ್ವರ, ಐಲ ದುರ್ಗಾಪರಮೇಶ್ವರಿ, ಬಾಯಾರು ಪಂಚಲಿಂಗೇಶ್ವರ, ಅನಂತಪುರ ಅನಂತಪದ್ಮನಾಭ, ಮುಜುಂಗಾವು ಪಾರ್ಥಸಾರಥಿ, ಅಡೂರು ಮಹಾಲಿಂಗೇಶ್ವರ, ಮಧೂರು ಮದನಂತೇಶ್ವರ ಸಿದ್ಧಿವಿನಾಯಕ, ಪೆರಡಾಲ ಉದನೇಶ್ವರ, ಕಾರ್ಮಾರು ಮಹಾವಿಷ್ಣು ದೇವಾಲಯ, ಕಾಟುಕುಕ್ಕೆ ಸುಬ್ರಾಯ, ಬಜಕೂಡ್ಲು ಮಹಾಲಿಂಗೇಶ್ವರ, ಬಂಗ್ರಮಂಜೇಶ್ವರ ಕೀರ್ತೇಶ್ವರ, ಶೇಡಿಕಾವು ಶಿವ ದೇವಾಲಯ ಸಹಿತ ವಿವಿಧೆಡೆ ಮಧ್ಯಾಹ್ನ ಪೂಜೆ ಇರುವುದಿಲ್ಲ ಎಂದು ಆಯಾ ದೇವಾಲಯದ ಪ್ರಕಟಣೆ ತಿಳಿಸಿವೆ.
ತಿರುಪತಿ :ಮೂರು ದಿನ ತಿರುಪತಿ ತಿಮ್ಮಪ್ಪನ ದರ್ಶನ ಇಲ್ಲ. ಅಕ್ಟೋಬರ್ 24ರಂದು ದೀಪಾವಳಿ ಆಚರಣೆ, ಅಕ್ಟೋಬರ್ 25ರಂದು ಸೂರ್ಯಗ್ರಹಣ ಮತ್ತು ನವೆಂಬರ್ 8ರಂದು ಚಂದ್ರಗ್ರಹಣದಿಂದಾಗಿ ಮೂರು ದಿನಗಳ ಭಕ್ತರಿಗೆ ಶ್ರೀವೆಂಕಟೇಶ್ವರ ಸ್ವಾಮಿ ದರ್ಶನ ಇರುವುದಿಲ್ಲ ಎಂದು ದೇವಳದ ಆಡಳಿತ ಮಂಡಳಿ ತಿಳಿಸಿದೆ.
BANTWAL
ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು
ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.
ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.
ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ
BANTWAL
ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ
ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.
ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.
ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.
BANTWAL
ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!
ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.
- LATEST NEWS4 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ